Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ರಾಜಕೀಯ ಸುದ್ದಿ»ಇನ್ನ 1 ತಿಂಗಳು ಪ್ರದೀಪ್​​ಗೂ ಸುಧಾಕರ್​​ಗೂ ಮಧ್ಯೆ ಯುದ್ಧ ಫಿಕ್ಸ್? ಈಶ್ವರಪ್ಪನವರೇ ಪ್ಲೀಸ್ ದಯವಿಟ್ಟು ಬಾಯ್​​ಮುಚ್ಕೋಳಿ!?, ಡಾ. ಕೆ. ಸುಧಾಕರ್ ಗೆದ್ರೆ ವಿಜಯೇಂದ್ರ ಇರಲ್ಲ!? ಏನಿದು ಶಾಸಕ ಪ್ರದೀಪ್ ಈಶ್ವರ್​ ಸ್ಫೋಟಕ ಹೇಳಿಕೆ?
ರಾಜಕೀಯ ಸುದ್ದಿ

ಇನ್ನ 1 ತಿಂಗಳು ಪ್ರದೀಪ್​​ಗೂ ಸುಧಾಕರ್​​ಗೂ ಮಧ್ಯೆ ಯುದ್ಧ ಫಿಕ್ಸ್? ಈಶ್ವರಪ್ಪನವರೇ ಪ್ಲೀಸ್ ದಯವಿಟ್ಟು ಬಾಯ್​​ಮುಚ್ಕೋಳಿ!?, ಡಾ. ಕೆ. ಸುಧಾಕರ್ ಗೆದ್ರೆ ವಿಜಯೇಂದ್ರ ಇರಲ್ಲ!? ಏನಿದು ಶಾಸಕ ಪ್ರದೀಪ್ ಈಶ್ವರ್​ ಸ್ಫೋಟಕ ಹೇಳಿಕೆ?

ಬಿಜೆಪಿಯ ಕೆ.ಎಸ್ ಈಶ್ವರಪ್ಪ ಸೇರಿದಂತೆ ಕೆಲ ಹಿರಿಯ ನಾಯಕರಿಗೆ ಖಡಕ್ ವಾರ್ನಿಂಗ್
davangerevijaya.comBy davangerevijaya.com26 March 2024No Comments3 Mins Read
Facebook WhatsApp Twitter
Share
WhatsApp Facebook Twitter Telegram

ದಾವಣಗೆರೆ : 1 ತಿಂಗಳು, ಇನ್ನ ಒಂದು ತಿಂಗಳು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ಬಿಜೆಪಿ ಮಾಜಿ ಸಚಿವ ಡಾ. ಕೆ. ಸುಧಾಕರ್ ಅವರ ಮಧ್ಯೆ ಅಕ್ಷರಶಃ ಯುದ್ಧವೇ ನಡೆದು ಹೋಗಲಿದೆ. ಹೀಗಂಥ ನಾವು ಹೇಳ್ತಾಯಿಲ್ಲ. ಖುದ್ದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರೇ ಹೇಳಿಕೊಂಡಿದ್ದಾರೆ. ಅಷ್ಟೇಅಲ್ಲ., ಡಾ. ಕೆ ಸುಧಾಕರ್ ಅವರಿಗೆ ಬಿಜೆಪಿ ಟಿಕೆಟ್ ಯಾಕ್ ಕೊಡ್ತು ಅಂತೇಳಿ ಕಿಡಿಕಾರಿರೋ ಪ್ರದೀಶ್ ಈಶ್ವರ್​​ ಬೆಂಕಿಯುಂಡೆಗಳನ್ನೇ ಉಗುಳಿದ್ದಾರೆ. ಇದೇ ವೇಳೆ ಬಿಜೆಪಿಯ ಕೆ.ಎಸ್ ಈಶ್ವರಪ್ಪ ಸೇರಿದಂತೆ ಕೆಲ ಹಿರಿಯ ನಾಯಕರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಹಾಗಾದ್ರೆ ಪ್ರದೀಪ್ ಈಶ್ವರ್ ಅವರ ವಾಗ್ದಾಳಿ ಹೇಗಿದೆ ಗೊತ್ತಾ?

ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ. ಕೆ.ಸುಧಾಕರ್ ಅವರಿಗೆ ಬಿಜೆಪಿಯವರು ಲೋಕಸಭೆ ಟಿಕೆಟ್ ನೀಡಿದ್ದಾರೆ. ಪ್ರಜಾಪ್ರಭುತ್ವದ ಸಾವಿಗೆ ಈ ಟಿಕೆಟ್ ನೀಡಿರುವುದು ಮುನ್ನಡಿಯಾಗಿದೆ. ಕೋರೊನಾ ಸಮಯದಲ್ಲಿ 2200 ಕೋಟಿ ಹಗರಣ ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪ ಮಾಡಿತ್ತು. 40 ಸಾವಿರ ಕೋಟಿ ಹಗರಣ ನಡೆದಿದೆ ಎಂದು ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ ಆರೋಪ ಮಾಡಿದ್ದಾರೆ. ಆದರೂ ಬಿಜೆಪಿ ಅವರಿಗೆ ಟಿಕೆಟ್ ನೀಡಿದೆ ಅಂತೇಳಿ ಶಾಸಕ ಪ್ರದೀಪ್ ಈಶ್ವರ್ ಕಿಡಿಕಾರಿದ್ದಾರೆ. 

ಟ್ಯೂಷನ್ ಟೀಚರ್ ವಿರುದ್ಧ ಸೋತ ಸುಧಾಕರ್!!

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರದಲ್ಲಿ ಪ್ರಭಾವಿ ಸಚಿವರು ಅಂತೆನಿಸಿಕೊಂಡಿದ್ದ ಡಾ. ಕೆ ಸುಧಾಕರ್ ಸಾಮಾನ್ಯ ವ್ಯಕ್ತಿಯಾಗಿದ್ದ ಪ್ರದೀಪ್ ಈಶ್ವರ್ ಅವರ ವಿರುದ್ಧ ಅತ್ಯಂತ ಹೀನಾಯವಾಗಿ ಸೋತಿದ್ರು. ಈ ಬಗ್ಗೆ ಇವತ್ತು ಪ್ರಶ್ನೆ ಮಾಡಿರೋ ಪ್ರದೀಪ್ ಈಶ್ವರ್., ಒಬ್ಬ ಸಾಮಾನ್ಯ ವ್ಯಕ್ತಿ ಮೇಲೆ ಸೋತ ವ್ಯಕ್ತಿಗೆ, ಟ್ಯೂಷನ್ ಟೀಚರ್ ವಿರುದ್ಧ ಸೋತ ವ್ಯಕ್ತಿಗೆ ಏಕೆ ಟಿಕೆಟ್ ಕೊಟ್ರು ಅನ್ನೋದೇ ಆಶ್ವರ್ಯ. ರಾಜ್ಯದ ಕೆಲವು ಬಿಜೆಪಿ ನಾಯಕರಿಗೆ ಸಹಾಯ ಮಾಡಿರುವ ಕಾರಣ ಟಿಕೆಟ್ ದೊರೆತಿದೆ. ಹಿರಿಯ ನಾಯಕರಿಗೆ ಸೂರ್ಯ ನಮಸ್ಕಾರ, ಶವಾಸನ, ಕಪಾಲಿಪಾತಿ, ಧೀರ್ಘ ದಂಡ ನಮಸ್ಕಾರ ಈ ರೀತಿಯ ಸೇವೆಯನ್ನು ಮಾಡಿರುವ ಕಾರಣ ಟಿಕೆಟ್ ಸಿಕ್ಕಿರಬಹುದು ಅಂತೇಳಿ ಕುಟುಕಿದ್ದಾರೆ. 

ಸುಧಾಕರ್ ಆದಾಯದ ಮೂಲ ಬಿಚ್ಚಿಡ್ತಾರಾ?, ಆ ದಮ್ಮು – ಧೈರ್ಯ ಸುಧಾಕರ್ ಅವರಿಗೆ ಇದ್ಯಾ?

ಸಾಮಾನ್ಯ ಮನುಷ್ಯನಾದ ನಾನು ನನ್ನ ಎಲ್ಲಾ ವ್ಯವಹಾರ, ಗಳಿಕೆ, ಖರ್ಚು ಸೇರಿದಂತೆ ನನ್ನ ಸಂಪೂರ್ಣ ಆದಾಯದ ಬಗ್ಗೆ ನಾಳೆಯೇ ಲೆಕ್ಕ ನೀಡಲು ಸಿದ್ದನಿದ್ದೇನೆ. ನೀವು ನನ್ನ ಮೇಲೆ ಐಟಿ, ಇಡಿ ಬಿಡುವ ಪ್ರಮೇಯವೇ ಬೇಡ. ನೀವು ಪ್ರಾಮಾಣಿಕರಾಗಿದ್ದರೆ ನಿಮ್ಮ ಆದಾಯದ ಮೂಲವನ್ನು ಘೋಷಣೆ ಮಾಡುತ್ತೀರಾ.? ನಿಮಗೆ ಆ ಧೈರ್ಯ ಇದ್ಯಾ? ಪಾರ್ಲಿಮೆಂಟ್​ ಭವನ ಘನತೆಯನ್ನು ಹೊಂದಿರುವ ಸ್ಥಳ, ಅಲ್ಲಿಗೆ ನಿಮ್ಮನ್ನು ನಾವು ಹೋಗಲು ಬಿಡಲ್ಲ. ಇಡೀ ಕೇಂದ್ರ ಸರ್ಕಾರವೇ ಬಂದು ನಿಂತ್ಕೊಂಡ್ರೂ ಸುಧಾಕರ್ ಅವರು ಪಾರ್ಲಿಮೆಂಟ್ ಮೆಟ್ಟಿಲನ್ನು ತುಳಿಯಲು ಬಿಡುವುದಿಲ್ಲ. ಇದು ಆಕ್ರೋಶದ ಮಾತಲ್ಲ ಮಧ್ಯಮ ವರ್ಗದ ಹುಡುಗನೊಬ್ಬನ ಮಾತು ಅಂತೇಳಿ ಕಿಡಿಕಾರಿದ್ದಾರೆ. ಇನ್ನ ಸಾರ್ವಜನಿಕ ಜೀವನದಲ್ಲಿ ನಿಮ್ಮನ್ನು ನೂರಾರು ಜನ ತೆಗಳುತ್ತಾರೆ, ಹೊಗಳುತ್ತಾರೆ ಆದನ್ನು ಸ್ವೀಕರಿಸುವ ಮನೋಭಾವ ಇರಬೇಕು. ನನಗೂ ಸಹ ಅನೇಕ ಜನ ಕೆಟ್ಟದಾಗಿ ಬೈಯ್ಯುತ್ತಾರೆ. ಆದರೆ ನಾನು ಅದನ್ನು ಸ್ಪೂರ್ತಿಯಾಗಿ ತೆಗೆದುಕೊಳ್ಳುತ್ತೇನೆ. ನನ್ನ ಮೇಲೆ 22 ಪ್ರಕರಣ ದಾಖಲಿಸಿದರು. 10 ಸಾವಿರ ಜನ ಬಂದು ನನ್ನನ್ನು ಬಿಡುಗಡೆ ಮಾಡಿಸಿದ್ರು ಅಂತೇಳಿ ಶಾಸಕ ಪ್ರದೀಪ್ ಈಶ್ವರ್​ ಹೇಳಿದ್ದಾರೆ.

ನನ್ನ ಮೇಲೆ ಇಲ್ಲಸಲ್ಲದ ಕೇಸ್ಗಳನ್ನು ಹಾಕಿಸಿದರು. ನಾನು ಜೈಲಿನಲ್ಲೇ ಉಪವಾಸ ಸತ್ಯಾಗ್ರಹ ಮಾಡಿ ಬೇಲ್ ದೊರೆಯುವಂತೆ ಮಾಡಿಕೊಳ್ಳುತ್ತೇನೆ. ಕಾನೂನನ್ನು ತಮಗೆ ಬೇಕಾದಂತೆ ಬಳಸಿಕೊಳ್ಳುವ ವ್ಯಕ್ತಿ ಅಚಾನಕ್ ಆಗಿ ಗೆದ್ದರೆ ಎಂದು ಸಾಂದರ್ಬಿಕವಾಗಿ ಹೇಳುತ್ತಿದ್ದೇನೆ. ಈ ವ್ಯಕ್ತಿ ಗೆಲ್ಲಲ್ಲ, ಗೆಲ್ಲಬಾರದು. ಸುಧಾಕರ್ ಅವರು ಗೆದ್ದರೆ ಕೇಂದ್ರದ ಬಿಜೆಪಿಯ ಮಂತ್ರಿಗಳಿಗೂ ಇವರು ಒಂದಷ್ಟು ಆಸನಗಳನ್ನು ಕಲಿಸುತ್ತಾರೆ. ಒಂದಷ್ಟು ಜನರ ಆತ್ಮ ಸಂತೋಷ, ಆತ್ಮ ತೃಪ್ತಿಗೆ ಕೆಲಸ ಮಾಡುತ್ತಾರೆ. ಇದಾದ ನಂತರ ರಾಜ್ಯದಲ್ಲಿ ವಿಜಯೇಂದ್ರ ಸೇರಿದಂತೆ ಯಾರೂ ಇರುವುದಿಲ್ಲ ಅಂತೇಳಿ ಪ್ರದೀಪ್ ಈಶ್ವರ್​ ಭವಿಷ್ಯ ನುಡಿದಿದ್ದಾರೆ.

ಸುಧಾಕರ್ ಅವರು ನನ್ನ ಮೇಲೆ ಮಾನನಷ್ಟ ಮೊಕದ್ದಮೆ ಹಾಕಿದ್ದಾರೆ. ಅದಕ್ಕೆ ನಾನು ಹೇಳಿದೆ ಮಾನ ಇದ್ದವರು ನಷ್ಟವಾಗಿದೆ ಎಂದು ಕೇಸ್ ಹಾಕಬೇಕು ಇವರು ಏಕೆ ಹಾಕಿದರು.? ಅವರಿಗೆ ಮಾನ ಇದೆ ಎಂದು ಸಾಭೀತು ಮಾಡಲಿ ನಾನು ಹೇಳಿದಂತೆ ಕೇಳುತ್ತೇನೆ ಅಂತೇಳಿ ಪ್ರದೀಪ್ ಈಶ್ವರ್ ಸವಾಲ್ ಎಸೆದಿದ್ದಾರೆ. ಅಷ್ಟೇ ಅಲ್ಲ, ಡಾ. ಕೆ. ಸುಧಾಕರ್ ವಿಚಿತ್ರವಾದ ರಾಜಕಾರಣಿ. ಬಿಜೆಪಿಯ ಕೆಲವು ನಾಯಕರು ಹೇಳಿದರು ಸುಧಾಕರ್ ತುಂಬಾ ಕ್ರಿಮಿನಲ್ ಮನುಷ್ಯ. ನಿನ್ನ ಅವನು ಬಿಡುವುದಿಲ್ಲ ಎಂದು. ಆದರೆ ನಾನೇ ಅವರನ್ನು ಬಿಡುವುದಿಲ್ಲ ಎಂದು ಹೇಳಿದ್ದೇನೆ ಅಂತೇಳಿ ತಿರುಗೇಟು ಕೊಟ್ಟಿದ್ದಾರೆ.

ಇಷ್ಟಕ್ಕೆ ನಿಲ್ಲದ ಶಾಸಕ ಪ್ರದೀಪ್ ಈಶ್ವರ್, ಸುಧಾಕರ್ ಅವರು ಮಾಡಿದ ಭ್ರಷ್ಟಾಚಾರದ ವಿರುದ್ದ ನನ್ನ ಹೋರಾಟ. ಒಂದೇ ಒಂದು ಗಟ್ಟಿ ನಿರ್ಧಾರ ತೆಗೆದುಕೊಳ್ಳದ ವ್ಯಕ್ತಿ ಅವರು. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಭಾಗದ ಯುವಕರು, ಜನತೆ ನನ್ನ ಮಾತನ್ನು ಗಮನವಿಟ್ಟು ಕೇಳಬೇಕು. ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಪಕ್ಷ ಯಾರಿಗೆ ಟಿಕೆಟ್ ನೀಡಿದರು ನೀವು ಬೆಂಬಲ ನೀಡಬೇಕು. ಸುಧಾಕರ್ ಗೆದ್ದರೆ ಜನಸಾಮಾನ್ಯರಿಗೆ ತೊಂದರೆಯಾಗುತ್ತೆ. ಆತ ಭ್ರಷ್ಟಾಚಾರಿ ಎಂದು ಅವರ ಪಕ್ಷದ ಯಲಹಂಕ ಶಾಸಕ ವಿಶ್ವನಾಥ್ ಹೇಳಿದ್ದಾರೆ. ಅವರ ಅಹಂಕಾರದ ಬಗ್ಗೆ ಅವರ ಪಕ್ಷದ ಜನರೇ ಮಾತನಾಡುತ್ತಾರೆ. ನೀವು ನನ್ನ ವಿರುದ್ದ ಧೈರ್ಯವಾಗಿ ಮಾತನಾಡಿ ನಾನು ಕೋರ್ಟಿಗೆ ಹೋಗುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಸಹಿಸಿಕೊಳ್ಳುವ ಶಕ್ತಿ ಇದ್ದರೆ ಮಾತ್ರ ರಾಜಕಾರಣಕ್ಕೆ ಬರಬೇಕು. ಮೆಡಿಕಲ್ ಕಾಲೇಜು, ಕ್ರಷರ್ ಸೇರಿದಂತೆ ಅನೇಕ ವಿಚಾರದಲ್ಲಿ ಕಿಕ್ ಬ್ಯಾಕ್ ಪಡೆದ ಆರೋಪವಿದೆ. ನೀವು ಸಾರ್ವಜನಿಕ ಚರ್ಚೆಗೆ ಬರುವಿರಾ ಅಂತೇಳಿ ಮಾಜಿ ಸಚಿವ ಡಾ. ಕೆ ಸುಧಾಕರ್ ಅವರಿಗೆ ಪ್ರದೀಪ್ ಈಶ್ವರ್ ಬಹಿರಂಗ ಸವಾಲ್ ಹಾಕಿದ್ದಾರೆ. 

ಇನ್ನ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ  ಇತ್ತೀಚೆಗೆ ಶಿವಮೊಗ್ಗದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್​ಕುಮಾರ್ ಅವರ ಬಗ್ಗೆ ಟೀಕಿಸುತ್ತಾ..? ಅವರು ಡಮ್ಮಿಪೀಸ್​ಅವರನ್ನ ಹಾಕಿಸಿಕೊಂಡು ಯಡಿಯೂರಪ್ಪ ತಮ್ಮ ಮಗನನ್ನ ಗೆಲ್ಲಿಸಿಕೊಳ್ಳೋ ಪ್ಲ್ಯಾನ್ ಮಾಡಿದ್ದಾರೆ ಅಂತೇಳಿ ಟೀಕಿಸಿದ್ರು. ಇದಕ್ಕೆ ಪ್ರದೀಪ್ ಈಶ್ವರ್ ಕೊಟ್ಟ ತಿರುಗೇಟು ಹೇಗಿತ್ತು ಗೊತ್ತಾ? ಹಾಗಾದ್ರೆ ಶಾಸಕ ಪ್ರದೀಪ್ ಈಶ್ವರ್ ಮಾಜಿ  ಸಚಿವ ಡಾ. ಕೆ ಸುಧಾಕರ್ ಮತ್ತು ಬಿಜೆಪಿ ನಾಯಕರ ಮೇಲೆ ನಡೆಸಿರೋ ಈ ವಾಗ್ಧಾಳಿಯ ಬಗ್ಗೆ  ನೀವೇನಂತಿರಾ?

Congress MLA Pradeep Eshwar Davangere Dr. Sudhakar Featured Top News ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಡಾ.ಸುಧಾಕರ್ ದಾವಣಗೆರೆ
Share. WhatsApp Facebook Twitter Telegram
davangerevijaya.com
  • Website

Related Posts

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025

ಎಸ್ಸೆಸ್ಸೆಲ್ಸಿ : ಕ್ಯಾನ್ಸರ್‌ ಗೆದ್ದ ಯುವತಿ ಸರಕಾರಿ ಶಾಲೆಗೆ ಫಸ್ಟ್, ಹಾಗಾದ್ರೆ ಆ ಶಾಲೆ ಯಾವುದು?

3 May 2025

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಪೊಲೀಸರಿಗೆ ಇಲ್ಲಿ ರಕ್ಷಣೆ ಇಲ್ಲ : ಮಾಜಿ ಸಚಿವ ರೇಣುಕಾಚಾರ್ಯ

2 May 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,655 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,328 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,590 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
Blog

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

By davangerevijaya.com29 June 20250

ನಂದೀಶ್ , ಭದ್ರಾವತಿ ಉಕ್ಕಿನ ನಗರಿ ಭದ್ರಾವತಿಯಲ್ಲಿ ಒಂದೊಂದೇ ಸಂತಸದ ಕ್ಷಣಗಳು ಕಾಣುತ್ತಿವೆ..ಅತ್ತ ವಿಎಸ್ಐಎಲ್ ಕಾರ್ಖಾನೆ ಓಪನ್ ಆಗಲಿದೆ ಎಂಬ…

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,655 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,328 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

Subscribe to Updates

Get the latest creative news from SmartMag about art & design.

Recent Posts
  • ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.