Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ದಾವಣಗೆರೆ ವಿಶೇಷ»ಪ್ರಜ್ವಲ್ ರೇವಣ್ಣ ವಿಡಿಯೋ ಲೀಕ್ ಆಗಿದ್ಹೇಗೆ?ಈ ಪ್ರಕರಣದ ಹಿಂದಿದ್ಯಾ DK ಮಾಸ್ಟರ್ ಪ್ಲ್ಯಾನ್?ಪೆನ್​ಡ್ರೈವ್​ ಬಗ್ಗೆ BJP ಮುಖಂಡ ಸ್ಫೋಟಕ ಹೇಳಿಕೆ?
ದಾವಣಗೆರೆ ವಿಶೇಷ

ಪ್ರಜ್ವಲ್ ರೇವಣ್ಣ ವಿಡಿಯೋ ಲೀಕ್ ಆಗಿದ್ಹೇಗೆ?ಈ ಪ್ರಕರಣದ ಹಿಂದಿದ್ಯಾ DK ಮಾಸ್ಟರ್ ಪ್ಲ್ಯಾನ್?ಪೆನ್​ಡ್ರೈವ್​ ಬಗ್ಗೆ BJP ಮುಖಂಡ ಸ್ಫೋಟಕ ಹೇಳಿಕೆ?

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೆಚ್​ಡಿ ರೇವಣ್ಣ ಅವರ ವಿರುದ್ಧ ಸೋತಿದ್ದ ಬಿಜೆಪಿ ಅಭ್ಯರ್ಥಿ ದೇವರಾಜೇಗೌಡ್ರನ್ನ ರೇವಣ್ಣ ಕೇವಲವಾಗಿ ನಡೆಸಿಕೊಂಡಿದ್ರಂತೆ.
davangerevijaya.comBy davangerevijaya.com30 April 2024No Comments3 Mins Read
Facebook WhatsApp Twitter
Share
WhatsApp Facebook Twitter Telegram

ದಾವಣಗೆರೆ : ಪ್ರಜ್ವಲ್ ರೇವಣ್ಣ ವಿಡಿಯೋ ಲೀಕ್ ಆಗಿದ್ಹೇಗೆ?ಈ ಪ್ರಕರಣದ ಹಿಂದಿದ್ಯಾ DK ಮಾಸ್ಟರ್ ಪ್ಲ್ಯಾನ್?ಪೆನ್​ಡ್ರೈವ್​ ಬಗ್ಗೆ BJP ಮುಖಂಡ ಸ್ಫೋಟಕ ಹೇಳಿಕೆ?

ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಲೀಕ್ ಆಗಿದ್ದು ಹೇಗೆ.? ಅದು ಕೂಡ ಲೋಕಸಭಾ ಚುನಾವಣೆಗೆ ಇನ್ನ ಕೇವಲ 2 ದಿನ ಬಾಕಿ ಇರೋವಾಗ ಹಾಸನದ ಹಾದಿ ಬೀದಿಗಳಲ್ಲಿ ಈ ಅಶ್ಲೀಲ ವಿಡಿಯೋಗೆ ಸಂಬಂಧಿಸಿದ ಪೆನ್​ಡ್ರೈವ್​​ಗಳನ್ನ ಎರಚಿದ್ದು ಯಾರು? ಯಾಕೆ ಅನ್ನೋ ಪ್ರಶ್ನೆಗಳು ಇದೀಗ ಎಲ್ಲರನ್ನೂ ಕಾಡ್ತಾಯಿವೆ. ಪರಿಸ್ಥಿತಿ ಹೀಗಿರೋವಾಗ್ಲೇ, ಈ ಪ್ರಕರಣದ ಹಿಂದೆ ಡಿಸಿಎಂ ಡಿಕೆಶಿ ಮಾಸ್ಟರ್ ಪ್ಲ್ಯಾನ್ ಇದ್ಯಾ ಅನ್ನೋ ಅನುಮಾನವೂ ವ್ಯಕ್ತವಾಗ್ತಾಯಿದೆ. ಹಾಗಾದ್ರೆ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಯ ವಿಡಿಯೋ ಫೂಟೇಜ್ ಡಿಕೆಶಿ ಕೈ ಸೇರಿದ್ದಾದ್ರೂ ಹೇಗೆ ಅಂದ್ರಾ…?

ಅಶ್ಲೀಲ ವಿಡಿಯೋ, ನೂರಾರು ಹೆಣ್ಣು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಎಸಗಿರೋ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಹಾಸನದಾಧ್ಯಂತ ಹರಿದಾಡ್ತಾಯಿವೆ. ಇದ್ರಿಂದ ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ರಾತ್ರೋರಾತ್ರಿ ಪರಾರಿಯಾಗಿದ್ದಾರೆ ಅನ್ನೋ ಮಾತುಗಳು ಕೇಳಿಬರ್ತಾಯಿವೆ. ಇತ್ತ ಗಂಭೀರ ಆರೋಪ ಹೊತ್ತಿರೋ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಕೆಲ ಮಹಿಳೆಯರು ದೂರು ದಾಖಲಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮಹಿಳಾ ಸಂಘಟನೆಗಳು ಇದಕ್ಕೆ ಕೆಂಡಾಕಾರುತ್ತಿದ್ದು, ಬೀದಿಗಿಳಿದು ಪ್ರತಿಭಟನೆಗಳನ್ನ ಮಾಡ್ತಾಯಿವೆ. ಪ್ರಜ್ವಲ್​​ಗೆ ಕಠಿಣ ಶಿಕ್ಷೆ ಆಗ್ಲೇಬೇಕು ಅಂತೇಳಿ ಪಟ್ಟು ಹಿಡಿದಿವೆ. ಇದೆಲ್ಲದರ ಮಧ್ಯೆ ರಾಜ್ಯ ಸರ್ಕಾರ ಈ ಪ್ರಕರಣವನ್ನ SIT ತನಿಖೆಗೆ ಒಪ್ಪಿಸಿದೆ. ಆದ್ರೆ ಇಲ್ಲಿ ಕಾಡೋ ಪ್ರಶ್ನೆ ಏನು ಅಂದ್ರೆ ಪ್ರಜ್ವಲ್ ಮೇಲಿರೋ ಆರೋಪ ನಿಜಾನೋ ಸುಳ್ಳೋ ಅದು ಬೇರೆ ವಿಚಾರ.

ಆದ್ರೆ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಈ ಅಶ್ಲೀಲ ವಿಡಿಯೋಗಳ ಪೆನ್​ಡ್ರೈವ್​​ಗಳನ್ನ ಹಾಸನದ ಹಾದಿ ಬೀದಿಯಲ್ಲಿ ಲೋಕಸಭಾ ಚುನಾವಣೆಗೆ 2 ದಿನ ಬಾಕಿ ಇರೋ ಟೈಮಲ್ಲಿ ಎರಚಿದ್ಯಾರು.? ಅದ್ಯಾವ ಉದ್ದೇಶದಿಂದ ಈ ಕೆಲಸ ಮಾಡಿದ್ರು ಅನ್ನೋ ಪ್ರಶ್ನೆಗಳು ಮುನ್ನೆಲೆಗೆ ಬಂದಿವೆ. ಈ ಬಗ್ಗೆ ಹೊಳೆ ನರಸೀಪುರ ವಿಧಾನಸಭೆ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ, ವಕೀಲ ದೇವರಾಜೇಗೌಡ ಅನ್ನೋರು ಸ್ಫೋಟಕ ಹೇಳಿಕೆ ಕೊಟ್ಟಿದ್ದಾರೆ.

ಈ ದೇವರಾಜೇಗೌಡ ಯಾರು ಅನ್ನೋದು ನಿಮಗೆಲ್ಲಾ ಗೊತ್ತೇ ಇರುತ್ತೆ. ಕಳೆದ ಜನವರಿಯ​ಲ್ಲಿ ಅಂದ್ರೆ ಕೇವಲ 4 ತಿಂಗಳ ಹಿಂದೆ ಹಾಸನದಲ್ಲಿ ಪ್ರಸ್​ಮೀಟ್ ಮಾಡಿದ್ದ ಇವರು ಅವತ್ತೇ ಹೆಚ್​ಡಿ ರೇವಣ್ಣ ಕುಟುಂಬದ ರಾಸಲೀಲೆ ವೀಡಿಯೋ ಬಾಂಬ್​ಅನ್ನ ಸ್ಫೋಟಿಸಿದ್ರು. ರೇವಣ್ಣ ಇನ್ನುಮುಂದೆ ಬಾಯಿಮುಚ್ಚಿಕೊಂಡು ಸುಮ್ಮನಿರಬೇಕು. ಅವರು ಸುಮ್ಮನಿರದಿದ್ರೆ ಹಾಸನದ ಪ್ರಮುಖ ವೃತ್ತದಲ್ಲಿ LED ಪರದೆ ಹಾಕಿ ವೀಡಿಯೋ ಪ್ಲೇ ಮಾಡೋದಾಗಿ ವಾಗ್ದಾಳಿ ನಡೆಸಿದ್ರು. ಆದ್ರೆ ವಿಡಿಯೋ ಬಿಡುಗಡೆ ಮಾಡಿರ್ಲಿಲ್ಲ. ಆದ್ರೀಗ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಆದ ಬೆನ್ನಲ್ಲೇ, ದೇವರಾಜೇಗೌಡ ಈ ಬಗ್ಗೆ ಸ್ಪಷ್ಟಣೆ ಕೊಟ್ಟಿದ್ದಾರೆ. ಈ ರಾಸಲೀಲೆ ವಿಡಿಯೋ ವಿಚಾರ 2023 ರಲ್ಲೇ ಬಂದಿತ್ತು. ಆದರೆ, ಪ್ರಜ್ವಲ್ ರೇವಣ್ಣ ನ್ಯಾಯಾಲಯದಲ್ಲಿ ಸ್ಟೇ ಪಡೆದುಕೊಂಡಿದ್ದರು. ಈ ಹಿಂದೆ ಪ್ರಜ್ವಲ್‌ ರೇವಣ್ಣ ಅವರ ಕಾರು ಚಾಲಕ ಕಾರ್ತಿಕ್ ಮೇಲೂ ಸ್ಟೇ ಪಡೆದಿದ್ದರು. ಈ ವೇಳೆ ಕಾರ್ತಿಕ್ ನನ್ನ ಬಳಿಗೆ ಬಂದು ವಕಾಲತ್ತು ಹಾಕಿ ಎಂದಿದ್ದ, ಈ ವೇಳೆ ಪ್ರಜ್ವಲ್ ರೇವಣ್ಣನ ವಿಡಿಯೋಗಳನ್ನು ನೋಡಿದ್ದೆ ಎಂದು ಸ್ಫೋಟಕ ವಿಷಯವನ್ನ ವಕೀಲ ಮತ್ತು ಹೊಳೆ ನರಸೀಪುರ ವಿಧಾನಸಭೆ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ದೇವರಾಜೇಗೌಡ ಬಿಚ್ಚಿಟ್ಟಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಕಾರ್ತಿಕ್‌ ಬಂದು ನನ್ನ ಭೇಟಿ ಮಾಡಿದ ಸಂದರ್ಭದಲ್ಲಿ ಹಲವಾರು ಅಶ್ಲೀಲ ವೀಡಿಯೋ ಇತ್ತು. ನಂತರ ಈ ವಿಡಿಯೋ ಯಾರ್ಯಾರಿಗೆ ಕೊಟ್ಟಿದ್ದಿಯಾ ಎಂದು ಕಾರ್ತಿಕ್​ಗೆ ಕೇಳಿದ್ದೆ. ಅದಕ್ಕೆ ಆತ ಈಗಾಗಲೇ ವಿಡಿಯೋಗಳು ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್, ಸೇರಿ ಕೆಲ ಕಾಂಗ್ರೆಸ್ ಲೀಡರ್​​ಗಳಿಗೆ ಹೋಗಿವೆ ಎಂದು ಹೇಳಿದ್ದ ಅಂತೇಳಿ ಅಚ್ಚರಿಯ ಹೇಳಿಕೆಯನ್ನ ನೀಡಿದ್ದಾರೆ. ಆದರೆ, ಈ ವಿಡಿಯೋ ಸಿಕ್ಕ ನಂತರ ಎರಡು ತಿಂಗಳಾದ್ದರೂ ಏನು ಮಾಡಿಲ್ಲಿಲ್ಲ.

ಕೇಳಿದ್ರೆ ಇದನ್ನು ಯಾವಾಗ ಬಳಕೆ ಮಾಡಬೇಕು ಅನ್ನೊದು ಗೊತ್ತಿದೆ. ಆಗ ಮಾಡುತ್ತೇನೆ ಎಂದು ಕಾರ್ತಿಕ್‌ ಹೇಳಿದ್ದ ಅಂತೇಳಿ ಬಿಜೆಪಿ ಮುಖಂಡ ದೇವರಾಜೇಗೌಡ ಹೇಳಿದ್ದಾರೆ. ಇನ್ನೂ ಈ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವರಾದ ಅಮಿತ್‌ ಶಾ ಅವರಿಗೆ ಪತ್ರ ಬರೆದು ಇ ಮೇಲ್ ಮಾಡಲಾಗಿತ್ತು. ಆದ್ರೆ ಇ ಮೇಲ್ ಡಿಲಿವರ್ ಆಗಿರಲಿಲ್ಲ. ನಂತರ ವಿಜೇಯೇಂದ್ರ ಅವರಿಗೂ ವಿಡಿಯೋ ಬಗ್ಗೆ ಪತ್ರ ಬರೆದು ಕಛೇರಿಗೆ ನೀಡಿದ್ದೆ. ಆದ್ರೆ ಅವರು ಹೇಳಿದಂತೆ ಪತ್ರ ಅವರಿಗೂ ತಲುಪಿಲ್ಲ ಎಂದು ಬಿಜೆಪಿ ಮುಖಂಡ ದೇವರಾಜೇಗೌಡ ಹೇಳಿದ್ದಾರೆ.

ಇನ್ನ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೆಚ್​ಡಿ ರೇವಣ್ಣ ಅವರ ವಿರುದ್ಧ ಸೋತಿದ್ದ ಬಿಜೆಪಿ ಅಭ್ಯರ್ಥಿ ದೇವರಾಜೇಗೌಡ್ರನ್ನ ರೇವಣ್ಣ ಕೇವಲವಾಗಿ ನಡೆಸಿಕೊಂಡಿದ್ರಂತೆ. ಕಾರ್ಯಕ್ರಮ ಒಂದರಲ್ಲಿ ಸ್ಟೇಜ್ ಹತ್ತಲು ಬಿಡದೇ ಡರ್ಟಿ ಫೆಲೋ ಎಂದು ನಿಂದಿಸಿದ್ರಂತೆ. ಇದ್ರಿಂದ ಕೆರಳಿಕೆಂಡವಾಗಿದ್ದ ದೇವರಾಜೇಗೌಡ್ರು ಹೆಚ್​​ಡಿ ರೇವಣ್ಣ ವಿರುದ್ಧ ಸಿಡಿದೆದ್ದಿದ್ರು. ಈ ತರಹದ ವಿಡಿಯೋಗಳನ್ನ ಮಾಡಿದ್ದು ದೊಡ್ಡ ತಪ್ಪು. ಅದೇ ರೀತಿ ಹೆಣ್ಣು ಮಕ್ಕಳ ವಿಡಿಯೋ ರಿಲೀಸ್ ಮಾಡಿದ್ದು ಸಹ ತಪ್ಪು. ನಿನ್ನ ಮಗ ಕೋರ್ಟ್​​​ನಲ್ಲಿ ತೆಗೆದುಕೊಂಡಿರುವ ಸ್ಟೇ ವೆಕೇಟ್ ಮಾಡಿಸಿ ಮಹಿಳೆಯರ ಅನುಮತಿ ಕೊಡಿಸು. ನಾನು LED ಪರದೆಯಲ್ಲಿ ರಾಸಲೀಲೆ ವಿಡಿಯೋ ಪ್ಲೇ ಮಾಡಿಸುತ್ತೆನೆ. ಆಗ ಯಾರು ಡರ್ಟಿ ಫೆಲೋ ಅನ್ನೋದು ಗೊತ್ತಾಗುತ್ತೆ ಅಂತೇಳಿ ದೇವರಾಜೇಗೌಡ ಗುಡುಗಿದ್ರು.

ಅದೇನೇ ಇರ್ಲಿ, ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ರಾಸಲೀಲೆ ವಿಡಿಯೋಗಳು ಹಾಸನದಲ್ಲಿ ಹರಿದಾಡ್ತಾಯಿವೆ. ಈ ಕುರಿತು SIT ತನಿಖೆ ಕೈಗೆತ್ತಿಕೊಂಡಿದೆ. ಇದೇ ಸಂದರ್ಭದಲ್ಲಿ ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಪರಾರಿಯಾಗಿರೋದು ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

Featured How did the Prajwal Revanna video leak? What is the DK master plan behind this case? BJP leader's explosive statement about the pen drive? Top News
Share. WhatsApp Facebook Twitter Telegram
davangerevijaya.com
  • Website

Related Posts

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025

ಜನಮೆಚ್ಚಿದ ಪೊಲೀಸ್ ಗೆ ಕಮೆಂಡೇಶನ್ ಪದಕ

30 May 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,655 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,328 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,590 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
Blog

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

By davangerevijaya.com29 June 20250

ನಂದೀಶ್ , ಭದ್ರಾವತಿ ಉಕ್ಕಿನ ನಗರಿ ಭದ್ರಾವತಿಯಲ್ಲಿ ಒಂದೊಂದೇ ಸಂತಸದ ಕ್ಷಣಗಳು ಕಾಣುತ್ತಿವೆ..ಅತ್ತ ವಿಎಸ್ಐಎಲ್ ಕಾರ್ಖಾನೆ ಓಪನ್ ಆಗಲಿದೆ ಎಂಬ…

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,655 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,328 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

Subscribe to Updates

Get the latest creative news from SmartMag about art & design.

Recent Posts
  • ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.