ಚಿತ್ರದುರ್ಗ: ಲಾರಿ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಕೃಷಿ ಇಲಾಖೆ ನೌಕರ ಮೃತಪಟ್ಟಿರುವ ಘಟನೆ ನಡೆದಿದೆ.

ಚಿತ್ರದುರ್ಗ ತಾಲೂಕಿನ ಹೊಳಲ್ಕೆರೆ ರಸ್ತೆಯ ತಿರುಮಲ ಡಾಬಾ ಬಳಿ ಈ ಘಟನೆ ನಡೆದಿದೆ. ಚಿತ್ರದುರ್ಗದ ವಿಶಾಲ್ ಕುಮಾರ್ (28) ಮೃತ ದುರ್ದೈವಿ.

ಇವರು ಹೊಳಲ್ಕೆರೆಯ ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿಯಾಗಿದ್ದು, ಬೆಳಗ್ಗೆ ಕರ್ತವ್ಯಕ್ಕಾಗಿ ಹೊಳಲ್ಕೆರೆಗೆ ತೆರಳುವಂತಹ ಸಂದರ್ಭದಲ್ಲಿ ಈ ಒಂದು ಘಟನೆ ನಡೆದಿದ್ದು ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ಈ ಯುವಕನ ಮದುವೆ ನಿಶ್ಚಿತಾರ್ಥ ಜ.22 ಕ್ಕೆ ನಡೆಯಬೇಕಿತ್ತು. ಲಾರಿಯ ಚಾಲಕನ ಅಜಾಗರೂಕತೆ ಮತ್ತು ಅತಿ ವೇಗದಿಂದ ಅಪಘಾತ ನಡೆದಿದ್ದು, ಅಮಾಯಕ ವ್ಯಕ್ತಿ ಬಲಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

Share.
Leave A Reply

Exit mobile version