ದಾವಣಗೆರೆ : ನೈಋತ್ಯ ಶಿಕ್ಷಕರ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಭೋಜೇಗೌಡ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್ ಗೆ ಮುಖಭಂಗವಾಗಿದೆ.ಮೊದಲ ಪ್ರಾಶಸ್ತ್ಯ ಮತದಲ್ಲೇ ಗೆಲುವು ಸಾಧಿಸಿದ ಎಸ್.ಎಲ್.ಭೋಜೇಗೌಡ ಯಾವುದೇ ಸ್ಪರ್ಧೆ ಇಲ್ಲದೇ ಗೆದ್ದಿದ್ದಾರೆ. ಮತ ಎಣಿಕೆ ಪ್ರಕ್ರಿಯೆ ಸಂಪೂರ್ಣ ಮುಕ್ತಾಯವಾಗಿದ್ದು,
5267 ಮತಗಳ ಭಾರಿ ಅಂತರದಿಂದ ಭೋಜೇಗೌಡ ಗೆಲುವು ಸಾಧಿಸಿದ್ದಾರೆ. ಒಟ್ಟು 19479 ಮತಗಳು ಚಲಾವಣೆ ಆಗಿದ್ದವು. ಅದರಲ್ಲಿ 821 ಕುಲಗೆಟ್ಟ ಮತಗಳಾಗಿದೆ. 18658 ಸಿಂಧು ಮತಗಳಾಗಿದೆ. ಒಟ್ಟಾರೆ 9,829 ಮತಗಳ ಮೊದಲ ಪ್ರಾಶಸ್ತ್ಯ ಮತಗಳಲ್ಲೇ ಭೋಜೇಗೌಡ ಗೆದ್ದಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ. ಮಂಜುನಾಥ್ ಗೆ 4562 ಮತಗಳು ಬಿದ್ದಿದೆ.

Share.
Leave A Reply

Exit mobile version