


ದಾವಣಗೆರೆ: ತಮಿಳುನಾಡಿನ ಬಿಜೆಪಿ ಯುವ ನಾಯಕ, ಕರ್ನಾಟಕ ಮಾಜಿ ಪೊಲೀಸ್ ಅಧಿಕಾರಿ ಅಣ್ಣಮಲೈ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅgವರನ್ನು ದೇಹಲಿಯಲ್ಲಿ ಭೇಟಿಯಾಗಿರುವುದು ಹಲವು ಅನುಮಾನ ಮೂಡಿದೆ. ಆಗಾದ್ರೆ ಅಣ್ಣಮಲೈ ಬಿಜೆಪಿ ಪಕ್ಷವನ್ನು ಬಿಡ್ತಾರಾ? ಅಥವಾ ರಾಷ್ಟç ರಾಜಕಾರಣಕ್ಕೆ ಹೋಗ್ತಾರಾ? ಈ ಕುರಿತು ಮಹತ್ವದ ಸ್ಟೋರಿ ಇಲ್ಲಿದೆ ನೋಡಿ.
ತ್ರಿಭಾಷೆ ಸೂತ್ರಕ್ಕೆ ಅಪಸ್ವರ, ಹಿಂದಿ ಭಾಷೆ ಹೇರಿಕೆ ಆರೋಪದ ನಡುವೆ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವ ಸಾಧ್ಯತೆಗಳು ದಟ್ಟವಾಗಿವೆ. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ನಡುವೆ ಮೈತ್ರಿ ಸಾಧ್ಯತೆಯಿದೆೆ. ಆದರೆ ಎಐಎಡಿಎಂಕೆ ಅಣ್ಣಾಮಲೈ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೋಡಲು ಆಸಕ್ತಿಯಿಲ್ಲ. ಇದು ಅಣ್ಣಮಲೈ ಕುರ್ಚಿಗೆ ಮುಳುವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

೨೦೨೩ರಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ನಡುವಿನ ಮೈತ್ರಿ ಮುರಿದು ಬೀಳಲು ಅಣ್ಣಾಮಲೈ ಕಾರಣ ಎಂಬುದು ಎಐಎಡಿಎಂಕೆ ಪಕ್ಷದ ಅಸಮಾಧಾನಕ್ಕೆ ಪ್ರಮುಖ ಕಾರಣವಾಗಿದೆ. ಅಲ್ಲದೇ ಜಾತಿ ಸಮೀಕರಣಗಳ ಕಾರಣದಿಂದಲೂ ಅಣ್ಣಾಮಲೈ ಅವರ ರಾಜೀನಾಮೆಗೆ ಬಿಜೆಪಿ ಒತ್ತಾಯಿಸುವ ಸಾಧ್ಯತೆಗಳಿವೆ. ತಮಿಳುನಾಡಿನ ರಾಜಕೀಯ ಪರಿಸ್ಥಿತಿಯ ಬಗ್ಗೆ ಹೈಕಮಾಂಡ್ಗೆ ವರದಿಯನ್ನು ಸಲ್ಲಿಸಿದ್ದೇನೆ. ರಾಜ್ಯದ ಪರಿಸ್ಥಿತಿ ಮತ್ತು ಮುಂದಿನ ಕಾರ್ಯತಂತ್ರದ ಬಗ್ಗೆ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ ಎಂದು ಅಣ್ಣಾಮಲೈ ಹೇಳಿದ್ದಾರೆ. ಅವರ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.

ಅಣ್ಣಾಮಲೈ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಭೇಟಿಯಾದ ಸಂದರ್ಭದಲ್ಲಿ, ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಅವರನ್ನು ಕೆಳಗಿಳಿಸುವ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ. ತಮಿಳುನಾಡಿನಲ್ಲಿ ಪಕ್ಷದ ತಂತ್ರವನ್ನು ಅನುಸರಿಸುವಂತೆ ಅಮಿತ್ ಶಾ ಅವರು ಅಣ್ಣಾಮಲೈ ಅವರಿಗೆ ಸೂಚನೆ ನೀಡಿದ್ದು, ಇದರ ಅನುಸಾರವಾಗಿ ಅಣ್ಣಾಮಲೈ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.
ಆದರೆ ಅಣ್ಣಾಮಲೈ ಅವರ ಸೇವೆಯನ್ನು ಕಳೆದುಕೊಳ್ಳಲು ಇಷ್ಟಪಡದ ಬಿಜೆಪಿ, ಅವರಿಗೆರಾಷ್ಟ್ರೀಯ ಜವಾಬ್ದಾರಿ ಅಥವಾ ಅನ್ಯ ರಾಜ್ಯಗಳ ಉಸ್ತುವಾರಿ ಜವಾಬ್ದಾರಿಯನ್ನು ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ. ಅಣ್ಣಾಮಲೈ ಅವರ ಬದಲಿಗೆ ಬಿಜೆಪಿ ಶಾಸಕ ನೈನಾರ್ ನಾಗೇಂದ್ರನ್ ಅವರಿಗೆ ರಾಜ್ಯಾಧ್ಯಕ್ಷ ಪಟ್ಟ ಕಟ್ಟುವ ಮೂಲಕ, ಜಾತಿ ಸಮೀಕರಣವನ್ನು ಬಲಗೊಳಿಸಲು ಬಿಜೆಪಿ ಮುಂದಾಗಿದೆ.
ತಮಿಳಿನಾಡಿನಲ್ಲಿ ಬಲಪಂಥ ಚಿಂತನೆಯಲ್ಲಿ ಹೊಸ ಅಲೆಯನ್ನು ಮೂಡಿದ್ದಂಥ ಅಣ್ಣಮಲೈ ಅವರು, ರಾಜಕೀಯ ಹೊಂದಾಣಿ ಹಾಗೂ ಮೈತ್ರಿಧರ್ಮ ಪಾಲಿಸಲು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂಥ ಸಾಧ್ಯತೆಯಿದೆ.