Author: davangerevijaya.com

ದಾವಣಗೆರೆಯಲ್ಲಿ ನಡೆಯುವ ವೀರಶೈವ ಮಹಾಸಭಾ ಅಧಿವೇಶನದಲ್ಲಿ ಮಹಿಳೆಗೆ ಅಗತ್ಯವಾದ ಚರ್ಚೆಗಳು ನಡೆಯಲಿದ್ದು, ಇದರ ನೇತೃತ್ವವನ್ನು ವೀರಶೈವ ಮಹಾಸಭಾ‌ ರಾಜ್ಯ ಘಟಕದ ಕಾರ್ಯಾಕಾರಿ ಸಮಿತಿ ನಿರ್ದೇಶಕಿ ಶಶಿಕಲಾ ನಲ್ಕುದುರೆ ವಹಿಸಿಕೊಳ್ಳುವರು. ಹಾಗಾದ್ರೆ ಶಶಿಕಲಾ ನಲ್ಕುದುರೆ ಯಾರು, ಅವರು ಅಧಿವೇಶನದಲ್ಲಿ ಚರ್ಚೆ ಮಾಡುವ ವಿಷಯಗಳೇನು ಎಂಬುದರ ಸಂಪೂರ್ಣ ಡೀಟೇಲ್ಸ್ ನಿಮ್ಮ ಮುಂದೆ. ನಂದೀಶ್ ಭದ್ರಾವತಿ, ದಾವಣಗೆರೆ ದಾವಣಗೆರೆಯಲ್ಲಿ ನಡೆಯುವ ವೀರಶೈವ ಮಹಾಸಭಾ ಅಧಿವೇಶನದಲ್ಲಿ ಮಹಿಳೆಯರ ಬಗ್ಗೆ ಸಾಕಷ್ಟು ಚರ್ಚೆ ನಡೆಯಲಿದ್ದು, ಇದರಲ್ಲಿ ವೀರಶೈವ ಮಹಾಸಭಾ‌ ರಾಜ್ಯ ಘಟಕದ ಕಾರ್ಯಾಕಾರಿ ಸಮಿತಿ ನಿರ್ದೇಶಕಿ ಶಶಿಕಲಾ ನಲ್ಕುದುರೆ ತಮ್ಮದೇ ಆದ ವಿಷಯವನ್ನು ಮಂಡನೆ ಮಾಡುವರು. ಸದಾ ಲವಲವಿಕೆ, ಮಹಿಳೆಯರ ಸ್ಥಾನಮಾನ, ಗೌರವ, ಭದ್ರತೆ, ಮಹಿಳೆಯರಿಗೆ ಮೀಸಲಾತಿ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಶಶಿಕಲಾ ನಲ್ಕುದುರೆ ತಮ್ಮದೇ ಆದ ಚರ್ಚೆ ಮಂಡಿಸುವರು. ಮಹಿಳೆ ವಿಷಯದಲ್ಲಿ ಸದಾ ಹೋರಾಟ ಮಾಡುವ ಶಶಿಕಲಾ ಮೊದಲಿನಿಂದಲೂ ಸ್ತ್ರೀ ವಿಷಯದಲ್ಲಿ ಹೋರಾಟ ಮಾಡಿಕೊಂಡಿರುವ ಇವರು ಅಪ್ಪಟ ಕಾಂಗ್ರೆಸ್ ವಕ್ತಾರೆ. ಇವರಿಗೆ ಬಾಬಾಸಾಹೇಬ ಅಂಬೇಡ್ಕರ ಹಾಗೂ…

Read More

ದಾವಣಗೆರೆ: ದಾವಣಗೆರೆ ಮತ್ತು ಚಿತ್ರದುರ್ಗ ಪ್ರತ್ಯೇಕ ಹಾಲು ಒಕ್ಕೂಟ ಆರಂಭಿಸುವಂತೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯಿಸಿದರು. ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ಗಮನ ಸೆಳೆದ ಶಾಸಕ ಕೆ.ಎಸ್.ಬಸವಂತಪ್ಪ, ೨೦೧೫ರಲ್ಲಿ ಅಂದಿನ ಸರ್ಕಾರದ ಬಜೆಟ್‌ನಲ್ಲಿ ಅನುದಾನ ಮೀಸಲಿಟ್ಟು ಪ್ರತ್ಯೇಕ ಹಾಲು ಒಕ್ಕೂಟ ಪ್ರಾರಂಭಿಸಲು ನಿರ್ಧರಿಸಲಾಗಿತ್ತು. ಆದರೆ ಅಂದಿನಿಂದ ಈವರೆಗೂ ಅದು ಆರಂಭವಾಗಿಲ್ಲ ಎಂದರು. ಮಾಯಕೊಂಡ ಕ್ಷೇತ್ರದಲ್ಲಿ ದಾವಣಗೆರೆ ಮತ್ತು ಚಿತ್ರದುರ್ಗ ಪ್ರತ್ಯೇಕ ಹಾಲು ಒಕ್ಕೂಟ ಆರಂಭ ಮಾಡಲು ಈಗಾಗಲೇ ಕಲ್ಪನಹಳ್ಳಿ ಗ್ರಾಮದಲ್ಲಿ ಜಮೀನು ಹಾಗೂ ರಸ್ತೆ ಸಂಪರ್ಕವನ್ನು ಒದಗಿಸಿಕೊಟ್ಟಿದ್ದೇವೆ. ಇದಕ್ಕೆ ಬೋರ್ಡ್ ನಿಗಮವೂ ಕೂಡ ಸಮ್ಮಿತಿ ನೀಡಿದೆ. ಹೀಗಾಗಿ ಕೂಡಲೇ ಆರಂಭಿಸಬೇಕೆಂದು ಸದನದಲ್ಲಿ ಸರ್ಕಾರದ ಮೇಲೆ ಒತ್ತಡ ಹಾಕಿದರು. ದಾವಣಗೆರೆ ಜಿಲ್ಲೆಯಲ್ಲೇ ಅತೀ ಹೆಚ್ಚು ಹಾಲು ಉತ್ಪಾದನೆ ಮಾಡಲಾಗುತ್ತಿದೆ. ಅಲ್ಲದೇ ಅತೀ ಹೆಚ್ಚು ಸಹಕಾರ ಸಂಘಗಳನ್ನು ಹೊಂದಿವೆ. ಈ ಭಾಗದಲ್ಲಿ ಹಾಲು ಒಕ್ಕೂಟ ಆರಂಭಿಸಿದರೆ ರೈತರಿಗೆ ಅನುಕೂಲ ಆಗುತ್ತದೆ. ಕೂಡಲೇ ಸರ್ಕಾರ ಅನುದಾನ ಬಿಡುಗಡೆ ಮಾಡಿ ದಾವಣಗೆರೆ ಮತ್ತು ಚಿತ್ರದುರ್ಗ ಪ್ರತ್ಯೇಕ…

Read More

ದಾವಣಗೆರೆ: ಎಲ್ಲರೂ ಶಿಕ್ಷಣವಂತರಾದಾಗ ಮಾತ್ರ ನಮ್ಮ ಹಕ್ಕು ಪಡೆಯಲು ಸಾಧ್ಯವಾಗಲಿದೆ ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಕಿವಿಮಾತು ಹೇಳಿದರು. ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಹಾಗೂ ತಾಲೂಕಿನ ಕರಿಲಕ್ಕೇನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣ ಹಾಗೂ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನದಂತೆ ಎಲ್ಲರೂ ಶಿಕ್ಷಣವಂತರಾಗಿ ಸಂಘಟಿತ ಹೋರಾಟದೊಂದಿಗೆ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯವಾಗಿ ಬೆಳೆಯಬೇಕು ಎಂದು ಸಲಹೆ ನೀಡಿದರು. ಪುತ್ಥಳಿ ಅನಾವರಣದ ಕನಸು ಬಹುದಿನಗಳ ನಂತರ ನನಸಾಗಿದೆ. ವಾಲ್ಮೀಕಿ ಅವರ ತತ್ವಾದರ್ಶವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಎಲ್ಲ ಸಮುದಾಯದವರೊಂದಿಗೆ ಸಹೋದರತ್ವ ಭಾವದಿಂದ ಬಾಳಬೇಕು. ಈ ನಿಟ್ಟಿನಲ್ಲಿ ವಾಲ್ಮೀಕಿ ಗುರುಪೀಠದ ಜಗದ್ಗುರುಗಳು ಸಮಾಜವನ್ನು ಸಂಘಟಿಸುವ ಮೂಲಕ ಸಮಾಜವನ್ನು ಸರಿದಾರಿಗೆ ತರುವ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವರ್ಗದವರಿಗೆ ಸಾಕಷ್ಟು ಸೌಲಭ್ಯಗಳನ್ನು ಕೊಟ್ಟಿದೆ. ಇವುಗಳನ್ನು ಸದುಪಯೋಗ ಮಾಡಿಕೊಳ್ಳಬೇಕು. ಪೋಷಕರು ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸಿ ಸಮಾಜದ ಆಸ್ತಿಯನ್ನಾಗಿ ಮಾಡಬೇಕು.…

Read More

ದಾವಣಗೆರೆ: ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದರೂ ಬಾವಿಹಾಳ್ ಎಂಬ ಸಣ್ಣ ಹಳ್ಳಿಯ ರಸ್ತೆ, ಇನ್ನೂ ಅಭಿವೃದ್ಧಿಯಾಗಿಲ್ಲ ಎಂದರೆ ನಾಚಿಕೆಗೇಡಿನ ಸಂಗತಿ ಎಂದು ಚಿತ್ರದುರ್ಗ ತಾಲೂಕಿನ ಸಿರಿಗೆರೆ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ವಿಷಾದ ವ್ಯಕ್ತಪಡಿಸಿದರು. ತಾಲೂಕಿನ ಬಾವಿಹಾಳ್ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀಕರಿಯಮ್ಮ ದೇವಿ ದೇವಸ್ಥಾನದ ಕಟ್ಟಡ ಉದ್ಘಾಟನೆ ಮತ್ತು ಕಳಸಾರೋಹಣ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ಪ್ರೊ.ಲಿಂಗಣ್ಣ ಐದು ವರ್ಷ ಶಾಸಕರಾಗಿದ್ದರು. ಈ ಹಿಂದೆ ಎಷ್ಟೋ ಜನ ಶಾಸಕರಾಗಿದ್ರು. ಈಗ ಬಸವಂತಪ್ಪ ಶಾಸಕರಾಗಿದ್ದಾರೆ. ಆದರೀಗ ಲಿಂಗಣ್ಣನವರೇ ನೀವು ಐದು ವರ್ಷ ಶಾಸಕರಾಗಿದ್ದಾಗ ಈ ರಸ್ತೆಯಲ್ಲಿ ಓಡಾಡಿದ್ದಿಯೋ ಇಲ್ಲವೋ, ನೀನು ಹೇಳು. ಐದು ವರ್ಷವಾದರೂ ರಸ್ತೆ ಹೀಗಿದಿಯೆಲ್ಲ ಎಂದರೆ ಹೇಗೆ. ದೇಶಕ್ಕೆ ಸ್ವಾತಂತ್ರ್ಯ ಬಂದು ಅದೆಷ್ಟೋ ವರ್ಷಗಳು ಕಳೆದವು. ಗ್ರಾಮೀಣ ರಸ್ತೆಗಳು ಯಾರು ಓಡಾಡಲು ಆಗದಂತೆ ಕೆಟ್ಟದಾಗಿವೆ. ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳಿಗೆ ಸಾಮಾಜಿಕ ಕಳಕಳಿ, ಸಾಮಾಜಿಕ ಬದ್ಧತೆ ಇರಬೇಕು. ಜನರಿಗೆ ಮೂಲಭೂತ ಸೌಲಭ್ಯ ಒದಗಿಸುವುದು ಪ್ರತಿಯೊಬ್ಬ…

Read More

ದಾವಣಗೆರೆ: ದಾವಣಗೆರೆಯಲ್ಲಿ ನಡೆದ 31 ಜಿಲ್ಲಾ ಮಟ್ಟದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ನಗರದ ಈಶ್ವರಮ್ಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳು ರಾಜ್ಯ ಮಟ್ಟದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶಕ್ಕೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಭಾರತ ಮತ್ತು ಕರ್ನಾಟಕ ಸರ್ಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪ್ರಾದೇಶಿಕ ಉಪ ವಿಜ್ಞಾನ ಕೇಂದ್ರ, ದಾವಣಗೆರೆ ವತಿಯಿಂದ ಆಯೋಜಿಸಿದ್ದ 31ನೇ ಜಿಲ್ಲಾ ಮಟ್ಟದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ-2023 ಈಶ್ವರಮ್ಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿನಿಯರಾದ ಬಿ.ಎನ್.ಭಾವನಾ (9 ನೇ ತರಗತಿ) ಮತ್ತು ಎಂ.ಪ್ರತೀಕ್ಷಾ (8 ನೇ ತರಗತಿ) ಇವರು ‘ಸ್ವಾವಲಂಭನೆಗಾಗಿ ಪರಿಸರ ವ್ಯವಸ್ಥೆ ಆಧಾರಿತ ವಿಧಾನಗಳು’ ಎಂಬ ಉಪ ವಿಷಯದ ಅಡಿಯಲ್ಲಿ ‘ಕತ್ತಾಳೆ ಪಟ್ಟಿ, ಪರಿಸರದ ಗಟ್ಟಿ’ ಎಂಬ ವಿಷಯವನ್ನು ಮಂಡನೆ ಮಾಡಿ ಗೆಲುವು ಸಾಧಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ವಿದ್ಯಾರ್ಥಿನಿಯರಿಗೆ ಶಾಲಾ ವಿಜ್ಞಾನ ಶಿಕ್ಷಕಿ ಸವಿತಾ ಎನ್.…

Read More

ಚಿತ್ರದುರ್ಗ: ನಗರದ ಪ್ರವಾಸಿ ಮಂದಿರದಲ್ಲಿ ಮಾಜಿ ಸಚಿವ ಗೋವಿಂದ ಕಾರಜೋಳ ಪತ್ರಿಕಾಗೋಷ್ಠಿ ಹಮ್ಮಿಕೊಂಡ ವೇಳೆ ಸಮುದಾಯದ ಮುಖಂಡರೊಂದಿಗೆ ಮಾತಿನ ಚಕಮಕಿ ನಡೆದಿದೆ. ದಲಿತ ಮಹಾಸಭಾ ಸಂಘಟನೆ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸುತ್ತಿದ್ದಂತಹ ಕಾರಜೋಳ ಕೊಠಡಿಗೆ ನೇರವಾಗಿ ಬಂದರು. ಈ ಸಂದರ್ಭದಲ್ಲಿ ಮಾತನಾಡಿದಂತಹ ಪದಾಧಿಕಾರಿಗಳು, ಬಿಜೆಪಿ ಅಧಿಕಾರದಲ್ಲಿದ್ದಂತಹ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿ ದಲಿತರಿಗೆ ನೀವು ಅನ್ಯಾಯ ಮಾಡಿದ್ದೀರಾ. ಸಮುದಾಯದ ಮುಖಂಡರಾಗಿ ಸಮುದಾಯಕ್ಕೆ ಕೊಡುಗೆ ಏನನ್ನು ನೀವು ನೀಡಿಲ್ಲ ಎಂದು‌ ಪ್ರಶ್ನೆ ಮಾಡಿದರು. ಈ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದಿದೆ. ಬಳಿಕ ಮಾಜಿ ಸಚಿವ ಕಾರಜೋಳ ಹಾಗೂ ಸಮುದಾಯದ ಮುಖಂಡರು ವಾದ-ಪ್ರತಿವಾದ ಮಂಡಿಸಿದರು. ಹಲ್ಲೆಗೆ ಯತ್ನ, ಬಂಧಿಸಲು ಆಗ್ರಹ ಮಾಜಿ ಸಚಿವ ಗೋವಿಂದ ಕಾರಜೋಳ ಮಾತನಾಡಿ, ನನ್ನ ಮೇಲೆ ಹಲ್ಲೆ ಮಾಡಲು ಬಂದಂತಹ ವ್ಯಕ್ತಿಗಳನ್ನು ಬಂಧಿಸಬೇಕು. ಇಲ್ಲದಿದ್ದರೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ಕೂರುವುದಾಗಿ ಗೋವಿಂದ್ ಕಾರಜೋಳ ಎಚ್ಚರಿಸಿದರು.

Read More

 ದಾವಣಗೆರೆ : ಇನ್ಮುಂದೆ ಯಾರಾದ್ರೂ ಮೊಸರು ತಂದಿದ್ದೇನೆ ಉಪ್ಪಿನಕಾಯಿ ಕೊಡಿ‌ ಅಂತ ಮನೆ ಬಾಗಿಲಿಗೆ ಬಂದ್ರೆ ಮಹಿಳೆಯರು ಎಚ್ಚರದಿಂದ ಇರಬೇಕು….ಅಯ್ಯೋ ಯಾಕೆ ಎಂದು ಪ್ರಶ್ನೆ  ಕೇಳೋರಿಗೆ ಇಲ್ಲೊಂದು ಘಟನೆ ಸಾಕ್ಷಿಯಾಗಿದೆ. ಹೌದು….ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯ  ಗ್ರಾಮವೊಂದರಲ್ಲಿ‌ ವ್ಯಕ್ತಿಯೊಬ್ಬ ಉಪ್ಪಿನಕಾಯಿ ಕೇಳಲು ಬಂದು ಮಹಿಳೆಯೊಬ್ಬಳ ಕೆನ್ನೆ ಕಚ್ಚಿದ್ದಾನೆ. ಮಂಜಪ್ಪ ಆಲಿಯಾಸ್ ಮಂಜುನಾಥ್ ಡಿ.ಹೆಚ್. ಎಂದು ಹೇಳಲಾಗುತ್ತಿದ್ದು, ಆ ವ್ಯಕ್ತಿಯನ್ನು ಬಂಧಿಸಬೇಕೆಂದು ಅಲ್ಲಿನ ಗ್ರಾಮದ ಮಹಿಳೆಯರು ದಾವಣಗೆರೆಯ ಎಸ್ಪಿ ‌ಕಚೇರಿ ಬಳಿ ಆರೋಪಿಯ ಫೊಟೋವನ್ನು ಹಿಡಿದು  ಪ್ರತಿಭಟನೆ  ನಡೆಸಿದರು. ಏನಿದು ಘಟನೆ? ಮನೆಯಲ್ಲಿ ಒಬ್ಬಂಟಿ ಮಹಿಳೆ ಇರುವುದನ್ನು ಗಮನಿಸಿದ ಕಾಮುಕ ನನಗೆ ಉಪ್ಪಿನಕಾಯಿ ಬೇಕು ಎಂದು ಕೇಳುತ್ತಾ ಮನೆಯೊಳಗೆ ನುಗ್ಗಿದ್ದಾನೆ. ಬಳಿಕ ಅತ್ಯಾಚಾರಕ್ಕೆ ಯತ್ನಿಸಿ ಕೆನ್ನೆಯನ್ನು ಕಚ್ಚಿ ಪರಾರಿಯಾಗಿದ್ದಾನೆ. ಡಿಸೆಂಬರ್ 2 ರಂದು ಈ ಘಟನೆ ನಡೆದಿದ್ದು,  ಪೊಲೀಸರಿಗೆ ದೂರು ಕೊಟ್ಟರೂ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಮಹಿಳೆಯರು ಎಸ್ಪಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಕ್ರಮಕ್ಕೆ ಒತ್ತಾಯ ಮಹಿಳೆ ಮನೆಯಲ್ಲಿ ಒಬ್ಬಳೇ ಇರುವುದನ್ನು…

Read More

ದಾವಣಗೆರೆ : ರಾಜ್ಯದಲ್ಲಿ ತೀವ್ರ ಚರ್ಚೆಗೊಳಗಾಗಿರುವ ಕಾಂತರಾಜ್ ವರದಿ ಆಯೋಗದ ಜಾತಿಗಣತಿ ವಿಚಾರ ಅಂಗೀಕರಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಮನವಿ ಸಲ್ಲಿಸಲಾಗಿದೆ ಹಾಗೂ ಸಿದ್ದರಾಮಯ್ಯ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಆದ್ದರಿಂದ ನಾವು ಕಾದು ನೋಡುತ್ತೇವೆ ಎಂದುಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು. ನಗರದ ಎಂಸಿಸಿ ಬಿ ಬ್ಲಾಕ್ ನಲ್ಲಿರುವ ಶಾಸಕರ ನಿವಾಸದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು ಜಾತಿಗಣತಿ ವರದಿ ಅಂಗೀಕರಿಸಿ ಬಿಡುಗಡೆ ಸಂಬಂಧ ಈಗಾಗಲೇ ಮಹಾಸಭಾವು ಸ್ಪಷ್ಟ ನಿರ್ಧಾರ ಹೇಳಿದೆ ಎಂದು ತಿಳಿಸಿದರು. ಜಾತಿಗಣತಿ ವರದಿ ಬಿಡುಗಡೆ ಮಾಡದೇ ವಿರೋಧ ಮಾಡುವುದು ಸರಿಯಲ್ಲ ಮೊದಲು ವರದಿ ಬಿಡುಗಡೆ ಆಗಲಿ. ಜಾತಿಗಣತಿ ವರದಿ ಬಿಡುಗಡೆ ಮಾಡದೇ ವಿರೋಧ ಮಾಡುವುದು ಸರಿಯಲ್ಲ. ಎಂದು ಸಿದ್ದರಾಮಯ್ಯ ಅವರೇ ಹೇಳಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ನಮ್ಮ ಅಭಿಪ್ರಾಯ ನಾವು ತಿಳಿಸಿದ್ದೇವೆ. ಸಿದ್ದರಾಮಯ್ಯ ಅವರೂ ಕೂಡ ನಾನು ಸಹ ವರದಿ ನೋಡಿಲ್ಲ, ಲೋಪದೋಷವಾಗಿದ್ದರೆ ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ. ಈ…

Read More

ದಾವಣಗೆರೆ:  ರಾಜ್ಯದಲ್ಲಿ ವೈಜ್ಞಾನಿಕವಾಗಿ ಮತ್ತು ವಾಸ್ತವಾಂಶ ಆಧಾರಿತವಾಗಿ ಹೊಸದಾಗಿ ಜಾತಿ ಜನಗಣತಿ ಮಾಡಬೇಕೆಂದು ಅಖಿಲ ಭಾರತ ವೀರಶೈವ ಮಹಾಸಭಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದೆ. ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ  ಬೆಳಗಾವಿಯಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಈ ಆಗ್ರಹ ಮಾಡಲಾಯಿತು. ವೀರಶೈವ ಲಿಂಗಾಯತ ಮಹಾಸಭಾ ಬಸವಾದಿ ಪ್ರಮಥರ ತತ್ವಗಳನ್ನು ಪರಿಪಾಲಿಸುತ್ತಿದ್ದು, ಸರ್ವರಿಗೂ ಲೇಸನ್ನು ಬಯಸುವ ಮತ್ತು ಸಮ ಸಮಾಜದ ನಿರ್ಮಾಣ ಮಾಡಬೇಕೆಂಬ ಶರಣರ ತತ್ವದ ಆಧಾರದ ಮೇಲೆಯೇ ನಡೆಯುತ್ತಿರುವ ಸಂಸ್ಥೆಯಾಗಿದೆ.  ನಾವು ಜಾತಿ ಜನಗಣತಿಯ ವಿರೋಧಿಗಳಲ್ಲ ಎಂಬುದನ್ನು ಈ ಸಂದರ್ಭದಲ್ಲಿ ತಮಗೆ ಸ್ಪಷ್ಟಪಡಿಸಲು ಇಚ್ಛಿಸುತ್ತೇವೆ. ಆದರೆ, ಕಳೆದ 8 ವರ್ಷಗಳ ಹಿಂದೆ ನಡೆಸಲಾದ ಈ ಸಾಮಾಜಿಕ – ಆರ್ಥಿಕ ಸಮೀಕ್ಷೆ ಹಲವು ವೈರುಧ್ಯ ಮತ್ತು ಲೋಪಗಳಿಂದ ಕೂಡಿದ್ದು, ಇದನ್ನು ಸರಿಪಡಿಸುವ ಅಗತ್ಯವಿದೆ ಎಂಬುದು ನಮ್ಮ ಅಭಿಪ್ರಾಯವಾಗಿದೆ. ಹೀಗಾಗಿ ಹೊಸದಾಗಿ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಮಹಾಸಭಾದ ಅನೇಕ ತಾಲೂಕು ಮತ್ತು ಜಿಲ್ಲಾ ಮಟ್ಟದ ಸಭೆಗಳಲ್ಲಿ…

Read More

ಚನ್ನಗಿರಿ: ಸಮಾಜಕ್ಕೆ ಸಮಾನತೆಯ ಅವಕಾಶದ ಭೂಮಿ ಒದಗಿಸಿದವರು ಬಸವಾದಿ ಶಿವ ಶರಣರು ಎಂದು ಪಾಂಡೋಮಟ್ಟಿ ವಿರಕ್ತ  ಮಠದ ಡಾ. ಗುರುಬಸವ ಸ್ವಾಮೀಜಿ ಹೇಳಿದರು. ತಾಲೂಕಿನ ಪಾಂಡೋಮಟ್ಟಿ ವಿರಕ್ತ ಮಠದಲ್ಲಿ ಹಮ್ಮಿಕೊಳ್ಳಲಾಗಿದ್ದ 855 ನೇ ಮಾಸಿಕ ಶಿವಾನುಭವ ಕಾರ್ಯಕ್ರಮ ಹಾಗೂ ಸರ್ವ ಶರಣ ಶರಣಿಯರ ಸ್ಮರಣೋತ್ಸವ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿ,  ಅಂದಿನ ಸಮಾಜದಲ್ಲಿ ಬೇರು ಬಿಟ್ಟಿದ್ದ ಅಂದಕಾರ,  ಕಂದಾಚಾರ ಮೂಢನಂಬಿಕೆ ಅಸ್ಪೃಶ್ಯತೆ ಮೇಲು, ಕೀಳು ಬಡವಬಲ್ಲಿದ, ಸ್ತ್ರೀ, ಪುರುಷ, ಹಿರಿಯ ಕಿರಿಯ ಜಾತಿ ಮತ ಪಂಥ ವರ್ಗ ಬೇಧಗಳಿಗೆ ಅತ್ಯಂತ ಸುಳಿಗೆ ಸಿಕ್ಕು ನಗುತ್ತಿದ್ದ ಸಮಾಜ.  ಇಂತಹ ಸಮಾಜವನ್ನು ಅಂಧಕಾರದಿಂದ ಹೊರ ತಂದು ಸುಜ್ಞಾನದ ಬೀಜವನ್ನ ಬಿತ್ತಿದವರು 12ನೇ ಶತಮಾನದ ಶಿವಶರಣರು. ಸತ್ಯ ಶುದ್ಧ ಕಾಯಕದಿಂದ ತಾತ್ವಿಕ ತಲಾದಿಯಿಂದ ಸಾತ್ವಿಕ ಸಮಾಜ ನಿರ್ಮಾಣ ಮಾಡಿ ಅರಿವು ಆಚಾರ ವಿವೇಕದ ಮೂಲಕ ಸಂಗ್ರಹ ಬುದ್ಧಿಯನ್ನು ಹೊರತುಪಡಿಸಿ ದಾನ ದಾಸೋಹದ ಮೂಲಕ ಸಾಮಾಜಿಕ ಕಲ್ಯಾಣ ಮಾಡಿದವರು ಶರಣರು. ಅರಮನೆಗಿಂತ ಅರಿವಿನ ಮನೆ ಮುಖ್ಯ. ಭೌತಿಕ…

Read More