Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»Blog»ಸಿರಿಗೆರೆ ಶ್ರೀ ವಿರುದ್ಧ ಮತ್ತೆ ದಂಡೆದ್ದ ಭಕ್ತ ಸಮೂಹ, ಭಕ್ತ ಅಣಬೇರು ರಾಜಣ್ಣ ಹೇಳೋದೇನು?
Blog

ಸಿರಿಗೆರೆ ಶ್ರೀ ವಿರುದ್ಧ ಮತ್ತೆ ದಂಡೆದ್ದ ಭಕ್ತ ಸಮೂಹ, ಭಕ್ತ ಅಣಬೇರು ರಾಜಣ್ಣ ಹೇಳೋದೇನು?

ದಾವಣಗೆರೆಯಲ್ಲಿ ಸಿರಿಗೆರೆ ಶ್ರೀಗಳ ವಿರುದ್ಧ ನಡೆದ ಎರಡನೇ ಸಭೆ, ಗಣ್ಯರು ಭಾಗಿ
davangerevijaya.comBy davangerevijaya.com1 September 2024No Comments2 Mins Read
Facebook WhatsApp Twitter
Share
WhatsApp Facebook Twitter Telegram

ದಾವಣಗೆರೆ: ಅವಳಿ ಜಿಲ್ಲೆಗಳಾದ ದಾವಣಗೆರೆ-ಚಿತ್ರದುರ್ಗದಲ್ಲಿ ಸಿರಿಗೆರೆ ಮಠದ ಚರ್ಚೆಯೇ ಜೋರಾಗಿದ್ದು, ದಾವಣಗೆರೆಯಲ್ಲಿ ಸಿರಿಗೆರೆ ಶ್ರೀಗಳ ವಿರೋಧಿ ಬಣವಿದ್ದರೇ, ಚಿತ್ರದುರ್ಗದ ವ್ಯಾಪ್ತಿಯಲ್ಲಿ ಸಿರಿಗೆರೆ ಶ್ರೀಗಳ ಪರ ಭಕ್ತರು ನಿಂತಿದ್ದಾರೆ.

ಅಂತೆಯೇ ಅಪೂರ್ವ ರೆಸಾರ್ಟ್ನಲ್ಲಿ ಸಿರಿಗೆರೆ ಶ್ರೀಗಳ ವಿರುದ್ಧ ಸಿರಿಗೆರೆ ಮಠದ ಭಕ್ತ ಅಣಬೇರು ರಾಜಣ್ಣ ನೇತೃತ್ವದಲ್ಲಿ ಎರಡನೇ ಸಭೆ ನಡೆಯಿತು. ಈ ಸಭೆಯಲ್ಲಿ ಮಾತನಾಡಿದ ಅಣಬೇರು ರಾಜಣ್ಣ, ಸಿರಿಗೆರೆ ಮಠದ ಮುಂದಿನ ಪೀಠಾಧಿಪತಿ ಯಾರು ಎಂದು ಘೋಷಿಸಬೇಕು. ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಟ್ರಸ್ಟ್ ಡೀಡ್ ರದ್ಧಾಗಬೇಕು ಎಂದು ಒತ್ತಾಯಿಸಿದರು.

ಸಿರಿಗೆರೆಯಲ್ಲಿ ಶ್ರೀಗಳು ಇತ್ತೀಚೆಗೆ ಭಕ್ತರೆಲ್ಲರನ್ನು ಸೇರಿಸಿ ಸಭೆ ನಡೆಸಿ ವಿರೋಧಿ ಬಣಕ್ಕೆ ಟಾಂಗ್ ನೀಡಿತ್ತು. ಅಂತೆಯೇ ಈಗ ಎಂದು ಸಾಧು ಸದ್ಧರ್ಮ ಸಮಾಜದ ಹಿರಿಯ ಮುಖಂಡರು ಸಭೆ ನಡೆಸಿದರು. ಈ ಸಭೆಯಲ್ಲಿ ಈ ಎರಡು ವಿಷಯಗಳೇ ಪ್ರಮುಖ ಚರ್ಚೆಯಾಗಿದ್ದವು.

ತಮ್ಮ ಸ್ವ ಹಿತಾಸಕ್ತಿಗಾಗಿ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ 30 ವರ್ಷದ ಹಿಂದೆ ಟ್ರಸ್ಟ್ ಡೀಡ್ ಮಾಡಿದ್ದು, ತಮ್ಮ ಇಚ್ಛೇನುಸಾರ ನಡೆದುಕೊಳ್ಳುತ್ತಿದ್ದಾರೆ. ಸಮಾಜದ ಇಡೀ ಆಸ್ತಿಯನ್ನು ಒಬ್ಬರೇ ಬರೆದುಕೊಂಡಿದ್ದಾರೆ. ಜಗದ್ಗುರು ಆದವರಿಗೆ ಹಣ, ಆಸ್ತಿ ಆಸೆ ಇರಬೇಕೆ? ವೀರಶೈವ ಸಮಾಜದ ಹಲವಾರು ಸ್ವಾಮೀಜಿಗಳು ಸಮಾಜದ ಉದ್ಧಾರಕ್ಕಾಗಿ ಶ್ರಮಿಸಿದ್ದಾರೆ. ಆದರೆ, ಸಿರಿಗೆರೆ ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಮಾಜದ 2 ಸಾವಿರ ಕೋಟಿ ಮೌಲ್ಯದ ಇಡೀ ಆಸ್ತಿಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ ಎಂದು ಅವರು ಆರೋಪಿಸಿದರು.

ತೆರಿಗೆ ಉಳಿಸುವ ನೆಪದಲ್ಲಿ ಟ್ರಸ್ಟ್ ಡೀಡ್ ಮಾಡಿಕೊಂಡಿದ್ದಾರೆ. ಹಾಗಾದ್ರೆ ಈ ಟ್ರಸ್ಟ್ ಡೀಡ್‌ನ್ನು 30 ವರ್ಷಗಳಿಂದಲೂ ರಹಸ್ಯವಾಗಿಯೇ ಇಟ್ಟಿದ್ದು ಏಕೆ? 2 ಸಾವಿರ ಕೋಟಿ ಮೌಲ್ಯದ ಇಡೀ ಆಸ್ತಿಯನ್ನು ಸ್ವಾಮೀಜಿ ಒಬ್ಬರೇ ಬರೆದುಕೊಂಡಿರುವುದು ಎಷ್ಟು ಸರಿ? ಸಮಾಜದ ಆಸ್ತಿಯನ್ನು ತಮ್ಮ ಹೆಸರಿಗೆ ಬರೆಸಿಕೊಂಡರೆ ಹೇಗೆ? ಹಿರಿಯ ಜಗದ್ಗುರುಗಳು ಮಾಡದ ಬೈಲಾದಲ್ಲಿ ಸಮಾಜದ ಹಿರಿಯರು, ಗುರುಗಳ ನೇತೃತ್ವದಲ್ಲಿ ಉತ್ತರಾಧಿಕಾರಿ ನೇಮಕ ಮಾಡಬೇಕೆಂಬುದಾಗಿ ಸ್ಪಷ್ಟವಾಗಿ ಹೇಳಿದ್ದಾರೆ. ಆದರೆ ಗುರುಗಳು ಉತ್ತರಾಧಿಕಾರಿಯನ್ನು ನೇಮಿಸಲು ಮೀನಮೇಷ ಎಣಿಸುತ್ತಿರುವುದು ಏಕೆ ಎಂದು ಪ್ರಶ್ನಿಸಿದರು. ಈಗಾಗಲೇ ಸ್ವಾಮೀಜಿಗೆ 78 ವರ್ಷ ವಯಸ್ಸಾಗಿದೆ. ನೂರು ವರ್ಷ ಬದುಕಲಿ ಇದಕ್ಕೆ ನಮ್ಮ ತಕರಾರು ಇಲ್ಲ. ತಮ್ಮಲ್ಲಿನ ಐದು ಜನ ಶಿಷ್ಯರಲ್ಲಿ ಒಬ್ಬರನ್ನು ಆಯ್ಕೆ ಮಾಡಲಿ. ನಾಲ್ಕು ಗೋಡೆಗಳ ಮಧ್ಯೆದಲ್ಲೇ ಈ ಎಲ್ಲಾ ವಿಚಾರ ಚರ್ಚೆ ಮಾಡಬೇಕೆಂಬುದು ನಮ್ಮ ಆಶಯವಾಗಿದೆ. ಆದರೆ, ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಗಳು ಅದಕ್ಕೆ ಅವಕಾಶವನ್ನೇ ನೀಡುತ್ತಿಲ್ಲ ಎಂದು ಅಣಬೇರು ರಾಜಣ್ಣ ಹೇಳಿದರು.

ಸಮಾಜದ ಹಿರಿಯ ಮುಖಂಡ, ಮಾಜಿ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ, ಸ್ವಾಮೀಜಿಗೆ ಕೈಮುಗಿದು ಕೇಳುವೆ. ಸಮಾಜವನ್ನು ಒಡೆಯಬೇಡಿ. ಭಕ್ತರ ಮನಸ್ಸಿನಲ್ಲಿ ವಿಷ ಬಿತ್ತಬೇಡಿ. ನಾವ್ಯಾರೂ ಬಂಡವಾಳ ಶಾಹಿಗಳಲ್ಲ. ನೀವು ಎರಡು ಸಾವಿರ ಕೋಟಿ ರೂ. ಮೌಲ್ಯದ ಸಮಾಜದ ಆಸ್ತಿಯನ್ನು ನಿಮ್ಮ ಹೆಸರಿಗೆ ಮಾಡಿಕೊಂಡಿದ್ದೀರಿ, ನಿಮಗಿಂತ ಬಂಡವಾಳ ಶಾಹಿ ಯಾರಿದ್ದಾರೆ ಹೇಳಿ ಎಂದು ಪ್ರಶ್ನಿಸಿದರು.

ಮೈಸೂರಿನ ಸುತ್ತೂರು ಮಠದ ಹಾಗು ಚಿತ್ರದುರ್ಗದ ಮಾದಾರ ಚನ್ನಯ್ಯ ಪೀಠಕ್ಕೆ ಸ್ವಾಮೀಜಿಗಳು ಉತ್ತರಾಧಿಕಾರಿಗಳನ್ನು ನೇಮಕ ಮಾಡಿದ್ದಾರೆ. ಆದರೆ, ಸಿರಿಗೆರೆಯ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಗೆ ಏನಾಗಿದೆ? ಇನ್ನಾದರೂ ಸಮಾಜದ ಭವಿಷ್ಯಕ್ಕಾಗಿ ಶ್ರೀಮಠಕ್ಕೆ ಉತ್ತರಾಧಿಕಾರಿಗಳನ್ನು ನೇಮಕ ಮಾಡಿ ಎಂದು ಅವರು ಮನವಿ ಮಾಡಿದರು.

ಸಮಾಜದ ಹಿರಿಯರಾದ ಮಾಜಿ ಸಚಿವ ಎಸ್.ಎ.ರವೀಂದ್ರನಾಥ, ಮಾಜಿ ಶಾಸಕ ವಡ್ನಾಳ್ ರಾಜಣ್ಣ, ಸಾಧು ಲಿಂಗಾಯತ ಸಮಾಜದ ಮುಖಂಡರು, ಸಮಾಜದ ಪ್ರಮುಖರು ಇದ್ದರು. ಇದಕ್ಕೂ ಮುನ್ನ ಸಮಾಜದ ಮುಖಂಡರು, ಪ್ರಮುಖರು ಸಭೆ ನಡೆಸಿ, ಸ್ವಾಮೀಜಿಗಳ ನಡೆ, ವರ್ತನೆ ಬಗ್ಗೆ, ಸಮಾಜವನ್ನು ಒಡೆಯಲು, ಸಮಾಜವನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿರುವ ಬಗ್ಗೆ ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದರು.

Bhakta group again against Sirigere Sri cancel the trust deed Featured Top News Who is Mari Peethadhipati?
Share. WhatsApp Facebook Twitter Telegram
davangerevijaya.com
  • Website

Related Posts

ಎಸ್ಸೆಸ್ಸೆಲ್ಸಿ : ಕ್ಯಾನ್ಸರ್‌ ಗೆದ್ದ ಯುವತಿ ಸರಕಾರಿ ಶಾಲೆಗೆ ಫಸ್ಟ್, ಹಾಗಾದ್ರೆ ಆ ಶಾಲೆ ಯಾವುದು?

3 May 2025

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಪೊಲೀಸರಿಗೆ ಇಲ್ಲಿ ರಕ್ಷಣೆ ಇಲ್ಲ : ಮಾಜಿ ಸಚಿವ ರೇಣುಕಾಚಾರ್ಯ

2 May 2025

ಜನಗಣತಿಯ ಜೊತೆಗೆ ಜಾತಿಗಣತಿಯನ್ನು ಮಾಡಲು ನಿರ್ಧರಿಸಿರುವುದು ಸ್ವಾಗತಾರ್ಹ : ಬಿಜೆಪಿ ನಾಯಕ

2 May 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,320 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,082 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,586 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
ಪ್ರಮುಖ ಸುದ್ದಿ

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

By davangerevijaya.com12 June 20250

*ದಾವಣಗೆರೆಯಲ್ಲಿ ಅಂಚೆ  ವಿಭಾಗೀಯ  ಕಚೇರಿ ಬರಲು ಇವರು ಕಾರಣ * ದಾವಣಗೆರೆ ಅಂಚೆ ಇಲಾಖೆ ಪ್ರಥಮ ಅಧೀಕ್ಷಕ *ನಿಷ್ಠೆ, ಪ್ರಾಮಾಣಿಕತೆಯಿಂದ…

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025

ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

10 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,320 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,082 Views

Subscribe to Updates

Get the latest creative news from SmartMag about art & design.

Recent Posts
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
  • ಆರ್ ಸಿಬಿ ವಿಜಯೋತ್ಸವ ವೇಳೆ 11 ಜನರ ಸಾವು : ಸಿಬಿಐಗೆ ವಹಿಸಲು ಮಾಜಿ ಸಚಿವ ಒತ್ತಾಯ
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.