Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ಪ್ರಮುಖ ಸುದ್ದಿ»ಕಾಂಗ್ರೆಸ್ ಸರ್ಕಾರದ ದಲಿತ ವಿರೋಧಿ ನೀತಿ ವಿರುದ್ಧ ಬಿಜೆಪಿ ಪ್ರತಿಭಟನೆ
ಪ್ರಮುಖ ಸುದ್ದಿ

ಕಾಂಗ್ರೆಸ್ ಸರ್ಕಾರದ ದಲಿತ ವಿರೋಧಿ ನೀತಿ ವಿರುದ್ಧ ಬಿಜೆಪಿ ಪ್ರತಿಭಟನೆ

ಚುನಾವಣೆಯಲ್ಲಿ ತಮ್ಮ ಗೆಲ್ಲುವಿನ  ಸಲುವಾಗಿ ದಲಿತರಿಗೆ ಮೀಸಲಿಟ್ಟಿದ್ದ ₹ 11,144 ScSP/TSP ಹಣ
davangerevijaya.comBy davangerevijaya.com23 February 2024Updated:23 February 2024No Comments3 Mins Read
Facebook WhatsApp Twitter
Share
WhatsApp Facebook Twitter Telegram

ದಾವಣಗೆರೆ : ಭಾರತೀಯ ಜನತಾ ಪಾರ್ಟಿಯು ತನ್ನ ಅವಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಏಳ್ಗೆಗಾಗಿ  SCSP-TSP ಯೋಜನೆಯ ಅಡಿಯಲ್ಲಿ ಮೀಸಲಿಟ್ಟಂತಹ ಸುಮಾರು 11,500 ಕೋಟಿಗಿಂತಲೂ ಹೆಚ್ಚು  ಹಣವನ್ನು ಬಿಟ್ಟಿ ಭಾಗ್ಯಗಳಿಗೆ ವಿನಿಯೋಗಿಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಕಾಂಗ್ರೆಸ್ ಸರಕಾರ ಅನ್ಯಾಯ ಮಾಡಿದೆಯೆಂದು ಬಿಜೆಪಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.

ಕಳೆದ ಒಂಭತ್ತು ತಿಂಗಳಲ್ಲಿ ಕಾಂಗ್ರೆಸ್ ಆಡಳಿತವು ದಲಿತ ಸಮುದಾಯದ ವಿಚಾರದಲ್ಲಿ  ಕೇವಲ ಮಾತಿನಲ್ಲಿ ಮಾತ್ರ ಕಾಳಜಿಯನ್ನು ತೋರಿ ದಲಿತ ಸಮುದಾಯವನ್ನು ವಂಚಿಸುತ್ತಿದ್ದಾರೆ.

ಚುನಾವಣೆಯಲ್ಲಿ ತಮ್ಮ ಗೆಲ್ಲುವಿನ  ಸಲುವಾಗಿ ದಲಿತರಿಗೆ ಮೀಸಲಿಟ್ಟಿದ್ದ ₹ 11,144 ScSP/TSP ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲು ವರ್ಗಾಯಿಸಿ ದಲಿತ ಹಿತವನ್ನು ಬಲಿಕೊಟ್ಟು ತಮ್ಮ ಸ್ವಾರ್ಥ ಸಾಧನೆ ಪೂರೈಸಿಕೊಂಡು ಡೋಂಗಿ ದಲಿತ ಕಾಳಜಿಯನ್ನು ಬಯಲು ಮಾಡಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ದಲಿತರ ಹಿತದ ರಕ್ಷಣೆ ಮಾಡಬೇಕಿದ್ದ  ಸಮಾಜಕಲ್ಯಾಣ ಸಚಿವ ಹೆಚ್. ಸಿ. ಮಹದೇವಪ್ಪನವರು ಈ ಅನ್ಯಾಯದ ವಿರುದ್ದ ಸೊಲ್ಲೆತ್ತದೆ ಕಾಂಗ್ರೆಸ್ ಪಾರ್ಟಿಯ ಹಿತಕ್ಕೆ ದಲಿತ ಸಮುದಾಯದ ಹಿತವನ್ನು ರಾಜಿ ಮಾಡಿಕೊಂಡಿದ್ದಾರೆ.

ಸಿದ್ದರಾಮಯ್ಯನವರು ಅಲ್ಪಸಂಖ್ಯಾತರಿಗೆ ₹10,000 ಕೋಟಿ ಹಣವನ್ನು ವೆಚ್ಚ ಮಾಡಲು ಮಾತ್ರ ಯಾವ ಗ್ಯಾರಂಟಿಯೂ ಅಡ್ಡ ಬಂದಿಲ್ಲ. ಇವರಿಗೆ ದಲಿತರ ಹಿತಾಸಕ್ತಿಗಿಂತ ಓಟು ಬ್ಯಾಂಕ್ ರಾಜಕಾರಣವು ಸರ್ಕಾರಕ್ಕೆ ಆದ್ಯತೆಯಾಗಿರುವುದು ಶೋಚನೀಯ ಸಂಗತಿ ಎಂದು ಪ್ರತಿಭಟನಾ ನಿರತರು ಹೇಳಿದರು.

ಮೊರಾರ್ಜಿ ಶಾಲೆಯ ಅಭಿವೃದ್ಧಿ ಮತ್ತು ಹೊಸ ಶಾಲೆಗಳ ಆರಂಭಕ್ಕೆ ಮೀಸಲಾದ ಹಣವು ಇತರ ಯೋಜನೆಗಳಿಗೆ ಬಳಕೆಯಾಗಿ ದಲಿತ ಮತ್ತು ಹಿಂದುಳಿದ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ.

ಇದಲ್ಲದೆ ದಲಿತ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಮೀಸಲಿಟ್ಟ ಹಣವು ಕೂಡಾ ದುರ್ಬಳಕೆಯಾಗಿ ಉನ್ನತ ಶಿಕ್ಷಣದಿಂದ ದಲಿತ ವಿದ್ಯಾರ್ಥಿಗಳನ್ನು ವಂಚಿತರನ್ನಾಗಿ ಮಾಡಲಾಗುತ್ತಿದೆ. ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಯ ಸಲುವಾಗಿ ಶಿಕ್ಷಣವನ್ನು ನಿರ್ಲಕ್ಷಿಸುತ್ತಿದ್ದಾರೆ.

ರಾಜ್ಯದಲ್ಲಿ ಕಳೆದ ಎಂಟು ತಿಂಗಳಿನಿಂದ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ವರ್ಗದವರ ಗೃಹ ನಿರ್ಮಾಣ ಯೋಜನೆಯು ಸ್ಥಗಿತಗೊಂಡಿದೆ. ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ಸಾವಿರಾರು ಮನೆಗಳನ್ನು ನಿರ್ಮಿಸಿ ಹಂಚುತ್ತಿದ್ದರೆ, ರಾಜ್ಯ ಸರಕಾರದ ಯೋಜನೆಯು ಕೋಮಾ ಸ್ಥಿತಿಗೆ ತಲುಪಿದೆ. 

ರೈತ ನಿಧಿ ಯೋಜನೆಯಲ್ಲಿ ದಲಿತ ಕುಟುಂಬದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನವು ಸ್ಥಗಿತಗೊಂಡಿದೆ. ಹಾಗೂ ಕಿಸಾನ್ ಸಮ್ಮಾನ್ ಯೋಜನೆಗೆ ಹೆಚ್ಚುವರಿಯಾಗಿ ನೀಡುತ್ತಿದ್ದ ರೂ.4,000 ಗಳಿಗೂ ಕತ್ತರಿ ಪ್ರಯೋಗವಾಗಿದೆ. ಸಿದ್ದರಾಮಯ್ಯನವರು ಬಾಯಿ ತೆಗೆದರೆ ದಲಿತ ಮತ್ತು ಆದಿವಾಸಿಗಳ ಕಲ್ಯಾಣದ ಬಗ್ಗೆ ಮಾತನಾಡುವುದಕ್ಕೆ ಮಾತ್ರ ಅವರ ಹಿತಾಸಕ್ತಿಯನ್ನು ಸಿಮೀತಗೊಳಿಸಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪಂಗಡದವರಲ್ಲಿ ಉದ್ಯಮಶೀಲತೆ ಉತ್ತೇಜಿಸುವ ಯೋಜನೆಯನ್ನು ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಆಸಕ್ತಿಯಿಲ್ಲದಂತಾಗಿದೆ. ರಸ್ತೆಬದಿಯ ವ್ಯಾಪಾರಿಗಳಿಗೆ ಕೇಂದ್ರ ಸರಕಾರದ ಸ್ವ-ನಿಧಿ ಯೋಜನೆಗೆ ರಾಜ್ಯ ಸರ್ಕಾರವು ದಲಿತ ಉದ್ಯಮಿಗಳಿಗೆ ಪ್ರೋತ್ಸಹಧನವಾಗಿ ಬಡ್ಡಿಯಲ್ಲಿ ಪಾಲು ಕೊಡಬಹುದಿತ್ತು, ಆದರೆ ಅದರ ಕಡೆ ಗಮನವೇ ಕೊಟ್ಟಿಲ್ಲ.

ಕೇಂದ್ರ ಸರ್ಕಾರ ಮುದ್ರಾ ಯೋಜನೆಯಲ್ಲಿ ದಲಿತರಿಗೆ ಸ್ವಯಂ ಉದ್ಯೋಗ ನೀಡಲು ಉತ್ತೇಜನ ಕೊಡುತ್ತಿದೆ. ಆದರೆ ರಾಜ್ಯ ಸರಕಾರ ದಲಿತ ಉದ್ಯಮಿದಾರರನ್ನು ರೂಪಿಸಲು ಮತ್ತು ಉತ್ತೇಜಿಸಲು ಯಾವುದೇ ಆಸಕ್ತಿವಹಿಸಿಲ್ಲ  ಮತ್ತು ಯಾವುದೇ ಕಾರ್ಯಕ್ರಮವನ್ನು ಬಜೆಟ್ ನಲ್ಲಿ ಘೋಷಿಸಿಯೂ ಇಲ್ಲ.

ಗ್ಯಾರಂಟಿಗೆ ಹಣ ನೀಡಬೇಕಾದ ಕಾರಣ 2024-25 ಮುಂಗಡ ಪತ್ರದಲ್ಲಿ ಮತ್ತೆ ಹನ್ನೊಂದು ಸಾವಿರ ಕೋಟಿ ಅನುದಾನ ಕಡಿತವಾಗಿದೆ. ಸಂವಿಧಾನ ಜಾಥಾ ಮಾಡುತ್ತಿರುವ ಸರಕಾರ ಸಂವಿಧಾನದ ಆಶಯಕ್ಕೆ ವಿರುದ್ದವಾಗಿ ದಲಿತರಿಗೆ ಸೇರಬೇಕಾದ ಅನುದಾನವನ್ನು ನಿರಾಕರಿಸಿ ಅನ್ಯಾಯ ಮಾಡುತ್ತಿದ್ದಾರೆ. ಇವರ ಸಂವಿಧಾನದ ಬದ್ಧತೆಯು ಕೇವಲ  ಪ್ರಚಾರದಲ್ಲಿ ಉಳಿದು ಆಚರಣೆಯಲ್ಲಿ ಶೂನ್ಯವಾಗಿದೆ. ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರಕಾರದ ದಲಿತ ವಿರೋಧಿ ನೀತಿಯನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ಪ್ರತಿಭಟನಾ ನಿರತರು ಹೇಳಿದರು.

ಮುಂಗಡ ಪತ್ರದಲ್ಲಿ ScSP/tSP ಹಣವನ್ನು ಕೂಡಲೇ ವಾಪಸ್ ನೀಡಬೇಕು. ಸಂವಿಧಾನ ಬದ್ದ ಕಲ್ಯಾಣ ಯೋಜನೆಗಳ ಹಣದ ದುರುಪಯೋಗ ಸಲ್ಲದು ಎಂದು ಎಚ್ಚರಿಸುತ್ತೆವೆ. ನಿಮ್ಮ ಸ್ವಾರ್ಥಕ್ಕೆ ದಲಿತರಿಗೆ ಅನ್ಯಾಯ ಮಾಡಬಾರದು ಎಂದು ಪ್ರತಿಭಟನಾ ನಿರತರು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಎನ್ ರಾಜಶೇಖರ್ ನಾಗಪ್ಪ , ಪ್ರಧಾನ ಕಾರ್ಯದರ್ಶಿಗಳಾದ ಐರಾಣಿ ಅಣ್ಣೇಶ್, ಧನಂಜಯ ಕಡ್ಲೆಬಾಳ, ಅನಿಲ್ ಕುಮಾರ್ ನಾಯಕ್, ಉತ್ತರ ವಿಧಾನಸಭಾ ಮಾಜಿ ಶಾಸಕ ಎಸ್.ಎ. ರವೀಂದ್ರನಾಥ್,  ಮಾಜಿ ವಿಧಾನಸಭಾ ವಿಧಾನ ಪರಿಷತ್ ಡಾಕ್ಟರ್ ಎ ಎಚ್ ಶಿವಯೋಗಿ ಸ್ವಾಮಿ, ಅನೀತ ಕುಮಾರ ಜಿ. ಎಸ್, ಮಾಜಿ ಶಾಸಕರಾದ ಎಂ ಬಸವರಾಜ ನಾಯಕ, ನಿಕಟ ಪೂರ್ವ ಜಿಲ್ಲಾ ಅಧ್ಯಕ್ಷರಾದ ವೀರೇಶ್ ಹನಗವಾಡಿ, ರಾಜ್ಯ ಎಸ್ ಟಿ ಮೋರ್ಚಾ ಉಪಾಧ್ಯಕ್ಷರಾದ ಶ್ರೀನಿವಾಸ್ ದಾಸ್ ಕರಿಯಪ್ಪ, ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷರಾದ ಬಿಟಿ ಶಾಮ್, ಮಹಾನಗರ ಪಾಲಿಕೆ ಸದಸ್ಯರುಗಳಾದ ಎಸ್ ಟಿ ವೀರೇಶ್, ಪ್ರಸನ್ನ ಕುಮಾರ್, ಶಿವಾನಂದ, ಪಕ್ಷದ ಮುಖಂಡರುಗಳಾದ ಯಶವಂತರಾವ್ ಜಾದವ್, ಬಾತಿ ವೀರೇಶ್,  ಮುಂಜನಾಯಕ, ವಿಶ್ವಾಸ್ ಹೆಚ್. ಪಿ,  ಎಸ್ ಸಿ ಮೋರ್ಚಾ ಅಧ್ಯಕ್ಷರಾದ ಹನುಮಂತ ನಾಯಕ, ಗಂಗಾಧರ ಜಿ.ವಿ ಎಸ್ ಟಿ ಮೋರ್ಚಾ ಅಧ್ಯಕ್ಷರಾದ  ಕೃಷ್ಣಪ್ಪ, ಪಿ.ಸಿ ಶ್ರೀನಿವಾಸ್, ಪ್ರಮುಖರಾದ ಶಿವನಗೌಡಪಾಟೀಲ್ , ಉತ್ತರವಿಧಾನಸಭಾ ಅಧ್ಯಕ್ಷರಾದ ಬೇತುರ್ ಸಂಗಪ್ಪ, ಸಾಮಾಜಿಕ ಜಾಲತಾಣ ಸಂಚಾಲಕರಾದ ಕೊಟ್ರೇಶ್ ಗೌಡ, ಕೆ.ಜಿ ಕಲ್ಲಪ್ಪ , ಬಾತಿ ಸಿದ್ದೇಶ್, ರವಿ ನಾಯಕ್, ಬಾಳೆಕಾಯಿ ಶಿವು, ಕಿಶೋರ್, ಗುಡ್ಡೇಶ್, ಸೋಗಿ ಗುರು, ತರಕಾರಿ ಶಿವು, ವಿನಯ್ H, ಸಚಿನ್ ವರ್ಣೇಕರ್, ರಘು ವರ್ಣೇಕರ್, ರಾಜು M, ಗುರು ಕೆ. ವಿ, ರೂಪ ಕಾಟವೆ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶೈಲಜಾ, ಹಾಗೂ ಪಕ್ಷದ ಕಾರ್ಯಕರ್ತಗಳು ಉಪಸ್ಥಿತಿಯಲ್ಲಿ ಇದ್ದರು.

 

 

allocation of funds for Bitti Bhagyas davanagere Dongi Dalit concerns Featured SCSP-TSP ಯೋಜನೆಯ ಅಡಿ Top news ದಾವಣಗೆರೆ under SCSP-TSP scheme ಡೋಂಗಿ ದಲಿತ ಕಾಳಜಿ ದಾವಣಗೆರೆ ಬಿಟ್ಟಿ ಭಾಗ್ಯಗಳಿಗೆ ಹಣ ವಿನಿಯೋಗ
Share. WhatsApp Facebook Twitter Telegram
davangerevijaya.com
  • Website

Related Posts

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,655 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,328 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,590 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
Blog

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

By davangerevijaya.com29 June 20250

ನಂದೀಶ್ , ಭದ್ರಾವತಿ ಉಕ್ಕಿನ ನಗರಿ ಭದ್ರಾವತಿಯಲ್ಲಿ ಒಂದೊಂದೇ ಸಂತಸದ ಕ್ಷಣಗಳು ಕಾಣುತ್ತಿವೆ..ಅತ್ತ ವಿಎಸ್ಐಎಲ್ ಕಾರ್ಖಾನೆ ಓಪನ್ ಆಗಲಿದೆ ಎಂಬ…

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,655 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,328 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

Subscribe to Updates

Get the latest creative news from SmartMag about art & design.

Recent Posts
  • ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.