![](https://davangerevijaya.com/wp-content/uploads/2024/07/IMG-20240719-WA01231.jpg)
ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನ ಮದಕರಿಪುರ ಗ್ರಾಮದ ಹೊರವಲಯದ ಸಮೀಪದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಟ್ಯಾಂಕರ್ ಹಾಗೂ ಕಾರು ನಡುವೆ ಅಪಘಾತ ನಡೆದು ಮೂವರು ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನೂ ಬೆಂಗಳೂರಿನ ನಿರ್ಮಲಾ (55), ವಿನುತಾ (40) ಹಾಗೂ ಯಶಸ್ (2) ಮೃತಪಟ್ಟವರು.
![](https://davangerevijaya.com/wp-content/uploads/2024/07/IMG-20240715-WA0352.jpg)
ಫಣಿರಾಜ (36), ರಶ್ಮಿ (32) ಹಾಗೂ ಚಾಲಕ ಗಾಯಗೊಂಡಿದ್ದು, ಬಸವೇಶ್ವರ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಬೆಂಗಳೂರಿನಿಂದ ಹೊಸಪೇಟೆಗೆ ಹೊರಟಿತ್ತು. ಮದಕರಿಪುರ ಸಮೀಪದ ಸೇತುವೆಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಮುಂದೆ ಸಾಗುತ್ತಿದ್ದ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ. ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
![](https://davangerevijaya.com/wp-content/uploads/2024/07/IMG-20240716-WA0138.jpg)