ದಾವಣಗೆರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿರುವ ರಾಜ್ಯ ಬಜೆಟ್ ರೈತ ವಿರೋಧಿ ಹಾಗೂ ಜನ ವಿರೋಧಿಯಾಗಿದೆ ಎಂದು ಬಿಜೆಪಿ ಮುಖಂಡ ಶ್ರೀನಿವಾಸ್ ದಾಸಕರಿಯಪ್ಪ ಹೇಳಿದ್ದಾರೆ.ರಾಜ್ಯದ ಅಭಿವೃದ್ಧಿಗೆ ಈ ಬಜೆಟ್ ಸಂಪೂರ್ಣ ವಿರುದ್ದವಾಗಿದೆ.

ಕೇವಲ ಒಂದು ವರ್ಗದ ಓಲೈಕೆಗಾಗಿ ಬಜೆಟ್ ಮಂಡಿಸಿದಂತಿದೆ.ಅಲ್ಲದೇ ಗ್ಯಾರಂಟಿ ಯೋಜನೆಗಾಗಿ ಹಣ ಹೊಂದಿಸಲು‌ ಮಾಡಿದ ಬಜೆಟ್ ಇದಾಗಿದೆ.ಎಲ್ಲಾ ವಲಯದಲ್ಲೂ ತೆರಿಗೆ ಹೆಚ್ಚಳ ಮಾಡಲಾಗಿದೆ.

ಬರನಿರ್ವಹಣೆಯಲ್ಲಿ ವಿಫಲವಾಗಿರುವ ಮುಖ್ಯಮಂತ್ರಿಗಳು ಕೇಂದ್ರದ ಸರ್ಕಾರವನ್ನು ದೂರುತ್ತಿದ್ದಾರೆ ಒಟ್ಟಾರೆ ಈ ಬಜೆಟ್ ನಿರಾಶದಾಯಕವಾಗಿದೆ ಎಂದಿದ್ದಾರೆ

Share.
Leave A Reply

Exit mobile version