ಬೆಂಗಳೂರು : ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ಮಾಜಿ ಸಿಎಂ ಎಸ್. ಎಂ .ಕೃಷ್ಣ ಅವರ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ನಡೆಯುವ ಸ್ಥಳವನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಂಗಳವಾರ ಪರಿಶೀಲನೆ ನಡೆಸಿ, ಅಗತ್ಯ ಸೂಚನೆಗಳನ್ನು ನೀಡಿದರು.
ಸಚಿವ ಚಲುವರಾಸ್ವಾಮಿ, ಶಾಸಕರಾದ ಉದಯ ಕದಲೂರು, ರವಿ ಗಣಿಗ, ರಮೇಶ್ ಬಂಡಿಸಿದ್ದೇಗೌಡ , ಜಿಲ್ಲಾಧಿಕಾರಿ ಕುಮಾರ್, ಎಂಎಲ್ಸಿ ದಿನೇಶ್ ಗೂಳಿಗೌಡ ಮತ್ತಿತರರು ಜತೆಗಿದ್ದರು.