


ದಾವಣಗೆರೆ: 2026ರಲ್ಲಿ ಕೇಂದ್ರ ಸರ್ಕಾರ ಅಧಿಕೃತವಾಗಿ ಜನಗಣತಿಯ ಜೊತೆಗೆ ಜಾತಿಗಣತಿಯನ್ನು ಮಾಡಲು ನಿರ್ಧರಿಸಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಪ್ರಾಮಾಣಿಕ, ಸಾಮಾಜಿಕ ಬದ್ಧತೆಯ ನೇತೃತ್ವದ ಕೇಂದ್ರ ಸರ್ಕಾರ ಈ ಐತಿಹಾಸಿಕ ನಿರ್ಧಾರ ಕೈಗೊಂಡಿರುವುದು ಎಲ್ಲಾ ವರ್ಗದ ಜನತೆಯ ಮೆಚ್ಚುಗೆಗೆ ಕಾರಣವಾಗಿದೆ ಎಂದು ಭಾರತೀಯ ಜನತಾ ಪಾರ್ಟಿಯ ಮುಖಂಡ ಕೆ.ಪ್ರಸನ್ನ ಕುಮಾರ್ ಹೇಳಿದರು.
ಸುದ್ದಿಗೋಷ್ಟಿ ಯಲ್ಲಿ ಮಾತನಾಡಿದ ಅವರು, 1931ರ ನಂತರ ಜಾತಿಗಣತಿ ನಡೆದಿರಲಿಲ್ಲ. ಜನಗಣತಿ ಮಾತ್ರ ನಡೆದಿತ್ತು. ಇದೀಗ ಸಾಮಾಜಿಕ ಅವಶ್ಯಕತೆಯ ನೈಜ ದತ್ತಾ ಶಗಳನ್ನು ಸಂಗ್ರಹಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಸತತವಾಗಿ ಐವತ್ತು ವ ಕ್ಕೂ ಮಿಕ್ಕಿ ಕೇಂದ್ರದಲ್ಲಿ ಆಡಳಿತ ಮಾಡಿದ ಕಾಂಗ್ರೆಸ್ ಪಕ್ಷ ಈ ವಿಷಯದಲ್ಲಿ ನ್ಯಾಯ ಒದಗಿಸಲು ಯಾವ ಪ್ರಯತ್ನಗಳನ್ನು ಮಾಡಿರಲಿಲ್ಲ ಎಂದರು.

1951 ರಿಂದ ಪ್ರತಿ ಹತ್ತು ವರ್ಷಕ್ಕೊಮ್ಮೆ ಜನಗಣತಿ ನಡೆದಿದೆ. 1951, 1961, 1971, 1981, 1991 ಮತ್ತು 2011ರಲ್ಲಿ ಕೇಂದ್ರದಲ್ಲಿ ಸರ್ಕಾರ ಇದ್ದದ್ದು ಕಾಂಗ್ರೆಸ್ ನೇತೃತ್ವದಲ್ಲಿ. ಆರು ಬಾರಿ ಅವಕಾಶ ಸಿಕ್ಕಾಗ ಏನು ಮಾಡದ ಕಾಂಗ್ರೆಸ್ ಪಕ್ಷ ಬಿಜೆಪಿ ಜಾತಿಗಣತಿಗೆ ಮುಂದೆ ಗಿರುವುದನ್ನು ಸಹಿಸುತ್ತಿಲ್ಲ ಎಂದು ಹೇಳಿದರು.

ಒಂದು ಕುಟುಂಬದ ನೇತೃತ್ವಕ್ಕೆ ಅಧಿಕಾರ ಬಿಟ್ಟುಕೊಟ್ಟಿದ್ದು ಕಾಂಗ್ರೆಸ್. ದೇಶ ಮೊದಲ ಬಾರಿಗೆ ಒಬಿಸಿ ಹಿನ್ನಲೆಯ ಪ್ರಧಾನಿಯ ಆಳ್ವಿಕೆ ಕಂಡಿದ್ದು ಬಿಜೆಪಿಯಿಂದ. ನರೇಂದ್ರ ಮೋದಿಯಂತಹ ಎಲ್ಲ ಜನವರ್ಗದವರ ಮೆಚ್ಚುಗೆ ಪಾತ್ರವಾಗಿರುವ ನೇತೃತ್ವ ಮೂರನೇ ಬಾರಿಗೆ ದೇಶವನ್ನು ಮುನ್ನಡೆಸ ತ್ತಿರುವುದನ್ನು ಕಾಂಗ್ರೆಸ್ ಪಕ್ಷಕ್ಕೆ ಸಹಿಸಲಾಗುತ್ತಿಲ್ಲ. ಹಾಗಾಗಿಯೇ ಜಾತಿಗಣತಿಯ ನೆಪದಲ್ಲಿ ಹಿಂದುಳಿದ ವರ್ಗಗಳನ್ನು ಎತ್ತಿಕಟ್ಟಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್ ನಾಯಕರು ವಿಫಲ ಪ್ರಯತ್ನ ನಡೆಸಿದ್ದಾರೆ. ಪ್ರಧಾನಿ ಮೋದಿ ಅವರ ಜಾತಿಗಣತಿ ನಡೆಸುವ ನಿರ್ಧಾರ ಕಾಂಗ್ರೆಸ್ಸಿನ ಬುಡ ಅಲ್ಲಾಡಿಸಿದೆ ಎಂದು ತಿಳಿಸಿದರು.
ಬಿಜೆಪಿ ಜಿಲ್ಲಾ ವಕ್ತಾರ ಬಿ.ಎಂ.ಸತೀಶ್ ಕೊಳೇನಹಳ್ಳಿ ಮಾತನಾಡಿ, ಕರ್ನಾಟಕದಲ್ಲಿ ಸಿದ್ಧರಾಮಯ್ಯನವರ ಸರ್ಕಾರ ಜಾತಿಗಣತಿಯ ಹೆಸರಲ್ಲಿ ಹತ್ತು ವರ್ಷ ಕಾಲಹರಣ ಮಾಡಿದ್ದು ಮಾತ್ರವಲ್ಲ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ವರದಿ ಗೊಂದಲದ ಗೂಡಾಗಿದೆ. ಪ್ರವರ್ಗ 1ರಲ್ಲಿದ್ದ ಅತಿ ಹಿಂದುಳಿದ ಜಾತಿಗಳಿಗಿದ್ದ ಆರ್ಥಿಕ ಮಾನದಂಡವನ್ನು ಕಿತ್ತುಹಾಕಿ ಅನ್ಯಾಯ ಮಾಡಲಾಗಿದೆ. ನೂರಾರು ಸಣ್ಣ ಜಾತಿಗಳು ತಮ್ಮ ಸಂಖ್ಯೆಯ ಬಗ್ಗೆ ತಕರಾರು ಎತ್ತಿದ್ದಾರೆ. ಕಾಂಗ್ರೆಸ್ನ ಅನೇಕ ನಾಯಕರು ಬಹಿರಂಗವಾಗಿಯೇ ವಿರೋಧಿಸಿದ್ದಾರೆ. ಹಿಂದುಳಿದ ವರ್ಗಗಳ ನಾಯಕರಾದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಈ ವರದಿ ಹಳೆಯದಾಗಿದೆ, ಕಾಲಬಾಹಿರವಾದದ್ದು ಎಂದು ಟೀಕಿಸಿದ್ದಾರೆ ಎಂದರು.
ಮುಖ್ಯಮಂತ್ರಿ ಸಿದ್ಧರಾಮಯ್ಯ ಜಾತಿಗಣತಿಯನ್ನು ತಮ್ಮ ಕುರ್ಚಿ ಉಳಿಸಿಕೊಳ್ಳಲು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ. ಅತಿಯಾದ ರಾಜಕೀಯದಿಂದಾಗಿ ಗೊಂದಲದ ಗೂಡಾಗಿರುವ ಕರ್ನಾಟಕದ ಜಾತಿಗಣತಿ ವರದಿಗೆ ಪರ್ಯಾಯವಾಗಿ ಕೇಂದ್ರ ಸರ್ಕಾರದ ಜಾತಿಗಣತಿ ವರದಿ ಬರಲಿದೆ. ಗೊಂದಲದ, ಅವೈಜ್ಞಾನಿಕ ವರದಿಗೆ ಪರ್ಯಾಯ ದಾರಿಯನ್ನು ತೋರಿಸಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆಗಳು, ಹಿಂದುಳಿದ ವರ್ಗಗಳ ಎಲ್ಲ ರೀತಿಯ ಸಾಮಾಜಿಕ ನ್ಯಾಯದ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ಒದಗಿಸಲು ಬಿಜೆಪಿ ಬದ್ಧವಾಗಿದೆ ಎಂದು ಹೇಳಿದರು.
ಸುದ್ದಿಗೋಷ್ಟಿ ಯಲ್ಲಿ ಆರ್.ಶಿವಾನಂದ, ಮಹೇಂದ್ರ ಹೆಬ್ಬಾಳು, ಸುರೇಶ್ ಗಂಡಗಾಳೆ ಇದ್ದರು.: 2026ರಲ್ಲಿ ಕೇಂದ್ರ ಸರ್ಕಾರ ಅಧಿಕೃತವಾಗಿ ಜನಗಣತಿಯ ಜೊತೆಗೆ ಜಾತಿಗಣತಿಯನ್ನು ಮಾಡಲು ನಿರ್ಧರಿಸಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಪ್ರಾಮಾಣಿಕ, ಸಾಮಾಜಿಕ ಬದ್ಧತೆಯ ನೇತೃತ್ವದ ಕೇಂದ್ರ ಸರ್ಕಾರ ಈ ಐತಿಹಾಸಿಕ ನಿರ್ಧಾರ ಕೈಗೊಂಡಿರುವುದು ಎಲ್ಲಾ ವರ್ಗದ ಜನತೆಯ ಮೆಚ್ಚುಗೆಗೆ ಕಾರಣವಾಗಿದೆ ಎಂದು ಭಾರತೀಯ ಜನತಾ ಪಾರ್ಟಿಯ ಮುಖಂಡ ಕೆ.ಪ್ರಸನ್ನ ಕುಮಾರ್ ಹೇಳಿದರು.
ಸುದ್ದಿಗೋಷ್ಟಿ ಯಲ್ಲಿ ಮಾತನಾಡಿದ ಅವರು, 1931ರ ನಂತರ ಜಾತಿಗಣತಿ ನಡೆದಿರಲಿಲ್ಲ. ಜನಗಣತಿ ಮಾತ್ರ ನಡೆದಿತ್ತು. ಇದೀಗ ಸಾಮಾಜಿಕ ಅವಶ್ಯಕತೆಯ ನೈಜ ದತ್ತಾ ಶಗಳನ್ನು ಸಂಗ್ರಹಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಸತತವಾಗಿ ಐವತ್ತು ವ ಕ್ಕೂ ಮಿಕ್ಕಿ ಕೇಂದ್ರದಲ್ಲಿ ಆಡಳಿತ ಮಾಡಿದ ಕಾಂಗ್ರೆಸ್ ಪಕ್ಷ ಈ ವಿಷಯದಲ್ಲಿ ನ್ಯಾಯ ಒದಗಿಸಲು ಯಾವ ಪ್ರಯತ್ನಗಳನ್ನು ಮಾಡಿರಲಿಲ್ಲ ಎಂದರು.
1951 ರಿಂದ ಪ್ರತಿ ಹತ್ತು ವರ್ಷಕ್ಕೊಮ್ಮೆ ಜನಗಣತಿ ನಡೆದಿದೆ. 1951, 1961, 1971, 1981, 1991 ಮತ್ತು 2011ರಲ್ಲಿ ಕೇಂದ್ರದಲ್ಲಿ ಸರ್ಕಾರ ಇದ್ದದ್ದು ಕಾಂಗ್ರೆಸ್ ನೇತೃತ್ವದಲ್ಲಿ. ಆರು ಬಾರಿ ಅವಕಾಶ ಸಿಕ್ಕಾಗ ಏನು ಮಾಡದ ಕಾಂಗ್ರೆಸ್ ಪಕ್ಷ ಬಿಜೆಪಿ ಜಾತಿಗಣತಿಗೆ ಮುಂದೆ ಗಿರುವುದನ್ನು ಸಹಿಸುತ್ತಿಲ್ಲ ಎಂದು ಹೇಳಿದರು.
ಒಂದು ಕುಟುಂಬದ ನೇತೃತ್ವಕ್ಕೆ ಅಧಿಕಾರ ಬಿಟ್ಟುಕೊಟ್ಟಿದ್ದು ಕಾಂಗ್ರೆಸ್. ದೇಶ ಮೊದಲ ಬಾರಿಗೆ ಒಬಿಸಿ ಹಿನ್ನಲೆಯ ಪ್ರಧಾನಿಯ ಆಳ್ವಿಕೆ ಕಂಡಿದ್ದು ಬಿಜೆಪಿಯಿಂದ. ನರೇಂದ್ರ ಮೋದಿಯಂತಹ ಎಲ್ಲ ಜನವರ್ಗದವರ ಮೆಚ್ಚುಗೆ ಪಾತ್ರವಾಗಿರುವ ನೇತೃತ್ವ ಮೂರನೇ ಬಾರಿಗೆ ದೇಶವನ್ನು ಮುನ್ನಡೆಸ ತ್ತಿರುವುದನ್ನು ಕಾಂಗ್ರೆಸ್ ಪಕ್ಷಕ್ಕೆ ಸಹಿಸಲಾಗುತ್ತಿಲ್ಲ. ಹಾಗಾಗಿಯೇ ಜಾತಿಗಣತಿಯ ನೆಪದಲ್ಲಿ ಹಿಂದುಳಿದ ವರ್ಗಗಳನ್ನು ಎತ್ತಿಕಟ್ಟಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್ ನಾಯಕರು ವಿಫಲ ಪ್ರಯತ್ನ ನಡೆಸಿದ್ದಾರೆ. ಪ್ರಧಾನಿ ಮೋದಿ ಅವರ ಜಾತಿಗಣತಿ ನಡೆಸುವ ನಿರ್ಧಾರ ಕಾಂಗ್ರೆಸ್ಸಿನ ಬುಡ ಅಲ್ಲಾಡಿಸಿದೆ ಎಂದು ತಿಳಿಸಿದರು.
ಬಿಜೆಪಿ ಜಿಲ್ಲಾ ವಕ್ತಾರ ಬಿ.ಎಂ.ಸತೀಶ್ ಕೊಳೇನಹಳ್ಳಿ ಮಾತನಾಡಿ, ಕರ್ನಾಟಕದಲ್ಲಿ ಸಿದ್ಧರಾಮಯ್ಯನವರ ಸರ್ಕಾರ ಜಾತಿಗಣತಿಯ ಹೆಸರಲ್ಲಿ ಹತ್ತು ವರ್ಷ ಕಾಲಹರಣ ಮಾಡಿದ್ದು ಮಾತ್ರವಲ್ಲ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ವರದಿ ಗೊಂದಲದ ಗೂಡಾಗಿದೆ. ಪ್ರವರ್ಗ 1ರಲ್ಲಿದ್ದ ಅತಿ ಹಿಂದುಳಿದ ಜಾತಿಗಳಿಗಿದ್ದ ಆರ್ಥಿಕ ಮಾನದಂಡವನ್ನು ಕಿತ್ತುಹಾಕಿ ಅನ್ಯಾಯ ಮಾಡಲಾಗಿದೆ. ನೂರಾರು ಸಣ್ಣ ಜಾತಿಗಳು ತಮ್ಮ ಸಂಖ್ಯೆಯ ಬಗ್ಗೆ ತಕರಾರು ಎತ್ತಿದ್ದಾರೆ. ಕಾಂಗ್ರೆಸ್ನ ಅನೇಕ ನಾಯಕರು ಬಹಿರಂಗವಾಗಿಯೇ ವಿರೋಧಿಸಿದ್ದಾರೆ. ಹಿಂದುಳಿದ ವರ್ಗಗಳ ನಾಯಕರಾದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಈ ವರದಿ ಹಳೆಯದಾಗಿದೆ, ಕಾಲಬಾಹಿರವಾದದ್ದು ಎಂದು ಟೀಕಿಸಿದ್ದಾರೆ ಎಂದರು.
ಮುಖ್ಯಮಂತ್ರಿ ಸಿದ್ಧರಾಮಯ್ಯ ಜಾತಿಗಣತಿಯನ್ನು ತಮ್ಮ ಕುರ್ಚಿ ಉಳಿಸಿಕೊಳ್ಳಲು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ.
ಅತಿಯಾದ ರಾಜಕೀಯದಿಂದಾಗಿ ಗೊಂದಲದ ಗೂಡಾಗಿರುವ ಕರ್ನಾಟಕದ ಜಾತಿಗಣತಿ ವರದಿಗೆ ಪರ್ಯಾಯವಾಗಿ ಕೇಂದ್ರ ಸರ್ಕಾರದ ಜಾತಿಗಣತಿ ವರದಿ ಬರಲಿದೆ. ಗೊಂದಲದ, ಅವೈಜ್ಞಾನಿಕ ವರದಿಗೆ ಪರ್ಯಾಯ ದಾರಿಯನ್ನು ತೋರಿಸಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆಗಳು, ಹಿಂದುಳಿದ ವರ್ಗಗಳ ಎಲ್ಲ ರೀತಿಯ ಸಾಮಾಜಿಕ ನ್ಯಾಯದ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ಒದಗಿಸಲು ಬಿಜೆಪಿ ಬದ್ಧವಾಗಿದೆ ಎಂದು ಹೇಳಿದರು.
ಸುದ್ದಿಗೋಷ್ಟಿ ಯಲ್ಲಿ ಆರ್.ಶಿವಾನಂದ, ಮಹೇಂದ್ರ ಹೆಬ್ಬಾಳು, ಸುರೇಶ್ ಗಂಡಗಾಳೆ ಇದ್ದರು.