![](https://davangerevijaya.com/wp-content/uploads/2024/07/IMG-20240719-WA01231.jpg)
ಭದ್ರಾವತಿ: ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘಟನೆ ರುಪ್ಸಾ ವಿರುದ್ಧ ಕ್ರಮ ಕೈಗೊಂಡು ಸಂಘಟನೆ ಮುಖ್ಯಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕೆಂದು ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಎಸ್ ಗೌಡ ಆಗ್ರಹಿಸಿ, ತಹಸೀಲ್ದಾರ್ ರವರ ಮೂಲಕ ಶಿಕ್ಷಣ ಮಂತ್ರಿಗಳಿಗೆ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಿದರು.
ಈಗಾಗಲೇ 5,8,9 ನೇ ತರಗತಿಗಳ ವಿದ್ಯಾರ್ಥಿಗಳು ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ಸರ್ಕಾರದ ನಿಗದಿಯಂತೆ ಎರಡು ಪರೀಕ್ಷೆಗಳು ನಡೆದಿರುತ್ತವೆ. ಈಗ ರುಪ್ಸಾ ಸಂಘಟನೆ ನ್ಯಾಯಾಲಯದ ಮೊರೆ ಹೋಗಿ ಮಕ್ಕಳ ಭವಿಷ್ಯದ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದರು.
![](https://davangerevijaya.com/wp-content/uploads/2024/07/IMG-20240715-WA0352.jpg)
![](https://davangerevijaya.com/wp-content/uploads/2024/07/IMG-20240716-WA0138.jpg)