![](https://davangerevijaya.com/wp-content/uploads/2024/07/IMG-20240719-WA01231.jpg)
ದಾವಣಗೆರೆ : ಈ ಬಾರಿಯ ಚುನಾವಣೆಯಲ್ಲಿ ದಾವಣಗೆರೆಯ ಇಬ್ಬರು ಕಾಂಗ್ರೆಸ್ ಶಾಸಕರು ಮತದಾರರಿಗೆ ಗಿಫ್ಟ್ ಬಾಕ್ಸ್, ಹಣ ಹಂಚಿಕೆ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಉಚ್ಚ ನ್ಯಾಯಾಲಯ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್, ಶಾಸಕ ಶಾಮನೂರು ಶಿವಶಂಕರಪ್ಪ, ರಾಜ್ಯ ಮುಖ್ಯ ಚುನಾವಣಾಧಿಕಾರಿ,ದಾವಣಗೆರೆ ಜಿಲ್ಲಾಧಿಕಾರಿಯವರಿಗೆ ನೋಟೀಸ್ ಜಾರಿ ಮಾಡಿದೆ ಎಂದು
ದಾವಣಗೆರೆ ದಕ್ಷಿಣ ಕ್ಷೇತ್ರದ ಪರಾಜಿತ ಅಭ್ಯರ್ಥಿ
ಸುಭಾನ್ ಖಾನ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಶಾಸಕರಾದ ಎಸ್.ಎಸ್.ಮಲ್ಲಿಕಾರ್ಜುನ್, ಶಾಸಕ ಶಾಮನೂರು ಶಿವಶಂಕರಪ್ಪ ಮತದಾರರಿಗೆ ಗಿಫ್ಟ್ ಬಾಕ್ಸ್, ಹಣದ ಹಂಚಿಕೆ
ಮಾಡುತ್ತಿರುವ ಬಗ್ಗೆ ಕೆಟಿಜೆ ನಗರ ಮತ್ತು ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ. ಈ ಬಗ್ಗೆ ನನ್ನ ಬಳಿಬಸಾಕ್ಷಿಗಳು ಇದ್ದು, ಉತ್ತರ ನೀಡಲು ಕೋರ್ಟ್ ನೋಟಿಸ್ ಜಾರಿ ಮಾಡಿದೆ.ದು ವೇಳೆ ಪ್ರಕರಣ ಸಾಬೀತಾದರೆ ಆರು ವರ್ಷಗಳ ಕಾಲ ಚುನಾವಣೆಗೆ ಇಬ್ಬರು ಶಾಸಕರು ನಿಲ್ಲೋದಕ್ಕೆ ಬರೋದಿಲ್ಲ ಎಂದರು.
![](https://davangerevijaya.com/wp-content/uploads/2024/07/IMG-20240715-WA0352.jpg)
ಚುನಾವಣಾ ಅಧಿಕಾರಿಯಿಂದಲೇ ದೂರು
ಸ್ವತಃ ಚುನಾವಣಾ ಅಧಿಕಾರಿಯವರೇ ಹಣ, ಗಿಫ್ಟ್ ಬಾಕ್ಸ್ ಹಂಚಿಕೆ ಮಾಡುತ್ತಿರುವುದ ಪತ್ತೆ ಹಚ್ಚಿ, ದೂರು ದಾಖಲಿಸಿದ್ದರು. ಆದರೆ ಯಾವುದೇ ಕ್ರಮ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಜೂ. 6 ರಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅವರಿಗೆ ದೂರು ಸಲ್ಲಿಸಲಾಗಿತ್ತು. ಯಾವುದೇ ಕ್ರಮ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯಕ್ಕೆ ದಾವೆ ಸಲ್ಲಿಸಲಾಗಿತ್ತು.
ರಾಜ್ಯ ಉಚ್ಚ ನ್ಯಾಯಾಲಯ ಡಿ. 4 ರಂದು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಿತ್ತು ಎಂದು
ತಿಳಿಸಿದರು.
ಪ್ರಕರಣ ದಾಖಲಾದರೂ ತನಿಖೆ ಇಲ್ಲ
ಪ್ರಕರಣ ದಾಖಲಾಗಿದ್ದರೂ ಸರಿಯಾಗಿ ತನಿಖೆ ನಡೆಸದ
ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ವಿರುದ್ಧ ಕ್ರಮ ಜರುಗಿಸುವಂತೆ ಕೋರಿ ರಾಜ್ಯಪಾಲರಿಗೆ ಮನವಿ
ಮಾಡಲಾಗಿದೆ ಎಂದು ತಿಳಿಸಿದರು.ಅಲ್ಲಾಭಕ್ಷಿ, ಮಹಮ್ಮದ್ ಪರ್ವೀಜ್ ಸುದ್ದಿಗೋಷ್ಠಿಯಲ್ಲಿದ್ದರು.
![](https://davangerevijaya.com/wp-content/uploads/2024/07/IMG-20240716-WA0138.jpg)