Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ದಾವಣಗೆರೆ : ಜಯನಗರದ ಸಾಯಿಬಾಬಾ ಮಂದಿರದಲ್ಲಿ ಅದ್ದೂರಿ ಗುರು ಪೂರ್ಣಿಮೆ . ಸಾಯಿ ದರ್ಶನಕ್ಕೆ ಬರಲಿದ್ದಾರೆ ಸಹಸ್ರಾರು ಜನ

8 July 2025

ಬಡಾವಣೆ ಪೊಲೀಸ್ ಠಾಣೆ ಪಿಎಸ್ಐ ಲಾಡ್ಜ್ ನಲ್ಲಿ ನೇಣಿಗೆ ಶರಣು, ಅಷ್ಟಕ್ಕೂ ಪಿಎಸ್ಐ ಲೈಫ್ ಹಿಂದೆ ಏನಿತ್ತು?..ನೇಣಿಗೆ ಶರಣಾಗುವ ಮೊದಲು ಆಧಾರ್ ನಂಬರ್ ಅಳಿಸಿದ್ದು ಯಾಕೆ?

7 July 2025

ಭದ್ರಾ ಡ್ಯಾಂ ಭರ್ತಿಯಾಗಲು ಇನ್ನೇಷ್ಟು ಅಡಿ ಬಾಕಿ ಇರಬಹುದು?…ಈ ತಿಂಗಳಿನಲ್ಲಿಯೇ ನೋಡುಗರಿಗೆ ಸಿಗಲಿದೆ ಜಲಾಶಯದ ಸೊಬಗು .‌‌‌..

5 July 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ಪ್ರಮುಖ ಸುದ್ದಿ»ಭ್ರಷ್ಟ ಅಧಿಕಾರಿಗೆ ಮತ್ತೆ ಮನ್ನಣೆ ನೀಡಿದ ಸರಕಾರ, ಲೋಕಾಯುಕ್ತ ದಾಳಿಗೆ ಒಳಗಾದ್ರೂ, ದಾವಣಗೆರೆ ಬಿಟ್ಟು ಹೋಗದ ಅಬಕಾರಿ ಡಿಸಿ
ಪ್ರಮುಖ ಸುದ್ದಿ

ಭ್ರಷ್ಟ ಅಧಿಕಾರಿಗೆ ಮತ್ತೆ ಮನ್ನಣೆ ನೀಡಿದ ಸರಕಾರ, ಲೋಕಾಯುಕ್ತ ದಾಳಿಗೆ ಒಳಗಾದ್ರೂ, ದಾವಣಗೆರೆ ಬಿಟ್ಟು ಹೋಗದ ಅಬಕಾರಿ ಡಿಸಿ

ದಾವಣಗೆರೆ ಲೋಕಾಯುಕ್ತ ಕೌಲಾಪುರ ಬಲೆಗೆ ಬಿದ್ದಿದ್ದ ಅಬಕಾರಿ ಉಪ ಆಯುಕ್ತೆ
davangerevijaya.comBy davangerevijaya.com14 December 2023Updated:14 December 2023No Comments3 Mins Read
Facebook WhatsApp Twitter
Share
WhatsApp Facebook Twitter Telegram

ನಂದೀಶ್ ಭದ್ರಾವತಿ ದಾವಣಗೆರೆ

ಸದನದಲ್ಲಿ ಬಾರ್‌ಲೈಸೆನ್ಸ್ ನೀಡಿಕೆ ಸಂಬಂಧಿಸಿದಂತೆ ಕಾವೇರಿದ ಚರ್ಚೆ ನಡೆದಿದ್ದು ಎಲ್ಲರಿಗೆ ಗೊತ್ತಿರುವ ವಿಷಯ.
ಅಲ್ಲದೇ ಸಿಎಲ್-7 ಸನ್ನದುಗಳ ನೀಡಿಕೆಯಲ್ಲಿ ನಿಯಮಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ, ಮನಸ್ಸಿಗೆ ಬಂದಂತೆ ನೀಡಲಾಗುತ್ತಿದೆ ಎಂಬ ಸದಸ್ಯರ ಆರೋಪ ಸರಿ ಇದೆ ಎಂಬುದಕ್ಕೆ ಇಲ್ಲೊಂದು ಪ್ರಕರಣ ಸಾಕ್ಷಿಯಾಗಿದೆ.

ಹೌದು…ದಾವಣಗೆರೆ ಅಬಕಾರಿ ಡಿಸಿ ಸ್ವಪ್ನ ಮೇಲೆ ಲೋಕಾಯುಕ್ತ ಅಧಿಕಾರಿಗಳು ಈ ಹಿಂದೆ ಲಂಚದ ಆರೋಪದಡಿ ಬಂಧಿಸಿದ್ದರು. ಬಳಿಕ ಜೈಲಿಗೆ ಹೋಗಿ ಬಂದು ಜಾಮೀನು ಪಡೆದು ಮತ್ತೆ ಅದೇ ಅಬಕಾರಿ ಡಿಸಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಲೋಕಾಯುಕ್ತಕ್ಕೆ ದೂರು‌ ಕೊಟ್ಟ ಸನ್ನದುದ್ದಾರ
ದೂರುದಾರ ರಘುನಾಥ್

ದೂರುದಾರ ರಘುನಾಥ್ ಹೇಳುವ ಪ್ರಕಾರ, ಯಾವುದೇ ಸರಕಾರಿ ಅಧಿಕಾರಿ 48 ಗಂಟೆ ಜೈಲಿಗೆ ಹೋದರೆ ಅವರನ್ನು ಸಂಬಂಧಪಟ್ಟ ಇಲಾಖಾಧಿಕಾರಿಗಳು ಅಮಾನತು ಮಾಡಬೇಕು. ಆದರೆ ಆ ಕೆಲಸವನ್ನು ಸರಕಾರ ಮಾಡಿಲ್ಲ. ಇನ್ನು ಲೋಕಾಯುಕ್ತ ದಾಳಿಗೊಳಗಾದ ಭ್ರಷ್ಟ ಅಧಿಕಾರಿಯನ್ನು ಮತ್ತದೇ ಸ್ಥಾನಕ್ಕೆ ನೇಮಿಸುವಂತಿಲ್ಲ. ಆದರೂ ಅವರನ್ನು ಅಬಕಾರಿ ಉಪಯುಕ್ತರನ್ನಾಗಿ ನೇಮಿಸಲಾಗಿದೆ. ಇದರಿಂದ ಇನ್ನಷ್ಟು ಭ್ರಷ್ಟಾಚಾರಕ್ಕೆ ಸಹಕಾರ ನೀಡಿದಂತಾಗಿದೆ ಎಂಬುದು ಅವರ ಮಾತು.

ಅವರೆಲ್ಲಾ ಅಬಕಾರಿ ಇಲಾಖೆಯ ಅಧಿಕಾರಿಗಳು ಆದರೆ ಲಂಚ ಸ್ವೀಕರಿಸಿ ಜೈಲಿಗೆ ಹೋದವರು ಇದೀಗ‌ ಮತ್ತೊಮ್ಮೆ ತಮ್ಮ ಸ್ಥಾನದಲ್ಲೇ ಕೆಲಸ ನಿರ್ವಹಣೆ ಮಾಡುತ್ತಿದ್ದಾರೆ.ಸರ್ಕಾರದ ಸುತ್ತೊಲೆಯನ್ನು ಈ ಅಧಿಕಾರಿಗಳು ಗಾಳಿಗೆ ತೂರಿದಂತಿದೆ  ಕಳೆದ ಸೆಪ್ಟೆಂಬರ್‌ 13ರಂದು ದಾವಣಗೆರೆ ಲೋಕಾಯುಕ್ತ ಪೋಲೀಸರಿಂದ ದಾಳಿಗೆ ಒಳಗಾಗಿ ಬಂಧಿತರಾಗಿ, ಇದೀಗ ಜಾಮೀನಿನ ಮೇಲೆ ಬಿಡುಗಡೆಯಾಗಿ ಮತ್ತದೇ ಸ್ಥಾನಕ್ಕೆ ಬಂದು ಐವರು ಅಬಕಾರಿ ಇಲಾಖೆಯ ಅಧಿಕಾರಿಗಳು ಅಧಿಕಾರ ಮಾಡುತ್ತಿದ್ದಾರೆ ಎಂದು ರಘುನಾಥ್ ಹೇಳಿದ್ದಾರೆ.

ಬೇರೆ ಜಿಲ್ಲೆಗೆ ವರ್ಗಾವಣೆ ಮಾಡಿ

ಅಬಕಾರಿ ಡಿಸಿ ಹಾಗೂ ಉಳಿದ ನಾಲ್ಕು ಜನರನ್ನು ಇನ್ನು 10 ದಿನದೊಳಗೆ ಬೇರೆ ಜಿಲ್ಲೆಗೆ ವರ್ಗಾವಣೆ ಮಾಡದಿದ್ದರೆ ದಾವಣಗೆರೆಯ ಉಪ ಅಬಕಾರಿ ಇಲಾಖೆಯ ಕಚೇರಿ ಮುಂದೆ ಉಗ್ರ ಪ್ರತಿಭಟನೆ ಮಾಡುವುದಲ್ಲದೇ ನ್ಯಾಯಕ್ಕಾಗಿ ಹೈಕೋರ್ಟಿನ ಮೊರೆ ಹೋಗಲಾಗುವುದು ಎಂದು ಸನ್ನದುದಾರ ಹಾಗೂ  ಡಿಜಿ ಆರ್ ಅಮ್ಯೂಸೆಮೆಂಟ್ ನ ಮಾಲೀಕರಾದ ಹರಿಹರದ ಡಿ.ಜಿ.ರಘುನಾಥ್ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಏನಿದು ಘಟನೆ

ನನಗೆ ಮದ್ಯದ ಅಂಗಡಿಗೆ ಪರವಾನಗಿ ನೀಡಲು ದಾವಣಗೆರೆ ಅಬಕಾರಿ ಉಪ ಆಯುಕ್ತರು ಮತ್ತು ಅವರ ಅಧೀನದಲ್ಲಿ ಬರುವ ಇತರೆ ಅಧಿಕಾರಿಗಳು 60 ಲಕ್ಷ ಕೇಳಿದ್ದರು. ಈ ವೇಳೆ ನಾನು ಲೋಕಾಯುಕ್ತಕ್ಕೆ ದೂರು ನೀಡಿದ್ದ ಹಿನ್ನೆಲೆಯಲ್ಲಿ ಲೋಕಾಯುಕ್ತರ ನಿರ್ದೇಶನದಂತೆ‌ ಮುಂಗಡ ಹಣ 3ಲಕ್ಷ ರೂ.,ಗಳನ್ನು ನೀಡುವ ವೇಳೆ ಅಶೋಕ್, ಸ್ವಪ್ನ, ಜೆ.ಕೆ.ಶೀಲಾ, ಶೈಲಶ್ರೀ ಇವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಆದರೆ, ಇದೀಗ ಅವರು ಜಾಮೀನು ಪಡೆದು ಮತ್ತೆ ಅದೇ ಹುದ್ದೆಗೆ ಬಂದು ಅಧಿಕಾರ ಚಲಾವಣೆ ಮಾಡುತ್ತಿದ್ದು, ಪ್ರಕರಣದ ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಇರುತ್ತದೆ. ಕಾರಣ ಅವರನ್ನು ಬೇರೆಡೆಗೆ ನಾನ್ ಎಕ್ಸಿಕ್ಯುಟಿವ್ ಹುದ್ದೆಗೆ ವರ್ಗಾವಣೆ ಮಾಡುವಂತೆ ಒತ್ತಾಯಿಸಿದ್ದಾರೆ.

ಅಬಕಾರಿ ಡಿಸಿ ಹುದ್ದೆಗೆ ಯಾರನ್ನು ನೇಮಕ ಮಾಡಿರಲಿಲ್ಲ

ಈ ಅಬಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿಯಾಗಿ ಅಧಿಕಾರಿಗಳು ಅಮಾನತು ಆದ ದಿನವಾದ 15-10-2023 ರಿಂದ 7-11-2023 ರವರೆಗೆ ದಾವಣಗೆರೆ ಅಬಕಾರಿ ಉಪ ಆಯುಕ್ತರ ಹುದ್ದೆಗೆ ಯಾರನ್ನೂ ನೇಮಕ ಮಾಡಿರಲಿಲ್ಲ. ಇದು ಹಲವಾರು ಅನುಮಾನಗಳು ಎದ್ದು ಕಾಣುತ್ತವೆ ಎಂದು ರಘುನಾಥ್ ಹೇಳುತ್ತಾರೆ

ಆದೇಶ ಏನು ಹೇಳುತ್ತೇ

ಸರ್ಕಾರದ ಅಧಿಸೂಚನೆಯಂತೆ ಯಾವುದೇ ಅಧಿಕಾರಿಗಳು, ಸಿಬ್ಬಂದಿ ಲೋಕಾಯುಕ್ತರ ದಾಳಿಗೆ ಒಳಾಗಾಗಿ ಪ್ರಾಥಮಿಕ ತನಿಖೆಯ ನಂತರ ಅರೋಪಗಳು ಮೇಲ್ನೋಟಕ್ಕೆ ಸಾಬೀತಾಗಿ ಆರೋಪಿತರಾಗಿ ಅಮಾನತಿನಲ್ಲಿ ಇಟ್ಟ ನಂತರ ಅವರನ್ನು ಪುನರ್ ಸ್ಥಾಪಿಸಿವ ಮುನ್ನ ಲೋಕಾಯುಕ್ತ ಅಧಿಕಾರಿಗಳೊಂದಿಗೆ ಸಮಾಲೋಚನೆ ಮಾಡಬೇಕೆಂದು ಆದೇಶವಿದೆ. ಅಂತಹ ಅಧಿಕಾರಿಗಳು, ನೌಕರರನ್ನು ಈ ಹಿಂದೆ ಸೇವೆ ಸಲ್ಲಿಸಿದ ಹುದ್ದೆಗೆ ನೇಮಿಸತಕ್ಕದ್ದಲ್ಲ. ಅವರನ್ನು ಬೇರೆ ಯಾವುದಾದರೂ ನಾನ್ ಎಕ್ಸಿಕ್ಯುಟಿವ್ ಹುದ್ದೆಗೆ ನೇಮಿಸಬೇಕೆಂದು ಹೇಳಿದೆ. ಅದರಂತೆ ಅವರನ್ನು ಬೇರೆಡೆ ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಿದ್ದಾರೆ‌.

ಸನ್ನದುದಾರರಿಗೆ ತೊಂದರೆ , ಸ್ವಚ್ಛ ಅಧಿಕಾರಿಗಳನ್ನು ನೇಮಿಸಿ

ಎಲ್ಲಾ ಸನ್ನದುದಾರರು ಇವರ ಕಿರುಕುಳಕ್ಕೆ ಬೇಸತ್ತಿದ್ದಾರೆ.ಹರಿಹರದಲ್ಲಿ ಎಷ್ಟೋ ಸನ್ನದುದಾರರು ಇವರಿಂದ ಸಾಲ ಮಾಡಿಕೊಂಡು ಊರು ಬಿಟ್ಟುಹೊಗಿದ್ದಾರೆ. ಈ ಕೂಡಲೇ ಹರಿಹರದ ಅಬಕಾರಿ ಇಲಾಖೆಗೆ ಸರ್ಕಾರ ಸ್ವಚ್ಚ ಅಧಿಕಾರಿಗಳನ್ನು ಹಾಕಬೇಕು.

ಭ್ರಷ್ಟಾಚಾರ ನಡೆಸುವ ಅಧಿಕಾರಿಗಳನ್ನು ತೆಗೆಯಬೇಕು.ಭ್ರಷ್ಟಾಚಾರ ನಡೆಸಿದವರನ್ನು ಹಾಕಿದರೆ ಸರ್ಕಾರ ಸರಿಯಿಲ್ಲ ಎಂದು ಸಾಬೀತಾಗುತ್ತದೆ.
ಈ ಅಧಿಕಾರಿಗಳೇ ನಾವು ದುಡ್ಡು ಖರ್ಚು ಮಾಡಿಕೊಂಡೇ ಇಲ್ಲಿಗೆ ಬಂದಿದ್ದೇವೆ ಎಂದು ಯಾವುದೇ ಭಯವಿಲ್ಲದೇ ಹೇಳುತ್ತಾರೆ. ನಮ್ಮ ಪರಿಸ್ಥಿತಿ ಹೇಗಿದೆ ಎಂದರೆ ಜೈಲಿಗೆ ಹೋಗಿಬಂದವರಿಗೆ ಕೈ ಮುಗಿದು ನಮ್ಮ ಕೆಲಸ ಮಾಡಿಕೊಡಿ ಎನ್ನುವ ಸ್ಥಿತಿ ಬಂದಿದೆ.

ಸರ್ಕಾರ ಸುತ್ತೋಲೆಯಲ್ಲಿ ಸ್ಪಷ್ಟವಾಗಿ ಇದೆ ಭ್ರಷ್ಟಾಚಾರ ನಡೆಸಿ ಜೈಲಿಗೆ ಹೋದ ಅಧಿಕಾರಿಗಳು ಮರಳಿ ತಮ್ಮ ಸ್ಥಾನದಲ್ಲಿ ಮುಂದುವರೆಯುವಂತಿಲ್ಲ ಎಂದು. ಇದು ಸರ್ಕಾರದ ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಒಟ್ಟಾರೆ ಭ್ರಷ್ಟಾಚಾರ ಮುಕ್ತ ಸರಕಾರ ಎಂದು ಹೇಳುವ ರಾಜಕಾರಣಿಗಳು ಇಲ್ಲಿ ಎಡವಿದ್ದೇಕೇ ಎಂಬ ಪ್ರಶ್ನೆ ಎದ್ದಿದೆ.

ಅಮಾನತು ಮಾಡದಂತೆ ಕೆಎಟಿಗೆ ಹೋಗಿದ್ದ ಲೋಕಾಯುಕ್ತ ದಾಳಿಗೆ ಒಳಗಾಗಿದ್ದ ಅಬಕಾರಿ ಡಿಸಿ
….

ದಾವಣಗೆರೆ : ಲೋಕಾಯುಕ್ತ ದಾಳಿಗೆ ಒಳಗಾದ ಅಬಕಾರಿ ಡಿಸಿ 48 ಗಂಟೆಯೊಳಗೆ ಜೈಲಿನಲ್ಲಿದ್ದರೇ ಅವರನ್ನು ಸರಕಾರ ಅಮಾನತು ಮಾಡಬೇಕು. ಆದರೆ ಅವರನ್ನು ಸರಕಾರ ಅಮಾನತು ಮಾಡಿಲ್ಲ, ಪರಿಣಾಮ ಅಮಾನತು ಮಾಡದಂತೆ ಕೆಎಟಿಗೆ ಹೋಗಿ ಅಬಕಾರಿ ಸ್ವಪ್ನ ಸ್ಟೇ ತಂದು ಅಬಕಾರಿ ಅಧಿಕಾರಿ ಮತ್ತೆ ದಾವಣಗೆರೆಗೆ ಬಂದಿದ್ದಾರೆ.

ಅಬಕಾರಿ ಕಮಿಷನರ್ ಮೇಲೆ ಅ‌ನುಮಾನ 

ಅಬಕಾರಿ ಡಿಸಿಯನ್ನು ಅಮಾನತು ಮಾಡುವಂತೆ ಲೋಕಾಯುಕ್ತ ಅಧಿಕಾರಿಗಳು ವರದಿ ನೀಡಿದ್ದರು. ಆದರೂ ಅಬಕಾರಿ ಕಮಿಷನರ್ , ಅವರನ್ನು ಅಮಾನತು ಮಾಡದಂತೆ ತಡೆದಿದ್ದು ಏಕೆ ಎಂಬ ಅನುಮಾನವಿದೆ.
.ಭ್ರಷ್ಟರಿಗೇಕೇ ಮತ್ತೆ ಅಧಿಕಾರ

ಭ್ರಷ್ಟ ಅಧಿಕಾರಿಗಳಿಗೆ ದಾವಣಗೆರೆಗೆ ಮತ್ತೇ ಅಧಿಕಾರ‌ ಕೊಟ್ಟಿರುವ ಕಾರಣದ ಬಗ್ಗೆ ಸಾಕಷ್ಟು ಅನುಮಾನಗಳಿವೆ. ಅಲ್ಲದೇ ಅದಕ್ಕೆ ರಾಜಕಾರಣಿಗಳ ಒತ್ತಡವಿತ್ತಾ ಎಂಬ ಪ್ರಶ್ನೆ ಎದ್ದಿದೆ.

 

Commissioner Davangere Excise DC Featured Swapna Top News ಅಬಕಾರಿ ಡಿಸಿ ಕಮಿಷನರ್ ದಾವಣಗೆರೆ ಸ್ವಪ್ನ
Share. WhatsApp Facebook Twitter Telegram
davangerevijaya.com
  • Website

Related Posts

ದಾವಣಗೆರೆ : ಜಯನಗರದ ಸಾಯಿಬಾಬಾ ಮಂದಿರದಲ್ಲಿ ಅದ್ದೂರಿ ಗುರು ಪೂರ್ಣಿಮೆ . ಸಾಯಿ ದರ್ಶನಕ್ಕೆ ಬರಲಿದ್ದಾರೆ ಸಹಸ್ರಾರು ಜನ

8 July 2025

ಇಡಿ ಬಲೆಯಿಂದ ಹೊರಬಂದ ಮಂಜುನಾಥ್ ಗೌಡ…ಎಂಭತ್ತೇರಡು ದಿನಗಳ ನಂತರ ಮರಳಿದ ಸಹಕಾರಿ ಧುರೀಣ

3 July 2025

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,656 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,335 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,595 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
ಪ್ರಮುಖ ಸುದ್ದಿ

ದಾವಣಗೆರೆ : ಜಯನಗರದ ಸಾಯಿಬಾಬಾ ಮಂದಿರದಲ್ಲಿ ಅದ್ದೂರಿ ಗುರು ಪೂರ್ಣಿಮೆ . ಸಾಯಿ ದರ್ಶನಕ್ಕೆ ಬರಲಿದ್ದಾರೆ ಸಹಸ್ರಾರು ಜನ

By davangerevijaya.com8 July 20250

ನಂದೀಶ್ ಭದ್ರಾವತಿ, ದಾವಣಗೆರೆ ಅತ್ತ ಶಿರಡಿಯಲ್ಲಿ ಗುರುಪೂರ್ಣಿಮಾ ಹಬ್ಬವು ಭಕ್ತಿ ಭಾವದಿಂದ ಆರಂಭವಾಗಲಿದ್ದು, ಸಾವಿರಾರು ಭಕ್ತರು ಸಾಯಿನಾಮವನ್ನು ಪಠಿಸುತ್ತ ಶಿರಡಿಯನ್ನು…

ಬಡಾವಣೆ ಪೊಲೀಸ್ ಠಾಣೆ ಪಿಎಸ್ಐ ಲಾಡ್ಜ್ ನಲ್ಲಿ ನೇಣಿಗೆ ಶರಣು, ಅಷ್ಟಕ್ಕೂ ಪಿಎಸ್ಐ ಲೈಫ್ ಹಿಂದೆ ಏನಿತ್ತು?..ನೇಣಿಗೆ ಶರಣಾಗುವ ಮೊದಲು ಆಧಾರ್ ನಂಬರ್ ಅಳಿಸಿದ್ದು ಯಾಕೆ?

7 July 2025

ಭದ್ರಾ ಡ್ಯಾಂ ಭರ್ತಿಯಾಗಲು ಇನ್ನೇಷ್ಟು ಅಡಿ ಬಾಕಿ ಇರಬಹುದು?…ಈ ತಿಂಗಳಿನಲ್ಲಿಯೇ ನೋಡುಗರಿಗೆ ಸಿಗಲಿದೆ ಜಲಾಶಯದ ಸೊಬಗು .‌‌‌..

5 July 2025

ಇಡಿ ಬಲೆಯಿಂದ ಹೊರಬಂದ ಮಂಜುನಾಥ್ ಗೌಡ…ಎಂಭತ್ತೇರಡು ದಿನಗಳ ನಂತರ ಮರಳಿದ ಸಹಕಾರಿ ಧುರೀಣ

3 July 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ದಾವಣಗೆರೆ : ಜಯನಗರದ ಸಾಯಿಬಾಬಾ ಮಂದಿರದಲ್ಲಿ ಅದ್ದೂರಿ ಗುರು ಪೂರ್ಣಿಮೆ . ಸಾಯಿ ದರ್ಶನಕ್ಕೆ ಬರಲಿದ್ದಾರೆ ಸಹಸ್ರಾರು ಜನ

8 July 2025

ಬಡಾವಣೆ ಪೊಲೀಸ್ ಠಾಣೆ ಪಿಎಸ್ಐ ಲಾಡ್ಜ್ ನಲ್ಲಿ ನೇಣಿಗೆ ಶರಣು, ಅಷ್ಟಕ್ಕೂ ಪಿಎಸ್ಐ ಲೈಫ್ ಹಿಂದೆ ಏನಿತ್ತು?..ನೇಣಿಗೆ ಶರಣಾಗುವ ಮೊದಲು ಆಧಾರ್ ನಂಬರ್ ಅಳಿಸಿದ್ದು ಯಾಕೆ?

7 July 2025

ಭದ್ರಾ ಡ್ಯಾಂ ಭರ್ತಿಯಾಗಲು ಇನ್ನೇಷ್ಟು ಅಡಿ ಬಾಕಿ ಇರಬಹುದು?…ಈ ತಿಂಗಳಿನಲ್ಲಿಯೇ ನೋಡುಗರಿಗೆ ಸಿಗಲಿದೆ ಜಲಾಶಯದ ಸೊಬಗು .‌‌‌..

5 July 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,656 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,335 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

Subscribe to Updates

Get the latest creative news from SmartMag about art & design.

Recent Posts
  • ದಾವಣಗೆರೆ : ಜಯನಗರದ ಸಾಯಿಬಾಬಾ ಮಂದಿರದಲ್ಲಿ ಅದ್ದೂರಿ ಗುರು ಪೂರ್ಣಿಮೆ . ಸಾಯಿ ದರ್ಶನಕ್ಕೆ ಬರಲಿದ್ದಾರೆ ಸಹಸ್ರಾರು ಜನ
  • ಬಡಾವಣೆ ಪೊಲೀಸ್ ಠಾಣೆ ಪಿಎಸ್ಐ ಲಾಡ್ಜ್ ನಲ್ಲಿ ನೇಣಿಗೆ ಶರಣು, ಅಷ್ಟಕ್ಕೂ ಪಿಎಸ್ಐ ಲೈಫ್ ಹಿಂದೆ ಏನಿತ್ತು?..ನೇಣಿಗೆ ಶರಣಾಗುವ ಮೊದಲು ಆಧಾರ್ ನಂಬರ್ ಅಳಿಸಿದ್ದು ಯಾಕೆ?
  • ಭದ್ರಾ ಡ್ಯಾಂ ಭರ್ತಿಯಾಗಲು ಇನ್ನೇಷ್ಟು ಅಡಿ ಬಾಕಿ ಇರಬಹುದು?…ಈ ತಿಂಗಳಿನಲ್ಲಿಯೇ ನೋಡುಗರಿಗೆ ಸಿಗಲಿದೆ ಜಲಾಶಯದ ಸೊಬಗು .‌‌‌..
  • ಇಡಿ ಬಲೆಯಿಂದ ಹೊರಬಂದ ಮಂಜುನಾಥ್ ಗೌಡ…ಎಂಭತ್ತೇರಡು ದಿನಗಳ ನಂತರ ಮರಳಿದ ಸಹಕಾರಿ ಧುರೀಣ
  • ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.