ದಾವಣಗೆರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ದಾವಣಗೆರೆ ಜಿಲ್ಲಾ ಶಾಖೆಯಿಂದ ರಾಜ್ಯ ಪರಿಷತ್ ಸ್ಥಾನಕ್ಕೆ ದಾವಣಗೆರೆ ಉತ್ತರ ವಲಯ ವ್ಯಾಪ್ತಿಯ ಓಬಜ್ಜಿಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಜಿ.ಓಬಳಪ್ಪ ಆಯ್ಕೆಯಾಗಿದ್ದಾರೆ.

ಬುಧವಾರ ನಡೆದ ಚುನಾವಣೆಯಲ್ಲಿ ಓಬಳಪ್ಪ ಅವರು 37 ಮತಗಳನ್ನುಗಳಿಸಿ ಪ್ರತಿಸ್ಪರ್ಧಿ ಮಂಜಮ್ಮ ಅವರ ವಿರುದ್ಧ 6 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಮಂಜಮ್ಮ 31 ಮತಗಳಿಸಿ ಪರಾಭವಗೊಂಡಿದ್ದಾರೆ.

ಶಿಕ್ಷಣ ಕ್ಷೇತ್ರದಲ್ಲಿ ಕಳೆದ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಜಿ.ಓಬಳಪ್ಪ ಅವರು ಜನಾನುರಾಗಿ ಶಿಕ್ಷಕರಾಗಿದ್ದಾರೆ.

Share.
Leave A Reply

Exit mobile version