![](https://davangerevijaya.com/wp-content/uploads/2024/07/IMG-20240719-WA01231.jpg)
ದಾವಣಗೆರೆ : ಕೆಲ ವರ್ಷದ ಹಿಂದೆ ದಾವಣಗೆರೆ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಕಚೇರಿಯಲ್ಲಿ ಹಾರಿದ್ದ ಗುಂಡಿನ ಸದ್ದು ಮತ್ತೆ ಮೊಳಗಿದೆ
ಹರಪನಹಳ್ಳಿ ತಾಲೂಕಿನ ನಾಗರಕಟ್ಟೆ ಗ್ರಾಮದ ಗುರುಮೂರ್ತಿ (34) ಎಂಬುವರು ಪಾಲಿಕೆ ಬಳಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿರಬಹುದು ಎಂಬ ಮಾತಿದೆ.
![](https://davangerevijaya.com/wp-content/uploads/2024/07/IMG-20240715-WA0352.jpg)
ಇವರು ಸಶಸ್ತ್ರ ಮೀಸಲು ಪಡೆಯ ಕಾನ್ಸ್ಸ್ಟೇಬಲ್ ಆಗಿದ್ದು, 2011 ರ ಬ್ಯಾಚ್ ನವರಾಗಿದ್ದಾರೆ. ದಾವಣಗೆರೆ ಮಹಾನಗರ ಪಾಲಿಕೆಯ ಸ್ಟ್ರಾಂಗ್ ರೂಂ ಬಳಿ ಇವಿಎಂ ಮಷಿನ್ ಕಾಯಲು ನಿಯೋಜಿಸಲಾಗಿತ್ತು. ಆದರೆ ಪಕ್ಕದ ಕೊಠಡಿಯೊಂದರಲ್ಲಿ ಬುಧವಾರ ರಾತ್ರಿ ರಕ್ತದ ಮಡುವಿನಲ್ಲಿ ಬಿದ್ದಾಗ ಗೊತ್ತಾಗಿದೆ. ಆದರೆ ಈ ಘಟನೆ ಅವರ ಬಳಿ ಇದ್ದ ರೈಫಲ್ನಿಂದ ಆಕಸ್ಮಿಕವಾಗಿ ಗುಂಡು ಹಾರಿದೆಯೋ ಅಥವಾ ಆತ್ಮಹತ್ಯೆ ಯತ್ನವೋ ಎಂಬುದು ಸ್ಪಷ್ಟವಾಗಿ ತಿಳಿದಿಲ್ಲ.
ರಕ್ತದದ ಮಡುವಿನಲ್ಲಿ ಬಿದ್ದ ಗುರುಮೂರ್ತಿಯನ್ನ ಕೂಡಲೇ ಸಿಟಿ ಸೆಂಟ್ರಲ್ ಆಸ್ಪತ್ತೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಿತಿ ಗಂಭೀರವಾಗಿದೆ. ಸದ್ಯ ಘಟನೆ ನಡೆದಿರುಬುದು ಹಲವಾರು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಮೇಲ್ನೋಟಕ್ಕೆ ಕೌಟುಂಬಿಕ ಕಲಹದ ಶಂಕೆ ವ್ಯಕ್ತವಾಗಿದ್ದು, ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮೊಬೈಲ್ನಲ್ಲಿ ಮಾತನಾಡುವಾಗ ಆಕಸ್ಮಿಕವಾಗಿ ಸಿಡಿದಿತ್ತಾ ಗುಂಡು
ಘಟನೆ ನಡೆಯುವಾಗ ಗುರುಮೂರ್ತಿ ಪತ್ನಿಯೊಂದಿಗೆ ಮೊಬೈಲ್ನಲ್ಲಿ ಮಾತನಾಡುತ್ತಿದ್ದರು ಎನ್ನಲಾಗಿದೆ. ಸಂಭಾಷಣೆ ವೇಳೆ ಗುಂಡಿನ ಸದ್ದು ಕೇಳಿದ್ದರಿಂದ ಪತ್ನಿ ಹಾಗೂ ಗುರುಮೂರ್ತಿ ಅವರ ತಂದೆ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ಬಳಿಕ ಪೊಲೀಸರೊಂದಿಗೆ ಗುರುಮೂರ್ತಿ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಹೇಳಲಾಗಿದೆ.
ಆಸ್ಪತ್ರೆಗೆ ಐಜಿಪಿ, ಎಸ್ಪಿ ಭೇಟಿ
ಐಜಿಪಿ ತ್ಯಾಗರಾಜನ್ ಹಾಗೂ ಎಸ್ಪಿ ಉಮಾ ಪ್ರಶಾಂತ್ ಆಸ್ಪತ್ರೆಗೆ ಭೇಟಿ ನೀಡಿ ಗುರುಮೂರ್ತಿ ಅವರ ಕುಟುಂಬದವರು ಹಾಗೂ ವೈದ್ಯರಿಂದ ಮಾಹಿತಿ ಪಡೆದಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಉಮಾ ಪ್ರಶಾಂತ್, ‘ರಾತ್ರಿ 8 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ್ದಾರಾ? ಅಥವಾ ಆಕಸ್ಮಿಕವಾಗಿ ಗುಂಡು ತಗುಲಿದೆಯಾ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಸದ್ಯ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿರುವುದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ’ ಎಂದಿದ್ದಾರೆ.
ಸಮಯಕ್ಕೆ ಬಾರದ ಆ್ಯಂಬುಲೆನ್ಸ್
ಹಲವು ಬಾರಿ ಕರೆ ಮಾಡಿದರೂ, ಘಟನಾ ಸ್ಥಳಕ್ಕೆ ಆಂಬುಲೆನ್ಸ್ ಬರಲಿಲ್ಲ ಎಂದು ಘಟನಾ ಸ್ಥಳದಲ್ಲಿದ್ದವರು ದೂರಿದ್ದಾರೆ. ಘಟನೆ ನಡೆದು ಅರ್ಧಗಂಟೆಗೂ ಹೆಚ್ಚು ಹೊತ್ತಿನ ಬಳಿಕವೂ ಆಂಬುಲೆನ್ಸ್ ಬಾರದ ಕಾರಣ ಪೊಲೀಸ್ ವಾಹನದಲ್ಲಿಯೇ ಗುರುಮೂರ್ತಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಒಟ್ಟಾರೆ ದಾವಣಗೆರೆ ಪೊಲೀಸ್ ಇಲಾಖೆಯಲ್ಲಿ ಎರಡನೇ ಬಾರಿ ಗುಂಡಿನ ಸದ್ದು ಕೇಳಿದ್ದು, ತನಿಖೆ ನಂತರ ಸಂಪೂರ್ಣ ಉತ್ತರ ಸಿಗಲಿದೆ.
![](https://davangerevijaya.com/wp-content/uploads/2024/07/IMG-20240716-WA0138.jpg)