![](https://davangerevijaya.com/wp-content/uploads/2024/07/IMG-20240719-WA01231.jpg)
ದಾವಣಗೆರೆ : ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು ಹಾಗೂ ಶ್ರೀ ಎಸ್.ಎ. ರವೀಂದ್ರನಾಥ್ ಅಭಿಮಾನಿಗಳ ಬಳಗದ ವತಿಯಿಂದ ಇದೇ ನ.26 ರಂದು ಬೆಳಗ್ಗೆ 11 ಕ್ಕೆ ಶಿರಮಗೊಂಡನಹಳ್ಳಿಯಲ್ಲಿರುವ ಶ್ರೀಮತಿ ಸುಧಾ ವೀರೇಂದ್ರ ಪಾಟೀಲ್ ಕಲ್ಯಾಣ ಮಂಟಪದಲ್ಲಿ ಎಸ್ ಎ ರವೀಂದ್ರನಾಥ್ ಜನ್ಮದಿನದ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮುಖಂಡ ಕೆ.ಎಂ ಸುರೇಶ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ.26 ರಸಂಜೆ 5.45 ಕ್ಕೆ ನಗರದ ಹದಡಿ ರಸ್ತೆಯಲ್ಲಿರುವ ಶ್ರೀ ಸೋಮೇಶ್ವರ ವಿದ್ಯಾಲಯದಲ್ಲಿ ಮಾಜಿ ಸಚಿವರಾದ ಎಸ್.ಎ. ರವೀಂದ್ರನಾಥ್ರವರ ಜನ್ಮದಿನೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಮತ್ತು ದೇಶಪ್ರೇಮವನ್ನು ಪ್ರಚುರಪಡಿಸುವ ‘ವೀರಭಾರತಿ’ ನೃತ್ಯರೂಪಕ ಪ್ರದರ್ಶನ ಸಮಾರಂಭ ಹಮ್ಮಿಕೊಳ್ಳಲಾಗಿದೆ.
![](https://davangerevijaya.com/wp-content/uploads/2024/07/IMG-20240715-WA0352.jpg)
ಸಮಾರಂಭದ ಉದ್ಘಾಟನೆಯನ್ನು ಸಂಸದರಾದ ಡಾ. ಜಿ.ಎಂ. ಸಿದ್ದೇಶ್ವರ ನೆರವೇರಿಸಲಿದ್ದಾರೆ.ಇದೇ ವೇಳೆ ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ಅವರಿಗೆ ಗೌರವ ಸಮರ್ಪಣೆ ನಡೆಯಲಿದೆ.
ಡಾ.ಮಲ್ಲಿಕಾರ್ಜುನ ಬಾಳೆಕಾಯಿ ಅವರಿಂದ ಉಪನ್ಯಾಸ
ಸಮಾರಂಭದಲ್ಲಿ ಭಾರತೀಯ ಪರಂಪರೆ ಮತ್ತು ಯುವಜನಾಂಗ ವಿಷಯ ಕುರಿತು ಹುಬ್ಬಳ್ಳಿಯ ಸಾಮಾಜಿಕ ಕಾರ್ಯಕರ್ತ ಹಾಗೂ ವೈದ್ಯರಾದ ಡಾ.ಮಲ್ಲಿಕಾರ್ಜುನ ಬಾಳೆಕಾಯಿ ಅವರಿಂದ ಉಪನ್ಯಾಸ ಹಮ್ಮಿಕೊಳ್ಳಲಾಗಿದೆ.
ಯಾರು ಮುಖ್ಯ ಅತಿಥಿಗಳು
ಮುಖ್ಯ ಅತಿಥಿಗಳಾಗಿ ಶಾಸಕ ಬಿ.ಪಿ. ಹರೀಶ್, ಮಾಜಿ ಮುಖ್ಯ ಸಚೇತಕ ಡಾ. ಎ.ಹೆಚ್. ಶಿವಯೋಗಿಸ್ವಾಮಿ ಆಗಮಿಸಲಿದ್ದಾರೆ ಹಾಗೂ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಮಾಜಿ ಶಾಸಕರುಗಳಾದ ಬಸವರಾಜ ನಾಯ್ಕ, ಎಸ್.ವಿ. ರಾಮಚಂದ್ರ, ಪ್ರೊ. ಲಿಂಗಣ್ಣ, ಶ್ರೀ ಸೋಮೇಶ್ವರ ವಿದ್ಯಾಲಯದ ಅಧ್ಯಕ್ಷ ಹೆಚ್.ಆರ್. ಅಶೋಕರೆಡ್ಡಿ ಉಪಸ್ಥಿತರಿರುವರು. ಸಮಾರಂಭದಲ್ಲಿ ಹುಬ್ಬಳ್ಳಿಯ ಕಲಾಸುಜಯ ಸಂಸ್ಥೆಯಿಂದ ‘ವೀರಭಾರತಿ’ ನೃತ್ಯರೂಪಕ ಪ್ರದರ್ಶನ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
![](https://davangerevijaya.com/wp-content/uploads/2024/07/IMG-20240716-WA0138.jpg)