![](https://davangerevijaya.com/wp-content/uploads/2024/07/IMG-20240719-WA01231.jpg)
ಚಿತ್ರದುರ್ಗ: ಭದ್ರಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಕರೆ ನೀಡಿರುವ ಬಂದ್ ಗೆ ಚಿತ್ರದುರ್ಗದಲ್ಲಿ ವ್ಯಾಪಕ ಬೆಂಬಲ ಸಿಕ್ಕಿದೆ. ನಗರದ ಗಾಂಧಿ ವೃತ್ತದ ಬಳಿ ಅನೇಕ ಸಂಘಟನೆಗಳು ಭಾಗಿಯಾಗಿ ಬಂದ್ ಗೆ ಬೆಂಬಲ ಸೂಚಿದ್ದಾರೆ.
ನಗರದ ಬಿಡಿ ರಸ್ತೆಯಲ್ಲಿ ಇರುವ ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ವರ್ತಕರು ಬಂದ್ ಮಾಡಿದ್ದಾರೆ. ಶಾಲಾ ಕಾಲೇಜ್ ಗಳಿಗೆ ರಜೆ ನೀಡಲಾಗಿದೆ. ಬಂದ್ ಹಿನ್ನಲೆ ರಸ್ತೆಗಳು ಬಿಕೋ ಎನ್ನುತ್ತಿವೆ. ರೈತರು ಸರ್ಕಾರಗಳ ವಿರುದ್ಧ ಘೋಷಣೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
![](https://davangerevijaya.com/wp-content/uploads/2024/07/IMG-20240715-WA0352.jpg)
![](https://davangerevijaya.com/wp-content/uploads/2024/07/IMG-20240716-WA0138.jpg)