![](https://davangerevijaya.com/wp-content/uploads/2024/07/IMG-20240719-WA01231.jpg)
ದಾವಣಗೆರೆ : ದಾವಣಗೆರೆಯ ತಾಲೂಕಿನ ಓಬಜ್ಜಿಹಳ್ಳಿಯಲ್ಲಿ ಕೊಲೆ ನಡೆದಿದ್ದು, ಗ್ರಾಮದ ಜನರಿಗೆ ಭೀತಿ ಎದುರಾಗಿದೆ. ಬುಧವಾರ ರಾತ್ರಿ ಯುವಕನ ಕೊಲೆ ನಡೆದಿದ್ದು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ. ಸಂದೀಪ್ (೨೫ ) ವರ್ಷದ ಕೊಲೆಯಾದ ಯುವಕ, ಸಂದೀಪ್ ಹಲವು ಪ್ರಕರಣಗಳಲ್ಲಿ ಭಾಗಿ ಶಂಕೆ ವ್ಯಕ್ತವಾಗಿದೆ.
ಪಾರ್ಟಿ ಮಾಡಲು ಹೋಗಿದ್ದಾಗ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
![](https://davangerevijaya.com/wp-content/uploads/2024/07/IMG-20240715-WA0352.jpg)
ದಾವಣಗೆರೆ ಗ್ರಾಮಾಂತರ ಠಾಣೆ ಸಿಪಿಐ ಕಿರಣ್ ಕುಮಾರ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್ ಸ್ಥಳಕ್ಕೆ ಭೇಟಿ ನೀಡಿ ಆರೋಪಿಗಳ ಬಂಧನಕ್ಕೆ ತಂಡ ರಚಿಸಿದ್ದಾರೆ. ಈಗಾಗಲೇ ತನಿಖೆ ಮಾಡುತ್ತಿದ್ದೇನೆ, ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ದಾವಣಗೆರೆ ವಿಜಯಕ್ಜೆ ತಿಳಿಸಿದ್ದಾರೆ.
![](https://davangerevijaya.com/wp-content/uploads/2024/07/IMG-20240716-WA0138.jpg)