Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ದಾವಣಗೆರೆ : ಜಯನಗರದ ಸಾಯಿಬಾಬಾ ಮಂದಿರದಲ್ಲಿ ಅದ್ದೂರಿ ಗುರು ಪೂರ್ಣಿಮೆ . ಸಾಯಿ ದರ್ಶನಕ್ಕೆ ಬರಲಿದ್ದಾರೆ ಸಹಸ್ರಾರು ಜನ

8 July 2025

ಬಡಾವಣೆ ಪೊಲೀಸ್ ಠಾಣೆ ಪಿಎಸ್ಐ ಲಾಡ್ಜ್ ನಲ್ಲಿ ನೇಣಿಗೆ ಶರಣು, ಅಷ್ಟಕ್ಕೂ ಪಿಎಸ್ಐ ಲೈಫ್ ಹಿಂದೆ ಏನಿತ್ತು?..ನೇಣಿಗೆ ಶರಣಾಗುವ ಮೊದಲು ಆಧಾರ್ ನಂಬರ್ ಅಳಿಸಿದ್ದು ಯಾಕೆ?

7 July 2025

ಭದ್ರಾ ಡ್ಯಾಂ ಭರ್ತಿಯಾಗಲು ಇನ್ನೇಷ್ಟು ಅಡಿ ಬಾಕಿ ಇರಬಹುದು?…ಈ ತಿಂಗಳಿನಲ್ಲಿಯೇ ನೋಡುಗರಿಗೆ ಸಿಗಲಿದೆ ಜಲಾಶಯದ ಸೊಬಗು .‌‌‌..

5 July 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ಪ್ರಮುಖ ಸುದ್ದಿ»ನಿಯಮಿತ ತಪಾಸಣೆ ಹುಟ್ಟಿನಿಂದ ಬರಬಹುದಾದ ಅಂಗವಿಕಲತೆಯನ್ನುತಡೆಯಬಹುದು.
ಪ್ರಮುಖ ಸುದ್ದಿ

ನಿಯಮಿತ ತಪಾಸಣೆ ಹುಟ್ಟಿನಿಂದ ಬರಬಹುದಾದ ಅಂಗವಿಕಲತೆಯನ್ನುತಡೆಯಬಹುದು.

davangerevijaya.comBy davangerevijaya.com4 December 2024No Comments3 Mins Read
Facebook WhatsApp Twitter
Share
WhatsApp Facebook Twitter Telegram

ಸೂಕ್ತ ಸಮಯದಲ್ಲಿ ಚಿಕಿತ್ಸೆ, ಹುಟ್ಟಿನಿಂದ ಮಕ್ಕಳಿಗೆ ಬರಬಹುದಾದ ಅಂಗವಿಕಲತೆಯನ್ನು ತಡೆಯಬಹುದು ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು. ಕಾಕ್ಲಿಯರ್ ಇಂಪ್ಲಾಂಟ್ ಎಂಬ ಚಿಕಿತ್ಸೆಗೆ ಮೆಗ್ಗಾನ್ ನಲ್ಲಿ ಉಚಿತವಾಗಿ ಚಿಕಿತ್ಸೆ ಲಭ್ಯ.

ಶಿವಮೊಗ್ಗ :

ಗರ್ಭಧಾರಣೆ ಆದ ತಕ್ಷಣ ನಿಯಮಿತವಾಗಿ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವ ಮೂಲಕ ಹುಟ್ಟಿನಿಂದ ಮಕ್ಕಳಿಗೆ ಬರಬಹುದಾದ ಅಂಗವಿಕಲತೆಯನ್ನು ತಡೆಯಬಹುದು. ಆದ್ದರಿಂದ ಪ್ರತಿಯೊಬ್ಬ ತಾಯಿಯೂ ನಿರ್ಲಕ್ಷ ವಹಿಸದೇ ತಪಾಸಣೆ ಮಾಡಿಸಿಕೊಳ್ಳಬೇಕೆಂದು ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲೆಯಲ್ಲಿ ವಿಕಲಚೇತನರ ಶ್ರೇಯೋಭಿವೃದ್ದಿಗಾಗಿ ಶ್ರಮಿಸುತ್ತಿರುವ ವಿವಿಧ ಸ್ವಯಂ ಸೇವಾ ಸಂಸ್ಥೆಗಳು ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗರ್ಭ ಧರಿಸಿದ ಪ್ರತಿಯೊಬ್ಬ ತಾಯಂದಿರು ಕಡ್ಡಾಯವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ನಿರ್ಲಕ್ಷ್ಯ ಮಾಡಲೇಬಾರದು. ಹೀಗೆ ಮಾಡಿದಲ್ಲಿ ಮಕ್ಕಳಲ್ಲಿ ಹುಟ್ಟಿನಿಂದ ಸಂಭವಿಸಬಹುದಾದ ಕೆಲವು ರೀತಿಯ ವಿಕಲಾಂಗತೆಯನ್ನು ತಡೆಯಬಹುದು.

ನೀವು ವಿಕಲಚೇತನರಲ್ಲ. ಬದಲಾಗಿ ವಿಶೇಷಚೇತನರು. ಇತರಿರಿಗಿಂತ ವಿಶೇಷರು. ದೊಡ್ಡತನ ನಿಮ್ಮಲ್ಲಿದ್ದು, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಬೇಳೆಯಲು ನಿರ್ಧರಿಸಬೇಕು. ಪೋಷಕರು ಸಹ ಬೇರೆ ಮಕ್ಕಳೊಂದಿಗೆ ಇವರನ್ನು ಹೋಲಿಕೆ ಮಾಡದೇ ಧೈರ್ಯ,ಸ್ಥೆರ್ಯ ತುಂಬಬೇಕು. ವಿಕಲಚೇತನರ ಶ್ರೇಯೋಭಿವೃದ್ದಿಗಾಗಿ ಶ್ರಮಿಸುತ್ತಿರುವ ಸಂಘ ಸಂಸ್ಥೆಗಳು ಹಾಗೂ ಪೋಷಕರಿಗೆ ಈ ಸಂದರ್ಭದಲ್ಲಿ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು.

ವಿಧಾನ ಪರಿಷತ್ ಶಾಸಕರಾದ ಧನಂಜಯ ಸರ್ಜಿ ಮಾತನಾಡಿ, ಭಗವಂತನ ಉತ್ತಮ ಸೃಷ್ಟಿ ಮಾನವ ಆಗಿದ್ದು ಎಲ್ಲ ಅಂಗಾಂಗಗಳನ್ನು ಹೊಂದಿ ಏನೂ ಮಾಡದೇ ಸುಮ್ಮನೇ ಸಾಯುವವರು ನಿಜವಾದ ಅಂಗವಿಕಲರು. ಇಲ್ಲಿ ನೆರೆದಿರುವ ಎಲ್ಲ ವಿಕಲಚೇತನರು ವಿಶೇಷ ಚೇತನರು. ನಿಮ್ಮಲ್ಲಿ ಏನಾದರೂ ಸಾಧಿಸಬೇಕೆಂಬ ಮನಸ್ಸಿದೆ. ಹುಮ್ಮಸ್ಸಿದೆ. ಬಾಯಿದ್ದು ಮೂಗರು, ಕಣ್ಣಿದ್ದು ಕುರುಡರು ಹೀಗೆ ಎಲ್ಲ ಇದ್ದು ಇಲ್ಲದಂತಿರುವವರ ಮುಂದೆ ನೀವೇ ವಿಶೇಷರು. ವಿಕಲಚೇತನರಿಗೆ ಬೇಕಿರುವುದು ಅನುಕಂಪವಲ್ಲ. ಬೆನ್ನು ತಟ್ಟಿ ಪ್ರೋತ್ಸಾಹಿಸಬೇಕು. ಇದನ್ನು ನಾವು ನೀವು, ಸಮಾಜ ಮಾಡಬೇಕಿದೆ ಎಂದರು.

ಒಳ್ಳೊಳ್ಳೆ ಗುರಿ ಇಟ್ಟುಕೊಂಡವರು ದೊಡ್ಡದನ್ನು ಸಾಧಿಸಿದ್ದಾರೆ. ಕಾಲು ಕಳೆದುಕೊಂಡ ಹರುಣಿಮಾ ಸಿನ್ಹಾರವರು ನಾಲ್ಕು ದಿಕ್ಕಿನಿಂದಲೂ ಹಿಮಾಲಯ ಪರ್ವತವನ್ನು ಏರಿ ಸಾಧನೆ ಮಾಡಿದ್ದಾರೆ. ಪ್ಯಾರಿಸ್‌ನಲ್ಲಿ ನಡೆದ ಪ್ಯಾರಾ ಒಲಂಪಿಕ್ಸ್ನಲ್ಲಿ ವಿಶೇಷ ಚೇತನರು 29 ಪದಕ ಗೆದ್ದಿದ್ದಾರೆ. ಜಿಲ್ಲೆಂiÀ ಶೇಖರ್ ನಾಯ್ಕ್ ಸಹ ಉತ್ತಮ ಸಾಧನೆ ಮಾಡಿದ್ದಾರೆ. ವಿಶೇಷ ಚೇತನರಾದ ಪ್ರಜ್ವಲ್ ಪಾಟಿಲ್ ಮೊದಲ ಅಂಧ ಐಎಎಸ್ ಅಧಿಕಾರಿಯಾಗಿದ್ದಾರೆ, ಹೀಗೆ ಹಲವಾರು ವಿಶೇಷಚೇತನರು ವಿವಿಧ ವಲಯಗಳಲ್ಲಿ ಸಾಧನೆ ಮಾಡಿದ್ದಾರೆ. ಆದರೆ ಎಲ್ಲಾ ಸರಿ ಇದ್ದವರು ಕಂಫರ್ಟ್ ಝೋನ್‌ನಲ್ಲಿರುತ್ತಾರೆ ಎಂದ ಅವರು ವಿಶೇಷಚೇತನರ ಗುರಿಗಳು ಎತ್ತರವಾಗಿರಲಿ ಎಂದರು.

ಕಿವಿ ಸಮಸ್ಯೆಯೊಂದಕ್ಕೆ ಅಗತ್ಯವಿರುವ ಕಾಕ್ಲಿಯರ್ ಇಂಪ್ಲಾಂಟ್ ಎಂಬ ಚಿಕಿತ್ಸೆಗೆ ರೂ. 20 ಲಕ್ಷ ಬೇಕಾಗುತ್ತದೆ. ಆದರೆ ಸರ್ಕಾರದ ವತಿಯಿಂದ ಈಗ ಮೆಗ್ಗಾನ್ ಅಲ್ಲಿ ಉಚಿತವಾಗಿ ಈ ಚಿಕಿತ್ಸೆ ಲಭ್ಯವಿದೆ, ಇದೇ ರೀತಿ ಸರ್ಕಾರದಿಂದ ವಿಶೇಷ ಚೇತನರಿಗೆ ಸಾಧನೆ-ಸಲಕರಣೆಗಳನ್ನು ನೀಡಲಾಗುತ್ತಿದೆ ಎಂದರು.

ರಾಜ್ಯ ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಎಸ್.ರವಿಕುಮಾರ್ ಮಾತನಾಡಿ, ವಿಶೇಷ ಚೇತನರ ಪ್ರತಿಭೆ ವಿಶೇಷವಾಗಿವೆ. ನೀವು ನಿಜವಾದ ಸಾಧಕರು. ನಾವು ಅವರಿಗೆ ಸಹಕಾರಿಯಾಗಿ ಇರಬೇಕು. ಕೇವಲ ಸರ್ಕಾರದ ಸೌಲಭ್ಯಗಳು ಮಾತ್ರವಲ್ಲ, ನಮ್ಮ ಕೈಲಾದ ಸಹಾಯವನ್ನು ವಿಕಲಚೇತನರಿಗೆ ಮಾಡಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಮಾತನಾಡಿ, ವಿಕಲಚೇತನರಿಗೆ ದೇವರು ವಿಶೇಷ ಶಕ್ತಿ ನೀಡಿರುತ್ತಾನೆ. ಈ ಶಕ್ತಿಯನ್ನು ಬಳಸಿಕೊಂಡು ಎಲ್ಲ ರಂಗದಲ್ಲಿ ಮುನ್ನುಗ್ಗಬೇಕು. ವಿಶೇಷಚೇತನರಲ್ಲಿ ನಾಯಕತ್ವವನ್ನು ಮೂಡಿಸುವುದು ಸರ್ಕಾರದ ಉದ್ದೇಶವಾಗಿದ್ದು 2030 ಹೊತ್ತಿಗೆ ಇದನ್ನು ಸಾಧಿಸಲು ಯೋಜಿಸಿದೆ. ಪ್ಯಾರಿಸ್‌ನಲ್ಲಿ ನಡೆದ ಪ್ಯಾರಾ ಒಲಂಪಿಕ್‌ನಲ್ಲಿ ವಿಶೇಷಚೇತನರು 29 ಪದಕ ಗೆದ್ದು ನಮ್ಮ ದೇಶ 18 ನೇ ಸ್ಥಾನದಲ್ಲಿರುವಂತೆ ಮಾಡಿರುವುದು ನಿಜಕ್ಕೂ ಸಾಧನೆ. ಅವರನ್ನು ನಾವು ಆರ್ಥಿಕ, ಶೈಕ್ಷಣಿಕ ಹಾಗೂ ಔದ್ಯೋಗಿಕವಾಗಿ ಮುಂದೆ ತರಬೇಕು ಎಂದರು.

ವಿಕಲಚೇನತರು ಮತ್ತು ಕನ್ನಡಿಗರಾದ ಸುಹಾಸ್ ಯತಿರಾಜ್ ಉತ್ತರ ಪ್ರದೇಶದ ಜಿಲ್ಲಾಧಿಕಾರಿ ಆಗಿ ಕೆಲಸ ಮಾಡುತ್ತಿದ್ದಾರೆ. ಇವರು ಪ್ಯಾರಾ ಒಲಂಪಿಕ್‌ನಲ್ಲಿ ಭಾಗವಹಿಸಿ ಬೆಳ್ಳಿ ಪದಕ ಪಡೆದಿದ್ದಾರೆ. ತುಮಕೂರಿನವರಾದ ಅಂಧತ್ವ ಸಮಸ್ಯೆ ಇರುವ ಕೆಂಪಹೊನ್ನಯ್ಯ ಅವರು ಐಎಎಸ್ ಪಾಸ್ ಮಾಡಿ ಪಶ್ಚಿಮ ಬಂಗಾಳದಲ್ಲಿ ಅಧಿಕಾರಿಯಾಗಿದ್ದಾರೆ. ಹೀಗೆ ಅನೇಕ ವಿಶೇಷಚೇತನ ಸಾಧಕರು ನಮಗೆ ಮಾದರಿಯ ಆಗಿದ್ದಾರೆ ಎಂದರು.

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್ ಮಾತನಾಡಿ, ಯಾರು ನಾಡು ನುಡಿಗೆ ದ್ರೋಹ ಮಾಡುತ್ತಿದ್ದಾರೋ ಅವರೇ ನಿಜವಾದ ಅಂಗವಿಕಲರು. ಆದರೆ ನಿಜವಾದ ವಿಕಲಚೇತನರಲ್ಲಿ ವಿಶೇಷವಾದ ಶಕ್ತಿಯನ್ನು ಭಗವಂತ ನಿಡಿದ್ದು, ವಿಶೇಷವಾದದ್ದನ್ನು ಅವರು ಸಾಧಿಸಲು ನಾವು ಉತ್ತೇಜಿಸಬೇಕು ಎಂದರು.

ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ತಾಜುದ್ದೀನ್ ಖಾನ್ ಮಾತನಾಡಿ, ವಿಕಲಚೇತನರಿಗೆ ಅನುಕಂಪ ಬೇಡ, ಅವಕಾಶಗಳನ್ನು ನೀಡಬೇಕು. ನಿತ್ಯ ಅವರ ವಿರುದ್ದ ಒಂದಿಲ್ಲೊAದು ಶೋಷಣೆ, ದೌರ್ಜನ್ಯ ಆಗುತ್ತಿದ್ದು ಅವರ ರಕ್ಷಣೆ ನಮ್ನೆಲ್ಲರ ಜವಾಬ್ದಾರಿಯಾಗಿದೆ ಎಂದ ಅವರು ಮಕ್ಕಳು ತಮ್ಮ ಜೊತೆ ಯಾರಾದರೂ ಅನುಚಿತವಾಗಿ ವರ್ತಿಸಿದಲ್ಲಿ ಆ ವೇಳೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿಸಿಕೊಟ್ಟರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಬಿ.ಹೆಚ್.ಕೃಷ್ಣಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ ಸುಮಾರು 21,694 ವಿಷೇಶ ಚೇತನರು ಇದ್ದು ಇವರುಗಳಿಗೆ ತ್ರಿಚಕ್ರ ವಾಹನ ಮತ್ತು ವಿವಿಧ ಸೌಲಭ್ಯ, ಸವಲತ್ತುಗಳನ್ನು ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಇವರಿಗೆಂದೇ ಪ್ರತ್ಯೇಕ ಕಟ್ಟಡದ ವ್ಯವಸ್ಥೆ ಇಲ್ಲದ ಕಾರಣ ಮುಂದಿನ ದಿನಗಳಲ್ಲಿ ಒಂದು ಸುಸರ್ಜಿತ ಕಟ್ಟಡವನ್ನು ನಿರ್ಮಾಣ ಮಾಡಿಕೊಡಬೇಕೆಂದು ಜನಪ್ರತಿನಿಧಿಗಳಲ್ಲಿ ಮನವಿ ಮಾಡಿದರು.

ವಿಕಲಚೇತನರಿಗೆ ಏರ್ಪಡಿಸಲಾಗಿದ್ದ ವಿವಿಧ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಹಾಗೂ ವಿಕಲಚೇತನರ ಶ್ರೇಯೋಭಿವೃದ್ದಿದಾಗಿ ಶ್ರಮಿಸಿದ ಸಂಘ ಸಂಸ್ಥೆಗಳ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು.

ಜಿಲ್ಲಾ ವಿಕಲಚೇತನರ ಅಧಿಕಾರಿ ಸುವರ್ಣ ವಿ ನಾಯಕ್ ಸ್ವಾಗತಿಸಿದರು. ವಿಕಲಚೇತನರ ಜಿಲ್ಲಾ ಅಧ್ಯಕ್ಷೆ ಯಶೋಧಾ ದೇವಿ, ಮಹಾನಗರಪಾಲಿಕೆ ಅಧಿಕಾರಿ ಅನುಪಮ ಇತರೆ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

feauchre Top News
Share. WhatsApp Facebook Twitter Telegram
davangerevijaya.com
  • Website

Related Posts

ದಾವಣಗೆರೆ : ಜಯನಗರದ ಸಾಯಿಬಾಬಾ ಮಂದಿರದಲ್ಲಿ ಅದ್ದೂರಿ ಗುರು ಪೂರ್ಣಿಮೆ . ಸಾಯಿ ದರ್ಶನಕ್ಕೆ ಬರಲಿದ್ದಾರೆ ಸಹಸ್ರಾರು ಜನ

8 July 2025

ಇಡಿ ಬಲೆಯಿಂದ ಹೊರಬಂದ ಮಂಜುನಾಥ್ ಗೌಡ…ಎಂಭತ್ತೇರಡು ದಿನಗಳ ನಂತರ ಮರಳಿದ ಸಹಕಾರಿ ಧುರೀಣ

3 July 2025

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,656 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,333 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,595 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
ಪ್ರಮುಖ ಸುದ್ದಿ

ದಾವಣಗೆರೆ : ಜಯನಗರದ ಸಾಯಿಬಾಬಾ ಮಂದಿರದಲ್ಲಿ ಅದ್ದೂರಿ ಗುರು ಪೂರ್ಣಿಮೆ . ಸಾಯಿ ದರ್ಶನಕ್ಕೆ ಬರಲಿದ್ದಾರೆ ಸಹಸ್ರಾರು ಜನ

By davangerevijaya.com8 July 20250

ನಂದೀಶ್ ಭದ್ರಾವತಿ, ದಾವಣಗೆರೆ ಅತ್ತ ಶಿರಡಿಯಲ್ಲಿ ಗುರುಪೂರ್ಣಿಮಾ ಹಬ್ಬವು ಭಕ್ತಿ ಭಾವದಿಂದ ಆರಂಭವಾಗಲಿದ್ದು, ಸಾವಿರಾರು ಭಕ್ತರು ಸಾಯಿನಾಮವನ್ನು ಪಠಿಸುತ್ತ ಶಿರಡಿಯನ್ನು…

ಬಡಾವಣೆ ಪೊಲೀಸ್ ಠಾಣೆ ಪಿಎಸ್ಐ ಲಾಡ್ಜ್ ನಲ್ಲಿ ನೇಣಿಗೆ ಶರಣು, ಅಷ್ಟಕ್ಕೂ ಪಿಎಸ್ಐ ಲೈಫ್ ಹಿಂದೆ ಏನಿತ್ತು?..ನೇಣಿಗೆ ಶರಣಾಗುವ ಮೊದಲು ಆಧಾರ್ ನಂಬರ್ ಅಳಿಸಿದ್ದು ಯಾಕೆ?

7 July 2025

ಭದ್ರಾ ಡ್ಯಾಂ ಭರ್ತಿಯಾಗಲು ಇನ್ನೇಷ್ಟು ಅಡಿ ಬಾಕಿ ಇರಬಹುದು?…ಈ ತಿಂಗಳಿನಲ್ಲಿಯೇ ನೋಡುಗರಿಗೆ ಸಿಗಲಿದೆ ಜಲಾಶಯದ ಸೊಬಗು .‌‌‌..

5 July 2025

ಇಡಿ ಬಲೆಯಿಂದ ಹೊರಬಂದ ಮಂಜುನಾಥ್ ಗೌಡ…ಎಂಭತ್ತೇರಡು ದಿನಗಳ ನಂತರ ಮರಳಿದ ಸಹಕಾರಿ ಧುರೀಣ

3 July 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ದಾವಣಗೆರೆ : ಜಯನಗರದ ಸಾಯಿಬಾಬಾ ಮಂದಿರದಲ್ಲಿ ಅದ್ದೂರಿ ಗುರು ಪೂರ್ಣಿಮೆ . ಸಾಯಿ ದರ್ಶನಕ್ಕೆ ಬರಲಿದ್ದಾರೆ ಸಹಸ್ರಾರು ಜನ

8 July 2025

ಬಡಾವಣೆ ಪೊಲೀಸ್ ಠಾಣೆ ಪಿಎಸ್ಐ ಲಾಡ್ಜ್ ನಲ್ಲಿ ನೇಣಿಗೆ ಶರಣು, ಅಷ್ಟಕ್ಕೂ ಪಿಎಸ್ಐ ಲೈಫ್ ಹಿಂದೆ ಏನಿತ್ತು?..ನೇಣಿಗೆ ಶರಣಾಗುವ ಮೊದಲು ಆಧಾರ್ ನಂಬರ್ ಅಳಿಸಿದ್ದು ಯಾಕೆ?

7 July 2025

ಭದ್ರಾ ಡ್ಯಾಂ ಭರ್ತಿಯಾಗಲು ಇನ್ನೇಷ್ಟು ಅಡಿ ಬಾಕಿ ಇರಬಹುದು?…ಈ ತಿಂಗಳಿನಲ್ಲಿಯೇ ನೋಡುಗರಿಗೆ ಸಿಗಲಿದೆ ಜಲಾಶಯದ ಸೊಬಗು .‌‌‌..

5 July 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,656 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,333 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

Subscribe to Updates

Get the latest creative news from SmartMag about art & design.

Recent Posts
  • ದಾವಣಗೆರೆ : ಜಯನಗರದ ಸಾಯಿಬಾಬಾ ಮಂದಿರದಲ್ಲಿ ಅದ್ದೂರಿ ಗುರು ಪೂರ್ಣಿಮೆ . ಸಾಯಿ ದರ್ಶನಕ್ಕೆ ಬರಲಿದ್ದಾರೆ ಸಹಸ್ರಾರು ಜನ
  • ಬಡಾವಣೆ ಪೊಲೀಸ್ ಠಾಣೆ ಪಿಎಸ್ಐ ಲಾಡ್ಜ್ ನಲ್ಲಿ ನೇಣಿಗೆ ಶರಣು, ಅಷ್ಟಕ್ಕೂ ಪಿಎಸ್ಐ ಲೈಫ್ ಹಿಂದೆ ಏನಿತ್ತು?..ನೇಣಿಗೆ ಶರಣಾಗುವ ಮೊದಲು ಆಧಾರ್ ನಂಬರ್ ಅಳಿಸಿದ್ದು ಯಾಕೆ?
  • ಭದ್ರಾ ಡ್ಯಾಂ ಭರ್ತಿಯಾಗಲು ಇನ್ನೇಷ್ಟು ಅಡಿ ಬಾಕಿ ಇರಬಹುದು?…ಈ ತಿಂಗಳಿನಲ್ಲಿಯೇ ನೋಡುಗರಿಗೆ ಸಿಗಲಿದೆ ಜಲಾಶಯದ ಸೊಬಗು .‌‌‌..
  • ಇಡಿ ಬಲೆಯಿಂದ ಹೊರಬಂದ ಮಂಜುನಾಥ್ ಗೌಡ…ಎಂಭತ್ತೇರಡು ದಿನಗಳ ನಂತರ ಮರಳಿದ ಸಹಕಾರಿ ಧುರೀಣ
  • ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.