Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ಪ್ರಮುಖ ಸುದ್ದಿ»ಸಂತೆಬೆನ್ನೂರು ಸೂಪರ್ ಕಾಪ್ ಲಿಂಗನಗೌಡರಿಗೆ ಸಿಎಂ ಪದಕ
ಪ್ರಮುಖ ಸುದ್ದಿ

ಸಂತೆಬೆನ್ನೂರು ಸೂಪರ್ ಕಾಪ್ ಲಿಂಗನಗೌಡರಿಗೆ ಸಿಎಂ ಪದಕ

ಮೂವರ ಯುವಕರ ಕೊಲೆ ಪ್ರಕರಣ ಬೇಧಿಸಿದ ನಿಂಗನಗೌಡ
davangerevijaya.comBy davangerevijaya.com15 August 2024Updated:15 August 2024No Comments3 Mins Read
Facebook WhatsApp Twitter
Share
WhatsApp Facebook Twitter Telegram

ದಾವಣಗೆರೆ : ದಾವಣಗೆರೆ ಗ್ರಾಮಾಂತರ ಸೇರಿದಂತೆ ಹಲವಾರು ಠಾಣೆಗಳಲ್ಲಿ ಕಾರ್ಯನಿರ್ವಹಿಸಿದ ಸಂತೆಬೆನ್ನೂರು ಸೂಪರ್ ಕಾಪ್ ಲಿಂಗನಗೌಡರಿಗೆ ಸಿಎಂ ಪದಕ ದೊರಕಿದೆ.

ಸಂತೆಬೆನ್ನೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಾಲು ಇವರ ಪಾತ್ರ ಪ್ರಮುಖವಾಗಿದ್ದು, ಇಸ್ಪೀಟ್ ಅಡ್ಡೆಗಳು ಸೇರಿದಂತೆ ಸಾಕಷ್ಟು ಪ್ರಕರಣಗಳನ್ನು ಬೇದಿಸುವಲ್ಲಿ ಇವರ ಪಾತ್ರ ಅನನ್ಯ. ಲಿಂಗನಗೌಡ ನೆಗಳೂರು ಪ್ರಸ್ತುತ ಸಂತೆಬೆನ್ನೂರು ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರು
ವಿಜಯನಗರ ಜಿಲ್ಲೆ, ಹೂವಿನ ಹಡಗಲಿ ತಾಲೂಕು ಹೊಳಲು ಗ್ರಾಮದಲ್ಲಿ ಜುಲೈ 1, 1979ರಲ್ಲಿ ದಿ/ಬಸವನಗೌಡ ನೆಗಳೂರು ಮತ್ತು ಮಲ್ಲಮ್ಮ ನೆಗಳೂರು ದಂಪತಿಗಳಿಗೆ ನಾಲ್ಕನೆಯ ಮಗನಾಗಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಹೊಳಲು ಗ್ರಾಮದಲ್ಲಿ  ಮುಗಿಸಿ. ಪಿಯುಸಿ ವಿಜ್ಞಾನ ವಿಧ್ಯಾಭ್ಯಾಸವನ್ನು ಕೊಟ್ಟೂರಿನಲ್ಲಿ ಮುಗಿಸಿದ್ದು ನಂತರ. ಬಿ.ಎಸ್ಸಿ (ಕೃಷಿ) ಸ್ನಾತಕ ಪದವಿಯನ್ನು ರಾಯಚೂರಿನಲ್ಲಿ ಮುಗಿಸಿ ನಂತರ, ಎಂ.ಎಸ್ಸಿ ಸ್ನಾತಕೋತ್ತರ ಪದವಿಯನ್ನು ಧಾರವಾಡ ಕೃಷಿ ವಿಶ್ವವಿಧ್ಯಾಲಯದಲ್ಲಿ ಮುಗಿಸಿರುತ್ತಾರೆ. ಬಳಿಕ ಪೊಲೀಸ್ ಇಲಾಖೆಯಲಿ ಸೆ.20, 2003ರಲ್ಲಿ ಪೊಲೀಸ್ ಇಲಾಖೆಯಲ್ಲಿ ಪೊಲೀಸ್ ಉಪ ನಿರೀಕ್ಷಕರಾಗಿ ನೇರ ನೇಮಕಾತಿ ಹೊಂದಿ, ಕಲಬುರ್ಗಿ ಪೊಲೀಸ್ ತರಬೇತಿ ಕಾಲೇಜಿನಲ್ಲಿ ತರಬೇತಿ ಮುಗಿಸಿ ನಂತರ ಬೆಂಗಳೂರು ನಗರದ ಮೈಕೋ ಲೇಔಟ್ ಪೊಲೀಸ್ ಠಾಣೆ ಮತ್ತು ದಾವಣಗೆರೆ ಜಿಲ್ಲೆಯ ಬಸವನಗರ, ಮಲೆಬೆನ್ನೂರು, ಸಂತೇಬೆನ್ನೂರು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿರುತ್ತಾರೆ.

ನವೆಂಬರ್ 29, 2011 ರಲ್ಲಿ ಪೊಲೀಸ್ ನಿರೀಕ್ಷಕರಾಗಿ ಮುಂಬಡ್ತಿ ಹೊಂದಿ ನಂತರ ರಾಜ್ಯ ಗುಪ್ತ ವಿಭಾಗ, ಬಳ್ಳಾರಿ ಜಿಲ್ಲೆಯ ಕಂಪ್ಲಿ ವೃತ್ತ, ವಿಜಯನಗರ ಜಿಲ್ಲೆಯ ಹೊಸಪೇಟೆ ನಗರ ಪೊಲೀಸ್ ಠಾಣೆ, ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಗ್ರಾಮಾಂತರ ವೃತ್ತ ಮತ್ತು ರಾಣೇಬೆನ್ನೂರು ನಗರ ವೃತ್ತ ಹಾಗೂ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ, ಅತ್ಯುತ್ತಮ ಕರ್ತವ್ಯ ನಿರ್ವಹಿಸಿ. ಪ್ರಸ್ತುತ ದಾವಣಗೆರೆ ಜಿಲ್ಲೆಯ ಸಂತೇಬೆನ್ನೂರು ವೃತ್ತದಲ್ಲಿ ಪೊಲೀಸ್ ವೃತ್ತ ನಿರೀಕ್ಷಕರಾಗಿ ದಿ:03-08-2023 ರಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಪ್ರೋಆಕ್ಟಿವ್

ನಿಂಗನಗೌಡ ಮುಂಜಾಗ್ರತೆಯಾಗಿ (ಪ್ರೋ ಆಕ್ಟಿವ್) ಕಾರ್ಯನಿರ್ವಹಿಸುವ ಅಧಿಕಾರಿಯಾಗಿದ್ದು, ವಿಶೇಷವಾಗಿ ಅಪರಾಧ ಪತ್ತೆ ಕಾರ್ಯದಲ್ಲಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಹೆಚ್ಚಿನ ಮುತುವರ್ಜಿಯನ್ನು ವಹಿಸಿರುತ್ತಾರೆ. ಅನೇಕ ಕ್ಲಿಷ್ಟಕರ ಘೋರಾಪರಾಧ ಪ್ರಕರಣಗಳು ಸೇರಿದಂತೆ ಅನೇಕ ಅಪರಾಧ ಪ್ರಕರಣಗಳ ಆರೋಪಿಗಳನ್ನು ವೈಜ್ಞಾನಿಕ ಮತ್ತು ತಾಂತ್ರಿಕ ವಿಧಾನಗಳನ್ನು ಬಳಸಿ, ಚಾಣಾಕ್ಷತನದಿಂದ ಪತ್ತೆ ಮಾಡಿ ಮೇಲಾಧಿಕಾರಿಗಳಿಂದ ಪ್ರಶಂಸನೆಯನ್ನು ಹಾಗೂ ಬಹುಮಾನಗಳನ್ನು ಪಡೆದುಕೊಂಡಿರುತ್ತಾರೆ. ಅಲ್ಲದೇ ಲಿಂಗನಗೌಡ ನೆಗಳೂರು, ಪೊಲೀಸ್ ನಿರೀಕ್ಷಕ ರವರು ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಕಾಲದಲ್ಲಿ ಹಲವಾರು ಪ್ರಶಂಸನೀಯ ಕಾರ್ಯಗಳನ್ನು ನಿರ್ವಹಿಸಿದ್ದಾರೆ.

ಕ್ಲೀಷ್ಠಕರ ಕೇಸ್ ಭೇದಿಸಿದ ಲಿಂಗನಗೌಡ

2023 ನೇ ಸಾಲಿನಲ್ಲಿ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸಿದ ಅವಧಿಯಲ್ಲಿ ಆನಗೋಡಿನಲ್ಲಿ ಮೂವರು ಯುವಕರು ಸಂಶಯಾಸ್ಪದವಾಗಿ ಮೃತಪಟ್ಟಿರುತ್ತಾರೆ. ನಂತರ ಪ್ರಕರಣ ದಾಖಲಿಸಿಕೊಂಡ ಲಿಂಗನಗೌಡ ಪ್ರಕರಣದ ಬೆನ್ನೆತ್ತಿ ಹೋದಾಗ ಉತ್ತರಪ್ರದೇಶದ ಕಂಟೇನರ್ ಲಾರಿ ಚಾಲಕ ಈ ಯುವಕರ ಮೇಲೆ ಲಾರಿಹರಿಸಿ ಕೊಲೆ ಮಾಡಿರುತ್ತಾನೆ.
ನಂತರ ಮುಂದುವರೆದು ಈ ಚಾಲಕನನ್ನು ದಾವಣಗೆರೆಯಿಂದ ಹೋಗಿ ಚೆನ್ನೈ ನಲ್ಲಿ ಬಂಧಿಸುತ್ತಾರೆ. ಬಳಿಕ ಪ್ರಕರಣದ ಬಗ್ಗೆ ವಿವರಣೆ ನೀಡಿದ ಲಾರಿ ಚಾಲಕ ನಾನು ಲಾರಿ ಡ್ರೈವಿಂಗ್ ಮಾಡಿ ಸುಸ್ತಾಗಿದ್ದೇ. ವಿಶ್ರಾಂತಿಗೆಂದು ಆನಗೋಡಿನ ಬಳಿ ಇಳಿದಾಗ ಆರು ಜನ ಯುವಕರು ಬಂದು ಡಕಾಯಿತಿ ಮಾಡಿದ್ದು, ನನ್ನ ಬಳಿ ಇದ್ದ ಎಲ್ಲವಸ್ತುಗಳನ್ನು ತೆಗೆದುಕೊಂಡುಹೋಗಿದ್ದರು. ಆದ್ದರಿಂದ ನಾನು ಮೂರು ಯುವಕರ ಮೆಲೆ ಲಾರಿ ಹತ್ತಿಸಿದೆ ಎಂದು ಹೇಳಿಕೆ ನೀಡುತ್ತಾನೆ. ಈತ ಇನ್ನು ಜೈಲಿನಲ್ಲಿದ್ದಾನೆ. ಉತ್ತರ ಪ್ರದೇಶ ಈತನನ್ನು ಪತ್ತೆ ಮಾಡಲು ಎನ್.ಹೆಚ್-48 ಪುಣಿ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ದಾವಣಗೆರೆಯಿಂದ ಚೆನ್ನೈ ವರೆಗಿನ ಎಲ್ಲಾ ಟೋಲ್ ಗಳಲ್ಲಿ ಆರೋಪಿತನ ವಾಹನ ಹಾದು ಹೋಗಿರುವ ಬಗ್ಗೆ ಪರಿಶೀಲನೆ ಮಾಡಿ ಹಾಗೂ ಆರೋಪಿಯ ಸಿಡಿಆರ್ ಹಾಗೂ ಟವರ್ ಡಂಪ್ ಮೂಲಕ ಮಾಹಿತಿಯನ್ನು ಪಡೆದುಕೊಂಡು ವೈಜ್ಞಾನಿಕ ತಂತ್ರಜ್ಞಾನದ ಮೂಲಕ ಪರಿಶೀಲನೆ ಮಾಡಿ ಚೆನೈನಿಂದ ಕರೆತರಲಾಗಿತ್ತು.

ವಿಧಾನ ಸಭೆ ಎಲೆಕ್ಷನ್ ಅಹಿತಕರ ಘಟನೆ ನಡೆಯದಂತೆ ಕರ್ತವ್ಯ

ಲಿಂಗನಗೌಡ 2023 ನೇ ಸಾಲಿನ ವಿಧಾನ ಸಭಾ ಚುನಾವಣೆಯಲ್ಲಿ ದಾವಣಗೆರೆ ಉತ್ತರ ವಿಧಾನ ಸಭಾ ಕ್ಷೇತ್ರಕ್ಕೆ ಪೊಲೀಸ್ ನೋಡಲ್ ಅಧೀಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದು, ಉತ್ತಮ ಕರ್ತವ್ಯ ನಿರ್ವಹಿಸಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮತ್ತು ಶಾಂತ ರೀತಿ ಮತದಾನವಾಗುವಂತೆ ನೋಡಿಕೊಂಡಿರುತ್ತಾರೆ.

2023 ನೇ ಸಾಲಿನಲ್ಲಿ ಸಂತೇಬೆನ್ನೂರು ವೃತ್ತದಲ್ಲಿ ಪೊಲೀಸ್ ವೃತ್ತ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅವಧಿಯಲ್ಲಿ ಅನೇಕ ಸ್ವತ್ತು ಪ್ರಕರಣಗಳು, ಪೋಕ್ಸೋಪ್ರಕರಣಗಳು ಮತ್ತು ಅನೇಕ ಸುಲಿಗೆ ಮತ್ತು ಕೊಲೆ ಪ್ರಕರಣಗಳಲ್ಲಿ ಆರೋಪಿತರನ್ನು ಪತ್ತೆ ಮಾಡಿ ಮಾಲನ್ನು ವಶಪಡಿಸಿಕೊಂಡಿರುತ್ತಾರೆ. ಮತ್ತು ಸಂತೇಬೆನ್ನೂರು ಠಾಣಾ ಗುನ್ನೆ ನಂ- 137/2023 ಕಲಂ-457.380 ಐಪಿಸಿ ಪ್ರಕರಣದಲ್ಲಿ ಬಸವಾಪಟ್ಟಣ, ಚನ್ನಗಿರಿ ಹಾಗೂ ನ್ಯಾಮತಿ ಪೊಲೀಸ್ ಠಾಣೆಯ ಒಟ್ಟು 07 ಪ್ರಕರಣಗಳಲ್ಲಿ ಮಾಲು ಮತ್ತು ಆರೋಪಿತರನ್ನು ಪತ್ತೆ ಮಾಡಿ ಕಳವಾದ 6.5 ಲಕ್ಷ ರೂ ಮೌಲ್ಯದ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಂಡಿದ್ದರು.

2023 ನೇ ಸಾಲಿನಲ್ಲಿ ಸಂತೆಬೆನ್ನೂರಿನಲ್ಲಿ ದಾಖಲಾಗಿದ್ದ ಅಡಕೆ ಪ್ರಕರಣ ಭೇದಿಸಿ ಮಾಲು ಮತ್ತು ಆರೋಪಿತರನ್ನು ದಸ್ತಗಿರಿ ಮಾಡಿ ಸುಮಾರು 05 ಕ್ವಿಂಟಾಲ್ ಅಡಿಕೆ ಹಾಗೂ ಗೂಡ್ಸ್ ಆಟೋ ಒಟ್ಟು ಮೌಲ್ಯ ನಾಲ್ಕುವರೆ ಲಕ್ಷ ರೂ ಗಳನ್ನು ವಶಪಡಿಸಿಕೊಂಡಿದ್ದರು. ಒಟ್ಟಾರೆ ನಿಂಗನಗೌಡ ನೆಗಳೂರು. ಪೊಲೀಸ್ ನಿರೀಕ್ಷಕರ ರವರು ಅತ್ಯುತ್ತಮ ಅಧಿಕಾರಿಯಾಗಿದ್ದು, ತಮ್ಮ ಸೇವಾ ಅವಧಿಯಲ್ಲಿ ಹೆಚ್ಚಿನ ಕಾರ್ಯ ತತ್ಪರತೆ, ನಿಷ್ಠೆ ಮತ್ತು ಕರ್ತವ್ಯದಲ್ಲಿ ದಕ್ಷತೆಯನ್ನು ಪ್ರದರ್ಶಿಸುತ್ತಾ ಬಂದಿದ್ದಾರೆ. ಇನ್ನು ಸ್ಪಷ್ಠಕರ ಸನ್ನಿವೇಶಗಳನ್ನು ನಿಭಾಯಿಸುವ ಜಾಣೆ ಹೊಂದಿರುತ್ತಾರೆ. ಇವರ ಸೇವಾ ದಾಖಲೆಗಳನ್ನು ಪರಿಶೀಲಿಸಲಾಗಿ ಸಾರ್ವಜನಿಕರ ಜೊತೆ ಉತ್ತಮ ಬಾಂಧವ್ಯ ಹೊಂದಿರುವ ಅಧಿಕಾರಿಯಾಗಿದ್ದು, ಉತ್ತಮ ನಾಯಕತ್ವದ ಗುಣ ಉಳ್ಳವರಾಗಿರುತ್ತಾರೆ. ಅಪರಾಧ ಪತ್ತೆ ಹಚ್ಚುವಲ್ಲಿ ಮತ್ತು ನಿಯಂತ್ರಿಸುವಲ್ಲಿ ಉತ್ತಮಕರ್ತವ್ಯ ನಿರ್ವಹಿಸುವ ಇವರಿಗೆ ಹಿರಿಯಪೊಲೀಸ್ ಅಧಿಕಾರಿಗಳಿಂದ ಶ್ಲಾಘನೆ ಮತ್ತು ಬಹುಮಾನಗಳು ದೊರೆತಿವೆ. ಆದ್ದರಿಂದ ಈ ಎಲ್ಲಅಂಶಗಳನ್ನು ಪರಿಗಣಿಸಿ ಶ್ರೀ, ನಿಂಗನಗೌಡ ನೆಗಳೂರು ಪೊಲೀಸ್ ನಿರೀಕ್ಷಕರವರಿಗೆ 2023ನೇ ಸಾಲಿನಲ್ಲಿ ಸಿಎಂ ಪದಕ ನೀಡಿದ್ದಾರೆ.

Featured Santhebennur Super Cop Lingana Gowda CM Medal Top News
Share. WhatsApp Facebook Twitter Telegram
davangerevijaya.com
  • Website

Related Posts

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,319 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,081 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,586 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
ಪ್ರಮುಖ ಸುದ್ದಿ

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

By davangerevijaya.com12 June 20250

*ದಾವಣಗೆರೆಯಲ್ಲಿ ಅಂಚೆ  ವಿಭಾಗೀಯ  ಕಚೇರಿ ಬರಲು ಇವರು ಕಾರಣ * ದಾವಣಗೆರೆ ಅಂಚೆ ಇಲಾಖೆ ಪ್ರಥಮ ಅಧೀಕ್ಷಕ *ನಿಷ್ಠೆ, ಪ್ರಾಮಾಣಿಕತೆಯಿಂದ…

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025

ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

10 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,319 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,081 Views

Subscribe to Updates

Get the latest creative news from SmartMag about art & design.

Recent Posts
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
  • ಆರ್ ಸಿಬಿ ವಿಜಯೋತ್ಸವ ವೇಳೆ 11 ಜನರ ಸಾವು : ಸಿಬಿಐಗೆ ವಹಿಸಲು ಮಾಜಿ ಸಚಿವ ಒತ್ತಾಯ
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.