Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ರಾಜಕೀಯ ಸುದ್ದಿ»ಶಾಮನೂರು, ಖಂಡ್ರೆ, ಯಡಿಯೂರಪ್ಪ ಕುಟುಂಬ ನಾಟಕ ಕಂಪನಿಯಂತೆ, ಹೀಂಗತ ಹೇಳಿದ್ರು ಈ ಶಾಸಕರು
ರಾಜಕೀಯ ಸುದ್ದಿ

ಶಾಮನೂರು, ಖಂಡ್ರೆ, ಯಡಿಯೂರಪ್ಪ ಕುಟುಂಬ ನಾಟಕ ಕಂಪನಿಯಂತೆ, ಹೀಂಗತ ಹೇಳಿದ್ರು ಈ ಶಾಸಕರು

ಲೂಟಿ ಮಾಡಲು ನಿರಂತರವಾಗಿ ಅಧಿಕಾರ ಅನುಭವಿಸಿದರೆ ಉಳಿದ ಲಿಂಗಾಯತರು ಗಂಟೆ ಹೊಡಿಬೇಕಾ’
davangerevijaya.comBy davangerevijaya.com13 March 2024Updated:13 March 2024No Comments2 Mins Read
Facebook WhatsApp Twitter
Share
WhatsApp Facebook Twitter Telegram

ಕಲಬುರಗಿ: ಶಾಸಕ ಬಸವನಗೌಡ ಯತ್ನಾಳ್ ಶಾಸಕ ಶಾಮನೂರು ಶಿವಶಂಕರಪ್ಪ, ಈಶ್ವರ ಖಂಡ್ರೆ,  ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಮತ್ತೆ ಹರಿಹಾಯ್ದಿದ್ದಾರೆ. 

ಪಂಚಮಸಾಲಿ ಮಹಾಸಭಾದ ಜಿಲ್ಲಾ ನಗರದಲ್ಲಿ  ಮಂಗಳವಾರ ಆಯೋಜಿಸಿದ್ದ ಪಂಚಮಸಾಲಿ ದೀಕ್ಷ ಸಮಾಜಕ್ಕೆ 2ಎ ಹಾಗೂ ಲಿಂಗಾಯತ ಉಪ ಪಂಗಡಗಳಿಗೆ ಒಬಿಸಿ ಹಕ್ಕೋತ್ತಾಯ ಸಮಾವೇಶದಲ್ಲಿ ಅವರು ಮಾತನಾಡಿದರು.

ಈ ಮೂವರ ಕುಟುಂಬಗಳು ನಾಟಕ ಕಂಪನಿಗಳಿದ್ದಂತೆ. ತಮ್ಮ ಮಕ್ಕಳಿಗಾಗಿ ಟಿಕೆಟ್ ಕೊಡಿಸಲು ಓಡಾಡುತ್ತಿದ್ದಾರೆ. ಅಲ್ಲದೆ ಲೂಟಿ ಮಾಡಲು ನಿರಂತರವಾಗಿ ಅಧಿಕಾರ ಅನುಭವಿಸಿದರೆ ಉಳಿದ ಲಿಂಗಾಯತರು ಗಂಟಿ ಹೊಡಿಬೇಕಾ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಪ್ರಶ್ನಿಸಿದ್ದಾರೆ.

ಈ ಮೂರು ಕುಟುಂಬಗಳು ಇಷ್ಟು ದಿನ ವೀರಶೈವ ಲಿಂಗಾಯತರನ್ನು ತಮ್ಮ ಸ್ವಾರ್ಥ ರಾಜಕಾರಣಕ್ಕಾಗಿ ಬಳಸಿಕೊಂಡವೇ ಹೊರತು ಸಮಾಜಕ್ಕಾಗಿ ಏನು ಮಾಡಲಿಲ್ಲ. 

ಮೂರ್ನಾಲ್ಕು ಸ್ವಾಮೀಜಿಗಳು ಹಣ, ಕಾರಿಗಾಗಿ ಈ ಮೂರು ಕುಟುಂಬದವರ ಬೆನ್ನು ಬಿದ್ದಿದ್ದಾರೆ. ನಿತ್ಯ ಬೆಳಿಗ್ಗೆ ಲಿಂಗ ಪೂಜೆ ಮಾಡುವುದು ಬಿಟ್ಟು, ಇವರ ಮಕ್ಕಳ ಪರವಾಗಿ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಮತ್ತು ಅಮಿತ್ ಶಾ ಅವರಿಗೆ ಫೋನ್‌ ಮಾಡುತ್ತಿದ್ದಾರೆ. ಇಂತಹ ಸ್ವಾಮೀಜಿಗಳಿಂದ ಸಮಾಜಕ್ಕೆ ಶೂನ್ಯ ಕೊಡುಗೆ’ ಎಂದು ಹರಿಹಾಯ್ದರು.

ಬೇಡವಾದವರನ್ನು ಸೋಲಿಸುವ ದಂಧೆ

ಅಪ್ಪ–ಮಗ ಬಿ.ಎಸ್‌.ಯಡಿಯೂರಪ್ಪ ಹಾಗೂ ಬಿ.ವೈ. ವಿಜಯೇಂದ್ರಗೆ ಪಕ್ಷದಲ್ಲಿ ತಮಗೆ ಬೇಡವಾದ ಅಭ್ಯರ್ಥಿಗಳನ್ನು ಸೋಲಿಸುವುದೇ ದಂಧೆಯಾಗಿದೆ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಿಎಸ್‌ವೈ ಕುಟುಂಬದ ವಿರುದ್ಧ ಹರಿಹಾಯ್ದರು‌.  ‘ನನ್ನನ್ನು ಸೋಲಿಸಲು ವಿಜಯೇಂದ್ರ ಹಣ ಕಳುಹಿಸಿದ್ದ. ಯಡಿಯೂರಪ್ಪ ಕುಟುಂಬದಲ್ಲಿ ಒಬ್ಬ ಮಗ ಕ್ಯಾಬಿನೆಟ್ ಮಂತ್ರಿಯಾಗ ಬೇಕು, ಇನ್ನೊಬ್ಬ ಮುಖ್ಯಮಂತ್ರಿಯಾಗಬೇಕು. ಇದು ಯಡಿಯೂರಪ್ಪ ಅವರ ಕೊನೆ ಕನಸು’ ಎಂದು ಹರಿಹಾಯ್ದರು.ಯಡಿಯೂರಪ್ಪ ಯಾವೊಬ್ಬ ಲಿಂಗಾಯತರನ್ನೂ ಉದ್ಧಾರ ಮಾಡಿಲ್ಲ. ಅವರು ಲಿಂಗಾಯತರೇ ಅಲ್ಲ. ಅವರ ಹಿಂದೆ ಕೆಲವು ಸ್ವಾಮೀಜಿಗಳಿದ್ದಾರೆ. ಹಣ ನೀಡುತ್ತಾನೆ ಅಂತ ಸ್ವಾಮೀಜಿಗಳು ಆತನಿಗೆ ತಥಾಸ್ತು ಎನ್ನುತ್ತಾರೆ’ ಎಂದು ಏಕವಚನದಲ್ಲಿ ಟೀಕಿಸಿದ್ದಾರೆ.

ಒಬಿಸಿ ಘೋಷಿಸದೆ ಇದ್ದರೆ ಚುನಾವಣೆಯಲ್ಲಿ ತಕ್ಕ ಪಾಠ

ಲೋಕಸಭಾ ಚುನಾವಣಾ ನೀತಿ ಸಂಹಿತಿ ಜಾರಿಯಾಗುವ 24 ಗಂಟೆಗೂ ಮುನ್ನವೇ ಪಂಚಮಸಾಲಿ ದೀಕ್ಷ ಸಮಾಜಕ್ಕೆ 2ಎ ಮೀಸಲಾತಿ ಹಾಗೂ ಲಿಂಗಾಯತ ಉಪ ಪಂಗಡಗಳಿಗೆ ಒಬಿಸಿ ಘೋಷಿಸದೆ ಇದ್ದರೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತೇವೆ’ ಎಂದು ಇದೇ ಸಂದರ್ಭದಲ್ಲಿ ಎಚ್ಚರಿಸಿದ್ದಾರೆ.‌

ಕೂಡಲಸಂಗಮ ಪಂಚಮಸಾಲಿ ಮಹಾಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮಾತನಾಡಿದರು. ಸುಲಫಲ ಮಠದ ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ, ಶಾಸಕರಾದ ಎಂ.ವೈ. ಪಾಟೀಲ, ಅಲ್ಲಮಪ್ರಭು ಪಾಟೀಲ ಉಪಸ್ಥಿತರಿದ್ದರು.

Featured Kalabarugi MLA Basavanagowda Yatnal Shamanur Shivashankarappa Top News Yeddyurappa ಕಲಬರುಗಿ ಯಡಿಯೂರಪ್ಪ ಶಾಮನೂರು ಶಿವಶಂಕರಪ್ಪ ಶಾಸಕ ಬಸವನಗೌಡ ಯತ್ನಾಳ್
Share. WhatsApp Facebook Twitter Telegram
davangerevijaya.com
  • Website

Related Posts

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025

ಎಸ್ಸೆಸ್ಸೆಲ್ಸಿ : ಕ್ಯಾನ್ಸರ್‌ ಗೆದ್ದ ಯುವತಿ ಸರಕಾರಿ ಶಾಲೆಗೆ ಫಸ್ಟ್, ಹಾಗಾದ್ರೆ ಆ ಶಾಲೆ ಯಾವುದು?

3 May 2025

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಪೊಲೀಸರಿಗೆ ಇಲ್ಲಿ ರಕ್ಷಣೆ ಇಲ್ಲ : ಮಾಜಿ ಸಚಿವ ರೇಣುಕಾಚಾರ್ಯ

2 May 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,320 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,082 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,586 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
ಪ್ರಮುಖ ಸುದ್ದಿ

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

By davangerevijaya.com12 June 20250

*ದಾವಣಗೆರೆಯಲ್ಲಿ ಅಂಚೆ  ವಿಭಾಗೀಯ  ಕಚೇರಿ ಬರಲು ಇವರು ಕಾರಣ * ದಾವಣಗೆರೆ ಅಂಚೆ ಇಲಾಖೆ ಪ್ರಥಮ ಅಧೀಕ್ಷಕ *ನಿಷ್ಠೆ, ಪ್ರಾಮಾಣಿಕತೆಯಿಂದ…

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025

ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

10 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,320 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,082 Views

Subscribe to Updates

Get the latest creative news from SmartMag about art & design.

Recent Posts
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
  • ಆರ್ ಸಿಬಿ ವಿಜಯೋತ್ಸವ ವೇಳೆ 11 ಜನರ ಸಾವು : ಸಿಬಿಐಗೆ ವಹಿಸಲು ಮಾಜಿ ಸಚಿವ ಒತ್ತಾಯ
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.