Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ಪ್ರಮುಖ ಸುದ್ದಿ»ಶಿಮುಲ್ ಚುನಾವಣೆ, ಒಟ್ಟು 62 ನಾಮಪತ್ರ ಸಲ್ಲಿಕೆ, ಚುನಾವಣೆ ಕಂಪ್ಲಿಟ್ ಡೀಟೆಲ್ಸ್ , ಅಖಾಡದಲ್ಲಿ ಇರೋರ್ಯಾರು?
ಪ್ರಮುಖ ಸುದ್ದಿ

ಶಿಮುಲ್ ಚುನಾವಣೆ, ಒಟ್ಟು 62 ನಾಮಪತ್ರ ಸಲ್ಲಿಕೆ, ಚುನಾವಣೆ ಕಂಪ್ಲಿಟ್ ಡೀಟೆಲ್ಸ್ , ಅಖಾಡದಲ್ಲಿ ಇರೋರ್ಯಾರು?

davangerevijaya.comBy davangerevijaya.com7 August 2024No Comments2 Mins Read
Facebook WhatsApp Twitter
Share
WhatsApp Facebook Twitter Telegram

ದಾವಣಗೆರೆ : ಸಹಕಾರಿ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿರುವ ಶಿಮುಲ್ ಚುನಾವಣೆಯ ಸೆಮಿಫೈನಲ್ ಮುಗಿದಿದ್ದು, ಒಟ್ಟು 62 ಜನ ನಾಮಪತ್ರಸಲ್ಲಿಸಿದ್ದಾರೆ.

ಆ.14 ಕ್ಕೆ ಫೈನಲ್ ಚುನಾವಣೆ ಇದ್ದು,  ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ (ಶಿಮುಲ್) ಆಡಳಿತ ಮಂಡಳಿ ನಿರ್ದೇ ಶಕರ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಜುಲೈ 31ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದ್ದು, ಮಂಗಳವಾರ ಕೊನೆ ದಿನವಾಗಿತ್ತು. ಶಿವಮೊಗ್ಗ ವಿಭಾಗದಲ್ಲಿ 10, ಸಾಗರ ವಿಭಾಗದಲ್ಲಿ11, ದಾವಣಗೆರೆವಿಭಾಗ 22, ಚಿತ್ರದುರ್ಗ ವಿಭಾಗ 19 ನಾಮಪತ್ರಗಳು ಸಲ್ಲಿಕೆಯಾಗಿವೆ.

ಕೊನೆ ದಿನ ಏಳು ನಾಮಪತ್ರ ಕೊನೆದಿನವಾದ ಮಂಗಳವಾರ ಏಳು ಜನ ನಾಮಪತ್ರ ಸಲ್ಲಿಸಿದರು. ಚಿತ್ರದುರ್ಗ ವಿಭಾಗದಲ್ಲಿ ಹಿರಿಯೂರು ತಾಲೂಕು ಬಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘದ ಬಿ.ಪಿ.ಯಶವಂತರಾಜು, ಸಾಗರ ವಿಭಾಗದಲ್ಲಿ ಸೊರಬ ತಾಲೂಕು ಹಿರೇಮಾಗಡಿ ಹಾಲು ಉತ್ಪಾದಕರ ಸಹಕಾರ ಸಂಘದ ಗಂಗಾಧರಪ್ಪ,

ದಾವಣಗೆರೆ ವಿಭಾಗದಲ್ಲಿ ನ್ಯಾಮತಿ ತಾಲೂಕು ಸೋಗಿಲು ಹಾಲು ಉತ್ಪಾದ ಕರ ಸಹಕಾರ ಸಂಘದ ಮಲ್ಲೇಶಪ್ಪ, ಚನ್ನಗಿರಿ ತಾಲೂಕು ಕಂಚುಗಾರನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಎಚ್.ಕೆ.ಬಸಪ್ಪ, ಹೊನ್ನಾಳಿ ತಾಲೂಕು ಕಂದೂರು ಹಾಲು ಉತ್ಪಾದಕರ ಸಹಕಾರ ಸಂಘದ ಅನಿಲ್‌ ಕುಮಾರ್, ಹರಿಹರ ತಾಲೂಕು ಯಲವಟ್ಟಿಹಾಲು ಉತ್ಪಾದಕರ ಸಹಕಾರ ಸಂಘದ ಡಿ.ಸಿ.ಶಾಂತವೀರಪ್ಪ ಅವರು ನಾಮಪತ್ರ ಸಲ್ಲಿಸಿದರು.

ಒಂದಕ್ಕಿಂತ ಹೆಚ್ಚು ನಾಮಪತ್ರ

ಈ ಬಾರಿ ಚುನಾವಣೆಗೆ ಹಲವರು ಒಂದಕ್ಕಿಂತಲು ಹೆಚ್ಚು ನಾಮಪತ್ರ ಸಲ್ಲಿಸಿದ್ದಾರೆ. ಆ.7ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಆ ಬಳಿಕ ನಾಮಪತ್ರ ಸಲ್ಲಿಸಿದವರ ನಿಖರ ಸಂಖ್ಯೆ ಗೊತ್ತಾಗಲಿದೆ. ನಾಮಪತ್ರ ಹಿಂಪಡೆಯಲು ಆ.8 ಕೊನೆಯ ದಿನ. ಅಂದು ಸಂಜೆ ಶಿಮುಲ್‌ ಚುನಾವಣೆ ಕಣ ಅಂತಿಮಗೊಳ್ಳಲಿದೆ. 

ಅಖಾಡದಲ್ಲಿ ಘಟಾನುಘಟಿಗಳು

ಶಿಮುಲ್ ಚುನಾವಣೆ ಅಖಾಡದಲ್ಲಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆ‌ರ್.ಎಂ.ಮಂಜುನಾಥ ಗೌಡ, ಜಿಪಂ ಮಾಜಿ ಸದಸ್ಯ ಕೆ.ಕುಮಾರ್, ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಬಿ.ಡಿ.ಭೂಕಾಂತ್ ಉಮೇದುವಾರಿಕೆ ಸಲ್ಲಿಸಿದ್ದಾರೆ.  .

ಈ ಬಾರಿ ಡಿಸಿಸಿ ಬ್ಯಾಂಕ್‌ನಲ್ಲಿ ನಡೆದ ರಾಜಕೀಯ ಮೇಲಾಟ, ಹೊಸದಾಗಿ ಕಾಣಿಸಿಕೊಂಡ ಮುಖಗಳಂತೆ ಶಿಮುಲ್‌ನಲ್ಲೂ ಅನೇಕ ಅಚ್ಚರಿ ನಿರೀಕ್ಷೆಯಿದೆ. ಮೊದಲ ಬಾರಿಗೆ ಶಿಮುಲ್‌ ಪ್ರವೇಶಿಸುವ ಹವಣಿಕೆಯಲ್ಲಿರುವ ಪ್ರಭಾವಿಗಳು, ಈಗಾಗಲೇ ಶಿಮುಲ್‌ನಲ್ಲಿ ಬೇರು ಬಿಟ್ಟಿರುವ ಹಳಬರ ನಡುವೆ ಹಣಾಹಣಿ ಇದೆ.

ಒಕ್ಕೂಟದಲ್ಲಿ ವಿಭಾಗಗಳು

14 ನಿರ್ದೇಶಕ ಬಲದ ಒಕ್ಕೂಟದಲ್ಲಿ ಶಿವಮೊಗ್ಗ ಮತ್ತು ಸಾಗರ ವಿಭಾಗದಿಂದ ತಲಾ ಮೂವರು, ದಾವಣಗೆರೆ ಮತ್ತು ಚಿತ್ರದುರ್ಗ ವಿಭಾಗಗಳಿಂದ ತಲಾ ನಾಲ್ವರು ನಿರ್ದೇಶಕರನ್ನು ಆಯ್ಕೆ ಮಾಡಲಾಗುತ್ತದೆ. ಸಂಘಗಳ ಸಂಖ್ಯೆಗೆ ಅನುಗುಣವಾಗಿ ಒಕ್ಕೂಟವನ್ನು ನಾಲ್ಕು ವಿಭಾಗಗಳಾಗಿ ವಿಂಗಡಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ ವಿಭಾಗಕ್ಕೆ ತೀರ್ಥಹಳ್ಳಿ, ಭದ್ರಾವತಿ, ಶಿವಮೊಗ್ಗ ತಾಲೂಕು ಸೇರಿವೆ. ಸಾಗರ ವಿಭಾಗಕ್ಕೆ ಸೊರಬ, ಸಾಗರ, ಹೊಸನಗರ, ಶಿಕಾರಿಪುರ ತಾಲೂಕು ಸೇರಿವೆ. ದಾವಣಗೆರೆ ವಿಭಾಗಕ್ಕೆ ಹರಿಹರ, ದಾವಣಗೆರೆ, ಹೊನ್ನಾಳಿ, ನ್ಯಾಮತಿ, ಚನ್ನಗಿರಿ, ಜಗಳೂರು ತಾಲೂಕುಗಳು ಮತ್ತು ಚಿತ್ರದುರ್ಗ ವಿಭಾಗಕ್ಕೆ ಹೊಳಲ್ಕೆರೆ, ಚಿತ್ರದುರ್ಗ, ಹೊಸದುರ್ಗ, ಹಿರಿಯೂರು, ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲ್ಲೂಕುಗಳು ಸೇರಿವೆ. 

ಮತದಾನ ಹೇಗೆ

ಮತದಾನದ ಹಕ್ಕು ಪಡೆದುಕೊಂಡ ಹಾಲು ಉತ್ಪಾದಕರ ಸಹಕಾರ ಸಂಘಗಳ ಆಡಳಿತ ಮಂಡಳಿಯು ತಮ್ಮ ಸಂಘದ ಒಬ್ಬ ಪ್ರತಿನಿಧಿಯನ್ನು ಮತದಾರನನ್ನಾಗಿ ಆಯ್ಕೆ ಮಾಡುತ್ತವೆ. ಮತದಾರರು ತಮ್ಮ ವಿಭಾಗದಲ್ಲಿ ಸ್ಪರ್ಧಿಸಿದವರಲ್ಲಿ ಒಬ್ಬರನ್ನು ಮತದಾನ ಮಾಡುವ ಮೂಲಕ ಆಯ್ಕೆ ಮಾಡಿಕೊಳ್ಳಬಹುದು. ಜಯಶಾಲಿ ಎಂದು ಘೋಷಿಸುವಾಗ ಪ್ರತಿ ತಾಲೂಕಿನಿಂದ ಒಬ್ಬರನ್ನು ಮಾತ್ರ ಆಯ್ಕೆ ಮಾಡಲಾಗುತ್ತದೆ.

ಮತದಾರರ ತಲುಪಲು ಪೈಪೋಟಿ

ಸಹಕಾರ ಕ್ಷೇತ್ರವು ಪಕ್ಷಾತೀತವಾದರೂ ಇಲ್ಲಿಪಕ್ಷ ಬೆಂಬಲಿತ ಮುಖಂಡರು ತಂಡ ಕಟ್ಟಿಕೊಂಡು ಪ್ರಚಾರಕ್ಕೆ ಇಳಿದಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಪಕ್ಷಗಳ ಬೆಂಬಲಿತರ ಗುಂಪು ಇದ್ದರೆ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಪಕ್ಷಾತೀತವಾಗಿ ತಂಡ ಕಟ್ಟಿಕೊಳ್ಳಲಾಗಿದೆ. ಕೆಲವರು ತಂಡ ಸೇರಿಕೊಳ್ಳದೆ ಸ್ವತಂತ್ರವಾಗಿ ಸ್ಪರ್ಧೆ ಬಯಸಿದ್ದಾರೆ. ಮಾಜಿ ಅಧ್ಯಕ್ಷರು, ಹಾಲಿ ಮಾಜಿ ಉಪಾಧ್ಯಕ್ಷರು, ಹಾಲಿ ಮತ್ತು ಮಾಜಿ ನಿರ್ದೇಶಕರೊಂದಿಗೆ ಹೊಸ ಮುಖಗಳೂ ಸ್ಪರ್ಧೆ ಬಯಸಿ ಪ್ರಚಾರ ನಡೆಸುತ್ತಿದ್ದಾರೆ.

ಚುನಾವಣೆಗೆ ಕೆಲವೇ ದಿನ ಉಳಿದಿರುವುದರಿಂದ ಎಲ್ಲ ಮತದಾರರನ್ನು ತಲುಪಲು ಬಹಳಷ್ಟು ಸಮಯ ಬೇಕು. ಮತದಾರರು ಹಾಲು ಉತ್ಪಾದಕರ ರೈತರಾಗಿರುವುದರಿಂದ ಅವರನ್ನು ಹುಡುಕಿಕೊಂಡು ತೋಟ, ಹೊಲ, ಗದ್ದೆಗಳಿಗೆ ಹೋಗಬೇಕಾದ ಸ್ಥಿತಿಯೂ ಇದೆ.  

 

Election Complete Details In Davangere Vijaya Featured Shimul election Top News Total 62 Nomination Papers Submitted
Share. WhatsApp Facebook Twitter Telegram
davangerevijaya.com
  • Website

Related Posts

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,321 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,083 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,586 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
ಪ್ರಮುಖ ಸುದ್ದಿ

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

By davangerevijaya.com12 June 20250

*ದಾವಣಗೆರೆಯಲ್ಲಿ ಅಂಚೆ  ವಿಭಾಗೀಯ  ಕಚೇರಿ ಬರಲು ಇವರು ಕಾರಣ * ದಾವಣಗೆರೆ ಅಂಚೆ ಇಲಾಖೆ ಪ್ರಥಮ ಅಧೀಕ್ಷಕ *ನಿಷ್ಠೆ, ಪ್ರಾಮಾಣಿಕತೆಯಿಂದ…

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025

ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

10 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,321 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,083 Views

Subscribe to Updates

Get the latest creative news from SmartMag about art & design.

Recent Posts
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
  • ಆರ್ ಸಿಬಿ ವಿಜಯೋತ್ಸವ ವೇಳೆ 11 ಜನರ ಸಾವು : ಸಿಬಿಐಗೆ ವಹಿಸಲು ಮಾಜಿ ಸಚಿವ ಒತ್ತಾಯ
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.