Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 2025

ಪರಂಪರೆ,ಸಂಸ್ಕೃತಿ ಎತ್ತಿಹಿಡಿಯುವ ಕೆಲಸ ಗ್ರಾಮೀಣಭಾಗದ ಜನರು ಮಾಡುತ್ತಿದ್ದಾರೆ; ಡಾ.ಪ್ರಭಾ ಮಲ್ಲಿಕಾರ್ಜುನ್

5 May 2025

ಭದ್ರಾವತಿ ಕಾಗದ ನಗರ ಶಾಲೆ ತೆರೆಯಲು ಮಧುಸೂದನ್ ಹಚ್ಚಿದ್ರು ಹೋರಾಟದ ಕಿಡಿ

4 May 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ರಾಜಕೀಯ ಸುದ್ದಿ»ದಾವಣಗೆರೆಯಲ್ಲಿ ವಿಷ ಹಾಕಿ ಸಿದ್ದೇಶಪ್ಪನ ತೆಗೆಯಬೇಕು ಅಂತಾರೆ…ಸಂಸದರು ಹೀಗೆ ಹೇಳಿದ್ದಾಕೇ?
ರಾಜಕೀಯ ಸುದ್ದಿ

ದಾವಣಗೆರೆಯಲ್ಲಿ ವಿಷ ಹಾಕಿ ಸಿದ್ದೇಶಪ್ಪನ ತೆಗೆಯಬೇಕು ಅಂತಾರೆ…ಸಂಸದರು ಹೀಗೆ ಹೇಳಿದ್ದಾಕೇ?

ನಾನು ಎಲ್ಲೇ ಹೋದರೂ ಎಚ್ಚರಿಕೆಯಿಂದ ಇರುತ್ತೇನೆ. ಯಾರು ಏನೇ ಕೊಟ್ಟರೂ ತಿನ್ನುವುದಿಲ್ಲ
davangerevijaya.comBy davangerevijaya.com14 January 2024No Comments2 Mins Read
Facebook WhatsApp Twitter
Share
WhatsApp Facebook Twitter Telegram

ದಾವಣಗೆರೆ: ದಾವಣಗೆರೆಯಲ್ಲಿ ಸಿದ್ದೇಶಪ್ಪ ಬೆಳೆಯಬಾರದು, ಸಿದ್ದೇಶಪ್ಪನನ್ನು ತೆಗೆಯಬೇಕು ಅಂತಾ ಹಲವರು ಕಾಯುತ್ತಿದ್ದಾರೆ. ಆದ್ದರಿಂದ ನನ್ನ ಕಾಲು ಕಡಿಯಬೇಕು ಅಂತಾರೆ. ಪಾಯಿಸನ್ ಹಾಕಬೇಕು ಅಂತಾರೆ. ಹಾಗಾಗಿ ಬಹಳ ಹುಷಾರಾಗಿದ್ದೇನೆ ಎಂದು ಹಾಲಿ ಸಂಸದ ಜಿ.ಎಂ.ಸಿದ್ದೇಶ್ವರ ಹೇಳಿದರು.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನನ್ನನ್ನು ಇಲ್ಲಿಂದ ತೆಗೆಯಬೇಕು ಎಂದು ಕೆಲವರು ಕಾಯುತ್ತಿದ್ದಾರೆ.ಕಾಲು ತೆಗೆಯಬೇಕು, ವಿಷ ಹಾಕಿ ಸಾಯಿಸಬೇಕು ಎಂದು ಹೊಂಚು ಹಾಕುತ್ತಿದ್ದಾರೆ. ಆದ್ದರಿಂದ ನಾನು ಎಲ್ಲೇ ಹೋದರೂ ಎಚ್ಚರಿಕೆಯಿಂದ ಇರುತ್ತೇನೆ. ಯಾರು ಏನೇ ಕೊಟ್ಟರೂ ತಿನ್ನುವುದಿಲ್ಲ.

ದಾವಣಗೆರೆಯಿಂದ ಸಿದ್ದೇಶಪ್ಪನನ್ನು ತೆಗೆಯಬೇಕು ಎಂದು ಹೊಂಚು ಹಾಕಿದ್ದಾರೆ.ನನ್ನ ಸ್ನೇಹ ಬಳಗದಲ್ಲೇ ಈ ರೀತಿಯಾಗಿ ಹೊಂಚು ಹಾಕುತ್ತಿದ್ದಾರೆ. ರಾಜಕೀಯ ದ್ವೇಷ ಬಿಟ್ಟರೇ ಎಂದ ಸಂಸದ ಜಿ.ಎಂ ಸಿದ್ದೇಶ್ವರ್ ಈ ರೀತಿ ಹೇಳಿದರು.

ಲೋಕಸಭೆ ಟಿಕೆಟ್ ತಪ್ಪಿಸಬೇಕೆಂದಿದ್ದಾರೆ‌

ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ತಪ್ಪಿಸಬೇಕು ಎಂದುಕೊಂಡಿದ್ದಾರೆ. ನನಗೇನೂ ಜೀವ ಬೆದರಿಕೆ ಇಲ್ಲ.. ಜೀವ ಭಯದಲ್ಲಿದೆ ಅಷ್ಟೇ. ಇದು ರಾಜಕೀಯ ದ್ವೇಷ. ನಾನು ಯಾರಿಗೂ ಜಗ್ಗಲ್ಲ, ಬಗ್ಗಲ್ಲ. ಬಿಜೆಪಿ ಟಿಕೆಟ್ ಘೋಷಿಸುವವರೆಗೂ ನಾನೇ ಅಭ್ಯರ್ಥಿ ಎಂದುಕೊಂಡಿದ್ದೇನೆ. ಹೈಕಮಾಂಡ್ ಯಾರಿಗೆ ಟಿಕೆಟ್ ಕೊಡುತ್ತೆ ಎಂಬುದು ಚುನಾವಣಾ ಸಮಯದಲ್ಲಿ ಗೊತ್ತಾಗುತ್ತದೆ. ಅಲ್ಲಿಯವರೆಗೆ ನಾನೇ ಅಭ್ಯರ್ಥಿ ಎಂದುಕೊಂಡಿದ್ದೇನೆ ಎಂದು ಹೇಳಿದರು.

ಏಳು ಬಾರಿ ಪಕ್ಷ ಟಿಕೆಟ್ ನೀಡಿದೆ

ಬಿಜೆಪಿ ಹೈಕಮಾಂಡ್ ನಮ್ಮ ಕುಟುಂಬಕ್ಕೆ ಏಳು ಬಾರಿ  ಟಿಕೆಟ್ ನೀಡಿದೆ. ಹಾಗಾಗಿ, ಬೇರೆ ಪಕ್ಷಕ್ಕೆ ಹೋಗುವ ಚಿಂತನೆ ಮಾಡಿಲ್ಲ.ನನ್ನ ಉಸಿರು ಇರುವವರೆಗೂ ಬಿಜೆಪಿಯಲ್ಲೇ ಇರುತ್ತೇನೆ. ಒಂದು ವೇಳೆ ಬಿಜೆಪಿ ಬೇರೆಯವರೆಗೆ ದಾವಣಗೆರೆ ಲೋಕಸಭೆ ಕ್ಷೇತ್ರದ ಅಭ್ಯರ್ಥಿಯಾಗಿ ಟಿಕೆಟ್ ನೀಡಿದರೆ ತನು, ಮನ, ಧನದೊಂದಿಗೆ ಸಂಪೂರ್ಣ ಸಹಕಾರ ನೀಡುತ್ತೇನೆ. ರಾಜಕೀಯ ದ್ವೇಷದಿಂದ ನನ್ನ  ಮೇಲೆ ಆರೋಪ ಮಾಡುತ್ತಿದ್ದಾರೆ. ಯಾರೂ ನಂಬಲು ಹೋಗಬೇಡಿ. ನಾನು ಸೇವೆ ಮಾಡಲು ಅಷ್ಟೇ ಬಂದಿರುವುದು ಎಂದು ಸಂಸದರು ಹೇಳಿದರು.

ಸ್ವಚ್ಛತಾ ಕಾರ್ಯ :  ದಾವಣಗೆರೆ ಹೊಂಡದ ಸರ್ಕಲ್  ಚಂದ್ರಮೌಳೇಶ್ವರ ದೇವಾಲಯದಲ್ಲಿ ದಾವಣಗೆರೆ ಜಿಲ್ಲಾ ಬಿಜೆಪಿ ಘಟಕದಿಂದ ಸ್ವಚ್ಛತಾ ಕಾರ್ಯ ಕೈಗೊಳ್ಳಾಗಿತ್ತು. ದಾವಣಗೆರೆ ಸಂಸದ ಜಿ ಎಂ ಸಿದ್ದೇಶ್ವರ್ ನೇತೃತ್ವದಲ್ಲಿ ಹಮ್ಮಿಕೊಂಡ ಸ್ವಚ್ಛಾತಾ ಕಾರ್ಯದಲ್ಲಿ ಎಂ ಎಲ್ ಸಿ ಎನ್ ರವಿಕುಮಾರ್  ಸೇರಿದಂತೆ ಜಿಲ್ಲಾ ಮುಖಂಡರು ಪಾಲ್ಗೊಂಡಿದ್ದರು. ಜೈ ಶ್ರೀರಾಮ್ ಘೋಷಣೆಯೊಂದಿಗೆ ಸತತ ಒಂದು ಗಂಟೆಗಳ ಕಾಲ‌ ಸಂಸದರು ಬಿಜೆಪಿ ಮುಖಂಡರು ಶ್ರಮದಾನ ಮಾಡಿದರು. ಪ್ರಧಾನಿ ಮೋದಿಯವರೇ ಸ್ವಚ್ಛತಾ ಅಭಿಯಾನಕ್ಕೆ ಪ್ರೇರಣೆಯ ಯಾಗಿದ್ದ ಅವರ ಒಂದು ಕರೆಗೆ ಸಾವಿರಾರು ದೇವಾಲಯಗಳು ಇಂದು ಸ್ಚಚ್ಛಗೊಂಡಿವೆ. ಆಯೋಧ್ಯೆಯಲ್ಲಿ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಗೊಳ್ಳುತ್ತಿದ್ದು ನಿಜಕ್ಕು ನಾಡಿನಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ತಿಳಿಸಿದರು.

ಹವಾಲ ಹಣ ಆರೋಪ ಸುಳ್ಳು

ಅಡಕೆಗೆ ಸಂಬಂಧಿಸಿದಂತೆ ಒಂದೂವರೆ ಕೋಟಿ ರೂಪಾಯಿ ಕಳ್ಳತನ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ಈಗ ಕೇಳಿ ಬರುತ್ತಿರುವ ಆಪಾದನೆ ಸುಳ್ಳು. ಲೋಕಸಭೆ ಚುನಾವಣೆ ಬರುತ್ತಿರುವುದರಿಂದ ನನ್ನ ಮೇಲೆ ಆರೋಪ ಮಾಡಲಾಗುತ್ತಿದೆ. ಇದೆಲ್ಲಾ ಎಲೆಕ್ಷನ್ ಸ್ಟಂಟ್. ಡ್ರೈವರ್ ಯಾರು ಎಂಬುದೇ ಗೊತ್ತಿಲ್ಲ, ಮುಖವನ್ನೂ ಸಹ ನೋಡಿಲ್ಲ. ನಾನು ಮತ್ತೆ ಬಿಜೆಪಿಯಿಂದ ಸ್ಪರ್ಧಿಸಿ ಲೋಕಸಭೆ ಸದಸ್ಯನಾಗುತ್ತೇನೆ. ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂಬ ದೃಷ್ಟಿಯಿಂದ ನನ್ನನ್ನು ಸೋಲಿಸಲೇಬೇಕು ಎಂಬ ರಾಜಕೀಯ ದ್ವೇಷದಿಂದ ನನ್ನೊಬ್ಬನ ಮೇಲೆ ಆರೋಪ ಮಾಡಲಾಗುತ್ತಿದೆ ಅಷ್ಟೇ ಎಂದರು.

davanagere Featured MP GM Siddeshwar poisoned to death Top News ದಾವಣಗೆರೆ ವಿಷ ಹಾಕಿ ಕೊಲೆ ಸಂಸದ ಜಿಎಂ ಸಿದ್ದೇಶ್ವರ
Share. WhatsApp Facebook Twitter Telegram
davangerevijaya.com
  • Website

Related Posts

ಎಸ್ಸೆಸ್ಸೆಲ್ಸಿ : ಕ್ಯಾನ್ಸರ್‌ ಗೆದ್ದ ಯುವತಿ ಸರಕಾರಿ ಶಾಲೆಗೆ ಫಸ್ಟ್, ಹಾಗಾದ್ರೆ ಆ ಶಾಲೆ ಯಾವುದು?

3 May 2025

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಪೊಲೀಸರಿಗೆ ಇಲ್ಲಿ ರಕ್ಷಣೆ ಇಲ್ಲ : ಮಾಜಿ ಸಚಿವ ರೇಣುಕಾಚಾರ್ಯ

2 May 2025

ಜನಗಣತಿಯ ಜೊತೆಗೆ ಜಾತಿಗಣತಿಯನ್ನು ಮಾಡಲು ನಿರ್ಧರಿಸಿರುವುದು ಸ್ವಾಗತಾರ್ಹ : ಬಿಜೆಪಿ ನಾಯಕ

2 May 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,613 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,082 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,057 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,569 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
ಪ್ರಮುಖ ಸುದ್ದಿ

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

By davangerevijaya.com5 May 20250

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್ ‌‌‌‌…. ದಾವಣಗೆರೆ : ದಾವಣಗೆರೆ ರೌಡಿ ಶೀಟರ್ ಸಂತೋಷ್ ಆಲಿಯಾಸ್ ಕಣುಮ…

ಪರಂಪರೆ,ಸಂಸ್ಕೃತಿ ಎತ್ತಿಹಿಡಿಯುವ ಕೆಲಸ ಗ್ರಾಮೀಣಭಾಗದ ಜನರು ಮಾಡುತ್ತಿದ್ದಾರೆ; ಡಾ.ಪ್ರಭಾ ಮಲ್ಲಿಕಾರ್ಜುನ್

5 May 2025

ಭದ್ರಾವತಿ ಕಾಗದ ನಗರ ಶಾಲೆ ತೆರೆಯಲು ಮಧುಸೂದನ್ ಹಚ್ಚಿದ್ರು ಹೋರಾಟದ ಕಿಡಿ

4 May 2025

ಎಸ್ಸೆಸ್ಸೆಲ್ಸಿ : ಕ್ಯಾನ್ಸರ್‌ ಗೆದ್ದ ಯುವತಿ ಸರಕಾರಿ ಶಾಲೆಗೆ ಫಸ್ಟ್, ಹಾಗಾದ್ರೆ ಆ ಶಾಲೆ ಯಾವುದು?

3 May 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 2025

ಪರಂಪರೆ,ಸಂಸ್ಕೃತಿ ಎತ್ತಿಹಿಡಿಯುವ ಕೆಲಸ ಗ್ರಾಮೀಣಭಾಗದ ಜನರು ಮಾಡುತ್ತಿದ್ದಾರೆ; ಡಾ.ಪ್ರಭಾ ಮಲ್ಲಿಕಾರ್ಜುನ್

5 May 2025

ಭದ್ರಾವತಿ ಕಾಗದ ನಗರ ಶಾಲೆ ತೆರೆಯಲು ಮಧುಸೂದನ್ ಹಚ್ಚಿದ್ರು ಹೋರಾಟದ ಕಿಡಿ

4 May 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,613 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,082 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,057 Views

Subscribe to Updates

Get the latest creative news from SmartMag about art & design.

Recent Posts
  • ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್
  • ಪರಂಪರೆ,ಸಂಸ್ಕೃತಿ ಎತ್ತಿಹಿಡಿಯುವ ಕೆಲಸ ಗ್ರಾಮೀಣಭಾಗದ ಜನರು ಮಾಡುತ್ತಿದ್ದಾರೆ; ಡಾ.ಪ್ರಭಾ ಮಲ್ಲಿಕಾರ್ಜುನ್
  • ಭದ್ರಾವತಿ ಕಾಗದ ನಗರ ಶಾಲೆ ತೆರೆಯಲು ಮಧುಸೂದನ್ ಹಚ್ಚಿದ್ರು ಹೋರಾಟದ ಕಿಡಿ
  • ಎಸ್ಸೆಸ್ಸೆಲ್ಸಿ : ಕ್ಯಾನ್ಸರ್‌ ಗೆದ್ದ ಯುವತಿ ಸರಕಾರಿ ಶಾಲೆಗೆ ಫಸ್ಟ್, ಹಾಗಾದ್ರೆ ಆ ಶಾಲೆ ಯಾವುದು?
  • ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಪೊಲೀಸರಿಗೆ ಇಲ್ಲಿ ರಕ್ಷಣೆ ಇಲ್ಲ : ಮಾಜಿ ಸಚಿವ ರೇಣುಕಾಚಾರ್ಯ
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.