Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ದಾವಣಗೆರೆ ವಿಶೇಷ»ತೀವ್ರ ಕುತೂಹಲ ಕೆರಳಿಸಿದ್ದ ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಯಾರು ಗೆದ್ದರು?
ದಾವಣಗೆರೆ ವಿಶೇಷ

ತೀವ್ರ ಕುತೂಹಲ ಕೆರಳಿಸಿದ್ದ ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಯಾರು ಗೆದ್ದರು?

ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಯಶಸ್ಸು ಕಂಡಿದ್ದ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಲ್ಲೂ ಉತ್ತಮ ಫಲಿತಾಂಶ
davangerevijaya.comBy davangerevijaya.com7 June 2024Updated:7 June 2024No Comments2 Mins Read
Facebook WhatsApp Twitter
Share
WhatsApp Facebook Twitter Telegram

ಶಿವಮೊಗ್ಗ : ತೀವ್ರ ಕುತೂಹಲ ಕೆರಳಿಸಿದ್ದ ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ನಿರಾಯಾಸವಾಗಿ ಗೆಲುವು ಸಾಧಿಸಿದರೆ, ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್. ಬೋಜೇಗೌಡ ಪುನರಾಯ್ಕೆ ಆಗಿದ್ದಾರೆ.

ಚುನಾವಣೆಯಲ್ಲಿ ನೈರುತ್ಯ ಪದವಿಧರರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಆಯನೂರು ಮಂಜುನಾಥ್ ಗೆ ಬಾರಿ ಮುಖಭಂಗವಾಗಿದೆ. ಬಿಜೆಪಿ ಅಭ್ಯರ್ಥಿ ಧನಂಜಯ ಸರ್ಜಿ ವಿರುದ್ಧ ಮಂಜುನಾಥ್ ಹೀನಾಯವಾಗಿ ಸೋಲು ಕಂಡಿದ್ದಾರೆ.

ಪದವಿಧರ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡಬಹುದು ಎಂಬ ನಿರೀಕ್ಷೆಯಿತ್ತು. ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಹಾಗೂ ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ನಿರೀಕ್ಷಿತ ಪೈಪೋಟಿ ನೀಡುವಲ್ಲಿ ವಿಫಲರಾಗಿದ್ದಾರೆ. ಬಿಜೆಪಿ ಕಾರ್ಯಕರ್ತರ ಸಂಘಟಿತ ಪ್ರಯತ್ನ ಇಲ್ಲಿ ಫಲ ನೀಡಿದೆ. ಜತೆಗೆ ಜೆಡಿಎಸ್ ಜತೆಗಿನ ಮೈತ್ರಿಕೂಡ ಸರ್ಜಿ ಗೆಲುವಿಗೆ ಮತ್ತಷ್ಟು ಬಲ ನೀಡಿದೆ.

ಮಧ್ಯಾಹ್ನ 2 ಗಂಟೆ ಸುಮಾರಿಗೆ ಆರಂಭವಾದ ಮತ ಎಣಿಕೆ ಪ್ರಾರಂಭದಿAದಲೂ ಡಾ. ಧನಂಜಯ ಸರ್ಜಿ ನಿರಂತರವಾಗಿ ಮುನ್ನಡೆ ಸಾಧಿಸಿದರು. ಮೊದಲ ಸುತ್ತಿನಿಂದಲೂ ಮುನ್ನಡೆ ಕಾಯ್ದುಕೊಂಡ ಬಿಜೆಪಿ ಅಭ್ಯರ್ಥಿ ಎದುರಾಳಿ ಅಭ್ಯರ್ಥಿಗಳನ್ನು ಸನಿಹಕ್ಕೂ ಸುಳಿಯಲು ಅವಕಾಶ ನೀಡಲಿಲ್ಲ. 14 ಸಾವಿರ ಮತಗಳ ಎಣಿಕೆಯ ಮೊದಲ ಸುತ್ತಿನಲ್ಲಿ ಸರ್ಜಿ ಅವರಿಗೆ ಸಿಕ್ಕಿದ್ದು 6,714 ಮತಗಳು. ಎರಡನೇ ಸುತ್ತಿನ 14 ಸಾವಿರ ಮತಗಳ ಪೈಕಿ 7,363 ಮತಗಳು ಬಿಜೆಪಿ ಅಭ್ಯರ್ಥಿಗೆ ಲಭಿಸಿದವು. 4ನೇ ಸುತ್ತಿನ ಎಣಿಕೆ ಮುಕ್ತಾಯವಾದಾಗ ಡಾ. ಸರ್ಜಿ 19,700 ಮತಗಳ ಮುನ್ನಡೆ ಸಾಧಿಸಿದ್ದರು.

ಬಿಜೆಪಿ ಟಿಕೆಟ್ ದೊರೆಯದ ಕಾರಣ ಪಕ್ಷೇತರರಾಗಿ ಸ್ಪರ್ಧಿಸಿದ್ದ ಉಡುಪಿಯ ಮಾಜಿ ಶಾಸಕ ಕೆ.ರಘುಪತಿ ಭಟ್ ಹಾಗೂ ಕಾಂಗ್ರೆಸ್ ಆಯನೂರು ಮಂಜುನಾಥ್ ನಡುವೆ ಮೊದಲ ಎರಡು ಸುತ್ತಿನಲ್ಲಿ ಎರಡನೇ ಸ್ಥಾನಕ್ಕೆ ಪೈಪೋಟಿ ನಡೆಯಿತು. ಅದನ್ನು ಹೊರತುಪಡಿಸಿದರೆ ಚುನಾವಣೆ ಕಣದಲ್ಲಿ ಕಂಡು ಬಂದ ರೋಚಕತೆ ಮತ ಎಣಿಕೆ ಕೇಂದ್ರದೊಳಗೆ ಕಂಡು ಬರಲಿಲ್ಲ.

ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಯಶಸ್ಸು ಕಂಡಿದ್ದ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಲ್ಲೂ ಉತ್ತಮ ಫಲಿತಾಂಶ ಸಿಕ್ಕಿದೆ.

ಶಿಕ್ಷಕರ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿದ್ದ ಎಸ್.ಎಲ್. ಭೋಜೇಗೌಡ ಪ್ರಥಮ ಪ್ರಾಶಸ್ತ್ರದ ಮತಗಳ ಮೂಲಕ ಅಭೂತಪೂರ್ವ ಗೆಲುವು ದಾಖಲಿಸಿದ್ದು, ಡಾ.ಧನಂಜಯ ಸರ್ಜಿ ಕೂಡಾ ಜಯಗಳಿಸುವುದರೊಂದಿಗೆ ಮೈತ್ರಿಕೂಟಕ್ಕೆ ಈ ಎರಡು ಕ್ಷೇತ್ರಗಳಲ್ಲಿ ವಿಜಯಮಾಲೆ ದೊರಕಿದೆ.

ಮೊದಲ ಬಾರಿಗೆ ಚುನಾವಣಾ ಕಣಕ್ಕೆ ಧುಮುಕಿದ್ದ ವೈದ್ಯ ಡಾ. ಧನಂಜಯ ಸರ್ಜಿ ಅವರು ಪ್ರಥಮ ಪ್ರಯತ್ನದಲ್ಲೇ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅವರಿಗೆ ಸೋಲಿನ ರುಚಿ ತೋರಿಸಿದ್ದಾರೆ. ಆ ಮೂಲಕ ವೃತ್ತಿಯಲ್ಲಿ ವೈದ್ಯರಾಗಿದ್ದ ಧನಂಜಯ ಸರ್ಜಿ ಇದೀಗ ಚುನಾವಣೆಯಲ್ಲಿ ಜಯ ಸಾಧಿಸುವುದರೊಂದಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.ಈ ಬಾರಿ ನೈರುತ್ಯ ಪದವೀಧರ ಕ್ಷೇತ್ರದಲ್ಲಿ 85 ಸಾವಿರ ಮತ ನೋಂದಣಿಯಾಗಿತ್ತು. ಚುನಾವಣೆಯಲ್ಲಿ 66,497 ಮತಗಳು ಚಲಾವಣೆಯಾಗಿದ್ದವು. ಇದರಲ್ಲಿ ಡಾ. ಧನಂಜಯ ಸರ್ಜಿಗೆ 37,627 ಮತ ಲಭಿಸಿದರೆ, ಪ್ರತಿಸ್ಪರ್ಧಿಗಳಾಗಿದ್ದ ಕಾಂಗ್ರೆಸ್ ನ ಆಯನೂರು ಮಂಜುನಾಥ್ 13,516 ಮತಗಳು ಪಡೆದಿದ್ದಾರೆ. ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಸ್.ಪಿ. ದಿನೇಶ್ 2515 ಮತ, ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ 7039 ಮತ ಲಭಿಸಿದೆ. ಚುನಾವಣಾ ಕಣದಲ್ಲಿ ಒಟ್ಟು 10 ಮಂದಿ ಸ್ಪರ್ಧಿಗಳಿದ್ದರು. ಒಟ್ಟು 66497 ಮತ ಚಲಾವಣೆಯಾಗಿದೆ. ಈ ಪೈಕಿ ಮತಗಳು 61382 ಸಿಂಧುವಾಗಿದ್ದವು. 5115 ಮತಗಳು ತಿರಸ್ಕೃತಗೊಂಡಿದೆ.
—

ವಿಧಾನ ಪರಿಷತ್ ಚುನಾವಣೆಯ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಅವರು ಮೊದಲ ಪ್ರಾಶಸ್ತ್ಯ ಮತದಲ್ಲೇ ಗೆಲುವು ಸಾಧಿಸಿದ್ದಾರೆ. ಇವರು ಮತ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ. ಮಂಜುನಾಥ್ ವಿರುದ್ಧ 5,267 ಮತಗಳ ಭಾರಿ ಅಂತರದಿAದ ಗೆಲುವು ಪಡೆದಿದ್ದಾರೆ. ಕ್ಷೇತ್ರದಲ್ಲಿ 19,479 ಒಟ್ಟು ಚಲಾವಣೆ ಆಗಿದ್ದು, ಇದರಲ್ಲಿ 821 ಮತ ತಿರಸ್ಕೃತಗೊಂಡಿವೆ. ಇನ್ನುಳಿದ 18,658 ಮತಗಳಲ್ಲಿ 9,330 ಕೋಟಾ ನಿಗದಿಯಾಗಿತ್ತು. 9829 ಮೊದಲ ಪ್ರಾಶಸ್ತ್ಯ ಮತಗಳನ್ನು ಪಡೆದು ಭೋಜೇಗೌಡ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ. ಮಂಜುನಾಥ್ 4,562 ಮತಗಳನ್ನು ಪಡೆದಿದ್ದಾರೆ.

Featured South-western graduate field which aroused keen interest BJP candidate Dr. Dhananjaya Sarji wins Top News
Share. WhatsApp Facebook Twitter Telegram
davangerevijaya.com
  • Website

Related Posts

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025

ಜನಮೆಚ್ಚಿದ ಪೊಲೀಸ್ ಗೆ ಕಮೆಂಡೇಶನ್ ಪದಕ

30 May 2025

ಅಧ್ಯಕ್ಷರಾಗಿ ಯುವ ನೇತಾರ ಸಚಿನ್ ನೇಮಕ

28 May 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,655 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,328 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,590 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
Blog

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

By davangerevijaya.com29 June 20250

ನಂದೀಶ್ , ಭದ್ರಾವತಿ ಉಕ್ಕಿನ ನಗರಿ ಭದ್ರಾವತಿಯಲ್ಲಿ ಒಂದೊಂದೇ ಸಂತಸದ ಕ್ಷಣಗಳು ಕಾಣುತ್ತಿವೆ..ಅತ್ತ ವಿಎಸ್ಐಎಲ್ ಕಾರ್ಖಾನೆ ಓಪನ್ ಆಗಲಿದೆ ಎಂಬ…

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,655 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,328 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

Subscribe to Updates

Get the latest creative news from SmartMag about art & design.

Recent Posts
  • ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.