ನ್ಯಾಮತಿ : ಹೊಟ್ಟೆನೋವು, ಗ್ಯಾಸ್ಟಿಕ್ ಸಮಸ್ಯೆಯಿಂದ ಬಳಲುತ್ತಿದ್ದ ತಾಲೂಕಿನ ಮಲ್ಲಿಗೇನಹಳ್ಳಿ ಗ್ರಾಮದ ಯುವಕನೊಬ್ಬ ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಮನೋಜ್(21) ಮೃತ ಯುವಕನಾಗಿದ್ದು, ಗ್ಯಾಸ್ಟಿಕ್ ಹೊಟ್ಟೆನೋವಿನಿಂದ ಬಳಲುತ್ತಿದ್ದು, ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರು‌. ಆದರೆ ನೋವು ಕಡಿಮೆಯಾಗದ ಹಿನ್ನಲೆ ಮನನೊಂದು ಕ್ರಿಮಿನಾಶಕ ಸೇವಿಸಿದ್ದ. ಆತನನ್ನು ನ್ಯಾಮತಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ
ಚಿಕಿತ್ಸೆ ಫಲಕಾರಿಯಾಗದೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತರ ಕುಟುಂಬಸ್ಥರು ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Share.
Leave A Reply

Exit mobile version