Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಮಂಗಳವಾರದ ರಾಶಿ ಭವಿಷ್ಯ ಹೇಗಿದೆ ತಪ್ಪದೇ ನೋಡಿ?

20 May 2025

ಜ್ಞಾನದ ಹಸಿವ ತಣಿಸುವ ವ್ಯಾಸ ಗುರು ತೇಜಸ್ವಿ ಕಟ್ಟೀಮನಿ

19 May 2025

ದಾವಣಗೆರೆ ಎಸ್ಪಿ ಉಮಾಪ್ರಶಾಂತ್ ಗೆ ಸಿಕ್ಕಿತ್ತು ಈ ಪದಕ..ಅದು ಯಾಕಾಗಿ?

18 May 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ಕ್ರೈಂ ಸುದ್ದಿ»ರಾಜ್ಯದಲ್ಲಿ ಮಹಿಳೆಯರಿಗಿಂತ ಪುರುಷರ ಆತ್ಮಹತ್ಯೆಯೇ ಹೆಚ್ಚು : ಸೂಸೈಡ್ ನಲ್ಲಿ ರಾಜಧಾನಿಯೇ ಮೊದಲು..ಅಷ್ಟಕ್ಕೂ ಕಾರಣವೇನು
ಕ್ರೈಂ ಸುದ್ದಿ

ರಾಜ್ಯದಲ್ಲಿ ಮಹಿಳೆಯರಿಗಿಂತ ಪುರುಷರ ಆತ್ಮಹತ್ಯೆಯೇ ಹೆಚ್ಚು : ಸೂಸೈಡ್ ನಲ್ಲಿ ರಾಜಧಾನಿಯೇ ಮೊದಲು..ಅಷ್ಟಕ್ಕೂ ಕಾರಣವೇನು

ರಾಜ್ಯದಲ್ಲಿ 2021ರಲ್ಲಿ 9243 ಪುರುಷರು ಅತ್ಮಹತ್ಯೆ ಮಾಡಿಕೊಂಡರೇ, 2713 ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
davangerevijaya.comBy davangerevijaya.com3 January 2025No Comments2 Mins Read
Facebook WhatsApp Twitter
Share
WhatsApp Facebook Twitter Telegram

ಬೆಂಗಳೂರು : ರಾಜ್ಯದಲ್ಲಿ ಮಹಿಳೆಯರಿಗಿಂತ ಪುರುಷರ ಆತ್ಮಹತ್ಯೆ ಹೆಚ್ಚಾಗುತ್ತಿದೆ ಎಂದು ಮೈಸೂರಿನ ‘ಒಡನಾಡಿ’ ಸೇವಾ ಸಂಸ್ಥೆಯು ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ್ದ ಅರ್ಜಿಯಲ್ಲಿ ಗೊತ್ತಾಗಿದೆ.

ರಾಜ್ಯ ಅಪರಾಧ ದಾಖಲಾತಿ ವಿಭಾಗವು ಎಲ್ಲ ಜಿಲ್ಲೆಗಳು, ಪ್ರಮುಖ ನಗರಗಳು, ಕರ್ನಾಟಕ ರೈಲ್ವೆ ಮತ್ತು ಕೆಜಿಎಫ್‌ ಪೊಲೀಸ್‌ ಜಿಲ್ಲೆ ಸೇರಿ 38 ವಿಭಾಗಗಳ ಅಡಿ ನೀಡಿರುವ ಅಂಕಿ ಅಂಶದಲ್ಲಿ ಈ ಮಾಹಿತಿ ಇದೆ.

ಎಷ್ಟು ಪುರುಷರು ಆತ್ಮಹತ್ಯೆ

ರಾಜ್ಯದಲ್ಲಿ 2021ರಿಂದ 2023ರವರೆಗೆ ಮೂರು ವರ್ಷಗಳಲ್ಲಿ 28,324 ಪುರುಷರು ಆತ್ಮಹತ್ಯೆ ಮಾಡಿಕೊಂಡಿದ್ದು, ಇದು, ಮಹಿಳೆಯರ ಆತ್ಮಹತ್ಯೆ ಪ್ರಕರಣಗಳಿಗಿಂತ ಮೂರು ಪಟ್ಟಿಗೂ ಹೆಚ್ಚಿದೆ. ಈ ಅವಧಿಯಲ್ಲಿ 8,159 ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುರುಷ–ಮಹಿಳೆಯರ ಆತ್ಮಹತ್ಯೆಯಲ್ಲಿ ರಾಜಧಾನಿ ಬೆಂಗಳೂರೇ ಮುಂದಿದೆ.

ಬೆಂಗಳೂರು ನಗರದ ನಂತರ, ಕ್ರಮವಾಗಿ ಬೆಳಗಾವಿ, ಬೆಂಗಳೂರು ಜಿಲ್ಲೆ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಯಲ್ಲಿ ಹೆಚ್ಚು ಆತ್ಮಹತ್ಯೆಗಳು ನಡೆದಿವೆ. ಈ ನಾಲ್ಕೂ ಜಿಲ್ಲೆಗಳಲ್ಲಿ ತಲಾ ಸಾವಿರಕ್ಕೂ ಹೆಚ್ಚು ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ. ಚಿಕ್ಕಮಗಳೂರು, ಹಾವೇರಿ, ಉಡುಪಿ, ವಿಜಯಪುರ, ದಾವಣಗೆರೆ, ಮೈಸೂರಿನಲ್ಲೂ ಹೆಚ್ಚಿವೆ.

ಎಷ್ಟು ಆತ್ಮಹತ್ಯೆ

ರಾಜ್ಯದಲ್ಲಿ 2021ರಲ್ಲಿ 9243 ಪುರುಷರು ಅತ್ಮಹತ್ಯೆ ಮಾಡಿಕೊಂಡರೇ, 2713 ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂತೆಯೇ 2022 ರಲ್ಲಿ 9523 ಪುರುಷರು, 2783 ಮಹಿಳೆ, 2023 ರಲ್ಲಿ 9550 ಪುರುಷರು, 2663 ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಟ್ಟಾರೆ 28324 ಪುರುಷರು, 6159 ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎಲ್ಲಿ ಎಷ್ಟು ಪುರುಷರ ಆತ್ಮಹತ್ಯೆ

ಬೆಂಗಳೂರಿನಲ್ಲಿ 4859, ಬೆಳಗಾವಿ-1859, ಬೆಂಗಳೂರು-1159, ಶಿವಮೊಗ್ಗ-1142, ತುಮಕೂರಿನಲ್ಲಿ -1008 ಪುರುಷರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌.

ಎಲ್ಲಿ ಎಷ್ಟು ಮಹಿಳೆಯರು ಆತ್ಮಹತ್ಯೆ

ಬೆಂಗಳೂರು ನಗರ-1770, ಬೆಳಗಾವಿ-462, ಬೆಂಗಳೂರು ಜಿಲ್ಲೆ-379, ತುಮಕೂರು-337, ಶಿವಮೊಗ್ಗ-329 ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌

ಮಹಿಳೆ ಆತ್ಮಹತ್ಯೆ ಇಳಿಕೆ

ಮೂರು ವರ್ಷದಲ್ಲಿ, ವರ್ಷದಿಂದ ವರ್ಷಕ್ಕೆ ಪುರುಷರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಿದ್ದರೆ, ಮಹಿಳೆಯರ ಆತ್ಮಹತ್ಯೆ ಪ್ರಕರಣಗಳು ಕಡಿಮೆಯಾಗಿವೆ ಎಂಬುದೂ ಅಂಕಿ ಅಂಶದಿಂದ ಗೊತ್ತಾಗುತ್ತದೆ.‌

ಒತ್ತಡವೇ ಕಾರಣ

ಪುರುಷರ ಆತ್ಮಹತ್ಯೆ ಪ್ರಕರಣಗಳೇ ಹೆಚ್ಚಿರುವುದರ ಬಗ್ಗೆ ಆತಂಕ ವ್ಯಕ್ತಪಡಿಸಿದ ‘ಒಡನಾಡಿ’ ಸಂಸ್ಥೆಯ ನಿರ್ದೇಶಕ ಎಂ.ಎಲ್‌.ಪರಶುರಾಮ್‌, ‘ಕೃಷಿಗಾಗಿ ಮಾಡಿದ ಸಾಲ ತೀರಿಸ ಲಾಗದ ಅಸಹಾಯಕತೆ, ಮಕ್ಕಳ ಶಿಕ್ಷಣ, ಮದುವೆಗಾಗಿ ಮಾಡಿದ ಸಾಲ, ಒಂಟಿ ತನ, ಕುಡಿತ, ಅನಾರೋಗ್ಯದಿಂದ ಮೂಡಿದ ಜಿಗುಪ್ಸೆ, ಲೈಂಗಿಕ ಅಶಕ್ತತೆ, ಪತ್ನಿ ಹಾಗೂ ಸಂಬಂಧಿಕರಿಂದ, ಮೇಲ ಧಿಕಾರಿಗಳಿಂದ ಕಿರುಕುಳ, ಅಕ್ರಮ ಸಂಬಂಧಗಳು ಸೇರಿ ಸಾಮಾಜಿಕ ಒತ್ತಡ ಗಳೂ ಹಲವು ಪುರುಷರ ಆತ್ಮಹತ್ಯೆಗೆ ಕಾರಣ’ ಎಂದು ಹೇಳುತ್ತಾರೆ.

‘ಕೌಟುಂಬಿಕ ಮತ್ತು ಔದ್ಯೋಗಿಕ ಒತ್ತಡಗಳ ನಿರ್ವಹಣೆಯಲ್ಲಿ ಸೋಲು, ಜೀವನಪ್ರೀತಿಯನ್ನು ಮೂಡಿಸುವಲ್ಲಿ ಸಮೂಹ ಮಾಧ್ಯಮಗಳ ವೈಫಲ್ಯವೂ ಪುರುಷರನ್ನು ಆತ್ಮಹತ್ಯೆಗೆ ಪ್ರಚೋದಿಸಿರಬಹುದು’ ಎಂದು ಅವರು ಅಭಿ‍ಪ್ರಾಯಪಟ್ಟಿದ್ದಾರೆ.

ಅಧ್ಯಯನ ಅಗತ್ಯ

ಇಷ್ಟೊಂದು ಸಂಖ್ಯೆಯಲ್ಲಿ ಪುರುಷರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದರ ಖಚಿತ ಹಿನ್ನೆಲೆ, ಕಾರಣ, ಪ್ರೇರಣೆ ಹಾಗೂ ಪರಿಹಾರಗಳ ಅಧ್ಯಯನ ತುರ್ತಾಗಿ ನಡೆಯಬೇಕು. ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯು (ನಿಮ್ಹಾನ್ಸ್‌) ಈ ನಿಟ್ಟಿನಲ್ಲಿ ಪ್ರಯತ್ನಿಸುವುದು ಅತ್ಯವಶ್ಯ’ ಎಂದೂ ಹೇಳಿದರು.

 

 

Featured Suicides of men are more than women in the state: Capital is first in suicide.. What is the reason for all this? Top News
Share. WhatsApp Facebook Twitter Telegram
davangerevijaya.com
  • Website

Related Posts

ದಾವಣಗೆರೆ ಎಸ್ಪಿ ಉಮಾಪ್ರಶಾಂತ್ ಗೆ ಸಿಕ್ಕಿತ್ತು ಈ ಪದಕ..ಅದು ಯಾಕಾಗಿ?

18 May 2025

ಅಪಘಾತದಲ್ಲಿ ಕುಟುಂಬವನ್ನೇ ಕಳೆದುಕೊಂಡ ಕ್ರಷರ್ ಮಾಲೀಕ : ನರಳಿ, ನರಳಿ ಮೃತಪಟ್ಟ ಒಂದು ವರ್ಷ, ನಾಲ್ಕುವರ್ಷದ ಮಗು…ಹಾಗಾದ್ರೆ ಆ ಘಟನೆ ಹೇಗಾಯ್ತು?

18 May 2025

ಪ್ರೀತಿ ಮಾಡಿದವನನ್ನೇ ಮಟಾಷ್ ಮಾಡಿದ “ಕೋಮಲ” ಕೈ

17 May 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,631 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,206 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,065 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,580 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
ಪ್ರಮುಖ ಸುದ್ದಿ

ಮಂಗಳವಾರದ ರಾಶಿ ಭವಿಷ್ಯ ಹೇಗಿದೆ ತಪ್ಪದೇ ನೋಡಿ?

By davangerevijaya.com20 May 20250

*💫🛕ಓಂ ಶ್ರೀ ಗಾಯಿತ್ರಿ ವಿಶ್ವಕರ್ಮ ಪರಬ್ರಹ್ಮಣಿ ನಮಃ 🛕💫* *🕉️ದ್ವಾದಶ ರಾಶಿಗಳ ದಿನ ಭವಿಷ್ಯ#ತಾರೀಕು#20/05/2025 ಮಂಗಳವಾರ🕉️* *01,✨ಮೇಷ ರಾಶಿ✨* 📖,ಆರ್ಥಿಕ…

ಜ್ಞಾನದ ಹಸಿವ ತಣಿಸುವ ವ್ಯಾಸ ಗುರು ತೇಜಸ್ವಿ ಕಟ್ಟೀಮನಿ

19 May 2025

ದಾವಣಗೆರೆ ಎಸ್ಪಿ ಉಮಾಪ್ರಶಾಂತ್ ಗೆ ಸಿಕ್ಕಿತ್ತು ಈ ಪದಕ..ಅದು ಯಾಕಾಗಿ?

18 May 2025

ಅಪಘಾತದಲ್ಲಿ ಕುಟುಂಬವನ್ನೇ ಕಳೆದುಕೊಂಡ ಕ್ರಷರ್ ಮಾಲೀಕ : ನರಳಿ, ನರಳಿ ಮೃತಪಟ್ಟ ಒಂದು ವರ್ಷ, ನಾಲ್ಕುವರ್ಷದ ಮಗು…ಹಾಗಾದ್ರೆ ಆ ಘಟನೆ ಹೇಗಾಯ್ತು?

18 May 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಮಂಗಳವಾರದ ರಾಶಿ ಭವಿಷ್ಯ ಹೇಗಿದೆ ತಪ್ಪದೇ ನೋಡಿ?

20 May 2025

ಜ್ಞಾನದ ಹಸಿವ ತಣಿಸುವ ವ್ಯಾಸ ಗುರು ತೇಜಸ್ವಿ ಕಟ್ಟೀಮನಿ

19 May 2025

ದಾವಣಗೆರೆ ಎಸ್ಪಿ ಉಮಾಪ್ರಶಾಂತ್ ಗೆ ಸಿಕ್ಕಿತ್ತು ಈ ಪದಕ..ಅದು ಯಾಕಾಗಿ?

18 May 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,631 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,206 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,065 Views

Subscribe to Updates

Get the latest creative news from SmartMag about art & design.

Recent Posts
  • ಮಂಗಳವಾರದ ರಾಶಿ ಭವಿಷ್ಯ ಹೇಗಿದೆ ತಪ್ಪದೇ ನೋಡಿ?
  • ಜ್ಞಾನದ ಹಸಿವ ತಣಿಸುವ ವ್ಯಾಸ ಗುರು ತೇಜಸ್ವಿ ಕಟ್ಟೀಮನಿ
  • ದಾವಣಗೆರೆ ಎಸ್ಪಿ ಉಮಾಪ್ರಶಾಂತ್ ಗೆ ಸಿಕ್ಕಿತ್ತು ಈ ಪದಕ..ಅದು ಯಾಕಾಗಿ?
  • ಅಪಘಾತದಲ್ಲಿ ಕುಟುಂಬವನ್ನೇ ಕಳೆದುಕೊಂಡ ಕ್ರಷರ್ ಮಾಲೀಕ : ನರಳಿ, ನರಳಿ ಮೃತಪಟ್ಟ ಒಂದು ವರ್ಷ, ನಾಲ್ಕುವರ್ಷದ ಮಗು…ಹಾಗಾದ್ರೆ ಆ ಘಟನೆ ಹೇಗಾಯ್ತು?
  • ಭಾನುವಾರದ ನಿಮ್ಮ ರಾಶಿ ಭವಿಷ್ಯ ಏನಿದೆ ತಪ್ಪದೇ ನೋಡಿ?
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.