Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ದಾವಣಗೆರೆ : ಜಯನಗರದ ಸಾಯಿಬಾಬಾ ಮಂದಿರದಲ್ಲಿ ಅದ್ದೂರಿ ಗುರು ಪೂರ್ಣಿಮೆ . ಸಾಯಿ ದರ್ಶನಕ್ಕೆ ಬರಲಿದ್ದಾರೆ ಸಹಸ್ರಾರು ಜನ

8 July 2025

ಬಡಾವಣೆ ಪೊಲೀಸ್ ಠಾಣೆ ಪಿಎಸ್ಐ ಲಾಡ್ಜ್ ನಲ್ಲಿ ನೇಣಿಗೆ ಶರಣು, ಅಷ್ಟಕ್ಕೂ ಪಿಎಸ್ಐ ಲೈಫ್ ಹಿಂದೆ ಏನಿತ್ತು?..ನೇಣಿಗೆ ಶರಣಾಗುವ ಮೊದಲು ಆಧಾರ್ ನಂಬರ್ ಅಳಿಸಿದ್ದು ಯಾಕೆ?

7 July 2025

ಭದ್ರಾ ಡ್ಯಾಂ ಭರ್ತಿಯಾಗಲು ಇನ್ನೇಷ್ಟು ಅಡಿ ಬಾಕಿ ಇರಬಹುದು?…ಈ ತಿಂಗಳಿನಲ್ಲಿಯೇ ನೋಡುಗರಿಗೆ ಸಿಗಲಿದೆ ಜಲಾಶಯದ ಸೊಬಗು .‌‌‌..

5 July 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ಪ್ರಮುಖ ಸುದ್ದಿ»ಕುವೆಂಪು ಕನ್ನಡ ಭವನದಲ್ಲಿ ನಾ.ಡಿಸೋಜರಿಗೆ ನುಡಿ ನಮನ ಸಲ್ಲಿಸಿದ ಜಿಲ್ಲಾ ಕಸಾಪ
ಪ್ರಮುಖ ಸುದ್ದಿ

ಕುವೆಂಪು ಕನ್ನಡ ಭವನದಲ್ಲಿ ನಾ.ಡಿಸೋಜರಿಗೆ ನುಡಿ ನಮನ ಸಲ್ಲಿಸಿದ ಜಿಲ್ಲಾ ಕಸಾಪ

davangerevijaya.comBy davangerevijaya.com7 January 2025No Comments2 Mins Read
Facebook WhatsApp Twitter
Share
WhatsApp Facebook Twitter Telegram

ದಾವಣಗೆರೆ : ಸೃಜನಶೀಲ ಸಾಹಿತ್ಯ ಕೃಷಿಯ ಮೂಲಕ ಸಾಹಿತ್ಯಾಸಕ್ತರ ಮನ ಗೆದ್ದಿದ್ದ ನಾ.ಡಿಸೋಜರವರು ನಾಡು ಕಂಡ ಒಬ್ಬ ಪರಿಪೂರ್ಣ ಸಾಹಿತಿಯಾಗಿದ್ದರು. ಅವರ ಸಾಹಿತ್ಯವು ಬಹು ಆಯಾಮಗಳಲ್ಲಿ ರಚನೆಯಾಗುತ್ತಿತ್ತು ಎಂದು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪರವರು ನಾ.ಡಿಸೋಜರನ್ನು ಬಣ್ಣಿಸಿದರು.

ಅವರಿಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಆಯೋಜಿಸಿದ್ದ ನಾ.ಡಿಸೋಜ ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ನಾ‌.ಡಿಸೋಜರ ಕಾದಂಬರಿಗಳು ಪ್ರಮುಖವಾಗಿ ಪರಿಸರ ನಾಶ, ಕ್ರೈಸ್ತ ಜನಾಂಗದ ಹಿನ್ನೆಲೆ, ಭ್ರಷ್ಟಾಚಾರದ ವಸ್ತು, ಹಿಂದುಳಿದ ಬುಡಕಟ್ಟು ಜನಾಂಗದ ಚಿತ್ರಣ ಹೀಗೆ ಹಲವು ಹತ್ತು ವಿಷಯಗಳನ್ನೊಳಗೊಂಡಿದ್ದವು. ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಮೈಸೂರಿಗೆ ಹೋದಂತಹ ಸಂದರ್ಭದಲ್ಲಿ ಅವರು ಹೆಚ್ಚು ಸಮಯವನ್ನು ಸಾರ್ವಜನಿಕ ಗ್ರಂಥಾಲಯಗಳಲ್ಲಿ ಕಳೆಯುತ್ತಿದ್ದರು. ಮಾಸ್ತಿ, ಕುವೆಂಪು, ಅ.ನ.ಕೃ., ಕಾರಂತರು, ಗೋಕಾಕ್, ಗೊರೂರು ಇವರುಗಳಲ್ಲದೆ ಪರ್ಲ್‌ಬಕ್, ಸಾಮರ್ ಸೆಟ್ ಮಾಮ್, ಡಿಕನ್ಸ್ ಮುಂತಾದವರ ಕೃತಿಗಳನ್ನು ವ್ಯಾಪಕವಾಗಿ ಅಧ್ಯಯನ ಮಾಡಿದ್ದು ಅವರೊಬ್ಬ ಪರಿಪೂರ್ಣ ಸಾಹಿತಿಯಾಗಲು ಕಾರಣವಾಯಿತು ಎಂದು ವಾಮದೇವಪ್ಪರವರು ನಾ.ಡಿಸೋಜರಿಗೆ ನುಡಿನಮನವನ್ನು ಸಲ್ಲಿಸಿದರು.

ಸಿದ್ದಗಂಗಾ ವಿದ್ಯಾ ಸಂಸ್ಥೆಯ ಜಸ್ಟಿನ್ ಡಿಸೋಜ ಅವರು ಮಾತನಾಡಿ ನಾ.ಡಿಸೋಜ ಅವರು ಶ್ರೇಷ್ಠ ಸಾಹಿತಿಯಾಗಿದ್ದರೂ ಅತ್ಯಂತ ಸರಳವಾದ ವ್ಯಕ್ತಿತ್ವವನ್ನು ಹೊಂದಿದ್ದರು‌. ಅವರು ವ್ಯಕ್ತಿಗಿಂತ ಅವರಲ್ಲಿರುವ ವ್ಯಕ್ತಿತ್ವಕ್ಕೆ ಗೌರವ ಕೊಡುವ ಸಹೃದಯಿ ಸಾಹಿತಿಯಾಗಿದ್ದರು.

ಸಮಾಜಮುಖಿಯಾಗಿ ಕಿರಿಯ ಸಾಹಿತಿಗಳನ್ನು ಬೆನ್ನುತಟ್ಟಿ ಪ್ರೋತ್ಸಾಹಿಸುತ್ತಿದ್ದರು ಹಾಗೂ ಸಾಹಿತ್ಯ ವಲಯದೊಂದಿಗೆ ನಿಕಟವಾದ ಸಂಬಂಧವನ್ನು ಇರಿಸಿಕೊಂಡು ಆಪ್ತತೆಯನ್ನು ತೋರಿಸುತ್ತಿದ್ದರು. ಮುಳುಗಡೆಯಾದ ಪ್ರದೇಶಗಳ ಜನರ ನೋವು ಮತ್ತು ಸಂಕಟವನ್ನು ತಮ್ಮ ಬರವಣಿಗೆಯ ಮೂಲಕ ಸಮಾಜಕ್ಕೆ ಮತ್ತು ಸರಕಾರಕ್ಕೆ ಪರಿಣಾಮಕಾರಿಯಾಗಿ ಮುಟ್ಟಿಸುವ ಸಂವೇದನಾಶೀಲ ಸಾಹಿತಿ ಅವರಾಗಿದ್ದರು ಎಂದು ಜಸ್ಟಿನ್ ಡಿಸೌಜ ತಮ್ಮ ನುಡಿ ನಮನ ಸಲ್ಲಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧ್ಯಕ್ಷ ಕೆ.ರಾಘವೇಂದ್ರ ನಾಯರಿ ಪ್ರಾಸ್ತಾವಿಕವಾಗಿ ಮಾತಾಡಿ ನಾ.ಡಿಸೋಜ ಅವರು ಮುಳುಗಡೆ, ಕಾಡಿನ ಬೆಂಕಿ, ದ್ವೀಪ, ಬೆಟ್ಟದಾಪುರ ಮಕ್ಕಳು, ಅಂತರ್ಯ, ಕೆಂಜಾಲು ಕಣಿವೆಯ ಕೆಂಪು ಹೂವು, ಬಂಜೆ ಬೆಂಕಿ, ಮಂಜಿನ ಕಾನು, ಬಳುವಳಿ, ಈ ನೆಲ ಈ ಜಲ, ಕೆಂಪು ತ್ರಿಕೋನ, ನೆಲೆ, ಮಾನವ ಸೇರಿದಂತೆ 40 ಕಾದಂಬರಿಗಳನ್ನು ರಚಿಸಿದ್ದಾರೆ.

ಮಕ್ಕಳ ಸಾಹಿತ್ಯಕ್ಕೆ ಸಂಬಂಧಿಸಿದ 12 ಕೃತಿಗಳನ್ನು ರಚಿಸಿದ್ದಾರೆ. ಹಾಗೂ 9 ಕಥಾ ಸಂಕಲನಗಳು, 2 ಸಮಗ್ರ ಕಥೆಗಳ ಸಂಪುಟ ಪ್ರಕಟಗೊಂಡಿವೆ. ಇವರ ಕಾದಂಬರಿಗಳಾದ ಕಾಡಿನ ಬೆಂಕಿ ಹಾಗೂ ದ್ವೀಪ ಚಲನಚಿತ್ರಗಳಾಗಿ ರಜತಕಮಲ ಮತ್ತು ಸ್ವರ್ಣಕಮಲ ಪ್ರಶಸ್ತಿಗಳನ್ನು ಪಡೆದಿವೆ.ಬಳುವಳಿ ಕಾದಂಬರಿಯು ಕೊಂಕಣಿ ಭಾಷೆಯಲ್ಲಿ ಚಲನಚಿತ್ರವಾಗಿದೆ. ಅವರ ಅನೇಕ ಕೃತಿಗಳು ಪಠ್ಯಪುಸ್ತಕವಾಗಿವೆ, ಚಲನಚಿತ್ರಗಳಾಗಿವೆ, ನಾಟಕಗಳಾಗಿವೆ ಎಂದು ನಾ.ಡಿಸೋಜರ ಬಗ್ಗೆ ಹಲವು ಮಾಹಿತಿಯನ್ನು ಹಂಚಿಕೊಂಡರು.

ಶ್ರದ್ಧಾಂಜಲಿ ಸಭೆಯಲ್ಲಿ ಸಾಹಿತಿ ಜಿ.ಕೆ‌.ಕುಲಕರ್ಣಿ, ಕಾದಂಬರಿಕಾರ್ತಿ ಡಿ.ಸಿ.ಚಂಪಾ ಅವರು ನಾ.ಡಿಸೋಜ ಅವರೊಂದಿಗಿನ ತಮ್ಮ ಒಡನಾಟವನ್ನು ಹಂಚಿಕೊಂಡರು‌.

ಸಭೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಬಿ.ದಿಳ್ಯಪ್ಪ, ರೇವಣಸಿದ್ದಪ್ಪ ಅಂಗಡಿ, ಸಂಘಟನಾ ಕಾರ್ಯದರ್ಶಿಗಳಾದ ಜಗದೀಶ್ ಕೂಲಂಬಿ, ಜಿಗಳಿ ಪ್ರಕಾಶ್, ಡ್ಯಾನಿಯಲ್ ಚಿಂದವಾಳ, ನಿವೃತ್ತ ಪದವಿಪೂರ್ವ ಉಪ ನಿರ್ದೇಶಕ ರುದ್ರಮುನಿ, ವೆಂಕಟರಮಣ ಬೆಳೆಗೆರೆ, ಕೆ.ಪಿ.ಮರಿಯಾಚಾರ್, ಎಸ್.ಎಂ.ಮಲ್ಲಮ್ಮ, ಲೇಖಕಿಯರ ಸಂಘದ ಅಧ್ಯಕ್ಷೆ ವೀಣಾ ಕೃಷ್ಣಮೂರ್ತಿ, ರುದ್ರಾಕ್ಷಿ ಬಾಯಿ, ರುದ್ರಮುನಿ ಹಿರೇಮಠ, ವೀಣಾ ಮಹಾಂತೇಶ್, ಸತ್ಯಭಾಮಾ ಮಂಜುನಾಥ್, ಗಿರಿಜ ಸಿದ್ದಲಿಂಗಪ್ಪ ಮುಂತಾದವರು ಉಪಸ್ಥಿತರಿದ್ದರು.

 

Featured The district butcher paid his respects to Mr. Desojari at Kuvempu Kannada Bhavan Top News
Share. WhatsApp Facebook Twitter Telegram
davangerevijaya.com
  • Website

Related Posts

ದಾವಣಗೆರೆ : ಜಯನಗರದ ಸಾಯಿಬಾಬಾ ಮಂದಿರದಲ್ಲಿ ಅದ್ದೂರಿ ಗುರು ಪೂರ್ಣಿಮೆ . ಸಾಯಿ ದರ್ಶನಕ್ಕೆ ಬರಲಿದ್ದಾರೆ ಸಹಸ್ರಾರು ಜನ

8 July 2025

ಇಡಿ ಬಲೆಯಿಂದ ಹೊರಬಂದ ಮಂಜುನಾಥ್ ಗೌಡ…ಎಂಭತ್ತೇರಡು ದಿನಗಳ ನಂತರ ಮರಳಿದ ಸಹಕಾರಿ ಧುರೀಣ

3 July 2025

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,656 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,333 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,595 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
ಪ್ರಮುಖ ಸುದ್ದಿ

ದಾವಣಗೆರೆ : ಜಯನಗರದ ಸಾಯಿಬಾಬಾ ಮಂದಿರದಲ್ಲಿ ಅದ್ದೂರಿ ಗುರು ಪೂರ್ಣಿಮೆ . ಸಾಯಿ ದರ್ಶನಕ್ಕೆ ಬರಲಿದ್ದಾರೆ ಸಹಸ್ರಾರು ಜನ

By davangerevijaya.com8 July 20250

ನಂದೀಶ್ ಭದ್ರಾವತಿ, ದಾವಣಗೆರೆ ಅತ್ತ ಶಿರಡಿಯಲ್ಲಿ ಗುರುಪೂರ್ಣಿಮಾ ಹಬ್ಬವು ಭಕ್ತಿ ಭಾವದಿಂದ ಆರಂಭವಾಗಲಿದ್ದು, ಸಾವಿರಾರು ಭಕ್ತರು ಸಾಯಿನಾಮವನ್ನು ಪಠಿಸುತ್ತ ಶಿರಡಿಯನ್ನು…

ಬಡಾವಣೆ ಪೊಲೀಸ್ ಠಾಣೆ ಪಿಎಸ್ಐ ಲಾಡ್ಜ್ ನಲ್ಲಿ ನೇಣಿಗೆ ಶರಣು, ಅಷ್ಟಕ್ಕೂ ಪಿಎಸ್ಐ ಲೈಫ್ ಹಿಂದೆ ಏನಿತ್ತು?..ನೇಣಿಗೆ ಶರಣಾಗುವ ಮೊದಲು ಆಧಾರ್ ನಂಬರ್ ಅಳಿಸಿದ್ದು ಯಾಕೆ?

7 July 2025

ಭದ್ರಾ ಡ್ಯಾಂ ಭರ್ತಿಯಾಗಲು ಇನ್ನೇಷ್ಟು ಅಡಿ ಬಾಕಿ ಇರಬಹುದು?…ಈ ತಿಂಗಳಿನಲ್ಲಿಯೇ ನೋಡುಗರಿಗೆ ಸಿಗಲಿದೆ ಜಲಾಶಯದ ಸೊಬಗು .‌‌‌..

5 July 2025

ಇಡಿ ಬಲೆಯಿಂದ ಹೊರಬಂದ ಮಂಜುನಾಥ್ ಗೌಡ…ಎಂಭತ್ತೇರಡು ದಿನಗಳ ನಂತರ ಮರಳಿದ ಸಹಕಾರಿ ಧುರೀಣ

3 July 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ದಾವಣಗೆರೆ : ಜಯನಗರದ ಸಾಯಿಬಾಬಾ ಮಂದಿರದಲ್ಲಿ ಅದ್ದೂರಿ ಗುರು ಪೂರ್ಣಿಮೆ . ಸಾಯಿ ದರ್ಶನಕ್ಕೆ ಬರಲಿದ್ದಾರೆ ಸಹಸ್ರಾರು ಜನ

8 July 2025

ಬಡಾವಣೆ ಪೊಲೀಸ್ ಠಾಣೆ ಪಿಎಸ್ಐ ಲಾಡ್ಜ್ ನಲ್ಲಿ ನೇಣಿಗೆ ಶರಣು, ಅಷ್ಟಕ್ಕೂ ಪಿಎಸ್ಐ ಲೈಫ್ ಹಿಂದೆ ಏನಿತ್ತು?..ನೇಣಿಗೆ ಶರಣಾಗುವ ಮೊದಲು ಆಧಾರ್ ನಂಬರ್ ಅಳಿಸಿದ್ದು ಯಾಕೆ?

7 July 2025

ಭದ್ರಾ ಡ್ಯಾಂ ಭರ್ತಿಯಾಗಲು ಇನ್ನೇಷ್ಟು ಅಡಿ ಬಾಕಿ ಇರಬಹುದು?…ಈ ತಿಂಗಳಿನಲ್ಲಿಯೇ ನೋಡುಗರಿಗೆ ಸಿಗಲಿದೆ ಜಲಾಶಯದ ಸೊಬಗು .‌‌‌..

5 July 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,656 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,333 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

Subscribe to Updates

Get the latest creative news from SmartMag about art & design.

Recent Posts
  • ದಾವಣಗೆರೆ : ಜಯನಗರದ ಸಾಯಿಬಾಬಾ ಮಂದಿರದಲ್ಲಿ ಅದ್ದೂರಿ ಗುರು ಪೂರ್ಣಿಮೆ . ಸಾಯಿ ದರ್ಶನಕ್ಕೆ ಬರಲಿದ್ದಾರೆ ಸಹಸ್ರಾರು ಜನ
  • ಬಡಾವಣೆ ಪೊಲೀಸ್ ಠಾಣೆ ಪಿಎಸ್ಐ ಲಾಡ್ಜ್ ನಲ್ಲಿ ನೇಣಿಗೆ ಶರಣು, ಅಷ್ಟಕ್ಕೂ ಪಿಎಸ್ಐ ಲೈಫ್ ಹಿಂದೆ ಏನಿತ್ತು?..ನೇಣಿಗೆ ಶರಣಾಗುವ ಮೊದಲು ಆಧಾರ್ ನಂಬರ್ ಅಳಿಸಿದ್ದು ಯಾಕೆ?
  • ಭದ್ರಾ ಡ್ಯಾಂ ಭರ್ತಿಯಾಗಲು ಇನ್ನೇಷ್ಟು ಅಡಿ ಬಾಕಿ ಇರಬಹುದು?…ಈ ತಿಂಗಳಿನಲ್ಲಿಯೇ ನೋಡುಗರಿಗೆ ಸಿಗಲಿದೆ ಜಲಾಶಯದ ಸೊಬಗು .‌‌‌..
  • ಇಡಿ ಬಲೆಯಿಂದ ಹೊರಬಂದ ಮಂಜುನಾಥ್ ಗೌಡ…ಎಂಭತ್ತೇರಡು ದಿನಗಳ ನಂತರ ಮರಳಿದ ಸಹಕಾರಿ ಧುರೀಣ
  • ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.