ದಾವಣಗೆರೆ : ನೇಹಾ ಹಿರೇಮಠ ಹತ್ಯೆಗೈದ ವ್ಯಕ್ತಿಗೆ ಕಠಿಣ ಶಿಕ್ಷೆನೀಡುವಂತೆ ಮಹಾಸಭೆಯ ಕಾರ್ಯದರ್ಶಿ ರೇಣುಕಾ ಪ್ರಸನ್ಬ ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ಮಹಾನಗರಪಾಲಿಕೆ ಸದಸ್ಯ ಶ್ರೀ ನಿರಂಜನಯ್ಯ ಹಿರೇಮಠ ಅವರ ಪುತ್ರಿ ಕು. ನೇಹಾ ಹಿರೇಮಠರವರ ಹತ್ಯೆ ಪ್ರಕರಣವನ್ನು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭೆಯು ಉಗ್ರವಾಗಿ ಖಂಡಿಸುತ್ತದೆ.
ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಮಹಾಸಭೆಯು ಘನ ಸರ್ಕಾರದ ಮುಖ್ಯಮಂತ್ರಿಗಳನ್ನು ಮತ್ತು ಗೃಹ ಸಚಿವರನ್ನು ಮುಂದಿನ ದಿನಗಳಲ್ಲಿ ಈ ರೀತಿಯ ಕೃತ್ಯಗಳು ನಡೆಯದಂತೆ ಅಗತ್ಯ ಕ್ರಮಕೈಗೊಳ್ಳಲು ಹಾಗೂ ವಿದ್ಯಾರ್ಥಿನಿಯ ಬರ್ಬರ ಹತ್ಯೆಗೈದಿರುವ ವ್ಯಕ್ತಿಗೆ ಮತ್ತು ಅವನಿಗೆ ಸಹಕಾರ ನೀಡಿರುವ ಎಲ್ಲ ವ್ಯಕ್ತಿಗಳಿಗೂ ಕಠಿಣ ಶಿಕ್ಷೆಯನ್ನು ವಿಧಿಸುವಂತೆ ಮಹಾಸಭೆಯು ಒತ್ತಾಯಿಸಿದೆ.