Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ಪ್ರಮುಖ ಸುದ್ದಿ»ಸಿರಿಗೆರೆ ತರಳಬಾಳು ಶ್ರೀಗಳ ವಿರುದ್ದ ಭಕ್ತರ ಆಕ್ರೋಶ, ಸಮಾಲೋಚನಾ ಸಭೆಯಲ್ಲಿ ಕೈಗೊಂಡ ನಿರ್ಣಯವೇನು? ಉದ್ಯಮಿ ಅಣಬೇರು ರಾಜಣ್ಣ ಆಕ್ರೋಶಗೊಂಡಿದ್ದು ಏಕೆ?
ಪ್ರಮುಖ ಸುದ್ದಿ

ಸಿರಿಗೆರೆ ತರಳಬಾಳು ಶ್ರೀಗಳ ವಿರುದ್ದ ಭಕ್ತರ ಆಕ್ರೋಶ, ಸಮಾಲೋಚನಾ ಸಭೆಯಲ್ಲಿ ಕೈಗೊಂಡ ನಿರ್ಣಯವೇನು? ಉದ್ಯಮಿ ಅಣಬೇರು ರಾಜಣ್ಣ ಆಕ್ರೋಶಗೊಂಡಿದ್ದು ಏಕೆ?

ಎರಡು ಬೇಡಿಕೆ ಈಡೇರದೇ ಹೋದರೆ ಸುಮಾರು ಒಂದು ಲಕ್ಷ ಜನರ ನೇತೃತ್ವದಲ್ಲಿ ಪಾದಯಾತ್ರೆ
davangerevijaya.comBy davangerevijaya.com4 August 2024Updated:4 August 2024No Comments2 Mins Read
Facebook WhatsApp Twitter
Share
WhatsApp Facebook Twitter Telegram

ದಾವಣಗೆರೆ : ತರಳಬಾಳು ಶ್ರೀಗಳ ವಿರುದ್ಧ ಅಪೂರ್ವ ರೆಸಾರ್ಟ್ ನಲ್ಲಿ ಉದ್ಯಮಿ ಸಾಧು-ಸದ್ಧರ್ಮ ವೀರಶೈವ ಲಿಂಗಾಯಿತ ನಾಯಕ ಅಣಬೇರು ರಾಜಣ್ಣ ನೇತೃತ್ವದಲ್ಲಿ ಬೃಹತ್ ಸಮಾಲೋಚನಾ ಸಭೆ ನಡೆಯಿತು.

ಈ ಸಮಾಲೋಚನಾ ಸಭೆಯಲ್ಲಿ ಸಿರಿಗೆರೆಯ ಡಾ. ಶಿವಮೂರ್ತಿ ಶಿವಾಚಾರ್ಯ ಶ್ರೀ ಬದಲಾವಣೆಗೆ ಆಗ್ರಹ ಪಡಿಸಲಾಯಿತು. ಚಿತ್ರದುರ್ಗ ಜಿಲ್ಲೆ ಸಿರಿಗೆರೆ ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ವಿರುದ್ದ ಕೈಗೊಂಡ ಸಭೆಯಲ್ಲಿ  ಶಾಮನೂರು ಶಿವಶಂಕರಪ್ಪ, ಬಿ.ಸಿ. ಪಾಟೀಲ್, ಎಸ್ ಎ ರವೀಂದ್ರನಾಥ್ ಸೇರಿದಂತೆ ಸಮಾಜದ ಮುಖಂಡರು ಭಾಗಿಯಾಗಿದ್ದರು. 

ಸಿರಿಗೆರೆ ಪೀಠಕ್ಕೆ ಉತ್ತರಾಧಿಕಾರಿ ಹಾಗೂ ನೂತನ ಶ್ರೀ ನೇಮಕವಾಗಿಲ್ಲ. ಮಠದ ನಿಯಮದಂತೆ 65 ವರ್ಷಕ್ಕೆ ಪೀಠ ತ್ಯಾಗ ಮಾಡಬೇಕಿದ್ದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸ್ಥಾನ ಬಿಟ್ಟುಕೊಡುತ್ತಿಲ್ಲ. ಆದ್ರೆ ನಿವೃತ್ತಿ ಪಡೆಯದೇ ಪೀಠಧೀಪತಿಯಾಗಿ ಮುಂದುವರಿದಿದ್ದಾರೆ ಹೀಗಾಗಿ ಪೀಠ ತ್ಯಜಿಸುವಂತೆ ಸಾಧು ಲಿಂಗಾಯತ ಸಮಾಜ ಒತ್ತಾಯಿಸಿತು.‌

ಏನು ನಿರ್ಣಯ 

ದಾವಣಗೆರೆ- ಸಿರಿಗೆರೆ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ,  ಸಾಣೇಹಳ್ಳಿ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪೀಠದಿಂದ ನಿವೃತ್ತಿ ಘೋಷಿಸಿ, ಮುಂದಿನ ಮರಿ ಅಥವಾ ಉತ್ತರಾಧಿಕಾರಿ ಘೋಷಣೆ ಮಾಡಬೇಕು. ಶ್ರೀಮಠದ ಏಕವ್ಯಕ್ತಿ ಡೀಡ್ ರದ್ದುಪಡಿಸಿ, ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಗಳ ಮೂಲ ಬೈಲಾವನ್ನು ಯಥವತ್ತಾಗಿ ಜಾರಿಗೊಳಿಸಬೇಕು ಎಂಬ ನಿರ್ಣಯ ಕೈಗೊಳ್ಳಲಾಯಿತು.‌

ಸಾಧು ಲಿಂಗಾಯಿತ ಮುಖಂಡ ಅಣಬೇರು‌ ರಾಜಣ್ಣ ಮಾತನಾಡಿ, ಇಷ್ಟು ದಿನ ಸಿರಿಗೆರೆ ಶ್ರೀ ನಮ್ಮವರು. ಸಮಾಜಕ್ಕೆ ಕೆಟ್ಟ ಹೆಸರು ಬರಬಾರದೆಂದು ಸುಮನಿದ್ದೇ. ಸಿರಿಗೆರೆ ಮಠಕ್ಕೆ ಹೋದರೆ ಸ್ವಾಮೀಜಿ ಬಾಗಿಲನ್ನೇ ತೆರೆಯುವುದಿಲ್ಲ. ಭಕ್ತರನ್ನು ಕಂಡರೆ ಗೌರವವಿಲ್ಲ‌. 

ಶ್ರೀಮಠ ಹಾಗೂ ಗುರು ಪರಂಪರೆಯ ಮೇಲಿನ ಅಭಿಮಾನ, ಗೌರವದಿಂದ ಇಲ್ಲಿವರೆಗೂ ಸಮಾಧಾನದಿಂದ ಇದ್ದೆವು. ಇದೀಗ ಹೋರಾಟ ಅನಿವಾರ್ಯ ಆಗಿದೆ. ಶ್ರೀಮಠದ ಬೆಳವಣಿಗೆ, ಶ್ರೀಗಳ ನಡೆ ಬಗ್ಗೆ ಪ್ರಶ್ನಿಸಿದರೆ ರೌಡಿಗಳು ಅಡ್ಡಿಪಡಿಸುತ್ತಾರೆ. ಪ್ರಶ್ನಿಸಿದವರ ವಿರುದ್ಧವೇ ಸುಳ್ಳು ದೂರು ದಾಖಲಿಸಲಾಗುತ್ತಿದೆ. ಇದು ಗುರುಗಳಾದವರು ಮಾಡುವ ಕೆಲಸವೇ? ಇನ್ನೊಂದು ವಾರದಲ್ಲೇ ನಮ್ಮ ಬೇಡಿಕೆಗೆ ಸಕಾರಾತ್ಮಕ ಸ್ಪಂದನೆ ಸಿಗಬೇಕು. ಇಲ್ಲವಾದರೆ ತೀವ್ರ ಸ್ವರೂಪದ ಹೋರಾಟ ನಡೆಸಬೇಕಾಗುತ್ತದೆ. ಶೀಘ್ರವೇ ಸಾಸಲು ಕ್ರಾಸ್ ನಿಂದ ಶ್ರೀಮಠದವರೆಗೂ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳುವ ಆಲೋಚನೆ ಸಹ ಇದೆ ಎಂದರು.

 

 

Featured The outrage of devotees against Sirigere Taralabalu Shri Top News what was the decision taken in the consultation meeting? Why is businessman Anaberu Rajanna angry?
Share. WhatsApp Facebook Twitter Telegram
davangerevijaya.com
  • Website

Related Posts

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,321 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,083 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,586 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
ಪ್ರಮುಖ ಸುದ್ದಿ

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

By davangerevijaya.com12 June 20250

*ದಾವಣಗೆರೆಯಲ್ಲಿ ಅಂಚೆ  ವಿಭಾಗೀಯ  ಕಚೇರಿ ಬರಲು ಇವರು ಕಾರಣ * ದಾವಣಗೆರೆ ಅಂಚೆ ಇಲಾಖೆ ಪ್ರಥಮ ಅಧೀಕ್ಷಕ *ನಿಷ್ಠೆ, ಪ್ರಾಮಾಣಿಕತೆಯಿಂದ…

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025

ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

10 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,321 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,083 Views

Subscribe to Updates

Get the latest creative news from SmartMag about art & design.

Recent Posts
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
  • ಆರ್ ಸಿಬಿ ವಿಜಯೋತ್ಸವ ವೇಳೆ 11 ಜನರ ಸಾವು : ಸಿಬಿಐಗೆ ವಹಿಸಲು ಮಾಜಿ ಸಚಿವ ಒತ್ತಾಯ
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.