ದಾವಣಗೆರೆ : ಮುಡಾ ಹಗರಣದಲ್ಲಿ ಸಿಲುಕಿಕೊಂಡಿರುವ ಸಿಎಂ ಸಿದ್ದರಾಮಯ್ಯ ಒಂದು ವೇಳೆ ರಾಜೀನಾಮೆ ನೀಡಿದರೆ, ನಾನು ಸಿಎಂ ಆಗುತ್ತೇನೆ ಎಂದು ಸ್ವ ಪಕ್ಷದವರೇ ಹೇಳಿಕೆ ನೀಡುತ್ತಿದ್ದ ಹಿನ್ನೆಲೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಇವರಿಗೆಲ್ಲ ಟಾಂಗ್ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಬೀಸಿದ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಿದ್ದರಾಮಯ್ಯ
ಒಳ್ಳೆಯ ಕೆಲಸ ಮಾಡಿದ್ದಾರೆ ಅಲ್ಲದೇ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ, ಸಿಎಂ ಬದಲಾವಣೆ ಆಗ್ತಾರೆ ಎಂದು ತಿರುಕನ ಕನಸು ಕಾಣುತ್ತಿದ್ದಾರೆಂದು ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದರು.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಪ್ರಾಮಾಣಿಕರಾಗಿದ್ದು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ, ಅವರೇ ಸಿಎಂ ಆಗಿ ಮುಂದುವರೆಯುತ್ತಾರೆಂದರು. ಈ ನಡುವೆ ಕೆಲ ದಿನಗಳ ಹಿಂದೆ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಾನು ಕೂಡ ಸಿಎಂ ರೇಸ್ ನಲ್ಲಿದ್ದೇನೆ ಎಂದಿದ್ದರು. ಇದು ರಾಜ್ಯಾದ್ಯಂತ ಸಂಚಲನ ಮೂಡಿತ್ತು. ಅವರು ಕೂಡ ಸಿಎಂ ಸಿದ್ದರಾಮಯ್ಯ ಒಳ್ಳೆಯವರು, ಸದ್ಯ ಖುರ್ಚಿ ಖಾಲಿ ಇಲ್ಲ. ಖುರ್ಚಿ ಖಾಲಿಯಾದರೆ ನೋಡೋಣ ನಾನು ಕೂಡ ಸಿಎಂ ಆಗುತ್ತೇನೆ, ಸೆಡ್ಡು ಹೊಡೆಯುತ್ತೇನೆ. ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆ ಅದೇ ಅಂತಿಮ ಎಂದು ಹೇಳಿದ್ದರು. ಈ ಬೆನ್ನೇಲೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಕೂಡ ಈಗ ಸಿಎಂ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಬೀಸಿದ್ದಾರೆ. ಒಟ್ಟಾರೆ ನಾನು ಸಿಎಂ ಆಗುತ್ತೇನೆ ಅಂದವರಿಗೆ ತಿರುಕನ ಕನಸು ಕಾಣಬೇಡಿ ಎಂದು ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದರು. ಇನ್ನು ವೈದ್ಯರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು ಎಮರ್ಜೆನ್ಸಿಗಳಲ್ಲಿ ಪೊಲೀಸ್ ಔಟ್ ಪೋಸ್ಟ್ ಪ್ರಾರಂಭ ಮಾಡಲು ಹೇಳಿದ್ದು ಆದಷ್ಟು ಬೇಗ ಅದು ಆರಂಭವಾಗಲಿದೆ ಎಂದರು.

Share.
Leave A Reply

Exit mobile version