Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ದಾವಣಗೆರೆ : ಜಯನಗರದ ಸಾಯಿಬಾಬಾ ಮಂದಿರದಲ್ಲಿ ಅದ್ದೂರಿ ಗುರು ಪೂರ್ಣಿಮೆ . ಸಾಯಿ ದರ್ಶನಕ್ಕೆ ಬರಲಿದ್ದಾರೆ ಸಹಸ್ರಾರು ಜನ

8 July 2025

ಬಡಾವಣೆ ಪೊಲೀಸ್ ಠಾಣೆ ಪಿಎಸ್ಐ ಲಾಡ್ಜ್ ನಲ್ಲಿ ನೇಣಿಗೆ ಶರಣು, ಅಷ್ಟಕ್ಕೂ ಪಿಎಸ್ಐ ಲೈಫ್ ಹಿಂದೆ ಏನಿತ್ತು?..ನೇಣಿಗೆ ಶರಣಾಗುವ ಮೊದಲು ಆಧಾರ್ ನಂಬರ್ ಅಳಿಸಿದ್ದು ಯಾಕೆ?

7 July 2025

ಭದ್ರಾ ಡ್ಯಾಂ ಭರ್ತಿಯಾಗಲು ಇನ್ನೇಷ್ಟು ಅಡಿ ಬಾಕಿ ಇರಬಹುದು?…ಈ ತಿಂಗಳಿನಲ್ಲಿಯೇ ನೋಡುಗರಿಗೆ ಸಿಗಲಿದೆ ಜಲಾಶಯದ ಸೊಬಗು .‌‌‌..

5 July 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ಪ್ರಮುಖ ಸುದ್ದಿ»ತುಮಕೋಸ್ ಚುನಾವಣೆ, ಇಂದೇ ಮತದಾನ, ಇಂದೇ ಫಲಿತಾಂಶ, ಮಧ್ಯಾಹ್ನ 12 ರವರೆಗೆ ಶೇ.40 ರಷ್ಟು ಮತದಾನ
ಪ್ರಮುಖ ಸುದ್ದಿ

ತುಮಕೋಸ್ ಚುನಾವಣೆ, ಇಂದೇ ಮತದಾನ, ಇಂದೇ ಫಲಿತಾಂಶ, ಮಧ್ಯಾಹ್ನ 12 ರವರೆಗೆ ಶೇ.40 ರಷ್ಟು ಮತದಾನ

15 ನಿರ್ದೇಶಕ ಸ್ಥಾನಗಳಿಗೆ ಚುನಾ ವಣೆ ನಡೆಯಲಿದ್ದು, ಚುನಾವಣಾ ಕಣದಲ್ಲಿ ಎರಡೂ ಬಣ ಸೇರಿ ಒಟ್ಟು 33 ಜನ ಅಭ್ಯರ್ಥಿಗಳಿದ್ದಾರೆ. ಹಾಲಿ ಅಧ್ಯಕ್ಷ ಆರ್.ಎಂ.ರವಿ ಮತ್ತು ಮಾಜಿ ಅಧ್ಯಕ್ಷ ಎಚ್.ಎಸ್. ಶಿವಕುಮಾ‌ರ್ ಬಣದ ನಡುವೆ ತೀವ್ರ ಪೈಪೋಟಿ
davangerevijaya.comBy davangerevijaya.com9 February 2025No Comments2 Mins Read
Facebook WhatsApp Twitter
Share
WhatsApp Facebook Twitter Telegram

ದಾವಣಗೆರೆ : ಮಧ್ಯ ಕರ್ನಾಟಕ ಬಯಲು ಸೀಮೆಯ ಅಡಕೆ ಬೆಳೆಗಾ ಪ್ರಾತಿನಿಧಿಕ ಬಹುದೊಡ್ಡ ಸಹಕಾರಿ ಸಂಸ್ಥೆಯಾದ ತುಮ್ ಕೋಸ್ ಚುನಾವಣೆ ಇಂದು ನಡೆಯುತ್ತಿದ್ದು, ಇಂದೇ ಫಲಿತಾಂಶ ಹೊರಬರಲಿದೆ.

ಬೆಳಗ್ಗೆ 9ರಿಂದ ಸಂಜೆ 4ಗಂಟೆವರೆಗೂ ಮತದಾನ ನಡೆಯಲಿದ್ದು, ರಾತ್ರಿ ವೇಳೆಗೆ ಫಲಿತಾಂಶವೂ ಹೊರ ಬೀಳುವ ಸಾಧ್ಯತೆಯಿದೆ. ಪಟ್ಟಣದ ಹೊರ ವಲಯದ ಭದ್ರಾವತಿ ರಸ್ತೆಯ ಅಜ್ಜಿಹಳ್ಳಿಯ ತರಳಬಾಳು ಸೆಂಟ್ರಲ್ ಸ್ಕೂಲ್‌ನಲ್ಲಿ ಮತದಾನ ಕೇಂದ್ರ ತೆರೆಯಲಾಗಿದೆ. ಮತಗಟ್ಟೆ ಪಟ್ಟಣದಿಂದ 1 ಕಿ.ಮೀ.ದೂರದಲ್ಲಿದ್ದು, ಮತದಾನ ಕೇಂದ್ರಕ್ಕೆ ತೆರಳುವವರಿಗೆ ತರಳಬಾಳು ಶಾಲೆಯ 4 ಬಸ್ ನಿಯೋಜಿಸ ಲಾಗಿದೆ. ಈ ಬಸ್‌ಗಳು ಚನ್ನಗಿರಿಯ ಮುಖ್ಯ ಬಸ್ ನಿಲ್ದಾಣದಲ್ಲಿ ಭಾನುವಾರ ಬೆಳಗ್ಗೆ 8.30ರಿಂದ ಕಾರ್ಯನಿರ್ವಹಿಸಲಿವೆ. ಮತದಾನ ಬೆಳಗ್ಗೆ 9 ಗಂಟೆಗೆ ಶುರುವಾಗಿದೆ.

ತುಮ್ ಕೋಸ್ ಒಟ್ಟು ಸದಸ್ಯರಲ್ಲಿ ಈವರೆಗೂ 9,420 ಮಂದಿ ಮತದಾನಕ್ಕೆ ಅರ್ಹರಾಗಿದ್ದಾರೆ. ಇನ್ನು 5205 ಜನ ಸದಸ್ಯರು ಅನರ್ಹರಾಗಿದ್ದಾರೆ. ಅರ್ಹ ಮತದಾರರ ಮತ ದಾನಕ್ಕೆ 37 ಬೂತ್ ತೆರೆಯಲಾಗಿದೆ. ಒಂದೊಮ್ಮೆ ಅನರ್ಹ ಮತದಾರರನ್ನು ಅರ್ಹರೆಂದು ನ್ಯಾಯಾಲ ‘ಯದಿಂದ ಆದೇಶ ತಂದು ಅವರೂ ಮತದಾನಕ್ಕೆ ಅರ್ಹರಾದರೆ ತುರ್ತು ಪರಿಸ್ಥಿತಿ ಎಂದು 15 ಬೂತ್ ರಚಿಸಲಾಗಿದೆ. ಜತೆಗೆ ವಿಕಲಚೇತನರಿಗಾಗಿ ಸಂಖ್ಯೆ 53 ಮತ್ತು 54ರಲ್ಲಿ ಎರಡು ಮತದಾನ ಕೊಠಡಿಗಳು ಕಾರ್ಯ ನಿರ್ವಹಿಸಲಿವೆ. ಮತಕೇಂದ್ರ ದಲ್ಲಿ ನಾನಾ ಕಡೆಗಳಲ್ಲಿ 90ಕ್ಕೂ ಅಧಿಕ ಸಿ.ಸಿ. ಕ್ಯಾಮೆರಾ ಅಳವಡಿಸಲಾಗಿದೆ.

ಅನರ್ಹರು ಅರ್ಹರ ಪಟ್ಟಿಗೆ:

ಈಗಾಗಲೇ ಎಚ್.ಎಸ್.ಶಿವಕುಮಾರ್ ಬಣದಿಂದ 3194 ಅನರ್ಹ ಮತದಾರರನ್ನು ಅರ್ಹರೆಂದು ಪರಿಗಣಿಸಲು ನ್ಯಾಯಾಲಯದಿಂದ ಆದೇಶ ತರಲಾಗಿದೆ. ಹಾಗೆ ಆರ್.ಎಂ. ರವಿ ಬಣದಿಂದ 2778 ಅನರ್ಹ ಮತದಾರರನ್ನು ಅರ್ಹ ಮತದಾರರೆಂದು ಪರಿಗಣಿಸಿ ಆದೇಶ ತಂದಿದ್ದು, ಎರಡು ಬಣ ಸೇರಿ ಕನಿಷ್ಠ 5000 ಮತದಾರರು ಮತ ಚಲಾಯಿಸಲು ಸಜ್ಜಾಗಿದ್ದಾರೆ.

ಬಣಗಳ ತುರುಸು

15 ನಿರ್ದೇಶಕ ಸ್ಥಾನಗಳಿಗೆ ಚುನಾ ವಣೆ ನಡೆಯಲಿದ್ದು, ಚುನಾವಣಾ ಕಣದಲ್ಲಿ ಎರಡೂ ಬಣ ಸೇರಿ ಒಟ್ಟು 33 ಜನ ಅಭ್ಯರ್ಥಿಗಳಿದ್ದಾರೆ. ಹಾಲಿ ಅಧ್ಯಕ್ಷ ಆರ್.ಎಂ.ರವಿ ಮತ್ತು ಮಾಜಿ ಅಧ್ಯಕ್ಷ ಎಚ್.ಎಸ್. ಶಿವಕುಮಾ‌ರ್ ಬಣದ ನಡುವೆ ತೀವ್ರ ಪೈಪೋಟಿ ನಡೆದಿದೆ. ಈಗಾಗಲೇ ತುಮ್ ಕೋಸ್ ವ್ಯಾಪ್ತಿಯಲ್ಲಿ ಎರಡು ಬಣ ತುರುಸಿನ ಪ್ರಚಾರ ನಡೆಸಿದ್ದಾರೆ. ಚುನಾವಣೆ ಒಂದು ರೀತಿ ಎಂಎಲ್‌ ಎ ಚುನಾವಣೆ ಖದರ್ ಪಡೆದು ಕೊಂಡಿದೆ. ಅಡಕೆ ನಾಡಿನಲ್ಲಿ ಚುನಾ ವಣೆ ದೊಡ್ಡ ಸದ್ದು ಮಾಡಿದ್ದು ವಿಜ ಯಲಕ್ಷ್ಮೀ ಯಾರ ಮುಡಿಗೇರಲಿದೆ ಎಂಬ ತೀವ್ರ ಕುತೂಹಲ ತುಮ್ ಕೋಸ್ ಷೇರುದಾರರಷ್ಟೇ ಅಲ್ಲದೆ ಎಲ್ಲ ಅಡಕೆ ಸಹಕಾರ ಸಂಘಗಳ ವಲಯದಲ್ಲೂ ಮೂಡಿದೆ.

ಬಿಗಿ ಪೊಲೀಸ್ ಬಂದೋಬಸ್ತ್

ತುಮ್ ಕೋಸ್ ಚುನಾವಣೆಗಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಒಬ್ಬರು ಅಡಿಷನಲ್ ಎಸ್ಪಿ, ಒಬ್ಬರು ಡಿವೈಎಸ್ಪಿ, 4 ಪಿಐ, 9 ಪಿಎಸ್‌ಐ, 17 ಎಎಸ್‌ಐ, 145 ಜನ ಪೊಲೀಸ್ ಪೇದೆ, 1 ಕೆಎಸ್‌ಆರ್‌ಪಿ ತುಕಡಿ, 2 ಡಿಎಆರ್ ತು ಕಡಿಗಳ ನಿಯೋಜಿಸಲಾಗಿದೆ. ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ತುಮ್ ಕೋಸ್ ನ 150ಕ್ಕೂ ಹೆಚ್ಚು ಸಿಬ್ಬಂದಿ ಸಹ ಚುನಾವಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.

 

Featured thomocos election topnews
Share. WhatsApp Facebook Twitter Telegram
davangerevijaya.com
  • Website

Related Posts

ದಾವಣಗೆರೆ : ಜಯನಗರದ ಸಾಯಿಬಾಬಾ ಮಂದಿರದಲ್ಲಿ ಅದ್ದೂರಿ ಗುರು ಪೂರ್ಣಿಮೆ . ಸಾಯಿ ದರ್ಶನಕ್ಕೆ ಬರಲಿದ್ದಾರೆ ಸಹಸ್ರಾರು ಜನ

8 July 2025

ಇಡಿ ಬಲೆಯಿಂದ ಹೊರಬಂದ ಮಂಜುನಾಥ್ ಗೌಡ…ಎಂಭತ್ತೇರಡು ದಿನಗಳ ನಂತರ ಮರಳಿದ ಸಹಕಾರಿ ಧುರೀಣ

3 July 2025

ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ

29 June 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,656 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,333 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,595 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
ಪ್ರಮುಖ ಸುದ್ದಿ

ದಾವಣಗೆರೆ : ಜಯನಗರದ ಸಾಯಿಬಾಬಾ ಮಂದಿರದಲ್ಲಿ ಅದ್ದೂರಿ ಗುರು ಪೂರ್ಣಿಮೆ . ಸಾಯಿ ದರ್ಶನಕ್ಕೆ ಬರಲಿದ್ದಾರೆ ಸಹಸ್ರಾರು ಜನ

By davangerevijaya.com8 July 20250

ನಂದೀಶ್ ಭದ್ರಾವತಿ, ದಾವಣಗೆರೆ ಅತ್ತ ಶಿರಡಿಯಲ್ಲಿ ಗುರುಪೂರ್ಣಿಮಾ ಹಬ್ಬವು ಭಕ್ತಿ ಭಾವದಿಂದ ಆರಂಭವಾಗಲಿದ್ದು, ಸಾವಿರಾರು ಭಕ್ತರು ಸಾಯಿನಾಮವನ್ನು ಪಠಿಸುತ್ತ ಶಿರಡಿಯನ್ನು…

ಬಡಾವಣೆ ಪೊಲೀಸ್ ಠಾಣೆ ಪಿಎಸ್ಐ ಲಾಡ್ಜ್ ನಲ್ಲಿ ನೇಣಿಗೆ ಶರಣು, ಅಷ್ಟಕ್ಕೂ ಪಿಎಸ್ಐ ಲೈಫ್ ಹಿಂದೆ ಏನಿತ್ತು?..ನೇಣಿಗೆ ಶರಣಾಗುವ ಮೊದಲು ಆಧಾರ್ ನಂಬರ್ ಅಳಿಸಿದ್ದು ಯಾಕೆ?

7 July 2025

ಭದ್ರಾ ಡ್ಯಾಂ ಭರ್ತಿಯಾಗಲು ಇನ್ನೇಷ್ಟು ಅಡಿ ಬಾಕಿ ಇರಬಹುದು?…ಈ ತಿಂಗಳಿನಲ್ಲಿಯೇ ನೋಡುಗರಿಗೆ ಸಿಗಲಿದೆ ಜಲಾಶಯದ ಸೊಬಗು .‌‌‌..

5 July 2025

ಇಡಿ ಬಲೆಯಿಂದ ಹೊರಬಂದ ಮಂಜುನಾಥ್ ಗೌಡ…ಎಂಭತ್ತೇರಡು ದಿನಗಳ ನಂತರ ಮರಳಿದ ಸಹಕಾರಿ ಧುರೀಣ

3 July 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ದಾವಣಗೆರೆ : ಜಯನಗರದ ಸಾಯಿಬಾಬಾ ಮಂದಿರದಲ್ಲಿ ಅದ್ದೂರಿ ಗುರು ಪೂರ್ಣಿಮೆ . ಸಾಯಿ ದರ್ಶನಕ್ಕೆ ಬರಲಿದ್ದಾರೆ ಸಹಸ್ರಾರು ಜನ

8 July 2025

ಬಡಾವಣೆ ಪೊಲೀಸ್ ಠಾಣೆ ಪಿಎಸ್ಐ ಲಾಡ್ಜ್ ನಲ್ಲಿ ನೇಣಿಗೆ ಶರಣು, ಅಷ್ಟಕ್ಕೂ ಪಿಎಸ್ಐ ಲೈಫ್ ಹಿಂದೆ ಏನಿತ್ತು?..ನೇಣಿಗೆ ಶರಣಾಗುವ ಮೊದಲು ಆಧಾರ್ ನಂಬರ್ ಅಳಿಸಿದ್ದು ಯಾಕೆ?

7 July 2025

ಭದ್ರಾ ಡ್ಯಾಂ ಭರ್ತಿಯಾಗಲು ಇನ್ನೇಷ್ಟು ಅಡಿ ಬಾಕಿ ಇರಬಹುದು?…ಈ ತಿಂಗಳಿನಲ್ಲಿಯೇ ನೋಡುಗರಿಗೆ ಸಿಗಲಿದೆ ಜಲಾಶಯದ ಸೊಬಗು .‌‌‌..

5 July 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,656 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,333 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,084 Views

Subscribe to Updates

Get the latest creative news from SmartMag about art & design.

Recent Posts
  • ದಾವಣಗೆರೆ : ಜಯನಗರದ ಸಾಯಿಬಾಬಾ ಮಂದಿರದಲ್ಲಿ ಅದ್ದೂರಿ ಗುರು ಪೂರ್ಣಿಮೆ . ಸಾಯಿ ದರ್ಶನಕ್ಕೆ ಬರಲಿದ್ದಾರೆ ಸಹಸ್ರಾರು ಜನ
  • ಬಡಾವಣೆ ಪೊಲೀಸ್ ಠಾಣೆ ಪಿಎಸ್ಐ ಲಾಡ್ಜ್ ನಲ್ಲಿ ನೇಣಿಗೆ ಶರಣು, ಅಷ್ಟಕ್ಕೂ ಪಿಎಸ್ಐ ಲೈಫ್ ಹಿಂದೆ ಏನಿತ್ತು?..ನೇಣಿಗೆ ಶರಣಾಗುವ ಮೊದಲು ಆಧಾರ್ ನಂಬರ್ ಅಳಿಸಿದ್ದು ಯಾಕೆ?
  • ಭದ್ರಾ ಡ್ಯಾಂ ಭರ್ತಿಯಾಗಲು ಇನ್ನೇಷ್ಟು ಅಡಿ ಬಾಕಿ ಇರಬಹುದು?…ಈ ತಿಂಗಳಿನಲ್ಲಿಯೇ ನೋಡುಗರಿಗೆ ಸಿಗಲಿದೆ ಜಲಾಶಯದ ಸೊಬಗು .‌‌‌..
  • ಇಡಿ ಬಲೆಯಿಂದ ಹೊರಬಂದ ಮಂಜುನಾಥ್ ಗೌಡ…ಎಂಭತ್ತೇರಡು ದಿನಗಳ ನಂತರ ಮರಳಿದ ಸಹಕಾರಿ ಧುರೀಣ
  • ಕಾಗದನಗರ ಶಾಲೆ ರೀ ಓಪನ್ ; ಫಲಿಸಿತು ಹೋರಾಟಗಾರ ಮಧುಸೂಧನ್ ಶ್ರಮ
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.