Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಮಂಗಳವಾರದ ರಾಶಿ ಭವಿಷ್ಯ ಹೇಗಿದೆ ತಪ್ಪದೇ ನೋಡಿ?

20 May 2025

ಜ್ಞಾನದ ಹಸಿವ ತಣಿಸುವ ವ್ಯಾಸ ಗುರು ತೇಜಸ್ವಿ ಕಟ್ಟೀಮನಿ

19 May 2025

ದಾವಣಗೆರೆ ಎಸ್ಪಿ ಉಮಾಪ್ರಶಾಂತ್ ಗೆ ಸಿಕ್ಕಿತ್ತು ಈ ಪದಕ..ಅದು ಯಾಕಾಗಿ?

18 May 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ಕ್ರೈಂ ಸುದ್ದಿ»ಅಕ್ರಮ ಮರಳಿನ ದಾಹಕ್ಕೆ, ಮುಗ್ದ ಎರಡು ಜೀವಿಗಳು ಬಲಿ, ಯಾರ ಜೀವ ಹೋದರೇ ನಮಗೇನೂ? ಎಸಿ ರೂಂನಲ್ಲಿ ಕುಳಿತ ಗಣಿ ಅಧಿಕಾರಿಗಳೇ ಇನ್ನೆಷ್ಟು ಬಲಿಗಳು ಬೇಕು ನಿಮಗೆ.!!
ಕ್ರೈಂ ಸುದ್ದಿ

ಅಕ್ರಮ ಮರಳಿನ ದಾಹಕ್ಕೆ, ಮುಗ್ದ ಎರಡು ಜೀವಿಗಳು ಬಲಿ, ಯಾರ ಜೀವ ಹೋದರೇ ನಮಗೇನೂ? ಎಸಿ ರೂಂನಲ್ಲಿ ಕುಳಿತ ಗಣಿ ಅಧಿಕಾರಿಗಳೇ ಇನ್ನೆಷ್ಟು ಬಲಿಗಳು ಬೇಕು ನಿಮಗೆ.!!

ಭೂ ಮತ್ತು ಗಣಿ ಇಲಾಖೆಯವರಿಗೆ ಸಾವಿನ ದಾಹ ಇನ್ನು ತೀರಿಲ್ಲವೇ? ಖಡಕ್ ಎಸ್ಪಿಗೆ ದಾರಿ ತಪ್ಪಿಸುತ್ತಿದ್ದಾರಾ ಲೋಕಲ್ ಪೊಲೀಸ್? ..
davangerevijaya.comBy davangerevijaya.com25 March 2024Updated:25 March 2024No Comments3 Mins Read
Facebook WhatsApp Twitter
Share
WhatsApp Facebook Twitter Telegram

ಹರಿಹರ: ಗಣಿ ಸಚಿವರ ಊರಿನಲ್ಲಿ ಅಕ್ರಮ ಮರಳು ದಂಧೆ ಜೋರಾಗಿದ್ದು, ಮುಗ್ದ ಎರಡು ಜೀವಗಳು ಗಣಿ ಅಧಿಕಾರಿಗಳ ನಿರ್ಲಕ್ಷಕ್ಕೆ ಬಲಿಯಾಗಿವೆ.

ಹೌದು…ಕಳೆದ ರಾತ್ರಿ ನದಿ ಹರಳಹಳ್ಳಿ ಗುತ್ತೂರು ಗ್ರಾಮದ ಮಧ್ಯ ಹರಿಯುತ್ತಿರುವ ತುಂಗಭದ್ರ ನದಿಯಲ್ಲಿ ಈಜಲು ಹೋದ ಒಂದೇ ಕುಟುಂಬದ ಎರಡು ಮುಗ್ಧ ಬಾಲಕರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ನದಿ ಹರಳಹಳ್ಳಿ ಗ್ರಾಮದ ಬಸವರಾಜ್ (12) ಹಾಗೂ ನಾಗರಾಜ್ (10) ವರ್ಷದ ಬಾಲಕರಿಬ್ಬರು ತುಂಗಭದ್ರ ನದಿ ಮಧ್ಯದಲ್ಲಿ ಇರುವ ನೀರು ತುಂಬಿದ ಗುಂಡಿಯಲ್ಲಿ ಈಜು ಬಾರದೆ ಸಾವನ್ನಪ್ಪಿದ್ದಾರೆ. ಇವರು ನದಿ ಅರಳಹಳ್ಳಿ ಗ್ರಾಮದ ಮಂಜಪ್ಪ ಎಂಬುವರ ಮಕ್ಕಳು ಎಂದು ಗುರುತಿಸಲಾಗಿದೆ.

ಈ ಇಬ್ಬರು ಬಾಲಕರು ನಿನ್ನ ದಿನ ಬೆಳಗ್ಗೆ  12:00 ಸಮಯದಲ್ಲಿ ನದಿಯ ಕಡೆ ಹೋಗಿದ್ದಾರೆ. ಅಲ್ಲದೇ ಬೇಸಿಗೆ ಎಂದು  ಈಜಾಡಲು ನದಿಗೆ ಇಳಿದಿದ್ದಾರೆ. ಆದರೆ ನದಿಯ ಮಧ್ಯದಲ್ಲಿ ಇವರಿಗೆ ಅರಿವಿಲ್ಲದ ದೊಡ್ಡ ದೊಡ್ಡ ಗಾತ್ರದ ಗುಂಡಿಗಳಿದ್ದು ಅವು ನೀರು ತುಂಬಿಕೊಂಡ ಪರಿಣಾಮ ಈ ಮಕ್ಕಳ ಅರಿವಿಗೆ ಗುಂಡಿ ಇರುವುದು ಕಂಡುಬಂದಿಲ್ಲ.‌ಪರಿಣಾಮ  ಗುಂಡಿಯಲ್ಲಿ ಮಕ್ಕಳು ಈಜಾಡಿ ಮೇಲೆ ಬರಲು ಸಾಧ್ಯವಾಗದೆ ಅಲ್ಲೇ ಮೃತಪಟ್ಟಿದ್ದಾರೆ.

ಅಕ್ರಮ ಮರಳು ಸಾಗಣೆ ತಡೆಯಲು ಗಣಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ

ದಾವಣಗೆರೆ ಜಿಲ್ಲೆಯ ಭೂ ಮತ್ತು ಗಣಿ ಇಲಾಖೆಯ ಅಧಿಕಾರಿಗಳು ಅಮಾಯಕ ಜೀವಿಗಳ ಜೊತೆ ಚೆಲ್ಲಾಟವಾಡುತ್ತಿದ್ದಾರೆ .ಅವರಿಗೆ ಬಡ ಹಾಗೂ ಮಧ್ಯಮ ವರ್ಗದ ಜನರ ಜೀವಗಳೇಂದರೇ ಡೋಂಟ್ ಕೇರ್. ಇವರಿಗೆ ಸಾವಿನ ದಾಹ ನೀಗಿದಂತೆ ಕಾಣುತ್ತಿಲ್ಲ. ಇವರಿಗೆ ಇನ್ನೆಷ್ಟು ಅಮಾಯಕ ಜನರ ಜೀವಗಳು ಬೇಕಾಗಿದೆ. 

ಇಲಾಖೆಯ ರೂಮಿನಲ್ಲಿ ಕುಳಿತುಕೊಳ್ಳುವ ದಪ್ಪ ಚರ್ಮದ ಮಂದ ಬುದ್ಧಿಯ ಅಧಿಕಾರಿಗಳ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ. ಅವರು ಕ್ರಮ ಕೈಗೊಂಡಿದ್ದರೇ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೈನ್ಯ ಜಿಲ್ಲಾಧ್ಯಕ್ಷರಾದ ಮಾಕ್ನೂರು ಹೀರಣ್ಣ ಅವರು ನಮ್ಮ ಮಾಧ್ಯಮದೊಂದಿಗೆ ಮಾಹಿತಿಯನ್ನು ಹಂಚಿಕೊಂಡರು.

ಭೂ ಮತ್ತು ಗಣಿ ಇಲಾಖೆಯವರ ಬೇಜವಾಬ್ದಾರಿತನದಿಂದ ಈ ಸಾವುಗಳು ಸಂಭವಿಸಿದೆ. ಈ ಸಾವಿನ ನೇರ ಹೊಣೆ ಭೂ ಮತ್ತು ಗಣಿ ಇಲಾಖೆಯ ಅಧಿಕಾರಿಗಳು ಹೊತ್ತುಕೊಳ್ಳಬೇಕು. ಅವರ ನಿರ್ಲಕ್ಷವೇ ಈ ಎಲ್ಲಾ ಅವಾಂತರಗಳಿಗೆ ಕಾರಣವಾಗಿದೆ. ಕೂಡಲೆ ನೊಂದ ಕುಟುಂಬದವರಿಗೆ ಸರ್ಕಾರ ಪರಿಹಾರವನ್ನು ಒದಗಿಸಬೇಕು ಹಾಗೂ ದಾವಣಗೆರೆ ಜಿಲ್ಲಾ ಭೂ ಮತ್ತು ಗಣಿ ಇಲಾಖೆಯ ಅಧಿಕಾರಿಗಳನ್ನು ಅಮಾನತ್ತಿನಲ್ಲಿಟ್ಟು, ಕಾನೂನು ರೀತಿ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಭೂ ಮತ್ತು ಗಣಿ ಇಲಾಖೆಯ ಅಧಿಕಾರಿಗಳು ಕರ್ತವ್ಯದಲ್ಲಿ ಪ್ರಾಮಾಣಿಕತೆ ತೋರುತ್ತಿಲ್ಲ ಎಂಬುದು ಈ ನದಿ ದಡದಲ್ಲಿ ಮೇಲೆ ಇರುವ ಗುಂಡಿಗಳೇ ಸಾಕ್ಷಿಯಾಗಿ ಹೇಳುತ್ತಿವೆ. ತಮ್ಮ ಕರ್ತವ್ಯದಲ್ಲಿ ಪ್ರಾಮಾಣಿಕತೆ ತೋರಿದ್ದರೆ ತುಂಗಭದ್ರಾ ನದಿಯ ನೈಸರ್ಗಿಕ ಸೌಂದರ್ಯ ಹಾಳಾಗುತ್ತಿರಲಿಲ್ಲ. ನದಿಯ ಮಧ್ಯ ಭಾಗದಲ್ಲಿ ಬೃಹತ್ ಗಾತ್ರದ ಗುಂಡಿಗಳು ಸೃಷ್ಟಿಯಾಗುತ್ತಿರಲಿಲ್ಲ. ಒಮ್ಮೆ ಇಲ್ಲಿ ಕಣ್ಣಾಯಿಸಿದರೆ ಬಳ್ಳಾರಿ ಗಣಿಗಾರಿಕೆಯನ್ನ ಮೀರಿಸುವಂತಿದೆ ಈ ಪ್ರದೇಶ. ಇದಕ್ಕೆಲ್ಲಾ ಕುಮ್ಮಕ್ಕು ದಾವಣಗೆರೆ ಜಿಲ್ಲಾ ಭೂ ಮತ್ತು ಗಣಿ ಇಲಾಖೆಯ ಅಧಿಕಾರಿಗಳು ಎಂದು ನದಿ ಹರಳಹಳ್ಳಿ ಗ್ರಾಮದ ಶಿವಕುಮಾರ್ ಅವರು ಭೂ ಮತ್ತು ಗಣಿ ಇಲಾಖೆಯ ಅಧಿಕಾರಿಗಳ ಮೇಲೆ ಗಂಭೀರವಾದ ಆರೋಪ ಮಾಡಿದ್ದಾರೆ.

ಕಳೆದ ಒಂದು ತಿಂಗಳಿಂದ ಈಚೆ ಭೂ ಮತ್ತು ಗಣಿ ಇಲಾಖೆಯ ಬೇಜವಾಬ್ದಾರಿತನದಿಂದ 5 ಸಾವುಗಳು ಸಂಭವಿಸಿದೆ. ಇವರಿಗೆ ಅಮಾಯಕ ಜೀವಿಗಳ ಸಾವಿನ ದಾಹ ತೀರಿದಂತೆ ಕಾಣುತ್ತಿಲ್ಲ .ಇವರಿಗೆ ಇನ್ನೆಷ್ಟು ಬಲಿಗಳು ಬೇಕು ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

ದಾವಣಗೆರೆ ಜಿಲ್ಲಾ ಭೂ ಮತ್ತು ಗಣಿ ಇಲಾಖೆಯ ಅಧಿಕಾರಿಗಳೇ ಮುಗ್ಧ ಮಕ್ಕಳ ಸಾವಿನ ಹೊಣೆಯನ್ನ ಹೊತ್ತು ತಮ್ಮ ಕುರ್ಚಿಗೆ ಅಂಟಿಕೊಳ್ಳದೆ ಕರ್ತವ್ಯದಿಂದ ನಿರ್ಗಮಿಸಿ. ನಿಮ್ಮ ಕೈಯಲ್ಲಿ ಇಲಾಖೆಯನ್ನು ನಡಿಸುವ ನೈತಿಕತೆ ನಿಮಗಿಲ್ಲ. ಕೂಡಲೇ ಕರ್ತವ್ಯದಿಂದ ನಿರ್ಗಮಿಸಿ. ನಿಮ್ಮಿಂದ ಭೂತಾಯಿಯ ಒಡಲು ದಿನದಿಂದ ದಿನಕ್ಕೆ ಬಯ್ಯುತ್ತಿದ್ದಾರೆ. ಅಂತರ್ಜಲ ಮಟ್ಟ ಕುಸಿಯುತ್ತಿದೆ. ಭೂ ಮತ್ತು ನದಿಯ ನೈಸರ್ಗಿಕ ಸೌಂದರ್ಯಕ್ಕೆ ಧಕ್ಕೆ ಬರುತ್ತಿದೆ. ಅಮಾಯಕ ಜೀವಿಗಳು ದಿನದಿಂದ ದಿನಕ್ಕೆ ಸಾವನ್ನಪ್ಪುತ್ತಿವೆ. ಕೂಡಲೇ ನೀವು ಈ ಸಾವಿನ ಜವಾಬ್ದಾರಿಯನ್ನ ಹೊತ್ತು ನೊಂದ ಕುಟುಂಬಗಳಿಗೆ ಪರಿಹಾರ ಒದಗಿಸಿಕೊಡುವ ನಿಟ್ಟಿನಲ್ಲಿ ತಮ್ಮ ಕರ್ತವ್ಯದಲ್ಲಿ ಪ್ರಾಮಾಣಿಕತೆ ತೋರಿ ಇಲ್ಲದಿದ್ದರೆ ಕರ್ತವ್ಯದಿಂದ ನಿರ್ಗಮಿಸಿ ಎನ್ನುತ್ತಾರೆ ಸಾರ್ವಜನಿಕರು.

ಪ್ರತಿ ಬಾರಿಯೂ ಮಾಧ್ಯಮದವರು ಅಕ್ರಮ ಕಲ್ಲು ಮಣ್ಣು ಮರಳು ಗಣಿಗಾರಿಕೆಯಿಂದ ಮುಂದಾಗುವ ಅನಾಹುತಗಳ ಬಗ್ಗೆ ಎಚ್ಚರಿಕೆಯನ್ನು ನೀಡುತ್ತಲೇ ಬಂದಿದ್ದಾರೆ .ಆದರೆ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಅಧಿಕಾರಿಗಳು ಅಮಾಯಕ ಜೀವಿಗಳನ್ನು ಬಲಿಪಡಿಸುತ್ತಿದ್ದಾರೆ. ನಿಜವಾಗಿಯೂ ಮಕ್ಕಳ ಸಾವಿನ ದೃಶ್ಯವನ್ನು ನೋಡಿದರೆ ಎಂತವರಿಗಾದರೂ ಕರುಳು ಚುರುಕೆನ್ನುತ್ತದೆ.

Davangere Department of Mines Featured go for a swim ... Harihara Top News Tungabhadra river two dead ಇಬ್ಬರ ಸಾವು ಈಜಾಡಲು ಹೋಗಿ ಗಣಿ ಇಲಾಖೆ ತುಂಗಭದ್ರಾನದಿ ದಾವಣಗೆರೆ ಹರಿಹರ
Share. WhatsApp Facebook Twitter Telegram
davangerevijaya.com
  • Website

Related Posts

ದಾವಣಗೆರೆ ಎಸ್ಪಿ ಉಮಾಪ್ರಶಾಂತ್ ಗೆ ಸಿಕ್ಕಿತ್ತು ಈ ಪದಕ..ಅದು ಯಾಕಾಗಿ?

18 May 2025

ಅಪಘಾತದಲ್ಲಿ ಕುಟುಂಬವನ್ನೇ ಕಳೆದುಕೊಂಡ ಕ್ರಷರ್ ಮಾಲೀಕ : ನರಳಿ, ನರಳಿ ಮೃತಪಟ್ಟ ಒಂದು ವರ್ಷ, ನಾಲ್ಕುವರ್ಷದ ಮಗು…ಹಾಗಾದ್ರೆ ಆ ಘಟನೆ ಹೇಗಾಯ್ತು?

18 May 2025

ಪ್ರೀತಿ ಮಾಡಿದವನನ್ನೇ ಮಟಾಷ್ ಮಾಡಿದ “ಕೋಮಲ” ಕೈ

17 May 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,631 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,205 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,065 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,580 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
ಪ್ರಮುಖ ಸುದ್ದಿ

ಮಂಗಳವಾರದ ರಾಶಿ ಭವಿಷ್ಯ ಹೇಗಿದೆ ತಪ್ಪದೇ ನೋಡಿ?

By davangerevijaya.com20 May 20250

*💫🛕ಓಂ ಶ್ರೀ ಗಾಯಿತ್ರಿ ವಿಶ್ವಕರ್ಮ ಪರಬ್ರಹ್ಮಣಿ ನಮಃ 🛕💫* *🕉️ದ್ವಾದಶ ರಾಶಿಗಳ ದಿನ ಭವಿಷ್ಯ#ತಾರೀಕು#20/05/2025 ಮಂಗಳವಾರ🕉️* *01,✨ಮೇಷ ರಾಶಿ✨* 📖,ಆರ್ಥಿಕ…

ಜ್ಞಾನದ ಹಸಿವ ತಣಿಸುವ ವ್ಯಾಸ ಗುರು ತೇಜಸ್ವಿ ಕಟ್ಟೀಮನಿ

19 May 2025

ದಾವಣಗೆರೆ ಎಸ್ಪಿ ಉಮಾಪ್ರಶಾಂತ್ ಗೆ ಸಿಕ್ಕಿತ್ತು ಈ ಪದಕ..ಅದು ಯಾಕಾಗಿ?

18 May 2025

ಅಪಘಾತದಲ್ಲಿ ಕುಟುಂಬವನ್ನೇ ಕಳೆದುಕೊಂಡ ಕ್ರಷರ್ ಮಾಲೀಕ : ನರಳಿ, ನರಳಿ ಮೃತಪಟ್ಟ ಒಂದು ವರ್ಷ, ನಾಲ್ಕುವರ್ಷದ ಮಗು…ಹಾಗಾದ್ರೆ ಆ ಘಟನೆ ಹೇಗಾಯ್ತು?

18 May 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಮಂಗಳವಾರದ ರಾಶಿ ಭವಿಷ್ಯ ಹೇಗಿದೆ ತಪ್ಪದೇ ನೋಡಿ?

20 May 2025

ಜ್ಞಾನದ ಹಸಿವ ತಣಿಸುವ ವ್ಯಾಸ ಗುರು ತೇಜಸ್ವಿ ಕಟ್ಟೀಮನಿ

19 May 2025

ದಾವಣಗೆರೆ ಎಸ್ಪಿ ಉಮಾಪ್ರಶಾಂತ್ ಗೆ ಸಿಕ್ಕಿತ್ತು ಈ ಪದಕ..ಅದು ಯಾಕಾಗಿ?

18 May 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,631 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,205 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,065 Views

Subscribe to Updates

Get the latest creative news from SmartMag about art & design.

Recent Posts
  • ಮಂಗಳವಾರದ ರಾಶಿ ಭವಿಷ್ಯ ಹೇಗಿದೆ ತಪ್ಪದೇ ನೋಡಿ?
  • ಜ್ಞಾನದ ಹಸಿವ ತಣಿಸುವ ವ್ಯಾಸ ಗುರು ತೇಜಸ್ವಿ ಕಟ್ಟೀಮನಿ
  • ದಾವಣಗೆರೆ ಎಸ್ಪಿ ಉಮಾಪ್ರಶಾಂತ್ ಗೆ ಸಿಕ್ಕಿತ್ತು ಈ ಪದಕ..ಅದು ಯಾಕಾಗಿ?
  • ಅಪಘಾತದಲ್ಲಿ ಕುಟುಂಬವನ್ನೇ ಕಳೆದುಕೊಂಡ ಕ್ರಷರ್ ಮಾಲೀಕ : ನರಳಿ, ನರಳಿ ಮೃತಪಟ್ಟ ಒಂದು ವರ್ಷ, ನಾಲ್ಕುವರ್ಷದ ಮಗು…ಹಾಗಾದ್ರೆ ಆ ಘಟನೆ ಹೇಗಾಯ್ತು?
  • ಭಾನುವಾರದ ನಿಮ್ಮ ರಾಶಿ ಭವಿಷ್ಯ ಏನಿದೆ ತಪ್ಪದೇ ನೋಡಿ?
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.