ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯ್ ಕುಮಾರ್ ಅವರು ಸಮೀಪದ ಸತ್ಯನಾರಾಯಣ ಕ್ಯಾಂಪ್ ನಲ್ಲಿನ ಶ್ರೀರಾಮ ದೇವಸ್ಥಾನದಲ್ಲಿ ನಡೆದ ವಿಶೇಷ ಪೂಜೆ, ಹೋಮ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.ಸತ್ಯನಾರಾಯಣ ಕ್ಯಾಂಪ್ ನ ಜನರು ಪಕ್ಷೇತರರಾಗಿ ಕಣಕ್ಕಿಳಿದಿರುವ ವಿನಯ್ ಕುಮಾರ್ ಅವರಿಗೆ ಶ್ರೀ ರಾಮ ದೇವರು ಚುನಾವಣೆಯಲ್ಲಿ ಗೆಲ್ಲುವಂತೆ ಆಶೀರ್ವದಿಸಲಿ ಎಂದು ಪ್ರಾರ್ಥಿಸಿದರು.
ದೇವಸ್ಥಾನದಲ್ಲಿ ವಿಶೇಷ ಪೂಜೆ, ಹೋಮ, ಹವನ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳು ಯಶಸ್ವಿಯಾಗಿ ಜರುಗಿತು. ಜಿ.ಬಿ. ವಿನಯ್ ಕುಮಾರ್ ಪಾಲ್ಗೊಂಡು ಶ್ರೀರಾಮನ ದರ್ಶನ ಪಡೆದರಲ್ಲದೇ ಸ್ವಾಮಿಯ ಕೃಪೆಗೆ ಪಾತ್ರರಾದರು.
ಈ ವೇಳೆ ಮಾತನಾಡಿದ ವಿನಯ್ ಕುಮಾರ್ ಅವರು, ಜನರು ತೋರುತ್ತಿರುವ ಪ್ರೀತಿ, ವಿಶ್ವಾಸ ಕಂಡು ನನ್ನಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದೆ↵. ಕ್ಯಾಂಪ್ ನಲ್ಲಿನ ವಾಸಿಗಳು ನನ್ನನ್ನು ಕರೆದು ಧಾರ್ಮಿಕ ಕಾರ್ಯಕ್ರಮ ನಡೆಸಿದ್ದು ಖುಷಿ ತಂದಿದೆ. ಅವರ ನನ್ನ ಮೇಲಿಟ್ಟಿರುವ ವಿಶ್ವಾಸ ಉಳಿಸಿಕೊಳ್ಳುತ್ತೇನೆ. ಈ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿ ಲೋಕಸಭೆಗೆ ಕಳುಹಿಸಿಕೊಡಿ. ನಿಮ್ಮ ಧ್ವನಿಯಾಗಿ ಕೆಲಸ ಮಾಡುತ್ತೇನೆ. ಒಂದು ಅವಕಾಶ ಕೊಟ್ಟು ನೋಡಿ ಎಂದು ಹೇಳಿದರು.ಶ್ರೀರಾಮನ ದರ್ಶನ ಪಡೆದ ಬಳಿಕ ಶಕ್ತಿ ಹೆಚ್ಚಿದೆ. ಶ್ರೀರಾಮನ ಆದರ್ಶಗಳು ನಮಗೆಲ್ಲರಿಗೂ ಆದರ್ಶ, ದಾರಿದೀಪ. ಮರ್ಯಾದಾ ಪುರುಷೋತ್ತಮನ ಆರಾಧನೆ ಮಾಡುವ ಮೂಲಕ ಜನರು ನನ್ನ ಮೇಲಿಟ್ಟಿರುವ ನಂಬಿಕೆ ತೋರಿಸುತ್ತದೆ. ಇದಕ್ಕೆ ಚ್ಯುತಿ ಬಾರದಂತೆ ಕೆಲಸ ನಿರ್ವಹಿಸುತ್ತೇನೆ ಎಂದು ತಿಳಿಸಿದರು.