![](https://davangerevijaya.com/wp-content/uploads/2024/07/IMG-20240719-WA01231.jpg)
ದಾವಣಗೆರೆ : ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ ವಿನಯ್ ಕುಮಾರ್ ಮನೆ ಮೇಲೆ ಈ ದಿನ ಚುನಾವಣೆ ಅಧಿಕಾರಿಗಳು ದಾಳಿ ನಡೆಸಿದ್ದಾರೆಮ
ಈ ಚುನಾವಣೆಯಲ್ಲಿ ಸಂಪೂರ್ಣ ಸೋಲಿನ ಭೀತಿಯನ್ನು ಮನಗಂಡ ಕೆಲವು ರಾಷ್ಟ್ರೀಯ ಪಕ್ಷಗಳ ಪ್ರಭಲ ನಾಯಕರು ಇದು ಉದ್ದೇಶಪೂರ್ವಕವಾಗಿ ಮಾಡಿಸಿದ್ದಾರೆ ಎಂದು ವಿನಯ್ ಕುಮಾರ್ ಅಭಿಮಾನಿಗಳು ಹೇಳಿದ್ದಾರೆ.
![](https://davangerevijaya.com/wp-content/uploads/2024/07/IMG-20240715-WA0352.jpg)
ದೇಶದ ಇತಿಹಾಸದಲ್ಲೇ ಚುನಾವಣಾ ಸಂದರ್ಭದಲ್ಲಿ ಇಂತಹ ಉದ್ದೇಶಪೂರ್ವಕ ದಾಳಿ ನಡೆಸಿರುವುದು ಇದೇ ಮೊದಲು. ಹೀಗಿದ್ದಾಗ ಎರಡು ರಾಷ್ಟ್ರೀಯ ಪಕ್ಷಗಳನ್ನು ನಮ್ಮ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾದ ವಿನಯ್ ಕುಮಾರ್ ರವರು ಎಷ್ಟರ ಮಟ್ಟಿಗೆ ನಿದ್ದೆ ಗೆಡಿಸಿರಬಹುದೆಂದು. ಹಾಗಾಗಿ ದಾವಣಗೆರೆ ಲೋಕಸಭಾ ಕ್ಷೇತ್ರದ ಸಮಸ್ತ ಮತದಾರ ನಾಗರಿಕ ಬಂಧುಗಳೇ, ನಾವು ಈ ಚುನಾವಣೆಯನ್ನು ಇನ್ನು ಗಂಭೀರವಾಗಿ ತೆಗೆದುಕೊಂಡು ಇನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಿ, ಕ್ಷೇತ್ರದಲ್ಲಿ ಪ್ರಜ್ಞಾವಂತ ಸ್ವಾಭಿಮಾನಿ ಮತದಾರರಿದ್ದೇವೆ ಎಂದು ಈ ಎರಡು ರಾಷ್ಟ್ರೀಯ ಪಕ್ಷಗಳಿಗೆ ಪಾಠ ಕಲಿಸಬೇಕೆಂದು ಈ ಮೂಲಕ ತಮ್ಮಲ್ಲಿ ಕಳಕಳಿಯಿಂದ ಬೇಡಿಕೊಳ್ಳುತ್ತೇನೆ ಎಂದು ಅವರ ಅಭಿಮಾನಿ ಹುಚ್ಚಂಗಿಪುರದ ಯುಸಿ ರವಿ ತಿಳಿಸಿದ್ದಾರೆ.
![](https://davangerevijaya.com/wp-content/uploads/2024/07/IMG-20240716-WA0138.jpg)