Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ಕ್ರೈಂ ಸುದ್ದಿ»ಕೆರೆಯಲ್ಲಿ ಈಜಲು ಹೋಗಿದ್ದ ಐವರಲ್ಲಿ ಇಬ್ಬರು ಏನಾದ್ರೂ?
ಕ್ರೈಂ ಸುದ್ದಿ

ಕೆರೆಯಲ್ಲಿ ಈಜಲು ಹೋಗಿದ್ದ ಐವರಲ್ಲಿ ಇಬ್ಬರು ಏನಾದ್ರೂ?

ಕಳೆದ ವರ್ಷ ಸುರಿದ ಭಾರಿ ಮಳೆ ಮತ್ತು 57 ಕೆರೆ ತುಂಬಿಸುವ ಯೋಜನೆಯಿಂದ ಭರ್ತಿಯಾಗಿದ್ದ ದೊಡ್ಡ ಕೆರೆಯಲ್ಲಿ ಸಾಕಷ್ಟು ನೀರು ತುಂಬಿತ್ತು.
davangerevijaya.comBy davangerevijaya.com11 April 2025No Comments2 Mins Read
Facebook WhatsApp Twitter
Share
WhatsApp Facebook Twitter Telegram

ಜಗಳೂರು :ತಾಲೂಕಿನ ಭರಮಸಮುದ್ರ ಕೆರೆಯಲ್ಲಿ ಈಜಲು ಹೋಗಿದ್ದ ಐವರಲ್ಲಿ ಇಬ್ಬರು ಯುವಕರು ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೇಸಿಗೆ ರಜೆ ಹಿನ್ನೆಲೆ ಬಿಸಿಲು ಹೆಚ್ಚಾಗಿರುವ ಕಾರಣ ತಾಪ ತಣಿಸಲು ಈಜಲು ಹೋಗಿದ್ದ ಭರಮಸಮುದ್ರ ಗ್ರಾಮದ ಬಸವರಾಜ್, ರೇಣುಕಮ್ಮ ಪುತ್ರ ಅಜ್ಜಯ್ (18), ತಿಪ್ಪೇಸ್ವಾಮಿ, ಮಂಜುಳಾ ದಂಪತಿ ಪುತ್ರ ಓಬಳೇಶ್ (20) ನೀರುಪಾಲಾಗಿದ್ದಾರೆ.

ಕಳೆದ ವರ್ಷ ಸುರಿದ ಭಾರಿ ಮಳೆ ಮತ್ತು 57 ಕೆರೆ ತುಂಬಿಸುವ ಯೋಜನೆಯಿಂದ ಭರ್ತಿಯಾಗಿದ್ದ ದೊಡ್ಡ ಕೆರೆಯಲ್ಲಿ ಸಾಕಷ್ಟು ನೀರು ತುಂಬಿತ್ತು. ಇತ್ತೀಚೆಗೆ ಅಜ್ಜಯ್ಯ ಪಿಯುಸಿ ಪರೀಕ್ಷೆ ಮುಗಿಸಿದ್ದ. ಓಬಳೇಶ್ ಬೆಂಗಳೂರಿನ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ. ಇಬ್ಬರು ಸ್ನೇಹಿತರು ಗ್ರಾಮದ ಇತರ ಮೂವರು ಸ್ನೇಹಿರೊಂದಿಗೆ ಸೇರಿ ಗ್ರಾಮದಕೆರೆಯಲ್ಲಿ ಈಜಲುಹೋಗಿದ್ದಾರೆ. ಮೃತ ಓಬಳೇಶ್‌ಗೆ ಈಜು ಬರುತ್ತಿರಲಿಲ್ಲ.

ಜಾಗೃತಿ ಫಲಕ ಇದ್ದರೂ ನಿರ್ಲಕ್ಷ್ಯ

ಈ ಹಿಂದೆ ಹಿರೇಮಲ್ಲನಹೊಳೆ ಗ್ರಾಮದಲ್ಲಿ ಮಗುವೊಂದು ಕೆರೆಯಲ್ಲಿ ಬಿದ್ದು ಸಾವನ್ನಪ್ಪಿದಾಗ ಶಾಸಕ ಬಿ.ದೇವೇಂದ್ರಪ್ಪ, ತಾಪಂ ಇಒ ಕೆಂಚಪ್ಪ ಭೇಟಿ ನೀಡಿ ತುಂಬಿರುವ ಕೆರೆಗಳಲ್ಲಿ ಯಾರೂ ಈಜಲು ಹೋಗದಂತೆ ನಿರ್ಬಂಧ ಹೇರಿ ಜಾಗೃತಿಯ ನಾಮಫಲಕಗಳ ಪ್ಲೆಕ್ಸ್‌ಗಳನ್ನು ಅಳವಡಿಸಿದ್ದರು. ಆದರೂ ಸಹ ರಜೆ ಹಿನ್ನೆಲೆ ಯುವಕರು ಕೆರೆಯಲ್ಲಿ ಈಜಲು ಹೋಗಿ ಮೃತಪಟ್ಟಿದ್ದಾರೆ. ಘಟನೆ ಬಗ್ಗೆ ಶಾಸಕ ಬಿ.ದೇವೇಂದ್ರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಮೃತ ಕುಟುಂಬಕ್ಕೆ, ಶಾಸಕ ದೇವೇಂದ್ರಪ್ಪ, ಮಾಜಿ ಶಾಸಕ ಎಸ್.ವಿ.ರಾಮಚಂದ್ರ, ಎಚ್.ಪಿ.ರಾಜೇಶ್, ಮಾಜಿ ಜಿ.ಪಂ.ಸದಸ್ಯ ಕೆ.ಪಿ. ಪಾಲಯ್ಯ ಸಾಂತ್ವನ ಹೇಳಿದ್ದಾರೆ.

ಆಳವಾದ ಗುಂಡಿಯಲ್ಲಿ ಹೆಚ್ಚಿನ ಪ್ರಮಾಣದ ನೀರು ಇದ್ದ ಕಾರಣ ಆತ ಮುಳುಗಿದ್ದಾನೆ. ಓಬಳೇಶ್‌ನನ್ನು ರಕ್ಷಿಸಲುಹೋದ ಅಜ್ಜಯ್ಯ ಸಹ ನೀರಿನಲ್ಲಿ ಮುಳುಗಿ ದ್ದಾನೆ. ಉಳಿದ ಮೂರು ಜನ ಯುವಕರು ನೀರಿನಿಂದ ಹೊರ ಬಂದು ಕೂಗಿಕೊಂಡಿ ದ್ದಾರೆ. ಅಷ್ಟರಲ್ಲಾಗಲೇ ಇಬ್ಬರೂ ಮುಳುಗಿ ದ್ದರು.

ತಕ್ಷಣ ಸ್ಥಳೀ ಯರು ರಕ್ಷಣೆಗೆ ಬಂದರೂ ಯುವಕರು ಕಾಣದ ಹಿನ್ನೆಲೆ ಅಗ್ನಿ ಶಾಮಕ ಠಾಣೆಗೆ ಕರೆ ಮಾಡಿದರು. ನಂತರ ದೇಹಗಳು ಪತ್ತೆಯಾಗಿವೆ. ನೀರು ಕುಡಿದಿದ್ದರೂ ಬದುಕಿರಬಹುದು ಎಂಬ ಕಾರಣದಿಂದ ತಕ್ಷಣ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಇಬ್ಬರು ಯುವಕರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದರು.

ಮೃತರ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.  ಜಗಳೂರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಬಸವರಾಜ್ ಪ್ರಕರಣ ದಾಖಲಿಸಿದ್ದಾರೆ. ಮೃತದೇಹ ಗಳನ್ನು ಜಗಳೂರಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತುಎಂದುಸಂಬಂಧಿಕರು ತಿಳಿಸಿದರು.ಸ್ಥಳಕ್ಕೆ ಪಿಎಸ್‌ಐ ಗಾದಿಲಿಂಗಪ್ಪ, ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು

Featured topnews What if two of the five people who went swimming in the lake died?
Share. WhatsApp Facebook Twitter Telegram
davangerevijaya.com
  • Website

Related Posts

ಕಾಲ್ತುಳಿತಕ್ಕೆ 11 ಜನ ಸಾವು, ಕಮಿಷನರ್ ದಯಾನಂದ ಅಮಾನತು : ಸಿಎಂ ಸಿದ್ದರಾಮಯ್ಯ ನಡೆಗೆ ನಿವೃತ್ತ ಪೊಲೀಸ್ ಕೃಷ್ಣಪ್ಪ ಆಕ್ರೋಶ

7 June 2025

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಮಂಜುನಾಥ್ ಗೌಡ ಪತ್ನಿಗೆ ಬಿಗ್ ಶಾಕ್ ನೀಡಿದ ಇಡಿ !

6 June 2025

ಶಿವಮೊಗ್ಗ : ಆರ್ ಸಿ ಬಿ ಗೆಲುವಿನ ಸಂಭ್ರಮಾಚರಣೆ ವೇಳೆ ನಡೆಯಿತು ಈ ಘೋರ ದುರಂತ

4 June 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,319 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,081 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,586 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
ಪ್ರಮುಖ ಸುದ್ದಿ

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

By davangerevijaya.com12 June 20250

*ದಾವಣಗೆರೆಯಲ್ಲಿ ಅಂಚೆ  ವಿಭಾಗೀಯ  ಕಚೇರಿ ಬರಲು ಇವರು ಕಾರಣ * ದಾವಣಗೆರೆ ಅಂಚೆ ಇಲಾಖೆ ಪ್ರಥಮ ಅಧೀಕ್ಷಕ *ನಿಷ್ಠೆ, ಪ್ರಾಮಾಣಿಕತೆಯಿಂದ…

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025

ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

10 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,319 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,081 Views

Subscribe to Updates

Get the latest creative news from SmartMag about art & design.

Recent Posts
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
  • ಆರ್ ಸಿಬಿ ವಿಜಯೋತ್ಸವ ವೇಳೆ 11 ಜನರ ಸಾವು : ಸಿಬಿಐಗೆ ವಹಿಸಲು ಮಾಜಿ ಸಚಿವ ಒತ್ತಾಯ
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.