Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ರಾಜಕೀಯ ಸುದ್ದಿ»BJPಗೆ ಕೇಜ್ರಿವಾಲ್ ಮಹಾ ಆಘಾತ !?, ಮೋದಿ ಮತ್ತೆ ಪ್ರಧಾನಿಯಾಗೋದೇ ಇಲ್ವಾ?75 ವರ್ಷ ವಯೋಮಿತಿ.. ಮೋದಿಗೆ No ರೂಲ್?
ರಾಜಕೀಯ ಸುದ್ದಿ

BJPಗೆ ಕೇಜ್ರಿವಾಲ್ ಮಹಾ ಆಘಾತ !?, ಮೋದಿ ಮತ್ತೆ ಪ್ರಧಾನಿಯಾಗೋದೇ ಇಲ್ವಾ?75 ವರ್ಷ ವಯೋಮಿತಿ.. ಮೋದಿಗೆ No ರೂಲ್?

davangerevijaya.comBy davangerevijaya.com15 May 2024Updated:16 May 2024No Comments3 Mins Read
Facebook WhatsApp Twitter
Share
WhatsApp Facebook Twitter Telegram

ದಾವಣಗೆರೆ : BJPಗೆ ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ಮಹಾ ಆಘಾತ ಕೊಟ್ಟಿದ್ದಾರೆ. ಜೈಲಿಂದ ರಿಲೀಸ್ ಆದ ಒಂದೇ ದಿನಕ್ಕೆ ಅರವಿಂದ ಕೇಜ್ರಿವಾಲ್ ಅವರು ಬಿಜೆಪಿ ವಿರುದ್ಧ ಅಬ್ಬರದ ಭಾಷಣ ಮಾಡ್ತಿದ್ದಾರೆ. ಈ ಸಲ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರೋದೇ ಇಲ್ಲ. ಹೀಗಾಗಿ ಮೋದಿ ಮತ್ತೆ ಪ್ರಧಾನಿಯಾಗೋದಿಲ್ಲ ಅಂತೇಳಿ ಗುಡುಗಿದ್ದಾರೆ. ಅಷ್ಟೇ ಅಲ್ಲ, ಬಿಜೆಪಿಯೊಳಗಿನ ಆ ಒಂದು ಸೀಕ್ರೆಟ್​​​ಅನ್ನ ಅರವಿಂದ ಕೇಜ್ರಿವಾಲ್ ಬಿಚ್ಚಿಟ್ಟಿದ್ದಾರೆ. ಹಾಗಾದ್ರೆ ಏನದು ಸೀಕ್ರೆಟ್ ಅಂದ್ರಾ.?

ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್.. ಬಿಜೆಪಿ ವಿರುದ್ಧ ಕೊತಕೊತ ಕುದಿಯುತ್ತಿದ್ದಾರೆ. ತಮ್ಮ ಮೇಲೆ ವಿನಃ ಕಾರಣ ಲಿಕ್ಕರ್ ಸ್ಕ್ಯಾಂ ಆರೋಪ ಹೊರಿಸಿ ಜೈಲಿಗೆ ಕಳಿಸಿದ್ದಕ್ಕೆ ಪ್ರತೀಕಾರ ತೀರಿಸಿಕೊಳ್ಳೋದಕ್ಕೆ ಬಿಜೆಪಿ ವಿರುದ್ಧ ಕೆಂಡಾಕಾರುತ್ತಿದ್ದಾರೆ. ಜೈಲಿಂದ ಬಿಡುಗಡೆಯಾದ ಒಂದೇ ದಿನಕ್ಕೆ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಧುಮುಕಿರೋ ಅರವಿಂದ ಕೇಜ್ರಿವಾಲ್, ಜಗತ್ತಿನೆದುರು ಪ್ರಧಾನಿ ಮೋದಿ ಮುಖವಾಡದ ಹಿಂದಿನ ಮುಸುಕನ್ನ ಕಳಚಿಟ್ಟಿದ್ದಾರೆ. ಅದೇನು ಗೊತ್ತಾ.? ಅದುವೇ 75 ವರ್ಷ ವಯೋಮಿತಿ ಸೀಕ್ರೆಟ್.

ಹೌದು ವೀಕ್ಷಕರೇ, ಬಿಜೆಪಿಯಲ್ಲಿ 75 ವರ್ಷ ವಯೋಮಿತಿ ದಾಟಿದವರಿಗೆ ಪಕ್ಷದಲ್ಲಿ ಉನ್ನತ ಹುದ್ದೆ ಕೊಡಲ್ಲ ಅನ್ನೋ ಅಲಿಖಿತ ನಿಯಮವಿದೆ. ಈ ನಿಯಮವನ್ನ ಜಾರಿಗೆ ತಂದಿದ್ದೇ ಪ್ರಧಾನಿ ಮೋದಿ.. ಆ ರೂಲ್ ಇಟ್ಕೊಂಡು ಹಲವು ದಶಕಗಳ ಕಾಲ ಪಕ್ಷವನ್ನ ಕಟ್ಟಿ ಬೆಳೆಸಿದ ಎಲ್​​ಕೆ ಅಡ್ವಾಣಿ ಅವರನ್ನ ಸೈಡ್​ಲೈನ್ ಮಾಡಿದ್ರು. ಕರ್ನಾಟಕದಲ್ಲೂ ಕೂಡ 73 ವರ್ಷದ ಕರಡಿ ಸಂಗಣ್ಣ ಟಿಕೆಟ್ ಕೈ ತಪ್ಪಿಸಿದ್ರು. ಈಶ್ವರಪ್ಪ, ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವು ಘಟಾನುಘಟಿ ರಾಜಕಾರಣಿಗಳಿಂದ ಚುನಾವಣಾ ರಾಜಕೀಯಕ್ಕೆ ರಾಜೀನಾಮೆ ಪಟ್ಕೊಂಡ್ರು. ಆದ್ರೆ ಈ ರೂಲ್ ಪ್ರಧಾನಿ ಮೋದಿ ಅವರಿಗೆ ಅದ್ಯಾಕೆ ಅಪ್ಲೇ ಆಗಲ್ಲ.? ಪ್ರಧಾನಿ ಮೋದಿ ಅವರಿಗೆ ಮುಂದಿನ ವರ್ಷ 75 ವರ್ಷ ತುಂಬಲಿದೆ. ಹೀಗಿದ್ರೂ ಮೋದಿ ಅಮಿತ್ ಶಾ, ಯೋಗಿ ಆದಿತ್ಯನಾಥ್ ಅವರನ್ನ ಬದಿಗೊತ್ತಿ ಮತ್ತೆ ಪ್ರಧಾನಿಯಾಗಲು ರೆಡಿಯಾಗಿರೋದೇಕೆ.? 3 ಸಲ ಗುಜರಾತ್ ಸಿಎಂ, 2 ಸಲ ಪ್ರಧಾನಿಯಾಗಿರೋ ಮೋದಿ ಅವರಿಗೆ ಮತ್ತೆ ಪ್ರಧಾನಿಯಾಗ್ಬೇಕು ಅನ್ನೋದು ದುರಾಸೆ ಅನ್ನಿಸೋದಿಲ್ವಾ..? ಕುಟುಂಬ ರಾಜಕಾರಣಕ್ಕೆ ವಿರೋಧ ವ್ಯಕ್ತಪಡಿಸೋ ಮೋದಿ ಸಾಹೇಬ್ರು., ಕರ್ನಾಟಕದಲ್ಲಿ ಫ್ಯಾಮಿಲಿ ಪಾರ್ಟಿ ಜೆಡಿಎಸ್ ಜೊತೆಗೆ ಚುನಾವಣಾ ದೋಸ್ತಿ ಮಾಡ್ಕೊಂಡಿರೋದು ಎಷ್ಟು ಸರಿ.? ಅಂದ್ರೆ ಬಿಜೆಪಿಯಲ್ಲಿ ಮೋದಿ ತಮ್ಮ ಮೂಗಿನ ನೇರಕ್ಕೆ ರೂಲ್ಸ್ ಬದಲಾಯಿಸಿಕೊಳ್ತಾರಾ ಅನ್ನೋ ಶಂಕೆ ವ್ಯಕ್ತವಾಗಿದೆ. ಇದೇ ವಿಚಾರವಾಗಿ ದನಿ ಎತ್ತಿರೋ ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್, ಈ ಸಲ ಮೋದಿ ಆಟ ನಡೆಯಲ್ಲ. ಕನಸೂ ಈಡೇರಲ್ಲ. ಯಾಕಂದ್ರೆ ಈ ಸಲದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 220 ರಿಂದ 230 ಸ್ಥಾನಗಳಿಗೆ ಕುಸಿಯಲಿದೆ ಅಂತೇಳಿ ಭವಿಷ್ಯ ನುಡಿದಿದ್ದಾರೆ.

ಒಂದೊಮ್ಮೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದ್ರೆ ಮೋದಿಯಂತೂ ಪ್ರಧಾನಿಯಾಗಲ್ಲ. ಮೋದಿ ಬದಲಿಗೆ ಗೃಹ ಸಚಿವರಾಗಿರುವ ಅಮಿತ್‌ ಶಾ ಮುಂದಿನ ಪ್ರಧಾನಿ ಎಂದೂ ಭವಿಷ್ಯ ನುಡಿದಿದ್ದಾರೆ. ಕೇಜ್ರಿವಾಲ್‌ ಹೇಳಿಕೆ ಮತದಾರರ ಮನಸ್ಸಿನ ಮೇಲೆ ಬೀರಬಹುದಾದ ಪರಿಣಾಮವನ್ನು ತಕ್ಷಣ ಗ್ರಹಿಸಿದ ಅಮಿತ್‌ ಶಾ ಕೂಡಲೇ ರಿಯಾಕ್ಟ್ ಮಾಡಿದ್ದಾರೆ. ಹಾಗೇನೂ ಇಲ್ಲ. ಮೋದಿಯವರೇ ಪ್ರಧಾನಿಯಾಗಿ ಪೂರ್ಣಾವಧಿ ಪೂರೈಸಲಿದ್ದಾರೆ. ಪಕ್ಷದ ಸಂವಿಧಾನದಲ್ಲೂ ಅಂಥ ನಿಯಮಗಳಿಲ್ಲ ಅಂತೇಳಿ ಸ್ಪಷ್ಟಪಡಿಸಿದ್ದಾರೆ. ಆದ್ರೆ ಅರವಿಂದ ಕೇಜ್ರಿವಾಲ್ ಅವರು ಮಾತ್ರ ಬಿಜೆಪಿ ವಿರುದ್ಧ ಕೆಂಡಾಕಾರೋದನ್ನ ನಿಲ್ಲಿಸಿಲ್ಲ. ಈ ಸಲದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಸೇರಿದಂತೆ ಎಲ್ಲಾ ಪ್ರತಿಪಕ್ಷ ನಾಯಕರು ಜೈಲು ಪಾಲಾಗಲಿದ್ದಾರೆ ಅಂತೇಳಿ ಭವಿಷ್ಯ ನುಡಿದಿದ್ದಾರೆ. ಅಷ್ಟೇ ಅಲ್ಲ, ಎಎಪಿ ತನ್ನ ಉತ್ತಮ ಕೆಲಸದಿಂದ ಬಿಜೆಪಿಯನ್ನು ಸೋಲಿಸುತ್ತದೆ ಎಂದು ತಿಳಿದಿರುವುದರಿಂದ ಮೋದಿ ಪಕ್ಷವನ್ನು ಹತ್ತಿಕ್ಕಲು ಬಯಸುತ್ತಿದ್ದಾರೆ ಎಂದು ಹೇಳಿದರು. ಭ್ರಷ್ಟಾಚಾರದ ವಿರುದ್ಧ ಹೋರಾಡುವುದಾಗಿ ಹೇಳುವ ಮೋದಿ ಕಳ್ಳರು ಮತ್ತು ಡಕಾಯಿತರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದಾರೆ. ₹70,000 ಕೋಟಿಗಳ ಹಗರಣದಲ್ಲಿ ಭಾಗಿಯಾಗಿರುವ ಒಬ್ಬ ನಾಯಕನ ವಿರುದ್ಧ ಮೋದಿ ಆರೋಪ ಮಾಡಿದ ಹತ್ತು ದಿನಗಳ ನಂತರ ಅವರ ಪಕ್ಷಕ್ಕೆ ಸೇರಿಸಿಕೊಳ್ಳಲಾಯಿತು. ನೀವು ಭ್ರಷ್ಟಾಚಾರದ ವಿರುದ್ಧ ಹೋರಾಡಲು ಬಯಸಿದರೆ, ಕೇಜ್ರಿವಾಲ್ ಅವರಿಂದ ಕಲಿಯಿರಿ ಅಂತೇಳಿ ಜನರಿಗೆ ಕರೆ ನೀಡಿದ್ದಾರೆ.

ಹಾಗಾದ್ರೆ ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರ ಈ ಆಕ್ರೋಶದ ಮಾತುಗಳ ಬಗ್ಗೆ ನೀವೇನಂತಿರಾ.? ಬಿಜೆಪಿಯಲ್ಲಿ ಮೋದಿಗೊಂದು ರೂಲೂ, ಇತರೆ ನಾಯಕರಿಗೊಂದು ರೂಲಾ.?

ಕಾಂಗ್ರೆಸ್ ಕೇಜ್ರಿವಾಲ್ ಕೇಂದ್ರ ಸರ್ಕಾರ ಚುನಾವಣೆ ಡಿಕೆಶಿ ದಾವಣಗೆರೆ ಬಿಜೆಪಿ ಮತದಾನ ಮೋದಿ ಲೋಕಸಭೆ ಶಿವಮೊಗ್ಗ ಸಿದ್ದರಾಮಯ್ಯ
Share. WhatsApp Facebook Twitter Telegram
davangerevijaya.com
  • Website

Related Posts

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025

ದಾವಣಗೆರೆ : ಹಿಂದೂ ನರಮೇಧ ಹತ್ಯಾ ಖಂಡಿಸಿ ಪ್ರತಿಭಟನೆ

26 April 2025

ವಿಜಯಪುರದಲ್ಲಿ ವಿಜಯೇಂದ್ರ ರಣಕಹಳೆ.ಯತ್ನಾಳ್ ತವರಲ್ಲಿ ಬಿಜೆಪಿ ನಾಯಕರ ಹೋರಾಟ ಕಾಂಗ್ರೆಸ್ ವಿರುದ್ಧ ವಾಗ್ದಾಳಿ

19 April 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,321 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,083 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,586 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
ಪ್ರಮುಖ ಸುದ್ದಿ

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

By davangerevijaya.com12 June 20250

*ದಾವಣಗೆರೆಯಲ್ಲಿ ಅಂಚೆ  ವಿಭಾಗೀಯ  ಕಚೇರಿ ಬರಲು ಇವರು ಕಾರಣ * ದಾವಣಗೆರೆ ಅಂಚೆ ಇಲಾಖೆ ಪ್ರಥಮ ಅಧೀಕ್ಷಕ *ನಿಷ್ಠೆ, ಪ್ರಾಮಾಣಿಕತೆಯಿಂದ…

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025

ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

10 June 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.

12 June 2025

ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ

11 June 2025

ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?

11 June 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,651 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,321 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,083 Views

Subscribe to Updates

Get the latest creative news from SmartMag about art & design.

Recent Posts
  • ಅಂಚೆ ಇಲಾಖೆಯ ನಿವೃತ್ತ ಅಂಚೆ ಅಧೀಕ್ಷಕ ವಿರೂಪಾಕ್ಷಪ್ಪರಿಗೆ ಸಿಕ್ಕಿತ್ತು ರಾಷ್ಟ್ರೀಯ ಮಟ್ಟದ ಅನುಭವ ಪ್ರಶಸ್ತಿ.
  • ದಾವಣಗೆರೆ ಬಿಜೆಪಿಗೆ ನೂತನ ಸಾರಥಿ..ಕುತುಹೂಲ ಇದ್ದರೇ ಈ ಸುದ್ದಿ ತಪ್ಪದೇ ಓದಿ
  • ಸಚಿವ ಸಂಪುಟದಲ್ಲಿನ ಕೆಲ ಹಳೆ ಸಚಿವ ರನ್ನು ಬದಲಾವಣೆ ಮಾಡಬೇಕೆಂದ ಶಾಸಕ ಯಾರಿಗೆ ಹೇಳಿದ್ದು?
  • ನೊಂದವರ ಕಷ್ಟಕ್ಕೆ ಸ್ಪಂದಿಸಲು‌ ಅಧಿಕಾರಿಗಳಿಗೆ ಸಲಹೆ: ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
  • ಆರ್ ಸಿಬಿ ವಿಜಯೋತ್ಸವ ವೇಳೆ 11 ಜನರ ಸಾವು : ಸಿಬಿಐಗೆ ವಹಿಸಲು ಮಾಜಿ ಸಚಿವ ಒತ್ತಾಯ
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.