![](https://davangerevijaya.com/wp-content/uploads/2024/07/IMG-20240719-WA01231.jpg)
ಚಿತ್ರದುರ್ಗ: ಊಟದ ಸಮಸ್ಯೆ, ಸ್ವಚ್ಛತೆ ಬಗ್ಗೆ ವಿದ್ಯಾರ್ಥಿನಿಯರಿಂದ ದೂರು ಬಂದ ಹಿನ್ನೆಲೆಯಲ್ಲಿ ನಗರದ ಸರ್ಕಾರಿ ಕಲಾ ಕಾಲೇಜು ಸಮೀಪದ ಅಲ್ಪಸಂಖ್ಯಾತರ ಇಲಾಖೆ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ನಿಲಯಪಾಲಕಿ ವೈ.ಶಿಲ್ಪಾ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ಬಗ್ಗೆ ವಿದ್ಯಾರ್ಥಿನಿಯರು ಗುರುವಾರ ಬೆಳಿಗ್ಗೆ ಶಾಸಕ ಕೆ.ಸಿ.ವೀರೇಂದ್ರ ಅವರ ಗಮನಕ್ಕೆ ತಂದಿದ್ದರು. ಸಂಜೆ ಖಾಸಗಿ ಕಾರ್ಯಕ್ರಮಕ್ಕೆಂದು ನಗರಕ್ಕೆ ಆಗಮಿಸಿದ್ದ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಕರೆದುಕೊಂಡು ಶಾಸಕರು ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
![](https://davangerevijaya.com/wp-content/uploads/2024/07/IMG-20240715-WA0352.jpg)
ಈ ವೇಳೆ ವಿದ್ಯಾರ್ಥಿನಿಯರ, ವಾರಕ್ಕೆ ಒಂದು ದಿನ ಮಾತ್ರ ಮೊಟ್ಟೆ ನೀಡುತ್ತಾರೆ. ಒಂದೇ ಬಗೆಯ ಅಡುಗೆ ಮಾಡುತ್ತಾರೆ ಎಂದು ಸಮಸ್ಯೆ ತೆರೆದಿಟ್ಟರು. ಸ್ಥಳದಲ್ಲೇ ಸಚಿವ ಜಮೀರ್ ಅಹ್ಮದ್ ಖಾನ್ ನಿಲಯಪಾಲಕಿ ಅಮಾನತಿಗೆ ಆದೇಶಿಸಿದರು.
![](https://davangerevijaya.com/wp-content/uploads/2024/07/IMG-20240716-WA0138.jpg)