![](https://davangerevijaya.com/wp-content/uploads/2024/07/IMG-20240719-WA01231.jpg)
ದಾವಣಗೆರೆ : ರಾಜ್ಯದಲ್ಲಿನ ಮೋದಿ ಅಲೆಯನ್ನಎದುರಿಸಲು ಕಾಂಗ್ರೆಸ್ ನಾಯಕರು ಸಜ್ಜಾಗಿ ನಿಂತಿದ್ದು, ಕೈ ವರ್ಚಸ್ಸಿನ ಸವಾರಿ ಮಾಡಿ, ಲೋಕಸಭೆಯಲ್ಲಿ ಅಧಿಕ ಸ್ಥಾನ ಗೆಲ್ಲುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಲ್ಲ ಬಗೆಯ ಅಸ್ತ್ರ ಪ್ರಯೋಗಿಸಿ ಅಖಾಡಕ್ಕೆ ಇಳಿದಿದ್ದಾರೆ. ಇದರ ನಡುವೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಡಿದ ಒಂದು ಮಾತು ಈಗ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಉಂಟು ಮಾಡಿದೆ.
ಹಾಗಾದ್ರೆ, ಯತ್ನಾಳ ಆಡಿದ ಆ ಮಾತಾದ್ರೂ ಯಾವುದು? ನಾನು ಯಾರಿಗೂ ಅಪ್ಪಾಜಿ ಅಪ್ಪಾಜಿ ಅಂತ ಕಾಲಿಗೆ ನಮಸ್ಕರಿಸುವುದಿಲ್ಲ ಅಂತ ಅಂದಿದ್ಯಾಕೆ.? ರಾಜ್ಯಾಧ್ಯಕ್ಷರ ವರ್ಚಸ್ಸು ಹತಾಶೆಗೆ ತಳ್ಳಿತಾ? ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ಯಾಕೆ?
![](https://davangerevijaya.com/wp-content/uploads/2024/07/IMG-20240715-WA0352.jpg)
ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗುತ್ತಿದ್ದಂತೆ ಕೆಲವರಲ್ಲಿ ಉಂಟಾಗಿರುವ ಅಸಮಾಧಾನ ಇನ್ನೂ ಆರಿಲ್ಲ. ಅದು ಲೋಕಸಭೆ ಚುನಾವಣೆ ವೇಳೆಯೂ ಅಸಮಾಧಾನದ ಮಾತುಗಳು ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಇದರ ನಡುವೆ ಬಸನಗೌಡ ಪಾಟೀಲ್ ಯತ್ನಾಳ್ ಆಡಿದ ಮಾತೊಂದು ಈಗ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ.
2028ರಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವ ಸಾಧ್ಯತೆ ದಟ್ಟವಾಗಿದೆ. ಇದನ್ನ ಮನಗೊಂಡಿರುವ ಯತ್ನಾಳ್ ಹೊಸ ದಾಳ ಉರುಳಿಸಿದ್ದಾರೆ. ಚಿಕ್ಕೋಡಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೇ ನಾನೇ ಮುಖ್ಯಮಂತ್ರಿ ಆಗುತ್ತೇನೆ. ನಾನು ಯಾರಿಗೂ ಅಪ್ಪಾಜಿ ಅಪ್ಪಾಜಿ ಅಂತ ಕಾಲಿಗೆ ನಮಸ್ಕರಿಸುವುದಿಲ್ಲ. ದೇವರು ನನಗೆ ಎಲ್ಲ ಕೊಟ್ಟಿದ್ದಾನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿ, ಸಂಚಲನ ಮೂಡಿಸಿದ್ದಾರೆ.
ಬಿಎಸ್ವೈ ವಿರೋಧಿ ಬಣದ ಎಲ್ಲ ಆಟಗಾರರ ಸೈಲೆಂಟ್ ಆಗಿದ್ದಾರೆ. ಆದ್ರೆ, ಹಿರಿಯ ಆಟಗಾರರಾದ ಯತ್ನಾಳ ತಮ್ಮ ಗುರಿಯಿಲ್ಲದ ಹೇಳಿಕೆ ಮೂಲಕ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಬಿಸಿ ಮುಟ್ಟಿಸುವ ಪ್ರಯತ್ನ ಮಾಡಿದ್ದಾರೆ. ಆದ್ರೆ, ಪಕ್ಷದಲ್ಲಿ ಎಲ್ಲರ ವಿಶ್ವಾಸ ಗಳಿಸದ, ಪಕ್ಷದ ಹಿರಿಯ ನಾಯಕರ ಕುರಿತು ಹಗುರವಾಗಿ ಮಾತನಾಡುವ ಜೊತೆಗೆ ವಿಪಕ್ಷ ನಾಯಕ ಸ್ಥಾನ ಗಳಿಸದ ಯತ್ನಾಳ ಅವರನ್ನ ಪಕ್ಷದಲ್ಲಿ ಯಾರೂ ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂಬ ಮಾತುಗಳಿವೆ.
ವಿಜಯೇಂದ್ರ ಅವರ ವರ್ಚಸ್ಸು ಹೆಚ್ಚುತ್ತಿರುವುದರಿಂದ ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂಬ ಮಾತುಗಳಿವೆ. ಜೊತೆಗೆ ಬಿಎಸ್ವೈ ಅವರನ್ನ ಕಳೆದ ವಿಧಾನಸಭೆ ಚುನಾವಣೆಯಲ್ಲಿ ವಿರೋಧಿಸಿ ಸಾಧಿಸಿದ್ದು ಏನು ಇಲ್ಲ. ಇದರಿಂದ ಹೈಕಮಾಂಡ್ ನಾಯಕರ ವಿಶ್ವಾಸನೂ ಕಳೆದುಕೊಂಡಿದೆ ರಾಜಾಹುಲಿ ವಿರೋಧಿ ಬಣ ಈಗ ದಿಕ್ಕಾಪಾಲಾಗಿದೆ ಎನ್ನಲಾಗಿದೆ.
ಮುಖ್ಯಮಂತ್ರಿ ಆಗಲು ನಾನು ಸಮರ್ಥನಿದ್ದೇನೆ. ನನ್ನ ಕಡೆಗೆ ಐದು ವರ್ಷ ಅಧಿಕಾರ ಕೊಟ್ಟು ನೋಡಲಿ, ಸಿದ್ದರಾಮಯ್ಯ ಎರಡು ಸಾವಿರ ಕೊಡುತ್ತಿದ್ದರೇ ನಾನು ಐದು ಸಾವಿರ ಕೊಡ್ತಿನಿ ಹೇಳಿದ್ದಾರೆ. ಮತ್ತೊಂದು ಕಡೆ ಕಾಂಗ್ರೆಸ್ನಲ್ಲಿ ಲಕ್ಷ್ಮಣ್ ಸವದಿಯನ್ನ ಕಡೆಗಣಿಸಲಾಗುತ್ತಿದೆ ಎಂಬ ಮಾತುಗಳು ಕೇಳಿ ಬಂದಿವೆ. ಚುನಾವಣೆ ವೇಳೆ ಸವದಿ ಅವರನ್ನು ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ ಎಂಬ ಮಾತುಗಳು ಹರಿದಾಡುತ್ತಿದೆ.
![](https://davangerevijaya.com/wp-content/uploads/2024/07/IMG-20240716-WA0138.jpg)