Close Menu
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog

Subscribe to Updates

Get the latest creative news from FooBar about art, design and business.

What's Hot

ಮಂಗಳವಾರದ ರಾಶಿ ಭವಿಷ್ಯ ಹೇಗಿದೆ ತಪ್ಪದೇ ನೋಡಿ?

20 May 2025

ಜ್ಞಾನದ ಹಸಿವ ತಣಿಸುವ ವ್ಯಾಸ ಗುರು ತೇಜಸ್ವಿ ಕಟ್ಟೀಮನಿ

19 May 2025

ದಾವಣಗೆರೆ ಎಸ್ಪಿ ಉಮಾಪ್ರಶಾಂತ್ ಗೆ ಸಿಕ್ಕಿತ್ತು ಈ ಪದಕ..ಅದು ಯಾಕಾಗಿ?

18 May 2025
Facebook X (Twitter) Instagram
Facebook X (Twitter) Instagram
Davangere VijayaDavangere Vijaya
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
Davangere VijayaDavangere Vijaya
Home»ಪ್ರಮುಖ ಸುದ್ದಿ»ಯುವಕರು ಕನಕದಾಸರ ತತ್ವ ಆದರ್ಶ ಗುಣಗಳನ್ನು ಅಳವಡಿಸಿಕೊಳ್ಳಿ, ಬಲ್ಕೀಶ್ ಬಾನು‌.
ಪ್ರಮುಖ ಸುದ್ದಿ

ಯುವಕರು ಕನಕದಾಸರ ತತ್ವ ಆದರ್ಶ ಗುಣಗಳನ್ನು ಅಳವಡಿಸಿಕೊಳ್ಳಿ, ಬಲ್ಕೀಶ್ ಬಾನು‌.

davangerevijaya.comBy davangerevijaya.com22 November 2024Updated:22 November 2024No Comments2 Mins Read
Facebook WhatsApp Twitter
Share
WhatsApp Facebook Twitter Telegram

ಶಿವಮೊಗ್ಗ :

ಧರ್ಮ ಎಂದರೆ ಆತ್ಮದ ಶುದ್ದೀಕರಣ. ಹೃದಯ ಶುದ್ದವಾಗಿದ್ದರೆ ಮಾತ್ರ ಧನಾತ್ಮಕ ಚಿಂತನೆ ಸಾಧ್ಯ. ಎಲ್ಲ‌ ಮನುಜರೂ  ಸಮಾನರು ಎಂದು ಸಾರಿದವರು ಕನಕದಾಸರು. ನಾವೆಲ್ಲ ಅವರ ತತ್ವಗಳನ್ನು ಅಳವಡಿಸಿಕೊಳ್ಳಬೇಕೆಂದು ವಿಧಾನ ಪರಿಷತ್ ಶಾಸಕಿ‌ ಬಲ್ಕೀಶ್ ಬಾನು‌ ಹೇಳಿದರು.

ಜಿಲ್ಲಾಡಳಿತ, ಜಿ.ಪಂ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕುರುಬರ ಸಂಘ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ‌ ಸೋಮವಾರ ಕುವೆಂಪು ರಂಗ ಮಂದಿರದಲ್ಲಿ ಏರ್ಪಡಿಸಲಾಗಿದ್ದ ಶ್ರೀ ಕನಕದಾಸರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿಜಯನಗರ ಸಾಮ್ರಾಜ್ಯದಲ್ಲಿ ಯೋಧನಾಗಿ ಬಹಳ ಅಚ್ಚುಕಟ್ಟಾಗಿ ನಿರ್ವಹಣೆ ಮಾಡುತ್ತಿದ್ದ ಕನಕದಾಸರು ಜನರ ಸಂಕಷ್ಟಗಳನ್ನು‌ ನೋಡಿ, ಸಮಾಜದ ಸಮಸ್ಯೆಗಳನ್ನು ಎತ್ತಿ ಹಿಡಿದು‌ ತಮ್ಮ ಗೀತೆಗಳು, ಕೀರ್ತನೆಗಳ ಮೂಲಕ ಪರಿಹಾರ ತೋರಿದವರು. ಬಸವ ತತ್ವ ಗಳನ್ನು ಅಳವಡಿಕೊಂಡ ಅವರು ನುಡಿದಂತೆ ನಡೆದು, ಶೋಷಿತರ ಧ್ವನಿಯಾಗಿದ್ದರು. ನಾವೆಲ್ಲ ಸಮಾನರು ಎಂಬ ತತ್ವದೊಂದಿಗೆ ಬಡವರ ಸಂಕಷ್ಟಕ್ಕೆ ಮಿಡಿದವರು.  ಅವರ ಜಯಂತಿ ಕೇವಲ ಸರ್ಕಾರದ ಜಯಂತಿ ಆಗಬಾರದು. ಅವರು ಹಾಕಿಕೊಟ್ಟ ದಾರಿಯಲ್ಲಿ ನಾವೆಲ್ಲ‌‌ ಸಾಗಬೇಕು ಎಂದರು.

ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್‌ ಮಾತನಾಡಿ, ಸಮಾಜ ಸುಧಾರಣೆಯಲ್ಲಿ‌ ಕನಕದಾಸರ ಕೊಡುಗೆ ಅಪಾರ. ಅವರು ಕೇವಲ ಒಂದು ಸಮುದಾಯಕ್ಕೆ ಸೇರಿದವರಲ್ಲ, ಬದಲಾಗಿ‌ಎಲ್ಲ ಸಮುದಾಯಕ್ಕೆ ಸೇರಿದವರು. ಆದ್ದರಿಂದ ಜಯಂತಿಯಲ್ಲಿ‌ ಎಲ್ಲರೂ ಪಾಲ್ಗೊಂಡು ಹಬ್ಬದ ರೀತಿಯಲ್ಲಿ ಜಯಂತಿ ಆಚರಣೆ ಮಾಡಬೇಕು. ಈಗಿನ ಮಕ್ಕಳಿಗೆ ಕನಕದಾಸರನ್ನು ಪರಿಚಯಿಸಬೇಕು ಎಂದರು.

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್‌ಮಾತನಾಡಿ, ೧೫ ನೇ ಶತಮಾನದಲ್ಲಿ ೧೭ ಗ್ರಾಮಗಳಿಗೆ ಪಾದಯಾತ್ರೆ ಮೂಲಕ ಜನರ ಮನೆ ಮನೆಗೆ ಹೋಗಿ ಸಮಸ್ಯೆ ತಿಳಿದು ಪರಿಹರಿಸುವ ಕೆಲಸ ಮಾಡಿದ ಕನಕರ‌ ಆದರ್ಶ , ಚಿಂತನೆ ಇಂದಿಗೂ ಪ್ರಸ್ತುತ. ಭಕ್ತಿಗೆ ಭಗವಂತ ಒಲಿಯುತ್ತಾನೆಂಬುದಕ್ಕೆ ಶ್ರೀ ಕೃಷ್ಣನನ್ನು ಒಲಿಸಿಕೊಂಡ ಕನಕದಾಸರೇ ಸಾಕ್ಷಿ ಎಂದರು.

ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ (ಪ್ರಭಾರ) ಡಾ.ಚಿದಾನಂದ ಎನ್.ಕೆ.ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಮಹಾನ್ ಮಾನವತಾವಾದಿ, ದಾರ್ಶನಿಕರಾದ ಕನಕದಾಸರು ಪಂಚಮವೇದದಲ್ಲಿ ಪ್ರಮಖ ನಾಯಕರಾಗಿ ನೆಲೆಗೊಂಡಿದ್ದಾರೆ.

ರಾಜಕಾರಣ, ದಾರ್ಶನಿಕತೆ ಮತ್ತು ಅಕ್ಷರಗಳನ್ನು ಶ್ರೇಷ್ಠವಾಗಿ ಅಪ್ಪಿಕೊಂಡು ಸಾಗಿದವರು ಕನಕರು. ಬಾಡಾ ನಗರ ವ್ಯಾಪಾರಿ ತಾಣವಾಗಿದ್ದು, ತಂದೆ ಬೀರಪ್ಪ ನಾಯಕ‌ರು ಅಲ್ಲಿನ ಮುಖ್ಯಸ್ಥರಾಗಿದ್ದರು. ತಂದೆಯಿಂದ ಸಕಲ ವಿದ್ಯೆಗಳನ್ನು ಕನಕರು ಪಡೆದಿದ್ದರು. ಏಕತಾರಿ, ಕಂಬಳಿ ಮತ್ತು ಕೀರ್ತನೆ ಮೂಲಕ ದಾರ್ಶನಿಕರಾಗಿ ಊರಿನಿಂದ ಊರಿಗೆ ಗೀತೆ-ಕೀರ್ತನೆಗಳ ಮೂಲಕ ಸಮಾನತೆಯ ತತ್ವಗಳನ್ನು ಸಾರುತ್ತಾ ಹೋದರು. ನಡೆದಂತೆ ನುಡಿದವರು. ಪ್ರಸ್ತುತ ಶಿಕ್ಷಣ ವ್ಯವಸ್ಥೆ ಕನಕರು ಪ್ರತಿಪಾದಿಸಿದಂತೆ ನೆಲ ಸಂಸ್ಕೃತಿ, ಕಲೆ ಮತ್ತು ಜ್ಞಾನದ ಆಧಾರದಲ್ಲಿ ನೆಲೆಗೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಶ್ರವಣ ಸಂಸ್ಕೃತಿಯ ದೊಡ್ಡ ದ್ಯೋತಕ ಕನಕ. ಇಂದಿನ ಮಕ್ಕಳು ದಾರ್ಶನಿಕರು ಹೇಳಿದ ಮಾತುಗಳನನ್ನು ಕೇಳಬೇಕಿದೆ ಎಂದು ಹೇಳಿದರು.

ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಆರ್.ಪ್ರಸನ್ನ ಕುಮಾರ್ ಮಾತನಾಡಿ, ಕನಕರ ಭಕ್ತಿಗೆ ಭಗವಾನ್ ಶ್ರೀಕೃಷ್ಣನೂ ದರ್ಶನ ನೀಡಿದ್ದರು. ಭಕ್ತಿ, ಶ್ರಮದಿಂದ ಬದುಕುವ ಸಮಾಜ ನಮ್ಮದು. ಯಾರೂ ಮೇಲು ಕೀಳಲ್ಲ. ನಾವೆಲ್ಲ ಒಂದೇ ಎಂದು ಕನಕರು ಶೋಷಿತ ವರ್ಗದ ಧ್ವನಿಯಾಗಿ ಸಾಹಿತ್ಯ ರಚಿಸಿದ್ದಾರೆ. ಅವರು‌ ಕುರುಬ ಸಮಾಜಕ್ಕೆ ಮಾತ್ರ ಸೀಮಿತರಲ್ಲ. ಎಲ್ಲ ವರ್ಗಕ್ಕೆ ಸೇರಿದವರು.‌ ಸಹಬಾಳ್ವೆ , ಪ್ರೀತಿಯಿಂದ ಒಟ್ಟಾಗಿ ಹೋಗೋಣ ಎಂದರು.‌

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿ.ಪಂ.ಸಿಇಓ ಎನ್.ಹೇಮಂತ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ , ಸಮಾಜದ ಮುಖಂಡರು  ಪಾಲ್ಗೊಂಡಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ‌ ನಿರ್ದೇಶಕ‌ ಉಮೇಶ್ ಹೆಚ್‌ ಸ್ವಾಗತಿಸಿದರು. ರೇಖಾ ರಂಗನಾಥ ವಂದಿಸಿದರು

feachare Top News
Share. WhatsApp Facebook Twitter Telegram
davangerevijaya.com
  • Website

Related Posts

ಮಂಗಳವಾರದ ರಾಶಿ ಭವಿಷ್ಯ ಹೇಗಿದೆ ತಪ್ಪದೇ ನೋಡಿ?

20 May 2025

ಜ್ಞಾನದ ಹಸಿವ ತಣಿಸುವ ವ್ಯಾಸ ಗುರು ತೇಜಸ್ವಿ ಕಟ್ಟೀಮನಿ

19 May 2025

ಭಾನುವಾರದ ನಿಮ್ಮ ರಾಶಿ ಭವಿಷ್ಯ ಏನಿದೆ ತಪ್ಪದೇ ನೋಡಿ?

18 May 2025
Leave A Reply Cancel Reply

Top Posts

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,631 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,206 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,065 Views

ಪೊಲೀಸ್ ಠಾಣೆಗೆ ಕರೆತಂದಿದ್ದ ಆರೋಪಿ ಸಾವು, ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸರು ಬದುಕಿದ್ದೇ ಹೆಚ್ಚು…ಅಷ್ಟಕ್ಕೂ ಘಟನೆ ನಡೆದಿದ್ದೇನೂ?

25 May 20243,580 Views
Stay In Touch
  • Facebook
  • Twitter
  • Pinterest
  • Instagram
  • YouTube
  • Vimeo
Don't Miss
ಪ್ರಮುಖ ಸುದ್ದಿ

ಮಂಗಳವಾರದ ರಾಶಿ ಭವಿಷ್ಯ ಹೇಗಿದೆ ತಪ್ಪದೇ ನೋಡಿ?

By davangerevijaya.com20 May 20250

*💫🛕ಓಂ ಶ್ರೀ ಗಾಯಿತ್ರಿ ವಿಶ್ವಕರ್ಮ ಪರಬ್ರಹ್ಮಣಿ ನಮಃ 🛕💫* *🕉️ದ್ವಾದಶ ರಾಶಿಗಳ ದಿನ ಭವಿಷ್ಯ#ತಾರೀಕು#20/05/2025 ಮಂಗಳವಾರ🕉️* *01,✨ಮೇಷ ರಾಶಿ✨* 📖,ಆರ್ಥಿಕ…

ಜ್ಞಾನದ ಹಸಿವ ತಣಿಸುವ ವ್ಯಾಸ ಗುರು ತೇಜಸ್ವಿ ಕಟ್ಟೀಮನಿ

19 May 2025

ದಾವಣಗೆರೆ ಎಸ್ಪಿ ಉಮಾಪ್ರಶಾಂತ್ ಗೆ ಸಿಕ್ಕಿತ್ತು ಈ ಪದಕ..ಅದು ಯಾಕಾಗಿ?

18 May 2025

ಅಪಘಾತದಲ್ಲಿ ಕುಟುಂಬವನ್ನೇ ಕಳೆದುಕೊಂಡ ಕ್ರಷರ್ ಮಾಲೀಕ : ನರಳಿ, ನರಳಿ ಮೃತಪಟ್ಟ ಒಂದು ವರ್ಷ, ನಾಲ್ಕುವರ್ಷದ ಮಗು…ಹಾಗಾದ್ರೆ ಆ ಘಟನೆ ಹೇಗಾಯ್ತು?

18 May 2025
About Us
About Us

Davanagere Vijaya Kannada News Portal

Facebook X (Twitter) Pinterest YouTube WhatsApp
Our Picks

ಮಂಗಳವಾರದ ರಾಶಿ ಭವಿಷ್ಯ ಹೇಗಿದೆ ತಪ್ಪದೇ ನೋಡಿ?

20 May 2025

ಜ್ಞಾನದ ಹಸಿವ ತಣಿಸುವ ವ್ಯಾಸ ಗುರು ತೇಜಸ್ವಿ ಕಟ್ಟೀಮನಿ

19 May 2025

ದಾವಣಗೆರೆ ಎಸ್ಪಿ ಉಮಾಪ್ರಶಾಂತ್ ಗೆ ಸಿಕ್ಕಿತ್ತು ಈ ಪದಕ..ಅದು ಯಾಕಾಗಿ?

18 May 2025
Most Popular

ಹೈಕೋರ್ಟ್ ಆದೇಶ ತಪ್ಪು ತಿಳಿಯಲಾಗಿದೆ : ಸಿಪಿಐ ಮಂಜುನಾಥ್  ಅರ್ಜುನ್ ಲಿಂಗಾರೆಡ್ಡಿ

16 February 202412,631 Views

ದಾವಣಗೆರೆ ಸಿಟಿಯಲ್ಲಿ ರೌಡಿ ಶೀಟರ್ ಕಣುಮ ಮರ್ಡರ್

5 May 20259,206 Views

ಭದ್ರಾವತಿಯಲ್ಲಿ ಮೀಟರ್ ಬಡ್ಡಿಗೆ ಬಲಿಯಾಯಿತು ಜೀವ, ಪೊಲೀಸ್ ಇಲಾಖೆಯಲ್ಲಿದ್ದ ಅಣ್ಣನಿಂದ ಧಮಕಿ

2 April 20247,065 Views

Subscribe to Updates

Get the latest creative news from SmartMag about art & design.

Recent Posts
  • ಮಂಗಳವಾರದ ರಾಶಿ ಭವಿಷ್ಯ ಹೇಗಿದೆ ತಪ್ಪದೇ ನೋಡಿ?
  • ಜ್ಞಾನದ ಹಸಿವ ತಣಿಸುವ ವ್ಯಾಸ ಗುರು ತೇಜಸ್ವಿ ಕಟ್ಟೀಮನಿ
  • ದಾವಣಗೆರೆ ಎಸ್ಪಿ ಉಮಾಪ್ರಶಾಂತ್ ಗೆ ಸಿಕ್ಕಿತ್ತು ಈ ಪದಕ..ಅದು ಯಾಕಾಗಿ?
  • ಅಪಘಾತದಲ್ಲಿ ಕುಟುಂಬವನ್ನೇ ಕಳೆದುಕೊಂಡ ಕ್ರಷರ್ ಮಾಲೀಕ : ನರಳಿ, ನರಳಿ ಮೃತಪಟ್ಟ ಒಂದು ವರ್ಷ, ನಾಲ್ಕುವರ್ಷದ ಮಗು…ಹಾಗಾದ್ರೆ ಆ ಘಟನೆ ಹೇಗಾಯ್ತು?
  • ಭಾನುವಾರದ ನಿಮ್ಮ ರಾಶಿ ಭವಿಷ್ಯ ಏನಿದೆ ತಪ್ಪದೇ ನೋಡಿ?
Davangere Vijaya
Facebook X (Twitter) Instagram Pinterest
  • ಪ್ರಮುಖ ಸುದ್ದಿ
  • ದಾವಣಗೆರೆ ವಿಶೇಷ
  • ಕ್ರೈಂ ಸುದ್ದಿ
  • ರಾಜಕೀಯ ಸುದ್ದಿ
  • ರೈತಮಿತ್ರ
  • ಅಡಕೆ ಧಾರಣೆ
  • ಚಿನ್ನ, ಬೆಳ್ಳಿ ಧಾರಣೆ
  • Blog
© 2025 Davangere Vijaya. the website designed and maintend by kInsta infotech bangalore

Type above and press Enter to search. Press Esc to cancel.